Home ಕರಾವಳಿ Archive by category ಮೂಡಬಿದರೆ (Page 29)

ಮೂಡುಬಿದಿರೆ: ಡಿ.14ರಿಂದ 17ರವರೆಗೆ ಆಳ್ವಾಸ್ ವಿರಾಸತ್ ನಲ್ಲಿ ಆಹಾರೋತ್ಸವ, ಕೃಷಿ-ಕರಕುಶಲ ವಸ್ತು ಪ್ರದರ್ಶನ

ಮೂಡುಬಿದಿರೆ: ಡಿ.14ರಿಂದ 17ರವರೆಗೆ ಆಳ್ವಾಸ್ ವಿರಾಸತ್ ನಲ್ಲಿ ಆಹಾರೋತ್ಸವ, ಕೃಷಿ-ಕರಕುಶಲ ವಸ್ತು ಪ್ರದರ್ಶನ ಮತ್ತು ಮಾರಾಟ ಮಹಾಮೇಳ-2023 ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ನಡೆಯುವ ಆಳ್ವಾಸ್ ವಿರಾಸತ್ ಸಂದರ್ಭದಲ್ಲಿ ಅನ್ವೇಷಣಾತ್ಮಕ ಕೃಷಿಕ, ಶತಾಯುಷಿ ಮಿಜಾರುಗುತ್ತು ಆನಂದ ಆಳ್ವರ ಸ್ಮರಣಾರ್ಥ ವಿದ್ಯಾಗಿರಿಯ ಶ್ರೀಮತಿ ಸುಂದರಿ ಆನಂದ

ಮೂಡುಬಿದಿರೆ: ಸಹಕಾರಿ ಸಂಘಗಳಲ್ಲಿ ಸಾಮಾಜಿಕ ಕಳಕಳಿ ಇದೆ- ಡಾ. ಎಂ.ಎನ್ ರಾಜೇಂದ್ರ ಕುಮಾರ್

ಮೂಡುಬಿದಿರೆ: ವಾಣಿಜ್ಯ ಬ್ಯಾಂಕ್‍ಗಳ ಲಾಭದ ಪಾಲು ಗ್ರಾಹಕರಿಗೆ ಸಿಗುವುದು ಕಡಿಮೆ. ಆದರೆ ಸಾಮಾಜಿಕ ಕಳಕಳಿ ಹೊಂದಿರುವ ಸಹಕಾರಿ ಬ್ಯಾಂಕ್‍ಗಳು ತಮ್ಮ ಲಾಭದಲ್ಲಿ ಹೆಚ್ಚಿನ ಪಾಲನ್ನು ಸದಸ್ಯರ ಹಿತಕ್ಕೋಸ್ಕರ ವಿನಿಯೋಗಿಸುತ್ತಿವೆ ಎಂದು ಎಸ್‍ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್ ಹೇಳಿದರು. ಅವರು ಎಂಸಿಎಸ್ ಸೊಸೈಟಿಯಲ್ಲಿ ನಡೆಯುತ್ತಿರುವ ಸಹಕಾರ ಸಪ್ತಾಹದ ಮೂರನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿದ್ಯಾಗಿರಿಯಲ್ಲಿ ಮಿಜಾರುಗುತ್ತು ಆನಂದ ಆಳ್ವರಿಗೆ ನುಡಿನಮನ

ಸ್ವರ್ಗಸ್ಥರಾದ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಅವರಿಗೆ ನುಡಿನಮನ' ಹಾಗೂಸಹಬೋಜನ’ವು ಆಳ್ವಾಸ್ ಕಾಲೇಜಿನ ಕೃಷಿಸಿರಿ ವೇದಿಕೆಯಲ್ಲಿ ಶ್ರದ್ಧಾ-ಭಕ್ತಿಯಿಂದ ನೆರವೇರಿತು. ನಿಟ್ಟೆ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ವಿನಯ ಹೆಗ್ಡೆ ಅವರು ನುಡಿನಮನ ಸಲ್ಲಿಸುತ್ತಾ `ಕೌಟುಂಬಿಕ ಜವಾಬ್ದಾರಿಯಿಂದ ತನ್ನ ವಿದ್ಯಾಭ್ಯಾಸ ಮೊಟುಕಾದರೂ, ವಿದ್ಯಾಕ್ಷೇತ್ರಕ್ಕೆ ಕೊಡುಗೆ ನೀಡಿ ಹಾಗೂ ವಿಶ್ವವಿದ್ಯಾಲಯಕ್ಕೆ ಸಮಾನಾಗಿ ಶಿಕ್ಷಣ ಸಂಸ್ಥೆ ಕಟ್ಟುವಲ್ಲಿ ಮಗನಿಗೆ ನೆರಳಾಗಿ ನಿಂತ

ಮೂಡುಬಿದಿರೆ:ಶತಾಯುಷಿ ಮಿಜಾರುಗುತ್ತು ಆನಂದ ಆಳ್ವರಿಗೆ ಶ್ರದ್ಧಾಂಜಲಿ ಅರ್ಪಣೆ

ಮೂಡುಬಿದಿರೆ: ಇತ್ತೀಚೆಗೆ ನಿಧನರಾಗಿರುವ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಅವತಿಗೆ ಸಮಾಜ ಮಂದಿರ ಸಭಾದ ನೇತೃತ್ವದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ ಅರ್ಪಿಸುವ ನುಡಿನಮನ ಕಾರ್ಯಕ್ರಮವು ಸಮಾಜಮಂದಿರದಲ್ಲಿ ನಡೆಯಿತು. ಸಮಾಜ ಮಂದಿರ ಸಭಾದ ಅಧ್ಯಕ್ಷ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ನುಡಿನಮನವನ್ನು ಸಲ್ಲಿಸುತ್ತಾ ಕೃಷಿ ಚಟುವಟಿಕೆಯನ್ನು ಆರಂಭಿಸಿ ಉತ್ತಮ ಕೃಷಿಕನಾಗಿ, ಶಿಕ್ಷಣದಲ್ಲಿ ಆಸಕ್ತಿಯನ್ನು ಹೊಂದಿ ಶಿಕ್ಷಣ ಸಂಸ್ಥೆಯನ್ನು ಆರಂಭಿಸಿದವರು, ಶಿಸ್ತನ್ನು

ಮೂಡುಬಿದಿರೆ: ಏರಿಳಿತ ತುಟ್ಟಿಭತ್ತೆ ಪಾವತಿಸಲು ಒತ್ತಾಯಿಸಿ ಪ್ರತಿಭಟನಾ ಪ್ರದರ್ಶನ

ಮೂಡುಬಿದಿರೆ : 2022ರ ಕೊನೆಯಲ್ಲಿ ಉಚ್ಛನ್ಯಾಯಲಯವು ಬೀಡಿ ಕಾರ್ಮಿಕರಿಗೆ ನೀಡಬೇಕಾದ ತುಟ್ಟಿಭತ್ತೆಯನ್ನು ನ್ಯಾಯೋಚಿತವಾಗಿದೆ ಎಂದು ತೀರ್ಪು ನೀಡಿದೆ. ಅದೇ ಸಂದರ್ಭದಲ್ಲಿ ಇನ್ನೊಂದು ತೀರ್ಪು ಮಾಲೀಕರ ಪರವಾಗಿ ಬಂದಿರುತ್ತದೆ. ಬೀಡಿ ಕಾರ್ಮಿಕರಿಗೆ ನ್ಯಾಯೋಚಿತವಾಗಿ ನೀಡಬೇಕಾದ ಏರಿಳಿತ ತುಟ್ಟಿಭತ್ತೆಯನ್ನು ನೀಡಬೇಕು. ಬೀಡಿ ಕಾರ್ಮಿಕರಿಗೆ ನೀಡಬೇಕಾದ ಬಾಕಿ ಮೊತ್ತವನ್ನು ಜಾರಿಗೊಳಿಸಲು ಕರ್ನಾಟಕ ರಾಜ್ಯ ಸರಕಾರ ಗಂಭೀರ ಶ್ರಮವಹಿಸಬೇಕೆಂದು ಬೀಡಿ ಫೆಡರೇಷನ್ ನ ಜಿಲ್ಲಾ

ಮೂಲ್ಕಿ: ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಆಧ್ಯಾತ್ಮ ಶಿಕ್ಷಣವು ಅಗತ್ಯ – ಮಿಥುನ್ ರೈ

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಆಧ್ಯಾತ್ಮಿಕ ಶಿಕ್ಷಣವನ್ನು ಪಡೆಯುವುದು ಅತೀ ಅಗತ್ಯ. ಇದರೊಂದಿಗೆ ಸಂಸ್ಕಾರ, ಆಚಾರ-ವಿಚಾರಗಳನ್ನು ದೇವಾಲಯದ ಸಂಬಂಧ ಪಟ್ಟ ವಿಭಾಗವು ನಡೆಸಿದರೆ ವಿದ್ಯಾರ್ಥಿಗಳ ಜೀವನಕ್ಕೆ ಅನುಕೂಲವಾಗುತ್ತದೆ ಇಂತಹ ಕಾರ್ಯಕ್ರಮವನ್ನು ಸಿಎಸ್ಐ ಜಿಲ್ಲಾ ಸಮಿತಿಯು,ಹಳೆಯಂಗಡಿ ಸಿಎಸ್ಐ ಅಮ್ಮನ್ ಮೆಮೋರಿಯಲ್ ಚರ್ಚಿನ ಅತಿಥೇಯದಲ್ಲಿ ನಡೆಸಿರುವುದು ಅಭಿನಂದನೀಯ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಮಿಥುನ್ ರೈ ಯವರು

ಮೂಡುಬಿದಿರೆ: ಡಿ.14ರಿಂದ 17ರ ವರೆಗೆ 29ನೇ ವರ್ಷದ ಆಳ್ವಾಸ್ ವಿರಾಸತ್-2023

ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ನಡೆಸಿಕೊಂಡು ಬರುತ್ತಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ 29ನೇ ವರ್ಷಕ್ಕೆ ಕಾಲಿರಿಸಿದ್ದು ಈ ಬಾರಿ ಡಿ.14ರಿಂದ 17ರವರೆಗೆ ನಡೆಯಲಿದ್ದು ಅದಕ್ಕಾಗಿ ಸಿದ್ಧತೆ ನಡೆಯುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದರು. ಅವರು ಮೂಡುಬಿದಿರೆಯ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಪುತ್ತಿಗೆ ವಿವೇಕಾನಂದ ನಗರದಲ್ಲಿರುವ ಶ್ರೀಮತಿ

ಮೂಡುಬಿದಿರೆ : ಬಾವಿಗೆ ಬಿದ್ದ ಚಿರತೆಯನ್ನು ರಕ್ಷಿಸಿದ ಅರಣ್ಯಾಧಿಕಾರಿಗಳು

ಮೂಡುಬಿದಿರೆ: ಅಕಸ್ಮಿಕವಾಗಿ ಬಾವಿಗೆ ಬಿದ್ದ ಚಿರತೆಯನ್ನು ಊರವರ ಸಹಕಾರದೊಂದಿಗೆ ಅರಣ್ಯಾಧಿಕಾರಿಗಳು ರಕ್ಷಿಸಿದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ತಾಲೂಕಿನ ಪುರಸಭಾ ವ್ಯಾಪ್ತಿಯ ಮಾರೂರು ಗುತ್ತು ಬಳಿಯ ಎಸ್ ಸಿ ಕಾಲನಿಯಲ್ಲಿರುವ ಬಾವಿಯೊಂದಕ್ಕೆ ದೊಡ್ಡ ಗಾತ್ರದ ಚಿರತೆಯೊಂದು ಆಯತಪ್ಪಿ ಬಿದ್ದಿದೆ. ಈ ಬಗ್ಗೆ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಅವರ ಮಾರ್ಗದರ್ಶನದೊಂದಿಗೆ

ಮೂಡುಬಿದಿರೆ: ವಿವಿಧ ಸಂಸ್ಥೆಗಳಿಂದ ರಕ್ತದಾನ ಶಿಬಿರ

ಮೂಡುಬಿದಿರೆ: ರಕ್ತದಾನ ಮಾಡುವುದರಿಂದ ಓರ್ವ ವ್ಯಕ್ತಿಯ ಜೀವವನ್ನು ಉಳಿಸಲು ಸಾಧ್ಯವಿದೆ. ನಾವು ಅಂಗಾಂಗ ದಾನದ ಬಗ್ಗೆಯೂ ಗಮನಹರಿಸಬೇಕಾಗಿದೆ. ವಿದೇಶಗಳಲ್ಲಿ ಹೆಚ್ಚಿನ ಜನರು ಅಂಗಾಂಗ ದಾನ ಮಾಡುತ್ತಾರೆ.ಅಂಗಾಂಗ ದಾನ ಮಾಡುವುದರಿಂದ ಮೂರ್ನಾಲ್ಕು ಜನರನ್ನು ಬದುಕಿಸಬಹುದು ಆದ್ದರಿಂದ ತಾನೂ ಕೂಡಾ ಅಂಗಾಂಗ ದಾನ ಮಾಡುವ ಇಚ್ಛೆಯನ್ನು ಹೊಂದಿದ್ದೇನೆ ಎಂದು ಮಾಜಿ ಸಚಿವ ಕೆ.ಅಭಯಚಂದ್ರ ಅವರು ಹೇಳಿದರು. ಅವರು ಮೂಡುಬಿದಿರೆಯ ವಲಯದ ವಿವಿಧ ಸಂಸ್ಥೆಗಳಾದ ಲಯನ್ಸ್ ಕ್ಲಬ್, ಭಾರತೀಯ

ಹಕ್ಕು ಪತ್ರಕ್ಕಾಗಿ ಹಣವನ್ನು ಕಳೆದುಕೊಳ್ಳಬೇಡಿ : ಶಾಸಕ ಉಮಾನಾಥ್ ಕೋಟ್ಯಾನ್

ನಾವು ಹಕ್ಕುಪತ್ರ ನೀಡುತ್ತೇವೆ ಎಂದು ಮೀಟಿಂಗ್ ಗೆ ಕರೆದು ನಿಮ್ಮಿಂದ ಹಣವನ್ನು ಪಡೆದು ಮೋಸ ಮಾಡುವವರಿದ್ದಾರೆ ಆದ್ದರಿಂದ ಮೋಸದ ಮಾತುಗಳಿಗೆ ಬಲಿಯಾಗಿ ಹಣವನ್ನು ಕಳೆದುಕೊಳ್ಳದಿರಿ ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಜನರನ್ನು ಎಚ್ಚರಿಸಿದ್ದಾರೆ. ಅವರು ಮೂಡುಬಿದಿರೆ ತಾಲೂಕು ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ 94ಸಿ 57, 94ಸಿಸಿ 17ಮಂಜೂರಾತಿ ಆದೇಶ ಪತ್ರ ಹಾಗೂ ಪಿಂಚಣಿ ದಿನದಂಗವಾಗಿ 31ಪಿಂಚಣಿ ಆದೇಶ ಪತ್ರವನ್ನು ತಾಲೂಕು ಆಡಳಿತ ಸೌಧದಲ್ಲಿ ವಿತರಿಸಿ ಮಾತನಾಡಿದರು.