Home ಕರಾವಳಿ Archive by category ಮೂಡಬಿದರೆ (Page 20)

ಮೂಡುಬಿದಿರೆ: ಪಂಜಿನ ಮೆರವಣಿಗೆಯೊಂದಿಗೆ ಮತದಾನದ ಜಾಗೃತಿ

ಮೂಡುಬಿದಿರೆ: ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಮತದಾನ ಮಾಡುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಭಾರತ್ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲೆ ಸ್ವೀಪ್ ಸಮಿತಿ ಮೂಡುಬಿದಿರೆ ತಾಲೂಕು ಪಂಚಾಯತ್ ಹಾಗೂ ತಾಲೂಕು ಕಛೇರಿ ನೇತೃತ್ವದಲ್ಲಿ ಮೂಡುಬಿದಿರೆ ಪೇಟೆಯಲ್ಲಿ ಪಂಜಿನ ಮೆರವಣಿಗೆ ನಡೆಯಿತು. ಸಹಾಯಕ ಚುನಾವಣಾಧಿಕಾರಿ ರಾಜು ಕೆ.,

ಮೂಡುಬಿದಿರೆ: ಗೋವಿಂದ ಭಟ್ ಅವರಿಗೆ ಬಲಿಪ ಭಾಗವತ ಪ್ರಶಸ್ತಿ ಪ್ರದಾನ

ಮೂಡುಬಿದಿರೆ: ಯಕ್ಷಗಾನ ಲೋಕದ ಮೇರು ಭಾಗವತ ದಿ. ಬಲಿಪ ನಾರಾಯಣ ಭಾಗವತ ಅವರ ಮೊದಲ ವರ್ಷದ ಸಂಸ್ಮರಣೆಯ ಅಂಗವಾಗಿ ಹಿರಿಯ ಕಲಾವಿದ ಗೋವಿಂದ ಭಟ್ ಅವರಿಗೆ ಬಲಿಪ ಭಾಗವತ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಾರೂರಿನ ನೂಯಿಯಲ್ಲಿರುವ ಬಲಿಪರ ನಿವಾಸದ ಆವರಣದಲ್ಲಿ ಜರಗಿದ ಕಟೀಲು ಮೇಳದ ಹರಿಕೆ ಬಯಲಾಟದ ರಂಗಸ್ಥಳದಲ್ಲಿ ಮಾನಪತ್ರ, ನಗದು ಗೌರವದೊಂದಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಗೋವಿಂದ ಭಟ್‌ ಅವರು ಪ್ರಶಸ್ತಿ ಸ್ವೀಕರಿಸಿ ಮಾತನಾಡಿ ಬಲಿಪರು ಎಂದರೆ ಯಕ್ಷಗಾನ ಯಕ್ಷಗಾನ

ಆಳ್ವಾಸ್ ಕಾಲೇಜಿನಲ್ಲಿ ತುಳು ರಂಗ್- 2024:ತುಳು ಭಾಷೆಯ ಆಸ್ತಿಯಾಗೋಣ: ಅರವಿಂದ್ ಕೆ. ಪಿ

ಮೂಡುಬಿದಿರೆ:  ನಾವು ಎಷ್ಟೇ ದೂರವಿದ್ದರೂ ಭಾಷೆ ಎಲ್ಲರನ್ನೂ, ಎಲ್ಲತನವನ್ನೂ ಒಗ್ಗೂಡಿಸುತ್ತದೆ. ಒಬ್ಬ ಜವಾಬ್ದಾರಿಯುತ ಪ್ರಜೆಯಾಗಿ ಎಲ್ಲವನ್ನೂ ಒಗ್ಗೂಡಿಸುವ ಕಾರ್ಯವನ್ನು ನಾವು ಮಾಡುವುದರ ಜೊತೆಗೆ  ತುಳು ಭಾಷೆಯ ಆಸ್ತಿಯಾಗುವ ಕೆಲಸ ಮಾಡಬೇಕಾಗಿದೆ  ಎಂದು ಅಂತರಾಷ್ಟ್ರೀಯ ಮೋಟಾರ್  ರೇಸರ್ ಮತ್ತು ಚಲನಚಿತ್ರ ನಟ ಅರವಿಂದ್ ಕೆ. ಪಿ ಹೇಳಿದರು. ಅವರು ಆಳ್ವಾಸ್ ಪದವಿ ಕಾಲೇಜಿನ ತುಳು ಸಂಸ್ಕೃತಿ ಅಧ್ಯಯನ ಕೇಂದ್ರ ಶನಿವಾರ ಆಯೋಜಿಸಿದ್ದ ಅಂತರ್ ಕಾಲೇಜು “ತುಳು

ಮೂಡುಬಿದಿರೆ: ವಾಲ್ಪಾಡಿಯಲ್ಲಿ ಕೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ

ಮೂಡುಬಿದಿರೆ: ಭಾರತ ಚುನಾವಣಾ ಆಯೋಗ,‌ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವೀಪ್ ಸಮಿತಿ ಹಾಗೂ ಮೂಡುಬಿದಿರೆ ತಾಲೂಕು ಪಂಚಾಯತ್ ವತಿಯಿಂದ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಳಿಯೂರು ಸುಮಂಗಲಿ ಕ್ಯಾಶ್ಯು ಇಂಡಸ್ಟ್ರೀಸ್ ನಲ್ಲಿ ದುಡಿಯುತ್ತಿರುವ ಕೂಲಿಕಾರ್ಮಿಕರಿಗೆ ಗುರುವಾರ ಸಂಜೆ ಮತದಾನ ಜಾಗೃತಿ ಮೂಡಿಸಲಾಯಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಸ್.‌ವೆಂಕಟಾಚಲಪತಿ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಮತದಾನ‌ದ ಮಹತ್ವವನ್ನು ತಿಳಿಸಿ

ಮೂಡುಬಿದಿರೆ : ಪಿಯುಸಿ ಫಲಿತಾಂಶ : ಆಳ್ವಾಸ್ ಸಾರ್ವತ್ರಿಕ ದಾಖಲೆ

ಮೂಡುಬಿದಿರೆ : ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 682 ವಿದ್ಯಾರ್ಥಿಗಳು 95% ಶೇಕಡಾಕ್ಕಿಂತ ಅಧಿಕ ಅಂಕವನ್ನು ಪಡೆದು ಹೊಸ ದಾಖಲೆ ನಿರ್ಮಿಸಿದ್ದಲ್ಲದೆ ರಾಜ್ಯದ ಟಾಪ್ ಟೆನ್ ರ್ಯಾಂಕ್ನಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಒಟ್ಟು 45 ವಿದ್ಯಾರ್ಥಿಗಳು ಸ್ಥಾನವನ್ನು ಪಡೆಯುವ ಮೂಲಕ ಆಳ್ವಾಸ್ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಸಾರ್ವತ್ರಿಕ ದಾಖಲೆಯನ್ನು ನಿರ್ಮಿಸಿದೆ.ಪಿಯುಸಿಯಲ್ಲಿ ಫಲಿತಾಂಶದಲ್ಲಿ

ಪಿಯುಸಿ ಫಲಿತಾಂಶ: ದ.ಕ. ಪ್ರಥಮ, ಉಡುಪಿ ದ್ವಿತೀಯ

ಕರ್ನಾಟಕ 2023-24ರ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಯುಥಾಪ್ರಕಾರ ಹೆಣ್ಣುಮಕ್ಕಳು ಮೇಲುಗಯ್ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯು ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ.ಗದಗ ಜಿಲ್ಲೆಯು ಫಲಿತಾಂಶದಲ್ಲಿ ಕೊನೆಯ ಸ್ಥಾನದಲ್ಲಿದೆ. ಬೆಂಗಳೂರಿನ ಮೇಧಾ ಡಿ. ಅವರು ಕಲಾ ವಿಭಾಗದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ; ಅಲ್ಲದೆ ವಿಜಯಪುರದ ವೇದಾಂತ್ ಮತ್ತು ಕವಿತಾ ಕೂಡ ಟಾಪರ್‌ಗಳಲ್ಲಿ ಇದ್ದಾರೆ. ವಿಜ್ಞಾನ ವಿಭಾಗದಲ್ಲಿ 598 ಅಂಕ ಪಡೆದ ವಿದ್ಯಾಲಕ್ಷ್ಮಿ ಮೊದಲ

ಮೂಡುಬಿದಿರೆ: ಎ.2ರಿಂದ 5ರವರೆ ಬ್ರಹ್ಮಕಲಶೋತ್ಸವ ಮತ್ತು ವರ್ಷಾವಧಿ ಜಾತ್ರಾ ಮಹೋತ್ಸವದ ಸಂಭ್ರಮದಲ್ಲಿ ಶ್ರೀ ಕ್ಷೇತ್ರ ಬನ್ನಡ್ಕ

ಮೂಡುಬಿದಿರೆ: ಸುಮಾರು 800 ವರ್ಷಗಳ ಇತಿಹಾಸವನ್ನು ಹೊಂದಿರುವ ತಾಲೂಕಿನ ವಿಶೇಷವಾದ ಕ್ಷೇತ್ರ ಶ್ರೀ ಕ್ಷೇತ್ರ ಬನ್ನಡ್ಕದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಕಲಶೋತ್ಸವ ಮತ್ತು ವರ್ಷಾವಧಿ ನೇಮೋತ್ಸವವು ಸಂಭ್ರಮದಿಂದ ನಡೆಯಲಿದೆ.ವೇದಮೂರ್ತಿ ಅನಂತ ಪದ್ಮನಾಭ ಅಸ್ರಣ್ಣರ ನೇತ್ರತ್ವದಲ್ಲಿ ಏ.2 ರಂದು ಬೆಳಿಗ್ಗೆ ನೂತನ ಧ್ವಜಸ್ತಂಭ ಪ್ರತಿಷ್ಠೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಪುಣ್ಯಯ ಗಣಹೋಮ ನಡೆಯಲಿದೆ ಎಂದು ಸಮಿತಿಯ

ಕಾಂಗ್ರೆಸ್ ನ ಪದ್ಮರಾಜ್ ಗೆ ಮತ ಹಾಕಿ ಬಿಜೆಪಿಯನ್ನು ಸೋಲಿಸಿ: ಸಿಪಿಐಎಂನ ಯಾದವ ಶೆಟ್ಟಿ ಕರೆ

ಮೂಡುಬಿದಿರೆ: ದ.ಕ.ಜಿಲ್ಲೆಯಲ್ಲಿ ಕಳೆದ 32 ವರ್ಷಗಳಿಂದ ಬಿಜೆಪಿಯ ಸಂಸದರಿದ್ದರು. ಆದರೆ ಜಿಲ್ಲೆಯಲ್ಲಿ ಏನು ಅಭಿವೃದ್ಧಿ ಆಗಿದೆ. ಮನು ಸಂಸ್ಕೃತಿಯನ್ನು ಪ್ರತಿಪಾದಿಸುವ ಬಿಜೆಪಿಯು ಅಧಿಕಾರಕ್ಕೆ ಬರಬಾರದು ಆದ್ದರಿಂದ ನಾವು ಕಾಂಗ್ರೆಸ್ ನ ಪದ್ಮರಾಜ್ ಗೆ ಮತವನ್ನು ಹಾಕಿ ಬಿಜೆಪಿಯನ್ನು ಸೋಲಿಸಬೇಕು ಎಂದು ಸಿಪಿಐಎಂನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಾದವ ಶೆಟ್ಟಿ ಕರೆ ನೀಡಿದರು. ಅವರು ಸಮಾಜ ಮಂದಿರದಲ್ಲಿ ನಡೆದ ಸಿಪಿಐಎಂ ಪಕ್ಷದ ಮೂಡುಬಿದಿರೆ ತಾಲೂಕು ಮಟ್ಟದ ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಒಟ್ಟಾಗಿ : ಮಾಜಿ ಸಚಿವ ಅಭಯಚಂದ್ರ ಜೈನ್

ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಬಹಳಷ್ಟು ಜನ ಪರ ಯೋಜನೆಗಳನ್ನು ದಕ್ಷಿಣ ಕನ್ನಡ ಜಿಲ್ಲೆಗೆ ನೀಡಿದೆ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಿಂದೆ ಅಭಿವೃದ್ಧಿ, ಬಡತನ ನಿರ್ಮೂಲನೆಗೆ ಪ್ರಾಶಸ್ತ್ಯವಿತ್ತು. ಆದ್ದರಿಂದಲೇ ಬಿಜೆಪಿ ಕಾಲಘಟ್ಟದಲ್ಲಿ ಯಾವ ಯೋಜನೆಗಳೂ ಬಾರದಿದ್ದರೂ, ಭಾವನಾತ್ಮಕವಾಗಿ ಅವರು ಜನರನ್ನು ಕೆರಳಿಸಿ ಚುನಾವಣೆಯಲ್ಲಿ ಗೆಲ್ಲುತ್ತಿದ್ದಾರೆ. ಆದ್ದರಿಂದ ಈ ಬಾರಿ ಹುರುಪಿನಿಂದ

ಮೂಡುಬಿದಿರೆ: ಹಿರೇ ಅಮ್ಮನವರ ಬಸದಿಯ ಪ್ರತಿಷ್ಠಾ ಪುರೋಹಿತ ಎಂ. ಧರ್ಮರಾಜ ಇಂದ್ರ ನಿಧನ

ಮೂಡುಬಿದಿರೆ: ಇಲ್ಲಿನ ಹಿರೇ ಅಮ್ಮನವರ ಬಸದಿಯ ಪ್ರತಿಷ್ಠಾ ಪುರೋಹಿತ ಎಂ. ಧರ್ಮರಾಜ ಇಂದ್ರ (94) ಪೇಪರ್ ಮಿಲ್ ಬಳಿ ತಮ್ಮ ನಿವಾಸದಲ್ಲಿ ಬುಧವಾರ ನಿಧನ ಹೊಂದಿದರು.ರಾಷ್ಟ್ರಭಾಷಾ ವಿಶಾರದರಾಗಿದ್ದ ಅವರು ಐದು ದಶಕಗಳಿಂದ ಬಸದಿಯ ಪುರೋಹಿತರಾಗಿ, ಬಸದಿಯಲ್ಲಿ ನಿಂತು ಹೋಗಿದ್ದ ರಥೋತ್ಸವವನ್ನುಮತ್ತೆ ಆರಂಭಿಸಿದ್ದರು. ನವರಾತ್ರಿ ಪೂಜೆ, ಲಕ್ಷಕುಂಕುಮಾರ್ಚನ ಸಪ್ತಾಹ ಸಹಿತ ವಿವಿಧ ಜೈನ ಧಾರ್ಮಿಕ ಆರಾಧನೆಗಳಲ್ಲಿ ಪುರೋಹಿತರಾಗಿ ಪಾಲ್ಗೊಂಡಿದ್ದರು.ಜೈನ ಧಾರ್ಮಿಕ ಆರಾಧನಾ