Home ಕರಾವಳಿ Archive by category ಮಂಗಳೂರು (Page 82)

ಡಿ.17ರಂದು ಬೆಂಗ್ರೆಯಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮ

ಬೆಂಗ್ರೆ ವಿದ್ಯಾರ್ಥಿ ಸಂಘ ಯುವಕ ಮಂಡಲದ ಅಮೃತ ಮಹೋತ್ಸವದ ಅಂಗವಾಗಿ ಬೆಂಗ್ರೆ ಪರಿಸದಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮವನ್ನು ಡಿಸೆಂಬರ್ 17ರಂದು ಹಮ್ಮಿಕೊಳ್ಳಲಾಗಿದೆ ಎಂದು ಮಹಾಜನ ಸಂಘ ಬೆಂಗ್ರೆಯ ಅಧ್ಯಕ್ಷರು ಮತ್ತು ಬೆಂಗ್ರೆ ವಿದ್ಯಾರ್ಥಿ ಸಂಘ ಯುವಕ ಮಂಡಲದ ಅಧ್ಯಕ್ಷರಾದ ಚೇತನ್ ಬೆಂಗ್ರೆ ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ

ಕ್ಯಾಪ್ಟನ್ ಪ್ರಾಂಜಲ್ ಬಲಿದಾನ ವ್ಯರ್ಥ ವಾಗದಿರಲಿ….ಡಾ ಚೂಂತಾರು

ದೇಶದ ರಕ್ಷಣೆಗಾಗಿ ತನ್ನ ಜೀವವನ್ನೇ ಪಣಕ್ಕಿಟ್ಟು ಹೋರಾಡಿ ಹುತಾತ್ಮರಾದ ಶ್ರೀ ಕ್ಯಾಪ್ಟನ್ ಪ್ರಾಂಜಲ್ ಅವರು ನಮ್ಮ ಯುವ ಪೀಳಿಗೆಗೆ ಮಾದರಿ. ಅವರ ತ್ಯಾಗ ಮತ್ತು ಬಲಿದಾನ ವ್ಯರ್ಥ ವಾಗದಿರಲಿ. ಭಯೋತ್ಪಾದನೆ ಮತ್ತು ಹಿಂಸಾಚಾರ ವನ್ನು ಬೇರು ಸಮೇತ ಕಿತ್ತು ಹಾಕಿ ಅಗಲಿದ ಕ್ಯಾಪ್ಟನ್ ಪ್ರಾಂಜಲ್ ಅವರ ಆತ್ಮಕ್ಕೆ ಶಾಂತಿ ಸಿಗುವಂತೆ ಮಾಡುವ ಗುರುತರ ಜವಾಬ್ದಾರಿ ನಮ್ಮ ಮೇಲಿದೆ. ನಾವೆಲ್ಲಾ ನಮ್ಮ ಜಾತಿ ಮತ ಧರ್ಮ ಎಂದು ಕಚ್ಚಾಡದೆ, ದೇಶದ ಆಂತರಿಕ ಭದ್ರತೆ ಮತ್ತು ಶಾಂತಿ ಹಾಗೂ

ಮಂಗಳೂರು: ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ, ಮಹಿಳೆಗೆ ಗಂಭೀರ ಗಾಯ

ಮಂಗಳೂರಿನ ಅತ್ತಾವರದ ಐವರಿ ಟವರ್‌ನಲ್ಲಿ ಶಾರ್ಟ್ ಸರ್ಕೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದ್ದು, ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯಲ್ಲಿ ಹಲವು ಮಂದಿಯಿದ್ದು, ಘಟನೆ ಸಂಭವಿಸಿದ ತಕ್ಷಣ ಹೊರಗೆ ಬಂದು ಅಪಾಯದಿಂದ ಪಾರಾಗಿದ್ದಾರೆ. ಆದರೆ ಮಹಿಳೆಯೊಬ್ಬರು ಬಾತ್ ರೂಮ್‌ನಲ್ಲಿದ್ದ ಕಾರಣ ಹೊರಗೆ ಬರಲಾಗದೆ ಸಿಲುಕಿದ್ದರಿಂದ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ಹೇಳಲಾಗಿದೆ. ಬೆಂಕಿ ಅನಾಹುತದಿಂದ

ವಿಚಿತ್ರ ತಿರುವು ಪಡೆಯುವ ಊರಿನ ಹೆಸರುಗಳು

ಭತ್ತ ಅನ್ನಕ್ಕೆಂದು ಪಿಡಿದರೆ ಬಾಳೆ ಹಣ್ಣದು ಆಯ್ತು ದೈವವೆ! ಮಂಗಳೂರಿನಲ್ಲಿ ಒಂದು ಬಾಳೆ ಬಯ್ಲು (ಬಯಲು) ಇದೆ. ಈ ಭತ್ತ ಬೆಳೆಯುವ ತುಳು ಜಾಗದ ನೆಲದ ಹೆಸರು ಬದಲಾದುದು ಬರೇ ಶತಮಾನದ ಕತೆ. ಬಾರ ಬಯ್ಲ್ ಎಂದರೆ ಭತ್ತದ ಬಯಲು. ರಾಷ್ಟ್ರೀಯ ಹೆದ್ದಾರಿ ಮಾಜೀ 17 ಹಾಲಿ 66 ಇದರ ನಡುವೆ ಹೋಗಿ, ಈಗ ಇಲ್ಲಿ ಕಟ್ಟಡಗಳು ಬೆಳೆದಿವೆ. ತುಳು ಕನ್ನಡದಲ್ಲಿ ರ ಳ ಲ ಬದಲಾವಣೆ ಬಹಳ ಇವೆ. ತುಳು ಶಬ್ದಗಳಾದ ಕೋರಿ, ಕೆರು, ತರೆ, […]

ಮಂಗಳೂರಿನಲ್ಲಿ `ಕ್ರಿಸ್ತ ಜಯಂತಿ ಜುಬಿಲಿ ಸಂಭ್ರಮಾಚರಣೆ

ಜಗತ್ತಿನಾದ್ಯಂತ ಕ್ರೈಸ್ತ ಧರ್ಮಸಭೆಯಲ್ಲಿ ಯೇಸು ಕ್ರಿಸ್ತರ ಜನನದ 2025 ವರ್ಷಗಳ ಸ್ಮರಣಾರ್ಥ `ಕ್ರಿಸ್ತ ಜಯಂತಿ ಜುಬಿಲಿ2025′ ಸಂಭ್ರಮಾಚರಣೆಯ ಪೂರ್ವ ಸಿದ್ಧತೆಗಳು ನಡೆಯುತ್ತಿದ್ದು, ಮಂಗಳೂರಿನ ರೋಮನ್ ಕೆಥೊಲಿಕ್ ಧರ್ಮಕ್ಷೇತ್ರದಲ್ಲೂ ಎರಡು ವರ್ಷಗಳ ಪೂರ್ವ ತಯಾರಿಗಳಿಗೆ ಬಿಷಪ್ ಅ.ವಂ. ಡಾ.ಪೀಟರ್ ಪಾವ್ಲ್ ಸಲ್ಡಾನ ಚಾಲನೆ ನೀಡಿದರು. ನಗರದ ಹೋಲಿ ರೋಜರಿ ಕೆಥೆಡ್ರಲ್‍ನಲ್ಲಿ `ಭರವಸೆಯ ಯಾತ್ರಿಕರು’ ಎಂಬ ಧ್ಯೇಯವನ್ನು ಒಳಗೊಂಡ ಜುಬಿಲಿ ಲಾಂಛನದ

ಕೊಟ್ಟಾರಚೌಕಿ ಸರ್ಕಲ್‍ಗೆ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಹೆಸರು

ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ಹೋರಾಡಿ ದೇಶಕ್ಕಾಗಿ ತನ್ನ ಪ್ರಾಣವನ್ನೇ ಬಲಿದಾನಗೈದ ಕರುನಾಡಿನ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರನ್ನು ಹೆದ್ದಾರಿ ಮತ್ತು ನಗರ ಸಂಪರ್ಕಿಸುವ ಕೊಟ್ಟಾರಚೌಕಿ ಜಂಕ್ಷನ್ ಸರ್ಕಲ್‍ಗೆ ಇಡಲಾಗುವುದು ಎಂದು ಶಾಸಕ ಭರತ್ ಶೆಟ್ಟಿ ತಿಳಿಸಿದ್ದಾರೆ. ಕೊಟ್ಟಾರಚೌಕಿಯಲ್ಲಿ ಅಮರ್ ಜವಾನ್ ಥೀಮ್ ಪಾರ್ಕ್ ನಿರ್ಮಾಣವಾಗಲಿದೆ. ಇದರ ಜೊತೆಗೆ ಮಂಗಳೂರಿನಲ್ಲಿ ಕಲಿತು, ಬೆಳೆದು ಅವಿನಾಭಾವ ಸಂಬಂಧ ಹೊಂದಿರುವ ಕ್ಯಾ. ಪ್ರಾಂಜಲ್

33 ವರುಷಗಳ ಬಳಿಕ ಮಂಗಳೂರು ವಿವಿಗೆ ಕಬಡ್ಡಿ ಕಿರೀಟ

ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ, ಪೂರ್ಣ ಪ್ರಜ್ಞ ಕಾಲೇಜು ಮತ್ತು ಮಂಗಳೂರು ವಿವಿ ಸ್ನಾತಕೋತ್ತರ ಕೇಂದ್ರಗಳು ಜಂಟಿಯಾಗಿ ನಡೆಸಿದ ಅಂತರ ವಿಶ್ವವಿದ್ಯಾನಿಲಯ ಕಬಡ್ಡಿ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ತಂಡವು 33 ವರುಷಗಳ ಬಳಿಕ ಮತ್ತೆ ಚಾಂಪಿಯನ್ ಅಯಿತು. ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಪುರುಷರ ಕಬಡ್ಡಿಯ ಫೈನಲಿನಲ್ಲಿ 45- 15 ಅಂಕಗಳಿಂದ ಮಂಗಳೂರು ವಿವಿಗೆ ಸೋತ ಚೆನ್ನೈನ ವೇಲ್ ಸಯನ್ಸ್ ಆಂಡ್

ಮಂಗಳೂರು: ಕಾವೂರಿನಲ್ಲಿ ಮಾರುಕಟ್ಟೆ ಸಂಕೀರ್ಣ ಖಾಲಿ: ಅಂಗಡಿ ಪಡೆದ ವ್ಯಾಪಾರಸ್ಥರು ವಾರದೊಳಗೆ ಸ್ಥಳಾಂತರಗೊಳ್ಳಬೇಕು: ಮೇಯರ್ ಸುಧೀರ್

ಕಾವೂರಿನಲ್ಲಿ ಸ್ಮಾರ್ಟ್ ಸಿಟಿ ಅನುದಾನದಿಂದ ನಿರ್ಮಿಸಲಾದ ಕೋಟ್ಯಾಂತರ ರೂಪಾಯಿ ಮೌಲ್ಯದ ಮಾರುಕಟ್ಟೆಯ ಸಂಕೀರ್ಣ ಖಾಲಿ ಬಿದ್ದಿದ್ದು, ಅಂಗಡಿ ಪಡೆದ ವ್ಯಾಪಾರಸ್ಥರು ಒಂದು ವಾರದ ಒಳಗಾಗಿ ಸ್ಥಳಾಂತರಗೊಳ್ಳಬೇಕು ಇಲ್ಲದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದ್ದಾರೆ. ಕಾವೂರಿನಲ್ಲಿ ನಿರ್ಮಾಣವಾಗಿರುವ ಮಾರುಕಟ್ಟೆ ಸಂಕೀರ್ಣವನ್ನು ಅವರು ವೀಕ್ಷಿಸಿ, ಮಾಧ್ಯಮದೊಂದಿಗೆ ಮಾತನಾಡಿದರು. ಉತ್ತಮವಾದಂತ ಮೀನು ಮಾರುಕಟ್ಟೆ

ಮಂಗಳೂರು: ಡಿಕೆಶಿ ಕೇಸ್ ವಾಪಸ್ ಹಿಂಪಡೆದಿರುವುದು ಖಂಡನೀಯ: ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಹೇಳಿಕೊಳ್ಳಲು ಆಶ್ಚರ್ಯ ಎನಿಸುವಂತಹ ಬಹಳ ನೋವಿನ ಸಂಗತಿ ನಡೆದಿದ್ದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಭ್ರಷ್ಟಾಚಾರ ಆರೋಪದಡಿಯಲ್ಲಿ ಸಿಬಿಐ ತನಿಖೆ ಮಾಡುತ್ತಿದ್ದರೂ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಚಿವ ಸಂಪುಟ ಸಿಬಿಐ ತನಿಖೆಗೆ ಕೊಟ್ಟ ಅನುಮತಿ ವಾಪಾಸು ತೆಗೆದುಕೊಂಡಿರುವುದು ಖಂಡನೀಯ ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಬಿಜೆಪಿ ಮಂಗಳೂರು ಮಂಡಲ ಕಚೇರಿಯಲ್ಲಿ

ಮಂಗಳೂರಿನಲ್ಲಿ ಅಂತರ್ ರಾಷ್ಟ್ರೀಯ ಈಜುಕೊಳ ಲೋಕಾರ್ಪಣೆ

19ನೇ ರಾಷ್ಟ್ರೀಯ ಹಿರಿಯರ ಈಜುಸ್ಪರ್ಧೆಯ ಆರಂಭದೊಂದಿಗೆ ನಗರದ ಎಮ್ಮೆಕೆರೆ ಪ್ರದೇಶದಲ್ಲಿ ಒಲಂಪಿಕ್ಸ್ ಮಾನದಂಡದ ಪ್ರಕಾರ ನಿರ್ಮಿಸಿರುವ ಅತ್ಯಾಧುನಿಕ ಈಜುಕೊಳ ಉದ್ಘಾಟನೆಗೊಂಡಿದೆ. ಈಜುಕೊಳ ಉದ್ಘಾಟಿಸಿದ ನಗರಾಭಿವೃದ್ಧಿ ಸಚಿವ ಸುರೇಶ್ ಬಿ.ಎಸ್ ಮಾತನಾಡಿ, ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಆದಾಯ ಸೃಷ್ಟಿಸುವ ಯೋಜನೆಗಿಂತ ಹೆಚ್ಚಾಗಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿದೆ. ಇನ್ನು ಮುಂದೆಯಾದರೂ ಮಹಾನಗರ ಪಾಲಿಕೆಯ ಯಾವುದಾದರೂ ಯೋಜನೆಯಡಿ ಆದಾಯ ವೃದ್ಧಿಸುವ