ಸುಳ್ಯ ::ಸುಳ್ಯ ಮಡಿಕೇರಿ ರಾಜ್ಯ ಹೆದ್ದಾರಿಯ ಪಾಲಡ್ಕ ಎಂಬಲ್ಲಿ ಲಾರಿ, ಕಾರು , ಬೈಕ್ ನಡುವೆ ಸರಣಿ ಅಪಘಾತವಾಗಿ ಬೈಕ್ ಸವಾರರಿಬ್ಬರು, ಹಾಗೂ ಕಾರು ಚಾಲಕ ಗಾಯಗೊಂಡು ಆಸ್ಪತ್ರೆ ಸೇರಿರುವ ಗುರುವಾರ ವರದಿಯಾಗಿದ. , ಈ ಸಂದರ್ಭದಲ್ಲಿ ಕಾರಿನ ಹಿಂದಿನಂದ ಬರುತ್ತಿದ್ದ ಬೈಕ್ ಕಾರಿಗೆ ಡಿಕ್ಕಿಯಾಗಿದೆ, ಘಟನೆಯಲ್ಲಿ ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟು, ಪೆರಾಜೆ ಗ್ರಾಮದ
ಸುಳ್ಯ: ಮಕ್ಕಳಿಗೆ ಸಾಹಿತ್ಯದ ಅಭಿರುಚಿ ಮೂಡಿಸುವ ಅವಶ್ಯಕತೆ ಇದೆ.ಮಕ್ಕಳಿಗೆ ನಾವು ಸಾಹಿತ್ಯವನ್ನು ಓದುವ ಮೂಲಕ ಸಾಹಿತ್ಯವನ್ನು ಸಾಹಿತ್ಯದ ವಿಚಾರವನ್ನು ಅವರಿಗೆ ಹೇಳಬೇಕೆಂದು ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಕೆ.ಆರ್ ಗಂಗಾಧರ ಹೇಳಿದರು. ಅವರು ಗೂನಡ್ಕ ಸಜ್ಜನ ಸಭಾಭವನದಲ್ಲಿ ನಡೆದ ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿರಿಯ ವಿಮರ್ಶಕ ವಿಜಯಶಂಕರ ಸಮ್ಮೇಳನವನ್ನು ಉದ್ಘಾಟಿಸಿದರು.
ಜಾಲ್ಸೂರು ಕಾಸರಗೋಡು ರಸ್ತೆಯ ಪರಪ್ಪೆ ಬಳಿ ಮದುವೆಗೆ ಹೋಗುತ್ತಿದ್ದ ಕಾರೊಂದು ಪಲ್ಟಿಯಾಗಿ ತಾಯಿ ಮತ್ತು ಮಗು ಮೃತಪಟ್ಟ ಘಟನೆ ನಡೆದಿದೆ.ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರ ಪುತ್ರಿ, ಶಾನ್ ಎಂಬವರ ಪತ್ನಿ ಶಾಹಿನಾ (28) ಹಾಗೂ ಶಝಾ (3) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟ ತಾಯಿ ಮತ್ತು ಮಗುವಿನ ಮೃತದೇಹಗಳನ್ನು ಸುಳ್ಯದ
ಸುಳ್ಯ: ತೋಟಗಾರಿಕೆ, ಯೋಜನೆ ಮತ್ತು ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಮುನಿರತ್ನ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿಗೆ ಭೇಟಿ ನೀಡಿ, ಎಲೆ ಚುಕ್ಕಿ, ಅಡಿಕೆ ಎಲೆ ರೋಗ ಬಾಧಿಕ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುಳ್ಯ ತಾಲೂಕಿನ ಮರ್ಕಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ರೋಗ ಬಾಧಿಕ ನಾಲ್ಕು ಕೃಷಿಕರ ತೋಟಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡು, ರೈತರ ಅಹವಾಲು ಆಲಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ
ಅತಿಥಿ ಗೃಹ ಉದ್ಘಾಟಿಸಿದ ವಿಧಾನ ಸಭೆ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಮಾತನಾಡಿ, ಪತ್ರಕರ್ತರು ಏನು ಬರೆಯಬೇಕು ಎಂದು ಆಲೋಚಿಸದಂತೆ ಏನು ಬರೆಯಬಾರದು ಎಂಬುದನ್ನು ತಿಳಿದಿರಬೇಕು. ಹಿರಿಯ ಪತ್ರಕರ್ತರು ಯುವ ಪತ್ರಕರ್ತರಿಗೆ ಮಾರ್ಗದರ್ಶನ ನೀಡುವ ಕೆಲಸವಾಗಬೇಕಿದೆ ಎಂದರು. ಜಿಲ್ಲಾ ಕೇಂದ್ರದ ವ್ಯವಸ್ಥೆ: ಸುಳ್ಯ ಕ್ಷೇತ್ರ ಈಗಾಗಲೇ ಹಲವಾರು ರೀತಿಯಲ್ಲಿ ಅಭಿವೃದ್ಧಿ ಹೊಂದಿದೆ. ಮುಂದಕ್ಕೆ ಸುಳ್ಯಕ್ಕೆ ಜಿಲ್ಲಾ ಕೇಂದ್ರದ ಅವಶ್ಯಕತೆಯನ್ನು ನಾವು ಮಾಡಿಯೇ ಮಾಡುತ್ತೇವೆ. ನನ್ನದು
ಸುಬ್ರಮಣ್ಯ: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಮೂಲತಃ ಮಂಗಳೂರಿನ ಕ್ರಿಕೆಟಿಗ ಕೆ.ಎಲ್.ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ದೇವರ ದರ್ಶನ ಪಡೆದರು.ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದ ಕೆ.ಎಲ್.ರಾಹುಲ್, ಮಹಾಪೂಜೆಯಲ್ಲಿ ಭಾಗಿಯಾಗಲಿದ್ದಾರೆ.
ಸುಳ್ಯ.ಗೋಣಿ ಚೀಲದಲ್ಲಿ ಯುವತಿಯ ಮೃತ ದೇಹ – ಪತಿ ಇಮ್ರಾನ್ ಪರಾರಿ. ಯುವತಿಯ ಮೃತದೇಹವನ್ನು ಕತ್ತರಿಸಿ ಪ್ರಿಡ್ಜ್ ನಲ್ಲಿಟ್ಟ ಹೇಯ ಕೃತ್ಯ ಇತ್ತೀಚೆಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಂಡು ಬಂದಿತ್ತು. ಆ ಘಟನೆಯ ನೆನಪು ಮಾಸುವ ಮೊದಲೇ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಅದೇ ಮಾದರಿಯ ಘಟನೆಯೊಂದು ಬೆಳಕಿಗೆ ಬಂದಿದೆ.ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ಪರಾರಿಯಾದತ. ಈತ ಮೃತ ಮಹಿಳೆಯ ಪತಿ. ಇಮ್ರಾನ್ ಕಳೆದ ಆರು ತಿಂಗಳಿನಿಂದ
ಸುಳ್ಯ ತಾಲೂಕು ಆಡಳಿತ ವತಿಯಿಂದ ಮತ್ತು ಸುಳ್ಯ ತಾಲೂಕು ವಿವಿಧ ಇಲಾಖಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಪೆರುವಾಜೆಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗ್ರಾಮ ವಾಸ್ತವ್ಯದ ಅಧ್ಯಕ್ಷತೆಯನ್ನು ಜಗನಾಥ ಪೂಜಾರಿ ವಹಿಸಿದ್ದರು. ತಹಸೀಲ್ದಾರ್ ರಾದ ಶ್ರೀ. ಅನಿತಲಕ್ಷ್ಮಿ ದೀಪಬೆಳಗಿಸುವ ಮೂಲಕ ಗ್ರಾಮ ಸಭೆಗೆ ಚಾಲನೆ ನೀಡಿದ್ದರು . ಈ ಸಂಧರ್ಭದಲ್ಲಿ ತಾಲೂಕು ಪಂಚಾಯತ್ ಇಒ ಭಾವನಿಶಂಕರ್ ಕೇತ್ರ ಶಿಕ್ಷಣಧಿಕಾರಿ ಮಹದೇವ್ ತಾಲೂಕು ಹೆಲ್ತ್ ಆಫೀಸರ್ ನಂದಕುಮಾರ್,
ಸುಳ್ಯ: ಆಟೋ ಚಾಲಕರೊಬ್ಬರು ಇದ್ದಕಿದ್ದಂತೆ ಪಾಶ್ರ್ವವಾಯುಗೆ ತುತ್ತಾಗಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸುಳ್ಯ ನಗರದಲ್ಲಿ ನಡೆದಿದೆ. ಸದ್ಯ ಗಂಭೀರ ಸ್ಥಿತಿಯಲ್ಲಿ ಹೇಮನಾಥ್ ಆರ್.ಬಿ.(32) ಎಂಬವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾದ ಚಾಲಕ. ಇವರು ಸುಳ್ಯ ತಾಲೂಕಿನ ದೊಡ್ಡಡ್ಕದ ರಾಜರಾಂಪುರದ ನಿವಾಸಿಯಾಗಿದ್ದಾರೆ. ಅನಾರೋಗ್ಯ ಪೀಡಿತ ವ್ಯಕ್ತಿಯೊಬ್ಬರನ್ನು ಸಂಪಾಜೆಯಿಂದ ಸುಳ್ಯದ ಕೆವಿಜಿ ಆಸ್ಪತ್ರೆಗೆ ತಮ್ಮ ಆಟೋದಲ್ಲಿ ಕರೆದುಕೊಂಡು
ಮದ್ಯ ಮುಕ್ತ ಗ್ರಾಮ ಹೋರಾಟ ಸಮಿತಿ ಕೊಲ್ಲಮೊಗ್ರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಮಿತಿ, ಅಖಿಲಾ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಸುಳ್ಯ ತಾಲೂಕು, ಶೌರ್ಯಶ್ರೀ ವಿಪತ್ತು ನಿರ್ವಹಣಾ ಘಟಕ ಸುಬ್ರಹ್ಮಣ್ಯ ವಲಯ ಇವುಗಳ ಜಂಟಿ ಆಶ್ರಯದಲ್ಲಿ ಅಕ್ರಮ ಮದ್ಯದಂಗಡಿ ತೆರೆದಿರುವ ಬಗ್ಗೆ ಪ್ರತಿಭಟನಾ ಸಭೆಯು ಕೊಲ್ಲಮೊಗ್ರದ ಮಯೂರ ಕಲಾ ಮಂದಿರದಲ್ಲಿ ನಡೆಯಿತು. ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಎನ್.ಎ. ರಾಮಚಂದ್ರ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ



























