ಸುಳ್ಯ:ಸುಳ್ಳು ಮಾಹಿತಿಗಳು, ವೈಭವೀಕರಿಸಿದ ಸುದ್ದಿಗಳ ಅತಿಪ್ರಸರಣದಿಂದ ಗೊಂದಲ, ಆತಂಕ ಸೃಷ್ಠಿಯಾಗುತ್ತಿರುವ ಇಂದಿನ ದಿನಗಳಲ್ಲಿ ಸುದ್ದಿಗಳನ್ನು ಸತ್ಯ ಮತ್ತು ನಿಸ್ಪಕ್ಷಪಾತವಾಗಿ ಬಿತ್ತರಿಸುವ ಮೂಲಕ ಮಾಧ್ಯಮಗಳು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು. ಸತ್ಯವನ್ನೇ ತಿಳಿಸುವ ಮೂಲಕ ಜನರನ್ನು ಸುಶಿಕ್ಷಿತರನ್ನಾಗಿಸಬೇಕು ಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ
ಮೇ.1 ರಂದು ಕಾರ್ಮಿಕ ದಿನಾಚರಣೆಯ ಸಂದರ್ಭ ನಡೆಯುವ ರಾಜ್ಯ ಮಟ್ಟದ ಸಮಾರಂಭದಲ್ಲಿ ರವಿ ಕಕ್ಕೆಪದವು ಅವರು ಕಾಯಕಯೋಗಿ ಪ್ರಶಸ್ತಿ ಪಡೆಯಲಿದ್ದಾರೆ.ಸಮಾಜಸೇವಕರ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಲ್ಲಿ ಈ ಪ್ರಶಸ್ತಿಗೆ ಇವರೊಬ್ಬರೇ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಬಾಗಲಕೋಟೆಯಲ್ಲಿ ಆಯೋಜಿಸುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರಧಾನ ವಾಗಲಿದೆ .
ಕಳೆದ ಐದು ವರ್ಷಗಳ ಅವಧಿಯಲ್ಲಿ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ 2025ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET ಮತ್ತು K SET) ಪೂರ್ವ ತಯಾರಿ ತರಬೇತಿ ಆರಂಭಗೊಳ್ಳಲಿದೆ. ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನು ಸರಕಾರವು 2025ರ ಜೂನ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿರುತ್ತದೆ. ಕಳೆದ
ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಎಪ್ರಿಲ್ 30 ರಂದು ವಯೋ ನಿವೃತ್ತಿ ಹೊಂದಿದ ಇಲೆಕ್ಟ್ರಾನಿಕ್ಸ್ ವಿಭಾಗದ ಸಹಾಯಕ ಮನೋಹರ ಇವರ ಬೀಳ್ಕೊಡುಗೆ ಸಮಾರಂಭವು ಪ್ರಾಂಶುಪಾಲರ ಕಛೇರಿಯಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ ಸಭೆಯ ಅಧ್ಯಕ್ಷತೆ ವಹಿಸಿ ನಿವ್ರತ್ತರನ್ನು ಸನ್ಮಾನಿಸಿದರು. ಅಧೀಕ್ಷಕ ಧನಂಜಯ ಕಲ್ಲುಗದ್ದೆ ಹಾಗೂ ಇಲೆಕ್ಟ್ರಾನಿಕ್ಸ್ ವಿಭಾಗದ ಮುಖ್ಯಸ್ಥೆ ರಮಾದೇವಿ ಅಭಿನಂದನಾ ಭಾಷಣ ಮಾಡಿದರು. ಸಮಾರಂಭದಲ್ಲಿ
ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಇವರು ಮಾರ್ಚ್ -2025 ರಲ್ಲಿ ನಡೆಸಿದ ಅಂತಿಮ ವರ್ಷದ ಎಂ.ಡಿ/ಎಂ.ಎಸ್ ಆಯುರ್ವೇದ ಪರೀಕ್ಷೆಯಲ್ಲಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಅಂತಿಮ ಸ್ನಾತಕೋತರ ವಿಭಾಗದ ಮೂರು ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ರಾಂಕ್ ಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಗದ ತಂತ್ರ ವಿಭಾಗ ಮುಖ್ಯಸ್ಥರಾದ ಡಾ. ಅವಿನಾಶ್ ಕೆ ವಿ ಅವರ ಮಾರ್ಗದರ್ಶನದಲ್ಲಿ ಡಾ. ಧನ್ಯಶ್ರೀ ಯು
ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಜೀವ ವಿಜ್ಞಾನ ಪದವಿ ವಿಭಾಗದ ವಿದ್ಯಾರ್ಥಿಗಳು ಏಪ್ರಿಲ್ 28 ಸೋಮವಾರದಂದು ಮಂಗಳೂರು ವಿಶ್ವವಿದ್ಯಾನಿಲಯದ ಜೀವ ವಿಜ್ಞಾನ ಸ್ನಾತಕೋತ್ತರ ವಿಭಾಗಗಳು ಆಯೋಜಿಸಿದ “ಬಯೋಸಿನರ್ಜಿ 2025” ವಿ.ವಿ.ಮಟ್ಟದ ಅಂತರ ಕಾಲೇಜು ವಿಜ್ಞಾನ ಉತ್ಸವದಲ್ಲಿ ಭಾಗವಹಿಸಿ ಹಲವು ಪ್ರಶಸ್ತಿಯನ್ನು ಪಡೆದುಕೊಂಡರು. ಕಾಲೇಜಿನ ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ ಮತ್ತು ರಸಾಯನ ಶಾಸ್ತ್ರ ವಿಭಾಗಗಳನ್ನು ಒಳಗೊಂಡ 16 ವಿದ್ಯಾರ್ಥಿಗಳ ತಂಡ
ವಿ4 ನ್ಯೂಸ್ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಎಂ.ಬಿ. ಫೌಂಡೇಶನ್ನ ಎಂ.ಬಿ. ಸದಾಶಿವ ಅವರ ಸಾರಥ್ಯದಲ್ಲಿ ಅರೆಭಾಷೆ ಕಾಮಿಡಿ ರಿಯಾಲಿಟಿ ಶೋದ ಎರಡನೇ ಸುತ್ತಿನ ಆಡಿಷನ್ ಏಪ್ರಿಲ್ 27ರಂದು ನಡೆಯಲಿದೆ. ಈಗಾಗಲೇ ಮೊದಲ ಸುತ್ತಿನ ಆಡಿಷನ್ ಸುಳ್ಯದ ಲಯನ್ಸ್ ಕ್ಲಬ್ನಲ್ಲಿ ಯಶಸ್ವಿಯಾಗಿ ನೆರವೇರಿದ್ದು, 10ಕ್ಕೂ ಅಧಿಕ ತಂಡಗಳು ಸ್ಪರ್ಧಿಸಿದ್ದವು. ಇದೀಗ ಎರಡನೇ ಸುತ್ತಿನ ಆಡಿಷನ್ ಏಪ್ರಿಲ್ 27ರ ಭಾನುವಾರದಂದು ಸುಳ್ಯದ ಗೌಡ ಸಮುದಾಯ
ವಿದ್ಯೆ ಎಂಬುದು ಶಾಶ್ವತ, ಪುಸ್ತಕವೇ ನಮ್ಮ ಆಸ್ತಿ. ಕ್ರಮಬದ್ಧ ಕಲಿಕೆಯಿಂದ ವಿದ್ಯಾರ್ಥಿಗಳು ಹೆಚ್ಚಿನ ಯಶಸ್ಸು ಗಳಿಸಬಹುದು. ಹಾಗೆ ವಿದ್ಯಾರ್ಥಿಗಳು ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತಿ ಮುಖ್ಯ. ಇಲ್ಲಿನ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರತಿಭಾಶಾಲಿಗಳಾಗಿದ್ದು ಜೊತೆಗೆ ಇತರ ಚಟುವಟಿಕೆಗಳಾದ ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ಅಗ್ರಗಣ್ಯ ಸಾಧನೆ ಮಾಡಿರುವುದು ಶ್ಲಾಘನೀಯ ಎಂದು ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲ ಸಚಿವರಾಗಿರುವ
ಕಡಬ,ಸುಬ್ರಹ್ಮಣ್ಯ: ರಾಜ್ಯದ ಶ್ರೀಮಂತ ದೇವಸ್ಥಾನ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ 2024-25ನೇ ಸಾಲಿನ ವಾರ್ಷಿಕ ಆದಾಯ ರೂ.155,95,19,567.08ಗೆ ಏರಿಕೆಯಾಗಿದ್ದು, ಕಳೆದ ವರ್ಷ ಕ್ಷೇತ್ರದ ಆದಾಯ ರೂ.146.01 ಕೋಟಿ ಆಗಿತ್ತು. ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂಧರ್ಮದಾಯ ದತ್ತಿ ಇಲಾಖೆಯಡಿಯಲ್ಲಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ನಾಗರಾಧನೆಯ ಪ್ರಮುಖ ಕ್ಷೇತ್ರವಾಗಿದ್ದು, ಕ್ಷೇತ್ರಕ್ಕೆ ರಾಜ್ಯ,
ಸುಳ್ಯ ಮಾಜಿ ಸಚಿವ ಎಸ್.ಅಂಗಾರ ಅವರ ನೇತೃತ್ವದಲ್ಲಿ ಕಾರ್ಯಾಚರಿಸುವ ದೀನದಯಾಳ್ ಸಹಕಾರ ಸಂಘದ ಪಾಲು ಬಂಡವಾಳ ಪ್ರಮಾಣಪತ್ರ ವಿತರಣೆ, ಸಹಕಾರ ಸಂಘದ ಅಡಿಯಲ್ಲಿ ಕೇಂದ್ರ ಸರಕಾರದ ಭಾರತ್ ವನ್ ಜನಸಂಪರ್ಕ ಕೇಂದ್ರದ ಉದ್ಘಾಟನೆ ಹಾಗೂ ಸ್ವಸಹಾಯ ಸಂಘಗಳ ಉದ್ಘಾಟನೆ ಸುಳ್ಯ ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ ಎ.16ರಂದು ನಡೆಯಿತು. ಸ್ವಸಹಾಯ ಸಂಘಗಳನ್ನು ನ.ಪಂ.ಅಧ್ಯಕ್ಷೆ ಶಶಿಕಲಾ ಎ. ನೀರಬಿದಿರೆ ಉದ್ಘಾಟಿಸಿದರು. ಭಾರತ್ ವನ್ ಜನಸಂಪರ್ಕ ಕೇಂದ್ರವನ್ನು ತಹಶೀಲ್ದಾರ್ ಎಂ.ಮಂಜುಳ



























