Home ಕರಾವಳಿ Archive by category ಸುಳ್ಯ

ಗೌರವ ಡಾಕ್ಟರೇಟ್ ಪುರಸ್ಕಾರಕ್ಕೆ ಭಾಜನರಾದ ಸ್ಪೀಕರ್ ಯು. ಟಿ. ಖಾದರ್ ರವರಿಗೆ ಸುಳ್ಯ ಸೂಡ ಅಧ್ಯಕ್ಷರಿಂದ ಅಭಿನಂದನೆ

ಸುಳ್ಯ. ಬೆಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪುರಸ್ಕಾರಕ್ಕೆ ಭಾಜಾನರಾದ ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಸನ್ಮಾನ್ಯ ಯು. ಟಿ ಖಾದರ್ ರವರು ಅಂತಾರಾಷ್ಟ್ರೀಯ ಸ್ಪೀಕರ್ ಸಮ್ಮೇಳನ ದಲ್ಲಿ ಭಾಗವಹಿಸಿ ಇಂದು ಬೆಂಗಳೂರಿಗೆ ಆಗಮಿಸಿದ್ದು, ಅವರನ್ನು ಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ ) ಅಧ್ಯಕ್ಷರಾದ ಕೆ. ಎಂ. ಮುಸ್ತಫ ಬೆಂಗಳೂರು ಸ್ಪೀಕರ್ ನಿವಾಸದಲ್ಲಿ

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ “ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ಗೆ ಗ್ರಾಹಕರ ಉತ್ತಮ ಸ್ಪಂದನೆ

ಸುಳ್ಯದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅ 15 ರಿಂದ ಅ.25 ರವರೆಗೆ ಪ್ರತೀ ಆಭರಣಗಳಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ನೀಡಲಾಗಿದ್ದು ಚಿನ್ನ ಖರೀದಿಯಲ್ಲಿ ಗ್ರಾಹಕರು ಉತ್ತಮ ಸ್ಪಂದನೆ ನೀಡಿದ್ದಾರೆ. ಸ್ವರ್ಣಂ ಜ್ಯುವೆಲ್ಸ್ ನ ಪ್ರತೀ ಆಯೋಜನೆಗೂ ಗ್ರಾಹಕರ ಉತ್ತಮ ಸ್ಪಂದನೆ ಲಭಿಸುತ್ತಿದ್ದು, ದೀಪಾವಳಿ ಹಬ್ಬದ ಪ್ರಯುಕ್ತ, ಪ್ರತೀ ಚಿನ್ನದ ಆಭರಣಗಳಿಗೆ ಒಂದು ಪವನ್ ಗೆ ರೂ 3000 ರಿಯಾಯಿತಿ

ವಾಲಿಬಾಲ್ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ಪಾಂಗ್ಲಾಯ್ ದರ್ಬೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ವಾಲಿಬಾಲ್ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ಪಾಂಗ್ಲಾಯ್ ದರ್ಬೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ. ಕರ್ನಾಟಕ ಸರ್ಕಾರ,ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಶಾಲಾ ಶಿಕ್ಷಣ ಇಲಾಖೆಚಿಕ್ಕಮಗಳೂರು ಜಿಲ್ಲೆ, ತಾಲ್ಲೂಕು ಆಡಳಿತ, ತಾಲ್ಲೂಕು ಚಂಪಾಯಿತಿ ತರೀಕೆರೆ-ಅಜ್ಜಂಪುರ, ಪುರಸಭೆ ತರೀಕೆರೆ, ಪಟ್ಟಣ ಪಂಚಾಯಿತಿ ಅಜ್ಜಂಪುರ, ಉಪನಿರ್ದೇಶಕರ ಕಛೇರಿ (ಆಡಳಿತ), (ಅಭಿವೃದ್ಧಿ), ಚಿಕ್ಕಮಗಳೂರು ಜಿಲ್ಲೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ

ಮಾರಿಷಸ್ ದೇಶದಲ್ಲಿ ಸುಳ್ಯದ ವಿದ್ಯಾರ್ಥಿ ಸಾವು

ಸುಳ್ಯ: ಮಾರಿಷಸ್ ದೇಶದಲ್ಲಿ ಶಿಕ್ಷಣ ಪಡೆಯುತ್ತಿರುವ ಸುಳ್ಯದ ಯುವಕನೋರ್ವ ಅಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.ಸುಬ್ರಹ್ಮಣ್ಯ ಸಮೀಪದ ನಡುಗಲ್ಲು ಕಲ್ಲಾಜೆಯ ಜಯಲಕ್ಷ್ಮಿ ಎಂಬವರ ಪುತ್ರ ನಂದನ ಎಸ್. ಭಟ್ (25) ಮೃತರು. ನಂದನ ಅವರು ಮಾರಿಷಸ್ ದೇಶದಲ್ಲಿ ವಿದ್ಯಾರ್ಥಿ ವೀಸಾದಲ್ಲಿದ್ದು ಅಲ್ಲಿ ಜಲಪಾತ ವೀಕ್ಷಣೆಗೆ ಹೋಗಿದ್ದ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಮೃತದೇಹವನ್ನು ಅಲ್ಲಿನ

ಕರ್ನಾಟಕ ಸರ್ಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ರವರಿಗೆ ಅಭಿನಂದನೆ

ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕರ್ನಾಟಕ ಸರ್ಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ರವರಿಗೆ ಅಭಿನಂದನಾ ಸಮಾರಂಭ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ.ನಡೆಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ವಹಿಸಿದ್ದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಎಸ್ ಕೆ ಹನೀಫ್ ಸಂಪಾಜೆ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಜಿ ಕೆ ಹಮೀದ್ ಗೂನಡ್ಕ, ಜಗದೀಶ್

ಎನ್ನೆಂಸಿ; ರಕ್ಷಕ ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ನೆಹರೂ ಮೆಮೋರಿಯಲ್ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ವಾರ್ಷಿಕ ಮಹಾ ಸಭೆ ಅ.10ನೇ ಶುಕ್ರವಾರದಂದು ನಡೆಯಿತು. ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಮಾತನಾಡಿ ಕಾಲೇಜಿನ ಸಮಗ್ರ ಅಭಿವೃದ್ಧಿಯನ್ನು ಬೆಳೆಸುವಲ್ಲಿ ರಕ್ಷಕ ಶಿಕ್ಷಕ ಸಂಘ ಬಹಳ ಮುಖ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ ಎಂ ಪೋಷಕರ ಜವಾಬ್ದಾರಿಗಳ ಕುರಿತು ಮಾತನಾಡಿ ಮಾರ್ಗದರ್ಶನ

ಪ್ರಭಾಕರ ಕಿಲಂಗೋಡಿ ಅವರ ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಕ್ಯಾoಪ್ಕೋ ಸಹಾಯಧನ

ಕ್ಯಾoಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಬೆಳ್ಳಾರೆ ಶಾಖೆಯ ಸಕ್ರೀಯ ಸದಸ್ಯರಾದ  ಶ್ರೀ ಪ್ರಭಾಕರ ಕಿಲಂಗೋಡಿ ಅವರ ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಕ್ಯಾoಪ್ಕೋ ಸಹಾಯಧನದ ಮೊತ್ತ ರೂ.2,00,000/- (ರೂಪಾಯಿ ಎರಡು ಲಕ್ಷ)ವನ್ನು ಸಂಸ್ಥೆಯ ಗೌರವಾನ್ವಿತ ನಿರ್ದೇಶಕರಾದ ಶ್ರೀ ಕೃಷ್ಣಪ್ರಸಾದ ಮಡ್ತಿಲ ಇವರು ದಿನಾಂಕ: 07-10-2025 ರಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪುತ್ತೂರು ಪ್ರಾದೇಶಿಕ ವ್ಯವಸ್ಥಾಪಕರಾದ ಶ್ರೀ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ಮಾದಕ ವಸ್ತು ಹಾಗೂ ಸೈಬರ್ ಕ್ರೈಂ ಜಾಗೃತಿ ಕುರಿತು ಮಾಹಿತಿ ಕಾರ್ಯಾಗಾರ

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಅ. 03 ರಂದು ಸುಳ್ಯ ಪೊಲೀಸ್ ಠಾಣೆಯ ಸಹಯೋಗದೊಂದಿಗೆ ಮಾದಕ ವಸ್ತು ಜಾಗೃತಿ ಹಾಗೂ ಸೈಬರ್ ಕ್ರೈಂ ಕುರಿತು ಮಾಹಿತಿ ಕಾರ್ಯಾಗಾರವು ಕಾಲೇಜಿನ ಧನ್ವಂತರಿ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಾಗಾರದಲ್ಲಿ ಸುಳ್ಯ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಶ್ರೀಯುತ ಸಂತೋಷ್ ಬಿ ಪಿ ರವರು ಮಾಹಿತಿಯನ್ನು ನೀಡುತ್ತಾ ಮಾದಕ ವ್ಯಸನ ಹಾಗೂ ಸೈಬರ್ ಕ್ರೈಂನಿಂದ ಉಂಟಾಗುವ ತೊಂದರೆ ಹಾಗೂ ಇದನ್ನು ತಡೆಯುವ ಕುರಿತು

ಸುಳ್ಯ ತಾಲೂಕು ಮಹಿಳಾ ಮಂಡಲದ ಒಕ್ಕೂಟದ ವತಿಯಿಂದ ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಸುಳ್ಯ:ಸುಳ್ಯ ತಾಲೂಕು ಮಹಿಳಾ ಮಂಡಲದ ಒಕ್ಕೂಟದ ವತಿಯಿಂದ ಗಾಂಧಿ ಜಯಂತಿಯ ಪ್ರಯುಕ್ತ ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಒಕ್ಕೂಟದ ಅಧ್ಯಕ್ಷೆ ಪುಷ್ಪಾ ಡಿ ಪ್ರಸಾದ್ ಕಾನತ್ತೂರು ನೇತೃತ್ವದಲ್ಲಿ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಒಕ್ಕೂಟದ ಉಪಾಧ್ಯಕ್ಷೆ ಪುಷ್ಪಾ ರಾಧಾಕೃಷ್ಣ ಮಾಣಿಬೆಟ್ಟುಕಾರ್ಯದರ್ಶಿ ಹೇಮ ವೇಣುಗೋಪಾಲ್, ಕೋಶಾಧಿಕಾರಿ ಚಂದ್ರಾಕ್ಷಿ ಜೆ.ರೈ, ನಿರ್ದೇಶಕರಾದ ಜಲಜಾಕ್ಷಿ

ಕುಂಬ್ರ ದಯಾಕರ ಆಳ್ವರಿಗೆ ಮಾತೃವಿಯೋಗ

ಪುತ್ತೂರು : ದಿ. ಬೋಳೋಡಿ ಸೀತಾರಾಮ ಆಳ್ವರವರ ಪತ್ನಿ ಕುಂಬ್ರ ಲಲಿತಾ ಎಸ್ ಆಳ್ವ( 93 ವ) ರವರು ಅ. 3 ರಂದು ಬೆಳಿಗ್ಗೆ ತಮ್ಮ ಸೃಗೃಹ ಪೆರುವಾಜೆ ಆಳ್ವಾ ಫಾರ್ಮ್ ನಲ್ಲಿ ನಿಧನರಾದರು. ಮೃತರು ಪುತ್ರರಾದ ಮಂಗಳೂರು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಒಪರೇಟಿವ್ ‌ಸೊಸೈಟಿ ನಿರ್ದೇಶಕ ಕುಂಬ್ರ ದಯಾಕರ ಆಳ್ವ, ಉದ್ಯಮಿ ಕುಂಬ್ರ ದಿವಾಕರ್ ಆಳ್ವ, ಪುತ್ರಿ ಚಿತ್ರಾಲೇಖಾ ಅಡಪ, ಅಳಿಯ, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರ‌ ಅಂತ್ಯ ಸಂಸ್ಕಾರ ಅ. 3 ರಂದು […]