ಸುಬ್ರಹ್ಮಣ್ಯ: ಚುನಾವಣೆಗೆ ಸಂಬಂಧಿಸಿದಂತೆ ದಿನಾಂಕ ನಿಗಧಿಯಾಗಿದೆ. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ಈಗಾಗಲೇ ಕೆಲಸ ಕಾರ್ಯಗಳನ್ನು ಆರಂಭಿಸಲಾಗಿದೆ. ಅಭ್ಯರ್ಥಿ ಆಯ್ಕೆ ಮಾಡಿ ಇನ್ನು ನಿರ್ಧಾರ ಹೈಕಮಾಂಡ್ ಗೆ ಕಳುಹಿಸಬೇಕಿದೆ. ಆದರೆ ಅಭ್ಯರ್ಥಿ ಆಯ್ಕೆಯಲ್ಲಿ ಇಡೀ ರಾಜ್ಯದಲ್ಲಿ ಯಾವುದೇ ಗೊಂದಲಗಳು ಇಲ್ಲ ಎಂದು ಮೀನುಗಾರಿಕೆ, ಬಂದರು ಮತ್ತು
ಕಡಬ: ಗಾಳಿ ಇರುವ ದಿಕ್ಕಿನಲ್ಲಿಯೇ ಹೊಗೆ ಸಾಗುವುದು ಸಾಮಾನ್ಯ. ಆದರೆ, ಇಲ್ಲೊಂದು ದೇವಸ್ಥಾನದಲ್ಲಿ ದೇವರಿಗೆ ಪೂಜೆ ಸಲ್ಲಿಸಿದ್ದ ಗಂಧದ ಕಡ್ಡಿಯ ಹೊಗೆಯು ಗಾಳಿಯ ವಿರುದ್ಧ ದಿಕ್ಕಿನಲ್ಲಿ ಸಾಗಿದೆ. ಈ ಮೂಲಕ ನೆರೆದಿದ್ದ ಭಕ್ತರಲ್ಲಿ ಅಚ್ಚರಿ ಮೂಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಈ ಘಟನೆ ನಡೆಸಿದೆ. ವಿಶೇಷ ಪೂಜೆಯ ಸಂದರ್ಭದಲ್ಲಿ ದೇವರಿಗಾಗಿ ಹಚ್ಚಿದ ಗಂಧದ ಕಡ್ಡಿಯಿಂದ ಹೊರಹೊಮ್ಮಿದ
ಸತತ ಆರು ಬಾರಿ ಸುಳ್ಯ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿರುವ ನಿಷ್ಕಳಂಕ ರಾಜಕಾರಣಿ ಮಾದರಿ ವ್ಯಕ್ತಿತ್ವ ಹೊಂದಿರುವ ಸುಳ್ಯ ಶಾಸಕ ಎಸ್.ಅಂಗಾರ ಅವರಿಗೆ ಮತ್ತೊಮ್ಮೆ ಸ್ಪರ್ಧೆಗೆ ಅವಕಾಶ ನೀಡಬೇಕು ಎಂದು ಸುಳ್ಯ ಮಂಡಲ ಬಿಜೆಪಿ ಸಮಿತಿಯ ಸದಸ್ಯ ನೆಲ್ಯಾಡಿಯ ಮಹಾಬಲ ಪಡುಬೆಟ್ಟು ಪಕ್ಷದ ಹಾಗೂ ಬಿಜೆಪಿ ಮುಖಂಡರಿಗೆ ಮನವಿ ಮಾಡಿದ್ದಾರೆ. ಅವರು ಕಡಬದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನಾವು ಮಾಡುವ ಮನವಿ ತಪ್ಪ
ಸುಳ್ಯ ತಾಲೂಕು ಗುತ್ತಿಗಾರು ಗ್ರಾಮದ ಮೊಗ್ರ ಏರಣ ಗುಡ್ಡೆ ಎಂಬಲ್ಲಿ ಮಂಗಳವಾರ ತಡ ರಾತ್ರಿ ಕೋಳಿ ಪದಾರ್ಥಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಮೊಗ್ರ ಏರಣಗುಡ್ಡೆಯ ಮಾತೃ ಮಜಲು ನಿವಾಸಿ ಶೀನ ಎಂಬವರಿಗೂ ಅವರ ಮಗ ಶಿವರಾಮ ಎಂಬವರಿಗೂ ಮಂಗಳವಾರ ತಡರಾತ್ರಿ ಕೋಳಿ ಪದಾರ್ಥದ ವಿಚಾರವಾಗಿ ಜಗಳ ಆರಂಭವಾಯಿತು. ಶಿವರಾಮ ರಾತ್ರಿ ಮನೆಗೆ ಬರುವಾಗ ಕೋಳಿ ಪದಾರ್ಥ ಖಾಲಿ ಆಗಿತ್ತೆನ್ನಲಾಗಿದೆ. ಇದನ್ನು ಆಕ್ಷೇಪಿಸಿ ಆತ ಮಾತನಾಡತೊಡಗಿದಾಗ ತಂದೆ ಶೀನರಿಗೂ ಆತನಿಗೂ ಜಗಳ
ಸುಳ್ಯ: ಪಶ್ಚಿಮ ವಲಯ ಪೆÇಲೀಸ್ ಮಹಾ ನಿರೀಕ್ಷಕ ಚಂದ್ರಗುಪ್ತ ಅವರು ಬೆಳ್ಳಾರೆ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಚುನಾವಣೆ ಹಿನ್ನಲೆಯಲ್ಲಿ ವಿಟ್ಲ, ಪುತ್ತೂರು ಪೊಲೀಸ್ ಠಾಣೆಗೆ ಭೇಟಿ ನೀಡಿದ ಚಂದ್ರಗುಪ್ತ ಅವರು ಬಳಿಕ ಬೆಳ್ಳಾರೆ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಈ ವೇಳೆ ಪೊಲೀಸರಿಂದ ಗೌರವ ವಂದನೆ ಸಲ್ಲಿಸಲಾಯಿತು. ಬಳಿಕ ಠಾಣೆಯಲ್ಲಿ ಸಾರ್ವಜನಿಕ ಸಭೆ ನಡೆಸಿದ ಅವರು ಚುನಾವಣೆ ಬಗ್ಗೆ ಮಾಹಿತಿ ಪಡೆದರು. ಸಾರ್ವಜನಿಕ ಅಹವಾಲು ಸ್ವೀಕರಿಸಿದರು. ದಕ್ಷಿಣ ಕನ್ನಡ ಜಿಲ್ಲಾ
ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರು ಕ್ಷೇತ್ರದಾದ್ಯಂತ ಮಿಂಚಿನ ಸಂಚಲನ ಮೂಡಿಸಿದ್ದಾರೆ.ಕೃಷ್ಣಪ್ಪ ಅವರು ಸುಳ್ಯದ ವಿವಿಧ ಬೂತ್ , ಬ್ಲಾಕ್ ಗಳ ಹಿರಿಯ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಿದರು.ಕುಟ್ರಾಪ್ಪಾಡಿಯಲ್ಲಿ ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡ ಸುಬ್ರಾಯ ಹೆಬ್ಬಾರ್ ಅವರನ್ನು ಭೇಟಿ ಮಾಡಿದರು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಆನಂದ ಪೂಜಾರಿ
ಗುಂಡ್ಯ: ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಮಂಗಳೂರು ಮಧ್ಯೆ ಗುಂಡ್ಯ ಎಂಬಲ್ಲಿ ಎ.2ರ ಬೆಳಗ್ಗೆ ರಸ್ತೆಯ ಬದಿಯಲ್ಲಿ ಮಲಗಿದ ವ್ಯಕ್ತಿಯ ಮೇಲೆ ಲಾರಿಯೊಂದು ಚಲಾಯಿಸಿ ಸಾರಿ ಸಮೇತ ಚಾಲಕ ಪರಾರಿಯಾದ ಕೆಲವೇ ಕ್ಷಣದಲ್ಲಿ ಚಾಲಕ ಹಾಗೂ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.ಘಟನೆಯಲ್ಲಿ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಕೇರಳದ ಪೊನ್ನಪ್ಪನ್(ವ.50) ಎಂದು ಗುರುತಿಸಲಾಗಿದೆ.ಮೃತ ವ್ಯಕ್ತಿಯು ಮೂಲತಃ ಕೇರಳದವನಾಗಿದ್ದು, ಕಳೆದ 15 ವರ್ಷದಿಂದ
ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೇಬಲ್ ಪರಮೇಶ್ವರ ಗೌಡ ಅವರು 2022ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದಾರೆ. ವಾರಂಟ್ ಕರ್ತವ್ಯ ನಿರ್ವಹಿಸುತ್ತಿರುವ ಪರಮೇಶ್ ಅವರು ಕಳೆದ ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿ ವಿಚಾರಣೆಗೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಮಾಡಿದ ಸಾಧನೆ ಮತ್ತು ಕರ್ತವ್ಯ ನಿಷ್ಠೆಗೆ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ
ಕಡಬ: ಹೃದಯಾಘಾತದಿಂದ ಕೊಯಂಬತ್ತೂರಿನಲ್ಲಿ ನಿಧನರಾದ ಕಡಬ ತಾಲೂಕಿನ ರೆಂಜಿಲಾಡಿಯ ಯೋಧನಿಗೆ ಸಕಲ ಸರಕಾರಿ ಗೌರವಗಳೊಂದಿಗೆ ಮಂಗಳವಾರ ಅಂತಿಮ ಗೌರವ ಸಲ್ಲಿಸಿ ಅಂತಿಮ ಕಾರ್ಯ ನೆರವೇರಿಸಲಾಯಿತು. ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ತರಪ್ಪೇಳ್ ನಿವಾಸಿ ಮಾಜಿ ಯೋಧ ಜೋನಿ ಟಿ.ಕೆ. ಅವರ ಪುತ್ರ ಚೆನೈ ರಿಜಿಮೆಂಮಟ್ನ ಕೊಲ್ಕತ್ತಾ ಘಟಕದಲ್ಲಿ ಯೋಧರಾಗಿದ್ದ ಲಿಜೇಶ್ ಕುರಿಯನ್ (30) ಮಾ.26 ರಂದು ಚೆನೈನ ಕೊಯಂಬತ್ತೂರುನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ತಂದೆ, ತಾಯಿ,
ಸುಳ್ಯ: ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟ ಘಟನೆ ಸುಳ್ಯದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಸುಳ್ಯದ ಪೇಟೆ ಸಮೀಪದ ಆಲೆಟ್ಟಿ ರಸ್ತೆಯ ಗುರುಂಪು ಎಂಬಲ್ಲಿ ಘಟನೆ ನಡೆದಿದೆ. ಖಾಸಗಿ ವ್ಯಕ್ತಿಯೋರ್ವರು ತಮ್ಮ ಮನೆ ಹಿಂಭಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಪಿಲ್ಲರ್ ಕಾಮಗಾರಿ ನಡೆಸುವ ನಿರ್ಮಾಣ ಕಾಮಗಾರಿ ನಡೆಸುತ್ತಿದ್ದರು. ಕಾರ್ಮಿಕರು ಇಂದು ಕೆಲ ನಿರ್ವಹಿಸುವ ವೇಳೆ ಒಮ್ಮೆಲೇ



























