Home ಕರಾವಳಿ Archive by category ಮೂಡಬಿದರೆ (Page 3)

ಮೂಡುಬಿದಿರೆ: ಚರ್ಚ್ ಪತ್ರ ದುರುಪಯೋಗ: “ಫೋಕಸ್” ವಾಟ್ಸಪ್ ಗ್ರೂಪಿನಿಂದ 12 ಲಕ್ಷ ಕಲೆಕ್ಷನ್, ಅಡ್ಮಿನ್ ಪೊಲೀಸರ ವಶಕ್ಕೆ

ಮೂಡುಬಿದಿರೆ: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಗುವಿನ‌ ನೆರವು ಕೋರಿ ಬ್ಯಾಂಕ್ ಖಾತೆಯ ಮಾಹಿತಿ ಪತ್ರವನ್ನು ಚರ್ಚ್ ನ ವಾಟ್ಸಾಪ್ ಗ್ರೂಪ್ ನಲ್ಲಿ ಹಾಕಿದ್ದು ಆಗ್ರೂಪ್ ನ ಅಡ್ಮಿನ್ ಅಕೌಂಟ್ ನಂಬರ್ ಅನ್ನು ಬದಲಾಯಿಸಿ ಹಣ ವಸೂಲಿ ಮಾಡಿದ್ದು, ಆತನ್ನು ಮೂಡುಬಿದಿರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬಂಧಿತ ಆರೋಪಿಯನ್ನು ವಿನೋದ್ ವಾಲ್ಟರ್ ಪಿಂಟೋ ಎಂದು

ಮೂಡುಬಿದಿರೆ : ಆಳ್ವಾಸ್ ನಲ್ಲಿ ಜಾಗೃತಿ ಕಾರ್ಯಕ್ರಮ

ಮೂಡುಬಿದಿರೆ : ಆಳ್ವಾಸ್ ಪದವಿ ಕಾಲೇಜಿನ ಆ್ಯಂಟಿ ರ‍್ಯಾಗಿಂಗ್ ಸೆಲ್, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯೂತ್ ರೆಡ್‌ಕ್ರಾಸ್ ಘಟಕಗಳ ಜಂಟಿ ಆಶ್ರಯದಲ್ಲಿ ಮೂಡುಬಿದಿರೆ ಪೋಲೀಸ್ ಇಲಾಖೆಯ ಸಹಯೋಗದೊಂದಿಗೆ ಜಾಗೃತಿ ಕಾರ್ಯಕ್ರಮವು ಕುವೆಂಪು ಸಭಾಂಗಣದಲ್ಲಿ ನಡೆಯಿತು. ಮೂಡುಬಿದಿರೆ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ಕಾಯ೯ಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರ‍್ಯಾಗಿಂಗ್ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಗೌರವಕ್ಕೆ ದಕ್ಕೆ ತರುವ ಗಂಭೀರ ಸಾಮಾಜಿಕ ಸಮಸ್ಯೆ. ಆ ಹಿನ್ನಲೆಯಲ್ಲಿ

ಮೂಡುಬಿದಿರೆ:ಹಿರಿಯ ವೈದ್ಯ ಡಾ.ಎಂ.ರಾಮ ಭಟ್ ನಿಧನ

ಮೂಡುಬಿದಿರೆ: ಹಿರಿಯ ಆಯರ್ವೇದ , ಅಲೋಪತಿ ವೈದ್ಯ ಡಾ. ಎಂ. ರಾಮ ಭಟ್ ( 92) ಅಲ್ಪಕಾಲದ ಅಸ್ವಾಸ್ಥ್ಯದ ಬಳಿಕ ಅರಮನೆ ರಸ್ತೆಯ ತಮ್ಮ ಮಹಾಲಸಾ ನಿವಾಸದಲ್ಲಿ ಅ17 ರಂದು ನಿಧನ ಹೊಂದಿದರು. ಅವರು ಸಹೋದರ, ಸಹೋದರಿಯರು, ಪುತ್ರ ಹೋಮಿಯೋ ಪತಿ ವೈದ್ಯ ಡಾ. ಗಂಗಾಧರ ಭಟ್ , ಇಬ್ಬರು ಪುತ್ರಿಯರು, ಸೊಸೆ ಡಾ. ವಿನಯಾ ಜಿ. ಭಟ್ ಸಹಿತ ಬಂಧುವರ್ಗವನ್ನು ಅಗಲಿದ್ದಾರೆ.1956ರಲ್ಲಿ ಎಲ್.ಎ. ಎಂ. ಎಸ್ ಪದವೀಧರ ವೈದ್ಯರಾಗಿ ಬೆರಳೆಣಿಕೆಯ ವೈದ್ಯರಿದ್ದ ಕಾಲದಲ್ಲಿ 1958 ರಿಂದ […]

ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ : ವೃದ್ಧ ಆರೆಸ್ಟ್

ಮೂಡುಬಿದಿರೆ : ಖಾಸಗಿ ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯ ರೀತಿಯಲ್ಲಿ ವತಿ೯ಸಿದ್ದ ವೃದ್ಧನನ್ನು ಮೂಡುಬಿದಿರೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.ಬೆಳುವಾಯಿಯ ನಿವಾಸಿ ವೃದ್ಧ ರೆಹ್ಮಾನ್ ಬಂಧಿತ.ಮಂಗಳೂರು-ಮೂಡುಬಿದಿರೆ–ಕಾಕ೯ಳ ಮಧ್ಯೆ ಸಂಚರಿಸುವ ಖಾಸಗಿ ಬಸ್ ನಲ್ಲಿ ಘಟನೆ ನಡೆದಿದ್ದು ಇದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದ್ದು ಈ ಬಗ್ಗೆ ಯಾರೂ ದೂರು ಕೊಡದ ಹಿನ್ನೆಲೆಯಲ್ಲಿ ಪೊಲೀಸರು ವೃದ್ಧನನ್ನು ಕರೆಸಿ ವಿಚಾರಣೆ ಮಾಡಿ ಬಿಟ್ಟಿದ್ದರು. ಆದರೆ

ತಮ್ಮನ ಮೃತದೇಹ ನೋಡಲು ಬಂದ ಅಣ್ಣನೂ ಹೃದಯಾಘಾತದಿಂದ ಸಾವು

ಮೂಡುಬಿದಿರೆ : ಅನಾರೋಗ್ಯದಿಂದ ಸಾವನ್ನಪ್ಪಿದ ತಮ್ಮನ ಮೃತದೇಹವನ್ನು ನೋಡಲು ದೂರದ ಗುಜರಾತಿನಿಂದ ಬಂದಿದ್ದ ಅಣ್ಣ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಶನಿವಾರ ನಿಡ್ಡೋಡಿಯಲ್ಲಿ ನಡೆದಿದೆ. ತಾಲೂಕಿನ ನಿಡ್ಡೋಡಿಯಲ್ಲಿ ನಿವಾಸಿ, ಜನಪರ ಕೆಲಸಗಳಿಂದ ಪರಿಸರದಲ್ಲಿ ಗುರುತಿಸಿಕೊಂಡಿದ್ದ ಪ್ರವೀಣ್ ಶೆಟ್ಟಿ ಅವರು ಕೆಲಕಾಲದ ಅಸೌಖ್ಯದಿಂದ ಆಸ್ಪತ್ರೆ ಸೇರಿದ್ದರು. ಸಾಕಷ್ಟು ಖರ್ಚು ಮಾಡಿದ್ದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು.ಸಹೋದರ ಮೃತಪಟ್ಟ ಸುದ್ಧಿ ತಿಳಿದು ಗುಜರಾತ್

ಮೂಡುಬಿದಿರೆ : ಬೆಳುವಾಯಿ ಪ್ಲೈ ಓವರ್ ಗೆ ಕಾರು ಢಿಕ್ಕಿ : ಓವ೯ ಬಲಿ, ಮೂವರು ಗಂಭೀರ

ಮೂಡುಬಿದಿರೆ: ಅತೀ ವೇಗದಿಂದ ಚಲಿಸುತ್ತಿದ್ದ ಕಾರೊಂದು ಬೆಳುವಾಯಿ ಪ್ಲೈ ಓವರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ಓವ೯ ಸಾವನ್ನಪ್ಪಿದ್ದು, ಉಳಿದ ಮೂವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.ವೇಣೂರು ಪೆಮು೯ಡ ನಿವಾಸಿ ಸುಮಿತ್ ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ.ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಮೂಡುಬಿದಿರೆ: ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟ್ ಲಿ. ವತಿಯಿಂದ ಬೆಡ್‌ಶೀಟ್, ಟವಲ್, ಸಿಹಿತಿಂಡಿ ವಿತರಣೆ

ಮೂಡುಬಿದಿರೆ: 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟ್ ಲಿ. ಇದರ ವತಿಯಿಂದ ಪ್ರಜ್ಞಾ ಆಶ್ರಯ ಕೇಂದ್ರದ ವಿದ್ಯಾರ್ಥಿಗಳಿಗೆ ಬೆಡ್‌ಶೀಟ್, ಟವಲ್, ಸಿಹಿತಿಂಡಿ ವಿತರಣಾ ಕಾರ್ಯಕ್ರಮವು ನಡೆಯಿತು. ಮೂಡುಬಿದಿರೆ-ಮುಲ್ಕಿ ಕ್ಷೇತ್ರದ ಬಿಜೆಪಿ ಮಂಡಲ ಕಾರ್ಯದರ್ಶಿ ಹಾಗೂ ಪಂಚಶಕ್ತಿ ವಿವಿದೋದ್ದೇಶ ಸೇವಾ ಸಹಕಾರಿ ಸಂಘ ಇದರ ಅಧ್ಯಕ್ಷರಾದ ರಂಜಿತ್ ಕುಮಾರ್ ತೋಡಾರು ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ : ಹಿಂದೂ ಮಹಿಳಾ ಸಂರಕ್ಷಣಾ ವೇದಿಕೆ ವತಿಯಿಂದ ದೂರು ದಾಖಲು

ಮೂಡುಬಿದಿರೆ : ಖಾಸಗಿ ಬಸ್ಸಿನಲ್ಲಿ ವ್ಯಕ್ತಿಯೋವ೯ ಯುವತಿಯೊಂದಿಗೆ ಅಸಭ್ಯ ರೀತಿಯಲ್ಲಿ ವತಿ೯ಸಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದ್ದು ಅವನ ಮೇಲೆ ಯಾರು ದೂರು ಕೊಡದ ಕಾರಣ ಪೊಲೀಸ್ ಇಲಾಖೆ ಆತನನ್ನು ಕರೆಸಿ ವಿಚಾರಣೆ ಮಾಡಿ ಬಿಟ್ಟಿದ್ದರು. ಇದನ್ನು ಹಿಂದೂ ಮಹಿಳಾ ಸಂರಕ್ಷಣಾ ವೇದಿಕೆ ಮೂಡುಬಿದಿರೆ ತೀರ್ವವಾಗಿ ವಿರೋಧಿಸಿದಲ್ಲದೆ ಸ್ವತ: ಸಂಘಟನೆ ವತಿಯಿಂದ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ ಜಿ ಅವರಿಗೆ ದೂರನ್ನು ನೀಡಿದ್ದಾರೆ.ದೂರು

ಮೂಡುಬಿದಿರೆ : ಸ್ವಣೋ೯ದ್ಯಮಿ ಶ್ರೀಧರ್ ಆಚಾಯ೯ ನಿಧನ

ಮೂಡುಬಿದಿರೆ : ಸ್ವಣೋ೯ದ್ಯಮಿ ಮೂಡುಬಿದಿರೆಯ ಸುಧಾ ಜ್ಯುವೆಲ್ಲರ್ಸ್ ನ ಮಾಲಕ ಶ್ರೀಧರ ಆಚಾರ್ಯ (84) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ನಿಧನ ಹೊಂದಿದರು.ಅವರು ಮೂಡುಬಿದಿರೆಯಲ್ಲಿ ಸುಧಾ ಜ್ಯುವೆಲ್ಲರ್ಸ್, ಲಕ್ಷ್ಮೀ ಜ್ಯುವೆಲ್ಲರ್ಸ್ ನ ಸ್ಥಾಪಕರಾಗಿದ್ದರು.ಮೂಡುಬಿದಿರೆ ಗುರುಮಠ ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ 1997- 2002 ರ ಅವಧಿಯಲ್ಲಿ ಎರಡನೇ ಮೊಕ್ತೇಸರರಾಗಿ ಸೇವೆ ಸಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದರು.ಮೃತರು ಪತ್ನಿ, ಐದು ಮಂದಿ

ಮೂಡುಬಿದಿರೆ : ಕಳಕೊಂಡ ಚಿನ್ನವನ್ನು 65 ಗಂಟೆಯಲ್ಲಿ ಪತ್ತೆ ಮಾಡಿದ ಮೂಡುಬಿದಿರೆ ಪೊಲೀಸರು

ಮೂಡುಬಿದಿರೆ : ಆ. 8 ರಂದು ಮಹಿಳೆಯೋವ೯ರು ಪಸ್ ೯ ಸಹಿತ 72 ಗ್ರಾಂ ಚಿನ್ನವನ್ನು ಕಳೆದುಕೊಂಡಿದ್ದು ಅದನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ. ಜಿ. ನೇತೃತ್ವದ ತಂಡವು 65 ಗಂಟೆಯಲ್ಲಿ ಪತ್ತೆ ಹಚ್ಚಿ ಸಂಬಂಧಪಟ್ಟವರಿಗೆ ಸೋಮವಾರ ಹಸ್ತಾಂತರಿಸಿ ಮೆಚ್ಚುಗೆಗೆ ಪಾತ್ರವಾಗಿದೆ.ಪಡುಮಾನಾ೯ಡಿನ ದಿ. ಧಮ೯ಪಾಲ ಬಲ್ಲಾಳ್ ಅವರ ಪತ್ನಿ ವಿಜಯ ಅವರು ಆ. 8ರಂದು ಕುಪ್ಪೆಪದವಿನಲ್ಲಿ ಅವರ ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಹಿಂತಿರುಗುವ ಸಂದಭ೯ ಮಧ್ಯಾಹ್ನ 2 ಗಂಟೆ