Home ಕರಾವಳಿ Archive by category ಮಂಗಳೂರು (Page 94)

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿಗೆ ಮಾನ್ಯ ಡಿಸಿಜಿ ಭೇಟಿ

ದಿನಾಂಕ: 05-10-2023ನೇ ಗುರುವಾರದಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮೇರಿಹಿಲ್ ಮಂಗಳೂರು ಕಛೇರಿಗೆ ಡಾ|| ಅಕ್ಷಯ್ ಕುಮಾರ್ ಎಂ. ಹಾಕೆ , ಐಪಿಎಸ್ ಮಾನ್ಯ ಉಪ ಮಹಾ ಸಮಾದೇಷ್ಟರು, ಗೃಹರಕ್ಷಕದಳ ಹಾಗೂ ಉಪ ನಿರ್ದೇಶಕರು, ಪೌರರಕ್ಷಣೆ, ಕರ್ನಾಟಕ ರಾಜ್ಯ ಬೆಂಗಳೂರು ಇವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕಛೇರಿ ಕಡತಗಳನ್ನು ಪರಿಶೀಲಿಸಿದರು. ಕಾಲ ಕಾಲಕ್ಕೆ

ಮಂಗಳೂರು : ಅಕ್ಟೋಬರ್ 15ರಿಂದ 25ರ ವರೆಗೆ ನಡೆಯಲಿರುವ – ಮಂಗಳೂರು ದಸರಾ-2023

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ-2023 ನವರಾತ್ರಿ ಮಹೋತ್ಸವವು ಅಕ್ಟೋಬರ್ 15ರಿಂದ 25 ರ ವರೆಗೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಎಚ್. ಎಸ್ ಸಾಯಿರಾಂ ಹೇಳಿದರು. ಅವರು ಕುದ್ರೋಳಿ ಕ್ಷೇತ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ದಸರಾ ಮಹೋತ್ಸವದ ಬಗ್ಗೆ ಮಾಹಿತಿ ನೀಡಿದರು. ಸಮಿತಿಯ ಸದಸ್ಯರಾದ ಹರಿಕೃಷ್ಣ ಬಂಟ್ವಾಳ ಅವರು ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳು ಪ್ರತಿಷ್ಠಾಪಿಸಿದ ಕುದ್ರೋಳಿ ಕ್ಷೇತ್ರದಲ್ಲಿ

ಮಂಗಳೂರು: ಪ್ರಮಾಣಪತ್ರ ಮತ್ತು ಗುರುತಿನ ಚೀಟಿ ನೀಡಲು ವಿಳಂಬ ಧೋರಣೆ, ಬೀದಿ ಬದಿ ವ್ಯಾಪಾರಿಗಳಿಂದ ಮನಪಾ ಕಚೇರಿಗೆ ಮುತ್ತಿಗೆ

ಬೀದಿ ಬದಿ ವ್ಯಾಪಾರಸ್ಥರ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ ಬೀದಿ ಬದಿ ವ್ಯಾಪಾರಸ್ಥರ ಸಂಘದ ವತಿಯಿಂದ ಮಂಗಳೂರು ಪಾಲಿಕೆಗೆ ಮುತ್ತಿಗೆ ಹಾಕಲಾಯಿತು. ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಂದ ಸಾರ್ವಜನಿಕರ ಕೆಲಸಗಳು ಆಗುತ್ತಿಲ್ಲ. 3 ವರ್ಷಗಳಿಂದ ನಮ್ಮ ಪ್ರಮಾಣ ಪತ್ರವಾಗಲೀ, ಗುರುತಿನ ಚೀಟಿಯನ್ನಾಗಲೀ ನವೀಕರಿಸಿ ನೀಡಿಲ್ಲ ಎಂದು ವ್ಯಾಪಾರಿಗಳು ಆರೋಪಿಸಿದರು. ಬೀದಿ ಬದಿವ್ಯಾಪಾರಿಗಳ ಸಂಘದ ಗೌರವಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಮಾತನಾಡಿ, ಮಹಾ

ಮಂಗಳೂರು: ಶಿವಮೊಗ್ಗ ಗಲಾಟೆ ವಿಚಾರ, ಕಾಂಗ್ರೆಸ್ ಸರ್ಕಾರ ಮೃದು ಧೋರಣೆಯೇ ಘಟನೆಗೆ ಕಾರಣ-ಶಾಸಕ ಡಾ. ವೈ. ಭರತ್ ಶೆಟ್ಟಿ

ಶಿವಮೊಗ್ಗದಲ್ಲಿ ನಡೆದ ಗಲಭೆಗೆ ಕಾಂಗ್ರೆಸ್ ಸರ್ಕಾರದ ಒಂದು ವರ್ಗಕ್ಕೆ ಮೀಸಲಾದ ಮೃದು ನೀತಿಯೇ ಕಾರಣ ಎಂದು ಶಾಸಕ ಡಾ. ಭರತ್ ಶೆಟ್ಟಿ ಆರೋಪ ಮಾಡಿದ್ದಾರೆ. ಸುರತ್ಕಲ್‍ನ ಶಾಸಕ ಕಚೇರಿಯಲ್ಲಿ ಅಹವಾಲು ಸ್ವೀಕರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯದ ವಿವಿಧಡೆ ಕೋಟಿ ಕೋಟಿ ಜನ ಸೇರುವ ಗಣೇಶ ಚತುರ್ಥಿ ಶಾಂತಿಯುತವಾಗಿ ನಡೆದಿದೆ. ಆದರೆ ಮುಸಲ್ಮಾನ ಬಾಂಧವರ ಹಬ್ಬದ ಸಂಭ್ರಮದ ವೇಳೆ ಇಂತಹ

ಮಂಗಳೂರು: ಅ.5ರಂದು ಬಿಎಂಆರ್ ಗ್ರೂಪ್‍ನ ವಿನ್ ಯುವರ್ ಡ್ರೀಮ್ ಹೋಮ್‍ನ ಸೀಸನ್-3ರ ಡ್ರಾ ಕಾರ್ಯಕ್ರಮ

ಬಿಎಂಆರ್ ಗ್ರೂಪ್ ವತಿಯಿಂದ ವಿನ್ ಯುವರ್ ಡ್ರೀಮ್ ಹೋಮ್‍ನ ಸೀಸನ್-3ರ ಡ್ರಾ ಕಾರ್ಯಕ್ರಮವು ಅಕ್ಟೋಬರ್ 5ರಂದು ಚೊಕ್ಕಬೆಟ್ಟುವಿನ ಎಮ್‍ಜೆಎಮ್ ಹಾಲ್‍ನಲ್ಲಿ ನಡೆಯಲಿದೆ. ಸಂಜೆ 7 ಗಂಟೆಗೆ ನಡೆಯಲಿರುವ ಈ ಸ್ಕೀಮ್‍ನ 15ನೇ ಡ್ರಾ ದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ನೂತನ ಮನೆಯನ್ನು ಪಡೆಯುವ ವಿಜೇತರ ಹೆಸರನ್ನು ಆಯ್ಕೆ ಮಾಡಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಬಿಎಂಆರ್ ಗ್ರೂಪ್‍ನ ಅಧ್ಯಕ್ಷರಾದ ಇಬ್ರಾಹಿಂ, ಬಿಎಂಆರ್

ಆದಿವಾಸಿ ಕೊರಗ ಸಮುದಾಯದ ಬದುಕಿನೊಂದಿಗೆ ಚೆಲ್ಲಾಟ ಆಡುವುದನ್ನು ಸಹಿಸಲು ಸಾಧ್ಯವಿಲ್ಲ – ಸುನಿಲ್ ಕುಮಾರ್ ಬಜಾಲ್

ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ಮತ್ತು ಅಧಿಕಾರಿಗಳು ಜಿಲ್ಲೆಯ ಮೂಲ ನಿವಾಸಿಗಳಾಗಿರುವ ಆದಿವಾಸಿ ಕೊರಗ ಸಮುದಾಯದ ಬಗ್ಗೆ ಮಾನವೀಯ ನೆಲೆಯಿಂದ ಕಾರ್ಯಾಚರಿಸುವುದು ಸಂವಿಧಾನದ ಆಶಯವಾಗಿದೆ ಇದಕ್ಕೆ ವ್ಯತಿರಿಕ್ತವಾಗಿ ಕೊರಗ ಸಮುದಾಯದ ಬದುಕಿನೊಂದಿಗೆ ಚೆಲ್ಲಾಟ ಆಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಸಿಐಟಿಯು ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದರು ಅವರು ಇಂದು ಮಂಗಳೂರು ಮಹಾನಗರ ಪಾಲಿಕೆಯ ಎದುರು ವಾಮಂಜೂರು

ಲಖೀಂಪುರಖೇರಿ ಘಟನೆ ಖಂಡಿಸಿ ದೇಶಾದ್ಯಂತ ಕಪ್ಪು ದಿನಾಚರಣೆ ; CITU ನೇತ್ರತ್ವದಲ್ಲಿ ಮಂಗಳೂರಿನಲ್ಲಿ ಪ್ರತಿಭಟನೆ

ಉತ್ತರಪ್ರದೇಶದ ಲಖೀಂಪುರಖೇರಿಯಲ್ಲಿ 2021ರಲ್ಲಿ ರೈತರ ಮೇಲೆ ನಡೆದ ಅಮಾನವೀಯ ಧಾಳಿಗೆ ಹಾಗೂ ಪ್ರಾಣಹಾನಿಗಳಿಗೆ ಕಾರಣವಾದ BJP ನಾಯಕರೂ,ಕೇಂದ್ರ ಸಚಿವರಾದ ಅಜಯ್ ಮಿಶ್ರ ಥೇಣಿಯ ಮೇಲೆ ಕಠಿಣ ಕ್ರಮ ಜರುಗಿಸಲು ಒತ್ತಾಯಿಸಿ ದೇಶಾದ್ಯಂತ ನಡೆದ ಕಪ್ಪು ದಿನಾಚರಣೆಯ ಅಂಗವಾಗಿ ಇಂದು (03-10-2023) CITU ನೇತ್ರತ್ವದಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನೆ ಜರುಗಿತು. ಪ್ರತಿಭಟನೆಯನ್ನುದ್ದೇಶಿಸಿ CITU ಜಿಲ್ಲಾಧ್ಯಕ್ಷರಾದ ಜೆ.ಬಾಲಕ್ರಷ್ಣ ಶೆಟ್ಟಿಯವರು

ಶಾಸ್ತ್ರೀ ಜಿ ಮತ್ತು ಗಾಂಧೀಜಿಯವರ ಆದರ್ಶಗಳನ್ನು ನಿತ್ಯ ಅಳವಡಿಸಿಕೊಳ್ಳೋಣ : ಡಾ|| ಚೂಂತಾರು

ದಿನಾಂಕ 02-10-2023ನೇ ಸೋಮವಾರದಂದು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ಅಂಗವಾಗಿ ನಗರದ ಮೇರಿಹಿಲ್‍ನಲ್ಲಿ ಇರುವ ಜಿಲ್ಲಾ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಕಛೇರಿಯಲ್ಲಿ ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಭಾವಚಿತ್ರಕ್ಕೆ ಪುಷ್ಟನಮನ ಸಲ್ಲಿಸಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಮತ್ತು ಗಾಂಧೀಜಿಯವರ ತ್ಯಾಗ, ಸೇವೆ ಹಾಗೂ ಬಲಿದಾನವನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ

ಬಲಿಪತೋಟ ಶ್ರೀ ದೈವರಾಜ ಬಬ್ಬು ಸ್ವಾಮಿ ದೈವಸ್ಥಾನ : ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆ – ಬಹುಮಾನ ವಿತರಣಾ ಕಾರ್ಯಕ್ರಮ

ಶ್ರೀ ದೈವರಾಜ ಬಬ್ಬುಸ್ವಾಮಿ ಶ್ರೀ ಕಲ್ಪವೇದಿಕೆ ಬಲಿಪತೋಟ ಇದರ ವತಿಯಿಂದ 4ನೇ ವರ್ಷದ ಶ್ರೀ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಭಾರತೀನಗರದ ಬಲಿಪತೋಟ ಶ್ರೀ ದೈವರಾಜ ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ನಡೆಯಿತು. ಕೊಡಿಯಾಲ್‍ಗುತ್ತು ಪ್ರಸಾದ್ ಅಸೋಸಿಯೇಟ್ಸ್‍ನ ಪ್ರಸಾದ್ ಶೆಟ್ಟಿ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಲಿಪತೋಟ ಶ್ರೀ ದೈವರಾಜ ಬಬ್ಬುಸ್ವಾಮಿ ಕ್ಷೇತ್ರದ ಅಧ್ಯಕ್ಷರಾದ ಲೋಕನಾಥ್ ಶೆಟ್ಟಿ

ಕಿನ್ನಿಗೋಳಿ: ಮೆನ್ನಬೆಟ್ಟುವಿನ ಜಮೀನಿನಲ್ಲಿ ತ್ಯಾಜ್ಯ ಘಟಕ ನಿರ್ಮಾಣಕ್ಕೆ ವಿರೋಧ, ಗ್ರಾಮಸ್ಥರಿಂದ ಪ್ರತಿಭಟನೆ

ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ತ್ಯಾಜ್ಯ ವಸ್ತುಗಳನ್ನು ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಮೆನ್ನಬೆಟ್ಟು ಗ್ರಾಮದಲ್ಲಿರುವ 17 ಗೋಮಾಳ ಜಮೀನಿನಲ್ಲಿ ಹಾಕಿ ಘಟಕ ನಿರ್ಮಾಣ ಮಾಡುವುದನ್ನು ವಿರೋಧಿಸಿ ಹಾಗೂ ಜಮೀನಿನಲ್ಲಿ ದಾಖಲು ಆಗಿರುವ ಮಂಜುರಾತಿಯನ್ನು ರದ್ದು ಮಾಡುವ ಬಗ್ಗೆ ಗ್ರಾಮಸ್ಧರಿಂದ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಂಭಾಗ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಯಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಈಶ್ವರ್ ಕಟೀಲ್ ಮಾತನಾಡಿ ಕಿನ್ನಿಗೋಳಿ