Home ಕರಾವಳಿ Archive by category ಸುಳ್ಯ (Page 42)

ಕೋಮು ಸೌಹಾರ್ದತೆಯನ್ನು ಮೆರೆದ ಸೋಮಶೇಖರ್

ಭಾರೀ ಮಳೆಯಿಂದ ಹರಿಹರ ಪಲ್ಲತ್ತಡ್ಕದಲ್ಲಿ ರಾಶಿ ಬಿದ್ದ ಮರದ ದಿಮ್ಮಿಗಳನ್ನು ತೆರವು ಮಾಡುತ್ತಿದ್ದ ಕ್ರೇನ್ ಆಪರೇಟರ್ ಓರ್ವರು ಹೊಳೆಯ ಪಕ್ಕದಲ್ಲಿ ನಿಂತಿದ್ದ ವೇಳೆ ನೀರಿಗೆ ಬಿದ್ದಿದ್ದು, ಈ ವೇಳೆ ಯುವಕನೋರ್ವ ನದಿಗೆ ಹಾರಿ ಅವರನ್ನು ರಕ್ಷಿಸಿದ ಘಟನೆ ನಡೆದಿದೆ. ಪಂಜ ಸಮೀಪದ ಪಡ್ಪಿನಂಗಡಿ ನಿವಾಸಿ ಶರೀಫ್ ಎಂಬವರ ಕ್ರೇನ್ ಹಾಗೂ ಸ್ಥಳೀಯ ನಿವಾಸಿಯೋರ್ವರ ಜೆಸಿಬಿ

ಸುಳ್ಯ ಮತ್ತು ಕಡಬ ತಾಲೂಕು ಭಾರೀ ಮಳೆ : ಜಿಲ್ಲಾಧಿಕಾರಿ ಭೇಟಿ

ನಿನ್ನೆ ಸುರಿದ ಮಳೆಯಿಂದಾಗಿ ಹಾನಿಗೊಳಗಾದ ಸುಳ್ಯ ಹಾಗೂ ಕಡಬ ತಾಲೂಕುಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾತ್ರಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಮೃತಪಟ್ಟ ಸುಬ್ರಹ್ಮಣ್ಯ ಸಮೀಪದ ಪರ್ವತಮಿಖಿ ಘಟನಾ ಸ್ಥಳಕ್ಕೂ ಜಿಲ್ಲಾಧಿಕಾರಿ ಭೇಟಿ ನೀಡಿದರು. ಅಧಿಕಾರಿಗಳು, ಸ್ಥಳೀಯಾಡಳಿತ ಅಧಿಕಾರಿಗಕಳಿಂದ ಮಾಹಿತಿ ಪಡೆದರು. ಪುತ್ತೂರು ಎಸಿ ಗಿರೀಶ್ ನಂದನ್, ತಹಶೀಲ್ದಾರ್ ಅನಂತಶಂಕರ, ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ,

ದ.ಕ ಜಿಲ್ಲೆಯ ಅಹಿತಕರ ಘಟನೆ ಕಪ್ಪು ಚುಕ್ಕೆಯಾಗಿದೆ, ಮಂಜುಳಾ ವೈ ನಾಯಕ್

ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆಯಲ್ಲಿ ಮಸೂದ್ ಎಂಬ ಯುವಕನ ಕೊಲೆ ನಡೆಯಿತು. ಈ ಕೊಲೆಯ ಹಿನ್ನೆಲೆಯು ಅಥವಾ ಪ್ರತೀಕಾರ ಎಂಬಂತೆ ಪ್ರವೀಣ್ ಎಂಬ ಯುವಕನ ಕೊಲೆ ನಡೆದಿದ್ದು,ಹೀಗಾಗಿ ಒಂದೇ ಒಂದು ದಿವಸ ಅಂತರದಲ್ಲಿ ಸುರತ್ಕಲ್ ಪೇಟೆಯ ಮದ್ಯ ಪಾಜಿಲ್ ಎಂಬ ಯುವಕನ ಕೊಲೆ ನಡೆದಿದ್ದು, ಈ ಎಲ್ಲಾ ವಿಚಾರವನ್ನು ಗಮನಿಸುವಾಗ ಬುದ್ಧಿವಂತ ಜಿಲ್ಲೆಯ ಸುಶಿಕ್ಷಿತರು ಎಂಬ ಹಿರಿಮೆಯನ್ನು ಹೊಂದಿದಂತಹ ಜಿಲ್ಲೆ ನಮ್ಮ ದಕ್ಷಿಣ ಕನ್ನಡ ಜಿಲ್ಲೆ ಇವತ್ತು ಪಾತಕಿಗಳ

ಪ್ರವೀಣ್ ನೆಟ್ಟಾರು ಅವರ ಹತ್ಯೆ : ಉದ್ವಗ್ನಿ ಸ್ಥಿತಿಯತ್ತ ತಿರುಗಿದ್ದ ಬೆಳ್ಳಾರೆ ಪೇಟೆ ಇಂದು ಸಹಜ ಸ್ಥಿತಿಯತ್ತ

ಸುಳ್ಯ:ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಬಳಿಕ ನಿನ್ನೆ ಬಂದ್, ಪ್ರತಿಭಟನೆ, ಲಾಠಿ ಚಾರ್ಜ್ ನಡೆದು ಉದ್ವಗ್ನಿ ಸ್ಥಿತಿಯತ್ತ ತಿರುಗಿದ್ದ ಬೆಳ್ಳಾರೆ ಪೇಟೆ ಇಂದು ಸಹಜ ಸ್ಥಿತಿಯತ್ತ ಮರಳಿದೆ. ಇಂದು ಬೆಳಿಗ್ಗಿನಿಂದ ಪೇಟೆಯು ಸಹಜ ಸ್ಥಿತಿಗೆ ಮರಳಿದ್ದು ಅಂಗಡಿ ಮುಂಗಡಿಗಳು ತೆರೆದು ಕೊಂಡಿದೆ, ವಾಹನ ಸಂಚಾರ, ಜನ ಸಂದಣಿ ಮಾಮೂಲಿಯಂತೆ ಇದೆ. ಶಾಲಾ ಕಾಲೇಜುಗಳು ತೆರೆದು ಕೊಂಡಿದೆ. ಬೆಳ್ಳಾರೆ ಪೇಟೆ ಮತ್ತು ಪರಿಸರದಲ್ಲಿ ಬಿಗು ಪೆÇಲೀಸ್ ಬಂದೋಬಸ್ತ್

ಸುಳ್ಯ : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಆಟಿ ಆಚರಣೆ

ಸುಳ್ಯ : ಮಂಗಳೂರು ಸಮಾಚಾರ ಪತ್ರಿಕೆಯ ಪ್ರಾರಂಭವೇ ಪತ್ರಿಕಾ ದಿನಾಚರಣೆಗೆ ನಾಂದಿಯಾಗಿದೆ. ಅದೊಂದು ಪೂರ್ಣ ಪ್ರಮಾಣದ ಪತ್ರಿಕೆಯಾಗಿ ಬೆಳೆದಿತ್ತು. ಆದರೆ ಇಂದಿನ ಕಾಲಘಟ್ಟದಲ್ಲಿ ಮುದ್ರಣ ಮಾಧ್ಯಮ ಕಳೆಗುಂದುತ್ತಿದೆ. ಆದರೂ ತಾಲೂಕು ಮಟ್ಟದ ಪತ್ರಿಕೆಗಳಿಗೆ ಇಂದಿನ ಕಾಲದಲ್ಲಿ ಓದುಗರಿದ್ದಾರೆ. ಜನರ ವಿಶ್ವಾಸದಿಂದಾಗಿ ಪತ್ರಿಕೋದ್ಯಮವು ಇಂದು ಉದ್ಯಮವಾಗಿ ಬೆಳೆದಿದೆ ಎಂದು ಕೇಂದ್ರ ಸಂವಹನ ಶಾಖೆ, ಸಮಾಚಾರ ಮತ್ತು ಪ್ರಸಾರ ಸಚಿವಾಲಯದ ಕ್ಷೇತ್ರ ಪ್ರಚಾರಾಧಿಕಾರಿ ಜೀತು

ಮಸೂದ್ ಹತ್ಯೆ,ಕುಟುಂಬಸ್ಥರ ಜೊತೆ ನಿಂತ ವಿಪಕ್ಷ ಉಪ ನಾಯಕ ಶಾಸಕ ಯು.ಟಿ.ಖಾದರ್

ಸುಳ್ಯ ತಾಲೂಕಿನ ಕಳಂಜದಲ್ಲಿ ಮೊನ್ನೆ ರಾತ್ರಿ ದುಷ್ಕರ್ಮಿಗಳಿಂದ ತೀವ್ರ ಹಲ್ಲೆಗೊಳಗಾದ ಮಸೂದ್ ಎಂಬ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದು ಯು.ಟಿ.ಖಾದರ್ ತೀವ್ರ ಖಂಡನೆ ಹಾಗೂ ಸಂತಾಪ ವ್ಯಕ್ತಪಡಿಸಿದ್ದಾರೆ. ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತರ ಕುಟುಂಬಸ್ಥರು ಹಾಗೂ ಸ್ಥಳೀಯ ಮುಖಂಡರು ಜಿಲ್ಲಾಡಳಿತ ಪರಿಹಾರ ಘೋಷಿಸುವ ವರೆಗೂ ಮಯ್ಯತ್ (ಮೃತ ಶರೀರ) ನ್ನು ಪಡೆಯುವುದಿಲ್ಲ ಎಂಬುದಾಗಿ ಧರಣಿ ನಿರತರಾಗಿದ್ದು ಸ್ಥಳಕ್ಕೆ ಮಾಜಿ ಸಚಿವ ಶಾಸಕ

ಮೃತ್ಯುಕೂಪದಂತಿರುವ ರಾಷ್ಟ್ರೀಯ ಹೆದ್ದಾರಿ, ಪ್ರತಿನಿತ್ಯ ಹೆದ್ದಾರಿಗಳಲ್ಲಿ ಅಪಘಾತಗಳ ಸರಮಾಲೆ

ಜಿಲ್ಲೆಯ ಸಾವಿರಾರು ಪ್ರಯಾಣಿಕ ವಾಹನಗಳಿಗೆ ನಿತ್ಯ ಆಸರೆಯಾಗುವ ಹೆದ್ದಾರಿಯು ಮರಣ ಗುಂಡಿಗಳಾಗಿ ಬದಲಾಗುತ್ತಿದೆ. ಹೆದ್ದಾರಿಯ ಬಹುತೇಕ ಭಾಗಗಳಲ್ಲಿ ಹೊಂಡಗಳೇ ತುಂಬಿಕೊಂಡಿದ್ದು, ಸಂಚಾರ ಕಷ್ಟಕರವಾಗಿದೆ.ಇಲ್ಲಿರುವ ಗುಂಡಿಗಳು ಸವಾರರ ಮತ್ತು ಪ್ರಯಾಣಿಕರ ಹೃದಯಬಡಿತ ಹೆಚ್ಚಿಸುವಂತಿದೆ.ಸ್ವಲ್ಪ ಎಚ್ಚರ ತಪ್ಪಿದ್ರೆ ಸಾಕು ವಾಹನ ಹೊಂಡಕ್ಕೆ ಬೀಳುವುದು ಖಚಿತ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೃಹತ್ತಾಕಾರದ ಹೊಂಡಗುಂಡಿಗಳಿಂದ ವಾಹನ ಸವಾರ ನರಕಯಾತನೆ ಅನುಭವಿಸುವಂತಾಗಿದೆ.

ಜೇಸಿಐ ಪಂಜ ಪಂಚಶ್ರೀ ವತಿಯಿಂದ ಪ್ರೋಟೀನ್ ಪೌಡರ್ ವಿತರಣೆ

ಜೇಸಿಐ ಪಂಜ ಪಂಚಶ್ರೀ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಅಂಗನವಾಡಿ ಕೇಂದ್ರ ಪಂಜ ಇದರ ಆಶ್ರಯದಲ್ಲಿ ಕಡಿಮೆ ತೂಕದ ಪಂಜ ಅಂಗನವಾಡಿ ಮಕ್ಕಳಿಗೆ ಪ್ರೋಟೀನ್ ಪೌಡರ್ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಜೆಸಿಐ ಪಂಜ ಪಂಚಶ್ರೀಯ ಘಟಕ ಅಧ್ಯಕ್ಷರಾದ ಜೆಫ್ ಮ್. ಶಿವಪ್ರಸಾದ್ ಹಾಲೆಮಜಲು ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಸುಳ್ಯ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ರಶ್ಮಿ

ಯುವಕರ ಮಧ್ಯೆ ಹೊಡೆದಾಟ ಸುಳ್ಯ ತಾಲೂಕಿನ ಕಳೆಂಜ ಎಂಬಲ್ಲಿ ಘಟನೆ

ಸುಳ್ಯ: ಮಂಗಳವಾರ ತಡ ರಾತ್ರಿ ತಂಡವೊಂದು ಯುವಕನ ಮೇಲೆ ಸೋಡಾ ಬಾಟಲಿಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳ್ಳಾರೆಯ ಕಳಂಜ ಎಂಬಲ್ಲಿ ಕಳೆದ ರಾತ್ರಿ ಈ ಹಲ್ಲೆ ನಡೆದಿದ್ದು ಮಸೂದ್ (19) ಎಂಬವರು ಗಂಭೀರವಾಗಿ ಗಾಯಗೊಂಡವರು . ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ ಮಸೂದ್ ಮೂಲತ: ಕಳಂಜದ ನಿವಾಸಿ ಅಲ್ಲ ಎನ್ನುವ

ಆ.13ರಂದು ಮಂಗಳೂರಿನ ಬಾವುಟಗುಡ್ಡೆಯಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಪುತ್ಥಳಿ ಅನಾವರಣ

1837 ರ ಅಮರ ಸುಳ್ಯದ ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿ ನಾಯಕ ಕೆದಂಬಾಡಿ ರಾಮಯ್ಯ ಗೌಡರ ಪುತ್ಥಳಿ ಆ.13 ರಂದು ಮಂಗಳೂರಿನ ಬಾವುಟಗುಡ್ಡೆಯಲ್ಲಿ ಅನಾವರಣಗೊಳ್ಳಲಿದ್ದು ಆ ಕಾರ್ಯಕ್ರಮಕ್ಕೆ ಸುಳ್ಯದಿಂದ 5 ಸಾವಿರ ಮಂದಿ ಭಾಗವಹಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಕಾರ್ಯಕ್ರಮದ ಯಶಸ್ಸಿಗೆ ಸಮಿತಿಯನ್ನು ರಚಿಸಿಕೊಂಡು, ನೆನಪಿನಲ್ಲಿಟ್ಟುಕೊಳ್ಳುವ ರೀತಿಯ ಯೋಜನೆ ರೂಪಿಸಲು ಕೂಡಾ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ