Home ಕರಾವಳಿ Archive by category ಮೂಡಬಿದರೆ (Page 9)

ಮೂಡುಬಿದಿರೆ:ಪುರಸಭೆಯ ಪೌರಕಾಮಿ೯ಕೆ ಆತ್ಮಹತ್ಯೆ

ಮೂಡುಬಿದಿರೆ : ಇಲ್ಲಿನ ಪುರಸಭೆಯ ಪೌರ ಕಾಮಿ೯ಕೆಯೋವ೯ರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುರಸಭಾ ವ್ಯಾಪ್ತಿಯ ಬಿರಾವಿನಲ್ಲಿ ಮಂಗಳವಾರ ನಡೆದಿದೆ.ಬಿರಾವು ಅರಂತ ಕಂಪೌಂಡ್ ನ ನಿವಾಸಿ ದಿ. ಚಂದ್ರಹಾಸ್ ಅವರ ಪತ್ನಿ ಯಶೋಧ (43ವ) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆ ಕಳೆದ ಕೆಲವು ವರುಷಗಳಿಂದ ಪೌರಕಾಮಿ೯ಕೆಯಾಗಿ ಪುರಸಭೆಯಲ್ಲಿ

ಮೂಡುಬಿದಿರೆ: ಗುತ್ತಿಗೆದಾರ ಜಯ ಮೇಸ್ತ್ರಿ ನಿಧನ

ಮೂಡುಬಿದಿರೆ: ಇಲ್ಲಿನ ಪ್ರಸಿದ್ಧ ಕಟ್ಟಡಗಳ ಹಾಗೂ ಹಲವಾರು ಖ್ಯಾತನಾಮರ ಮನೆಗಳ ಕೆಲಸಗಳನ್ನು ಎಂಜಿನಿಯರ್ ನಂತೆ ಅಚ್ಚುಕಟ್ಟಾಗಿ ನಿಮಿ೯ಸಿ ಕೊಟ್ಟು ಜಯ ಮೇಸ್ತ್ರಿ ಎಂದೇ ಮೂಡುಬಿದಿರೆ ಪರಿಸರದಲ್ಲಿ ಖ್ಯಾತರಾಗಿದ್ದ ಸಂಪಿಗೆ ಕೋಂಟಡ್ಕ ನಿವಾಸಿ ಜಯ ಗೌಡ (68) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಮೂಡುಬಿದಿರೆ ಕನ್ನಡಭವನದಲ್ಲಿ ನಡೆದಿದ್ದ ‘ತುಳುವೆರ್ ಬೆದ್ರ’ ಸಂಘಟನೆಯ ನಾಟಕ ಪ್ರದರ್ಶನ ವೇಳೆ ಜಯ ಮೇಸ್ತ್ರಿ ಅವರನ್ನು

ಮೂಡುಬಿದಿರೆ : 2ನೇ ವಷ೯ದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

ಮೂಡುಬಿದಿರೆ : ಶ್ರೀ ಇಟಲ ಬಾಕ್ಯಾರ್ ಫ್ರೆಂಡ್ಸ್ ದರೆಗುಡ್ಡೆ ಇದರ ವತಿಯಿಂದ ದಿ |ಬಿ. ಜಯರಾಜ್ ಕೆಲ್ಲಪುತ್ತಿಗೆ ಅರಮನೆ ಇವರ ಸ್ಮರಣಾರ್ಥ 2ನೇ ವರ್ಷದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಶನಿವಾರ ನಡೆಯಿತು.ರಾಜವರ್ಮ ಬೈಲಂಗಡಿ ಹಾಗೂ ರಾಜೇಂದ್ರ ಬೈಲಂಗಡಿ ಪೆರಿಂಜೆ ಅವರು ಪಂದ್ಯಾಟವನ್ನು ಉದ್ಘಾಟಿಸಿ ಶುಭ ಹಾರೈಸಿದರು. ದರೆಗುಡ್ಡೆ ಗ್ರಾಮ ಪಂಚಾಯತ್ ನ ಅಧ್ಯಕ್ಷ ಅಶೋಕ್ ಶೆಟ್ಟಿ ಬೇಲೊಟ್ಟು ಅಧ್ಯಕ್ಷತೆಯಲ್ಲಿ ನಡೆದ ಕಾಯ೯ಕ್ರಮದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ

ಮೂಡುಬಿದಿರೆ : ತರಕಾರಿ ಮಾರುಕಟ್ಟೆಯ ಸುಂಕ ವಸೂಲಿ ಗುತ್ತಿಗೆ ರದ್ದು ಪಡಿಸಿದ ಪುರಸಭೆ

ಮೂಡುಬಿದಿರೆ : ಇಲ್ಲಿನ ಪುರಸಭಾ ವ್ಯಾಪ್ತಿಯ ಸ್ವರಾಜ್ಯ ಮೈದಾನದಲ್ಲಿ ಕಾಯ೯ಚರಿಸುತ್ತಿದ್ದ ದಿನವಹಿ ತಾತ್ಕಾಲಿಕ ತರಕಾರಿ ಮಾರುಕಟ್ಟೆಯ ವರಿ ವಸೂಲಿನ ಗುತ್ತಿಗೆಯನ್ನು ಪುರಸಭೆಯು ಸೋಮವಾರ ಸಂಜೆ ರದ್ದುಪಡಿಸಿದೆ.ಕಳೆದ ಡಿಸೆಂಬರ್ 20 ರಂದು ನಡೆದಿದ್ದ ದಿನವಹಿ ತಾತ್ಕಾಲಿಕ ತರಕಾರಿ ಮಾರುಕಟ್ಟೆಯ ಬಹಿರಂಗ ಏಲಂ ಪ್ರಕ್ರಿಯೆಯಲ್ಲಿ ನಿಡ್ಡೋಡಿಯ ಸುಂದರ ಪೂಜಾರಿ ಅವರು ಅತೀ ಹೆಚ್ಚು ಬಿಡ್ಡು ( 42,00,350) + 7,56,073 ( 18% ಜಿ.ಎಸ್.ಟಿ)ದಾರರಾಗಿ ವರಿವಸೂಲಿನ ಹಕ್ಕನ್ನು

ಮೂಡುಬಿದಿರೆ:ಗ್ರಾ. ಪಂ. ಸದಸ್ಯ ವಾಸು ಗೌಡ ನಿಧನ

ಮೂಡುಬಿದಿರೆ: ಇಲ್ಲಿನ ಪುತ್ತಿಗೆ ಗ್ರಾ. ಪಂಚಾಯತ್ ಸದಸ್ಯ ವಾಸು ಗೌಡ ಗುಡ್ಡೆಯಂಗಡಿ ಅವರು ಇಂದು ಬೆಳಿಗ್ಗೆ ಹೃದಯಾಘಾತಕ್ಕೊಳಗಾಗಿ ಸ್ವಗೃಹದಲ್ಲಿ ನಿಧನ ಹೊಂದಿದರು.ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದ ಅವರು ಪತ್ನಿ ಮತ್ತು ಮೂವರು ಪುತ್ರರನ್ನು ಅಗಲಿದ್ದಾರೆ.

ವಿಶ್ವಕರ್ಮ ಬ್ಯಾಂಕ್ :ನಿರ್ದೇಶಕರಾಗಿ ಸೀತಾರಾಮ್ ಮರು ಆಯ್ಕೆ

ವಿಶ್ವಕರ್ಮ ಸಹಕಾರ ಬ್ಯಾಂಕ್ ನಿರ್ದೇಶಕರಾಗಿ ಪತ್ರಕರ್ತ ಬೆಳುವಾಯಿ ಸೀತಾರಾಮ್ ಆಚಾರ್ಯ ಅವರು ತೃತೀಯ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಮಂಗಳೂರು ವಿಶ್ವಕರ್ಮ ಬ್ಯಾಂಕ್ ಕಚೇರಿಯ ಸಭಾಂಗಣದಲ್ಲಿ ಚುನಾವಣೆ ನಡೆಯಿತು. ಸಹಕಾರ ಸಂಘಗಳ ಉಪನಿಬಂಧಕರಾದ ವಿಲಾಸ್ ಚುನಾವಣಾಧಿಕಾರಿಯಾಗಿದ್ದರು.

ಮೂಡುಬಿದಿರೆ: 25 ಗೂಡಂಗಡಿಗಳಿಂದ ಕಳವು ಗೈದ ಆರೋಪಿಗಳನ್ನು ಬಂಧಿಸಿದ ಮೂಡುಬಿದಿರೆ ಪೊಲೀಸರು

ಮೂಡುಬಿದಿರೆ: ಕಳೆದ 3 ವರುಷಗಳಿಂದ ವಿವಿಧ ಕಡೆಗಳಲ್ಲಿರುವ 25 ಗೂಡಂಗಡಿಗಳಿಂದ ಅಂದಾಜು 3,55,000/- ಮೌಲ್ಯದ ವಸ್ತುಗಳನ್ನು ಕಳವುಗೈದಿರುವ ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ನಿಡ್ಡೋಡಿಯ ನೀರುಡೆ ನಿವಾಸಿ ರೋಶನ್ ವಿಲ್ಸನ್ ಕ್ವಾಡ್ರಸ್, ಕೊಂಪದವು ನೆಲ್ಲಿ ತೀರ್ಥದ ನಿವಾಸಿ ನಿಶಾಂಕ್ ಪೂಜಾರಿ, ತೆಂಕು ಎಕ್ಕಾರು ಗ್ರಾಮದ ನಿವಾಸಿ ರೋಹಿತ್ ಮಸ್ಕರೇನಸ್ ಬಂಧಿತ ಕಳ್ಳರು. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತಿಗೆ ಗ್ರಾಮದ ಮುಲ್ಕಿ ಕ್ರಾಸ್

ಮಹಾ ಕುಂಭಮೇಳದಲ್ಲಿ ಕನ್ನಡಿಗರ ಪಾತ್ರ – ಪ್ರಮುಖ ದ್ವಾರಗಳಿಗೆ ಲೆಕ್ಸಾ ದೀಪಾಲಂಕಾರ

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದ್ದು, ಪುಣ್ಯಭೂಮಿಗೆ ಪ್ರವೇಶಿಸುವ ಮುಖ್ಯದ್ವಾರಗಳಾದ ಗಂಗಾ ದ್ವಾರ, ಯಮುನಾ ದ್ವಾರ ಹಾಗೂ ಸರಸ್ವತಿ ದ್ವಾರಗಳಿಗೆ ದೀಪಾಲಂಕಾರ ಮಾಡುವ ಸದಾವಕಾಶ ದೇಶಾದ್ಯಂತ ದೀಪಾಲಂಕಾರದ ಮೂಲಕವೇ ಹೆಸರುವಾಸಿಯಾದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಲೆಕ್ಸಾ ಲೈಟಿಂಗ್ ಸಂಸ್ಥೆಗೆ ದೊರೆತಿದೆ. ಪ್ರಸ್ತುತ ಪ್ರಯಾಗರಾಜ್ ದಲ್ಲಿ ಪ್ರಾರಂಭಗೊಂಡಿರುವುದು 12 ವರ್ಷಕ್ಕೊಮ್ಮೆ ನಡೆಯೋ ಕುಂಭಮೇಳವಲ್ಲ, ಶತಮಾನಗಳಿಗೊಮ್ಮೆ

ಮೂಡುಬಿದಿರೆ :ವಿಶ್ರಾಂತ ಮುಖ್ಯ ಶಿಕ್ಷಕ ಫಣಿರಾಜ್ ಜೈನ್ ನಿಧನ

ಮೂಡುಬಿದಿರೆ : ತಾಲೂಕಿನ ಪಡುಮಾರ್ನಾಡು ಪ್ರೀತಿ ನಿವಾಸದ ವಿಶ್ರಾಂತ ಮುಖ್ಯ ಶಿಕ್ಷಕ ಫಣಿರಾಜ ಜೈನ್(67ವ.) ಜ13ರಂದು ರಾತ್ರಿ ನಿಧನರಾದರು.ಪತ್ನಿ ಮೂವರು ಪುತ್ರಿಯರು ಹಾಗು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಬೆಳುವಾಯಿ ಬಂಗ್ಲೆ ಶಾಲೆ ಕೆಸರ್ ಗದ್ದೆ ಮೈನ್ ಶಾಲೆ ಮುಖ್ಯ್ಯೊ ಪಾಧ್ಯಾಯರಾಗಿ ಗುರುಪುರ, ಸುಳ್ಯ, ಮಡಿಕೇರಿ ಪ್ರೌಢಶಾಲೆ ಶಿಕ್ಷಕ ರಾಗಿ, ಸಾಕ್ಷರತ ಅಂದೋಲನ, ಮುಂದುವರಿಕ ಶಿಕ್ಷಣ ಕೇಂದ್ರಗಳಲ್ಲಿ ಸೇವೆ ಸಲ್ಲಿಸಿದ್ದರು. ಮಾರ್ನಾಡು ಶ್ರೀ ವರ್ಧಮಾನ ಸ್ವಾಮಿ

ಮೂಡುಬಿದಿರೆ: ಸಮಾಜ ಸೇವಕ, ಹೊಸಂಗಡಿ ಗ್ರಾಂ.ಪಂ.ಮಾಜಿ ಅಧ್ಯಕ್ಷ ಹರಿಪ್ರಸಾದ್ ನಿಧನ

ಮೂಡುಬಿದಿರೆ: ಸಮಾಜ ಸೇವಕ, ಹೊಸಂಗಡಿ ಗ್ರಾ.ಪಂ.ನ ಮಾಜಿ ಅಧ್ಯಕ್ಷ, ಪ್ರಸ್ತುತ ಸದಸ್ಯರಾಗಿರುವ ಹರಿಪ್ರಸಾದ್ ಅವರು ಹೃದಯಾಘಾತದಿಂದ ಭಾನುವಾರ ನಿಧನ ಹೊಂದಿದರು. ಹೊಸಂಗಡಿ ನಿವಾಸಿಯಾಗಿರುವ ಅವರು ಹರಿಯಣ್ಣ ಎಂದೇ ಚಿರಪರಿಚಿತರಾಗಿದ್ದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಧರಣೇಂದ್ರ ಕುಮಾರ್ ಅವರ ಸಹೋದರ. ಪೆರಾಡಿ ಸೊಸೈಟಿ ಬ್ಯಾಂಕ್ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವುದು ಮಾತ್ರವಲ್ಲದೆ ಹಲವಾರು ಸಮಾಜಮುಖಿ ಸಂಘ ಸಂಸ್ಥೆಗಳಲ್ಲಿ ತನ್ನನ್ನು ಸಕ್ರಿಯವಾಗಿ