ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುರತ್ಕಲ್ ಪ್ಯಾರಡೈಸ್ ಮೈದಾನದಿಂದ ಕಾಟಿಪಳ್ಳವರೆಗೆ ಬೃಹತ್ ಪೊಲೀಸ್ ಪಥಸಂಚಲನ ನಡೆಯಿತು. ಪಥಸಂಚಲನದಲ್ಲಿ ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಭಾಗವಹಿಸಿದ್ದರು. ಪೊಲೀಸ್ ಪಥಸಂಚಲನದಲ್ಲಿ ಪೊಲೀಸ್, ಸಿಆರ್ ಪಿಎಫ್ ಸಹಿತ ವಿವಿಧ ಘಟಕಗಳ ಸಿಬ್ಬಂದಿ ಸುಮಾರು 500ಕ್ಕೂ ಹೆಚ್ಚಿನ ಸಿಬ್ಬಂದಿ ಭಾಗವಹಿಸಿದ್ದರು.
ಎರ್ಮಾಳಿನ ಬಾರೊಂದರ ಹಿಂಬದಿಯಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಕೋಳಿಯಂಕಕ್ಕೆ ದಾಳಿ ಮಾಡಿದ ಪೊಲೀಸರು ಒಂಭತ್ತು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.ಪೊಲೀಸ್ ವಶದಲ್ಲಿರುವವರು ಸುರೇಂದ್ರ ಬೆಳಪು, ಮಹೇಶ್ ಕುರ್ಕಾಲು, ಗಣೇಶ್ ಶೆಟ್ಟಿ ಎಲ್ಲೂರು, ಉಮೇಶ್ ಪೂಜಾರಿ ಕಾಪು, ಶ್ರೀಕಾಂತ್ ಉಚ್ಚಿಲ, ಸಂತೋಷ್ ಉಚ್ಚಿಲ, ರಾಜೇಂದ್ರ ಎಲ್ಲೂರು, ರಾಮ ತೆಂಕ ಎರ್ಮಾಳು, ಯೋಗೀಶ್ ಶೆಟ್ಟಿ ಕುಂಜೂರು.ಎರ್ಮಾಳಿನ ಬಾರ್ ಹಿಂಭಾಗದಲ್ಲಿ ಅಕ್ರಮ ಕೋಳಿಯಂಕ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದ
ಕರ್ನಾಟಕದ ಕರಾವಳಿ ಮತ್ತು ಮಲೆನಾಡು, ತೆಂಕಣ ಒಳನಾಡಿನಲ್ಲಿ ಮಾರ್ಚ್ 21ರಿಂದ ಮೂರು ದಿನಗಳ ಕಾಲ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಕರಾವಳಿಯಲ್ಲಿ ಮೋಡ ಮುಚ್ಚಿದ ವಾತಾವರಣ ಮುಂದುವರಿಯಲಿದೆ. ಗಾಳಿ ಕೂಡ ಬಲವಾಗಿ ಬೀಸಲಿದೆ ಎನ್ನಲಾಗಿದೆ. ಕರ್ನಾಟಕದ ಬಡಗಣ ಭಾಗದಲ್ಲಿ ಒಣ ಹವೆ ಮುಂದುವರಿಯಲಿದೆ. ಕೊಪ್ಪಳದಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಅದು ಆ ಸುತ್ತ ಕೆಲ ದಿನಗಳ ಕಾಲ ಮುಂದುವರಿಯುತ್ತದೆ ಎಂದೂ ತಿಳಿಸಲಾಗಿದೆ.
ಬಜಪೆ : ನಂದಿನಿ ನದಿಯಲ್ಲಿ ತೆಂಗಿನಕಾಯಿ ಸಂಗ್ರಹಿಸಲು ಹೋಗಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನದಿಗೆ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಕಟೀಲು ಸಮೀಪದ ಕಲ್ಲಕುಮೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಸಜಿಪ ಮುನ್ನೂರು ಗ್ರಾಮದ ನಂದಾವರ ಕೊಪ್ಪಳ ನಿವಾಸಿ ಅಶೋಕ (54) ಎಂಬವರು ಕೆಲಸದ ನಿಮಿತ್ತ ಕಟೀಲು ಬಳಿಯ ಸಂಬಂಧಿಕರ ಮನೆಯಲ್ಲಿ ವಾಸವಿದ್ದವರು ಶುಕ್ರವಾರ ಸಂಜೆ ನಂದಿನಿ ನದಿಯಲ್ಲಿ ಬರುವ ತೆಂಗಿನಕಾಯಿಗಳನ್ನು ಸಂಗ್ರಹಿಸಲು ತೆರಳಿದ್ದ ವೇಳೆ ಆಯ ತಪ್ಪಿ
ಮೂಲ್ಕಿ ತಾಲ್ಲೂಕಿನ ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳುವೈಲು ಪ್ರದೇಶದಲ್ಲಿ ಮಧ್ಯಾಹ್ನ ಬೀಸಿದ ಭಾರೀ ಗಾಳಿಗೆ ರಸ್ತೆ ಪಕ್ಕದಲ್ಲಿದ್ದ ತೆಂಗಿನ ಮರಗಳ ಸಹಿತ, ವಿದ್ಯುತ್ ಕಂಬಗಳು ಧರೆಶಾಹಿಯಾದ ಘಟನೆ ನಡೆದಿದ್ದು ಯಾವುದೇ ರೀತಿಯಲ್ಲಿ ಪ್ರಾಣಹಾನಿ ಸಂಭವಿಸಿಲ್ಲ. ದಕ್ಷಿಣದಿಂದ ಬೀಸಿದ ಬಲವಾದ ಗಾಳಿಗೆ ಮಾರುತಿ ರೈಸ್ ಮಿಲ್ಲಿನ ರಸ್ತೆ ಬದಿಯ ಖಾಸಗಿ ತೋಟದಲ್ಲಿದ್ದ ತೆಂಗಿನ ಮರಗಳು ಏಕಾಏಕಿ ಪಕ್ಕದ ವಿದ್ಯುತ್ ತಂತಗಳ ಮೇಲೆ ಬಿದ್ದುದರಿಂದ ಸುಮಾರು ಐದು ವಿದ್ಯುತ್
ವಿದ್ಯಾರ್ಥಿಗಳು ಶಾಲೆಯ ಪ್ರಮುಖ ಆಸ್ತಿಯಾಗುತ್ತಾರೆ; ಅವರಿಲ್ಲದೆ, ಶಾಲೆಗಳು ಮತ್ತು ಶಿಕ್ಷಕರು ಏನೂ ಅಲ್ಲ. ಶಿಕ್ಷಕರ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಮಾಡುವಲ್ಲಿ ವಿದ್ಯಾರ್ಥಿಗಳು ದೊಡ್ಡ ಪಾತ್ರವನ್ನು ವಹಿಸುತ್ತಾರೆ. ವಿದ್ಯಾರ್ಥಿಯನ್ನು ಸರಿದಾರಿಗೆ ತರುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಆದಾಗ್ಯೂ, ಸರಿಯಾದ ದಾರಿಯಲ್ಲಿ ಇರಲು ತಮ್ಮ ಶಿಕ್ಷಕರ ಆದೇಶಗಳನ್ನು ಅನುಸರಿಸುವುದು ವಿದ್ಯಾರ್ಥಿಯ ಜವಾಬ್ದಾರಿಯಾಗಿದೆ. ಅವರು ಶಾಲೆಯಲ್ಲಿ ಪರಸ್ಪರ ಸಮಾನವಾಗಿ
ಶ್ರೀ ಕೊಡಮಣಿತ್ತಾಯ ಕ್ಷೇತ್ರ ಶಿಬರೂರು ದೇಲಂತಬೆಟ್ಟು ಇಲ್ಲಿ ಎಪ್ರಿಲ್ ತಿಂಗಳಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಪರಮಾನಂದ ಸಾಲ್ಯಾನ್ ರಚಿಸಿ ನಿರ್ದೇಶಿಸಿರುವ “ಬಾಲೆಗ್ ಒಲಿಯಿನ ಭ್ರಾಮರಿ” ತುಳು ಭಕ್ತಿಪ್ರಧಾನ ನಾಟಕದ ಮುಹೂರ್ತ ಸಮಾರಂಭವು ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತದಲ್ಲಿ ನಡೆಯಿತು.ಶುಭಮುಹೂರ್ತಕ್ಕೆ ಶಿಬರೂರು ಗುತ್ತು ಉಮೇಶ್ ಎನ್ ಶೆಟ್ಟಿ ಚಾಲನೆ ನೀಡಿದರು. ಬ್ರಹ್ಮಕಲಶೋತ್ಸವದ
ಸುರತ್ಕಲ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ ಭಾರತ ಸರ್ಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕರ್ನಾಟಕ ಸರ್ಕಾರ ಬಂಟರ ಸಂಘ (ರಿ) ಸುರತ್ಕಲ್ ಇದರ ಸಹಯೋಗದಲ್ಲಿ ಸಾರ್ವಜನಿಕರಿಗೆ ಅಯುಷ್ಮಾನ್ ಭಾರತ ಕಾರ್ಡ್ ಮತ್ತು ಇ ಶ್ರಮ ಕಾರ್ಡ್ ವಿತರಣಾ ಕಾರ್ಯ ಕ್ರಮ ಸಮಾರಂಭ ಫೆಬ್ರವರಿ 18 ರಂದು ಆದಿತ್ಯವಾರ ಬೆಳಿಗ್ಗೆ 9-30 ಕ್ಕೆ ಬಂಟರ ಭವನ ಸುರತ್ಕಲ್ ಇಲ್ಲಿ ಆಯೋಜಿಸಲಾಗಿದೆ.ಅಧ್ಯಕ್ಷತೆಯನ್ನು ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು
ಸುರತ್ಕಲ್: ಭಾರತವು ಕೃಷಿ ಪ್ರಧಾನವಾದ ದೇಶವಾಗಿದ್ದು ಇಂದಿನ ಯುವ ಜನತೆ ಕೃಷಿಯತ್ತ ಒಲವು ತೋರಿಸುವ ಅಗತ್ಯ ವಿದೆ ಎಂದು ನಿವೃತ್ತ ಸುರತ್ಕಲ್ ಕೃಷಿ ಅಧಿಕಾರಿ ಅಬ್ದುಲ್ ಬಸೀರ್ ನುಡಿದರು ಅವರು ಬಂಟರ ಸಂಘ ಸುರತ್ಕಲ್, ಲಯನ್ಸ್ ಕ್ಲಬ್ ಸುರತ್ಕಲ್ ಮತ್ತು ಜೆಸಿಐ ಸುರತ್ಕಲ್ ಸಹಯೋಗ ದಲ್ಲಿ ಬಂಟರ ಭವನ ಸುರತ್ಕಲ್ ನಲ್ಲಿ ನಡೆದ ಸಾವಯವ ಕೃಷಿಕರ ಮತ್ತು ಗ್ರಾಹಕರ ಮುಖಾಮುಖಿ ಕಾರ್ಯ ಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು ಇಂದಿನ ಕಾಲಘಟ್ಟದಲ್ಲಿ ನಮ್ಮ ಆರೋಗ್ಯ ದ
ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ,ಎಸ್.ಎಮ್. ಡಿ .ಸಿ.ಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನ ಜನತೆ ತಮ್ಮ




























