ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆ ಇದಾಗಿದ್ದು ಸತತ ಹತ್ತು ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದೆ. ಸಂಪೂರ್ಣ ಕೆಸರು ಮಯವಾಗಿರುವ ಈ ರಸ್ತೆ ಶೇಣಿಯಿಂದ ಹೊಸಮಜಲು ಎಂಬಲ್ಲಿಗೆ ಸಂಪರ್ಕ ಕಲ್ಪಿಸುತ್ತದೆ. ಅಮರ ಪಡ್ನೂರು ಗ್ರಾಮದ ಅತೀ ಪುರಾತನ ರಸ್ತೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಲ್ಲದೆ 25 ಕ್ಕಿಂತ ಹೆಚ್ಚು ಮನೆಯವರು ಈ ರಸ್ತೆಯನ್ನೆ
ಮುತ್ತೂಟ್ ಮಿನಿ ಫೈನಾನ್ಸಿಯರ್ಸ್ ಲಿಮಿಟೆಡ್ : ಶಾಲಾ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ ಸುಳ್ಯ ತಾಲೂಕು ಬೆಳ್ಳಾರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದರ್ಖಾಸ್ತು ಇಲ್ಲಿ ಮುತ್ತೂಟ್ ಮಿನಿ ಫೈನಾನ್ಸಿಯರ್ಸ್ ಲಿಮಿಟೆಡ್ಇದರ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಿಸುವ ಕಾರ್ಯಕ್ರಮ "ಬ್ಯಾಗ್ ಆಫ್ ಜಾಯ್" ಜರಗಿತು. ಸುಮಾರು 100 ವರ್ಷಗಳ ಅನುಭವ ಹೊಂದಿರುವ ಭಾರತದ ಕೆಲವೇ ಕೆಲವು ಕಂಪನಿಗಳಲ್ಲಿ ಮುತ್ತೂಟ್ ಮಿನಿ ಕೂಡ ಒಂದು.
ಸುಳ್ಯದ ಅರಂಬೂರು ಬಳಿಯ ಪಾಲಡ್ಕ ಎಂಬಲ್ಲಿ ಮದ್ರಸದಿಂದ ಮನೆಗೆ ಹಿಂತಿರುಗುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿಯಾಗಿ ಬಾಲಕಿ ಮೃತಪಟ್ಟ ಘಟನೆ ವರದಿಯಾಗಿದೆ. ಪಾಲಡ್ಕದ ರಶೀದ್ ಎಂಬವರ ಪುತ್ರಿ ರಿಫಾ (7 ವರ್ಷ) ಇಂದು ಬೆಳಿಗ್ಗೆ 8.45ರ ಸುಮಾರಿಗೆ ಅರಂಬೂರು ಮದ್ರಸಾದಿಂದ ಹಿಂತಿರುಗಿ ಪಾಲಡ್ಕದಲ್ಲಿ ಮನೆ ಕಡೆಗೆ ಹೋಗಲು ರಸ್ತೆ ದಾಟುತ್ತಿದ್ದಾಗ ಅರಂತೋಡು ಕಡೆಯಿಂದ ಸುಳ್ಯ ಕಡೆಗೆ ಬರುತ್ತದ್ದ ಬೈಕ್ ಡಿಕ್ಕಿ ಹೊಡೆಯಿತು. ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ
ಜುಲೈ 26ರಂದು ರಾತ್ರಿ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಂದಾಳು ಪ್ರವೀಣ್ ನೆಟ್ಟಾರು(34ವ)ರವರ ಹತ್ಯೆ ಪ್ರಕರಣದ ತನಿಖೆಗೆ ಇಳಿದಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಸೆ.6ರಂದು ಬೆಳ್ಳಂಬೆಳಗ್ಗೆ ಪುತ್ತೂರು ಮತ್ತು ಸುಳ್ಯದಲ್ಲಿ 32 ಕಡೆ ಮನೆ, ಕಟ್ಟಡಗಳಿಗೆ ದಾಳಿ ನಡೆಸಿ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಸಿರುವುದಾಗಿ ತಿಳಿದು ಬಂದಿದೆ. ಎನ್.ಐ.ಎ.ಅಧಿಕಾರಿಗಳಿಗೆ ಕರ್ನಾಟಕ ಪೊಲೀಸರು ಸಹಕಾರ ನೀಡಿದ್ದಾರೆ.
ಸಂಪಾಜೆ, ಕಲ್ಲುಗುಂಡಿ ಮತ್ತು ಕೊಯನಾಡು ಭಾಗದಲ್ಲಿ ನಿರಂತರ ಎರಡನೇ ದಿನವೂ ರಾತ್ರಿ ವೇಳೆ ಮಹಾಮಳೆ ಮುಂದುವರಿದಿತ್ತು. ರಾತ್ರಿ ಸುರಿದ ಧಾರಾಕಾರ ಮಳೆಗೆ ಪಯಸ್ವಿನಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹದಿಂದಾಗಿ ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡು ವಾಹನಗಳ ಸಂಚಾರದಲ್ಲಿ ಅಡಚಣೆ ಉಂಟಾಗಿತ್ತು. ನದಿಪಾತ್ರದ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ನಿವಾಸಿಗಳು ರಾತ್ರೋರಾತ್ರಿ ಸುರಕ್ಷಿತ ಸ್ಥಳಗಳಿಗೆ ತೆರಳಿದ್ದಾರೆ. ಕೊಯನಾಡಿನಲ್ಲಿ ಕೂಡ ನಿರಂತರ ಮಳೆಯಿಂದ
ಭಾರೀ ಮಳೆಯಿಂದ ಹರಿಹರ ಪಲ್ಲತ್ತಡ್ಕದಲ್ಲಿ ರಾಶಿ ಬಿದ್ದ ಮರದ ದಿಮ್ಮಿಗಳನ್ನು ತೆರವು ಮಾಡುತ್ತಿದ್ದ ಕ್ರೇನ್ ಆಪರೇಟರ್ ಓರ್ವರು ಹೊಳೆಯ ಪಕ್ಕದಲ್ಲಿ ನಿಂತಿದ್ದ ವೇಳೆ ನೀರಿಗೆ ಬಿದ್ದಿದ್ದು, ಈ ವೇಳೆ ಯುವಕನೋರ್ವ ನದಿಗೆ ಹಾರಿ ಅವರನ್ನು ರಕ್ಷಿಸಿದ ಘಟನೆ ನಡೆದಿದೆ. ಪಂಜ ಸಮೀಪದ ಪಡ್ಪಿನಂಗಡಿ ನಿವಾಸಿ ಶರೀಫ್ ಎಂಬವರ ಕ್ರೇನ್ ಹಾಗೂ ಸ್ಥಳೀಯ ನಿವಾಸಿಯೋರ್ವರ ಜೆಸಿಬಿ ವಾಹನಗಳನ್ನು ತರಿಸಲಾಗಿತ್ತು. ಕಾರ್ಯಾಚರಣೆಯ ವೇಳೆ ಆಪರೇಟರ್ ಶರೀಫ್ ಕ್ರೇನ್ ನಿಂದ ಇಳಿದು ಹೊಳೆ
ನಿನ್ನೆ ಸುರಿದ ಮಳೆಯಿಂದಾಗಿ ಹಾನಿಗೊಳಗಾದ ಸುಳ್ಯ ಹಾಗೂ ಕಡಬ ತಾಲೂಕುಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾತ್ರಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಮೃತಪಟ್ಟ ಸುಬ್ರಹ್ಮಣ್ಯ ಸಮೀಪದ ಪರ್ವತಮಿಖಿ ಘಟನಾ ಸ್ಥಳಕ್ಕೂ ಜಿಲ್ಲಾಧಿಕಾರಿ ಭೇಟಿ ನೀಡಿದರು. ಅಧಿಕಾರಿಗಳು, ಸ್ಥಳೀಯಾಡಳಿತ ಅಧಿಕಾರಿಗಕಳಿಂದ ಮಾಹಿತಿ ಪಡೆದರು. ಪುತ್ತೂರು ಎಸಿ ಗಿರೀಶ್ ನಂದನ್, ತಹಶೀಲ್ದಾರ್ ಅನಂತಶಂಕರ, ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ,
ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆಯಲ್ಲಿ ಮಸೂದ್ ಎಂಬ ಯುವಕನ ಕೊಲೆ ನಡೆಯಿತು. ಈ ಕೊಲೆಯ ಹಿನ್ನೆಲೆಯು ಅಥವಾ ಪ್ರತೀಕಾರ ಎಂಬಂತೆ ಪ್ರವೀಣ್ ಎಂಬ ಯುವಕನ ಕೊಲೆ ನಡೆದಿದ್ದು,ಹೀಗಾಗಿ ಒಂದೇ ಒಂದು ದಿವಸ ಅಂತರದಲ್ಲಿ ಸುರತ್ಕಲ್ ಪೇಟೆಯ ಮದ್ಯ ಪಾಜಿಲ್ ಎಂಬ ಯುವಕನ ಕೊಲೆ ನಡೆದಿದ್ದು, ಈ ಎಲ್ಲಾ ವಿಚಾರವನ್ನು ಗಮನಿಸುವಾಗ ಬುದ್ಧಿವಂತ ಜಿಲ್ಲೆಯ ಸುಶಿಕ್ಷಿತರು ಎಂಬ ಹಿರಿಮೆಯನ್ನು ಹೊಂದಿದಂತಹ ಜಿಲ್ಲೆ ನಮ್ಮ ದಕ್ಷಿಣ ಕನ್ನಡ ಜಿಲ್ಲೆ ಇವತ್ತು ಪಾತಕಿಗಳ
ಸುಳ್ಯ:ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಬಳಿಕ ನಿನ್ನೆ ಬಂದ್, ಪ್ರತಿಭಟನೆ, ಲಾಠಿ ಚಾರ್ಜ್ ನಡೆದು ಉದ್ವಗ್ನಿ ಸ್ಥಿತಿಯತ್ತ ತಿರುಗಿದ್ದ ಬೆಳ್ಳಾರೆ ಪೇಟೆ ಇಂದು ಸಹಜ ಸ್ಥಿತಿಯತ್ತ ಮರಳಿದೆ. ಇಂದು ಬೆಳಿಗ್ಗಿನಿಂದ ಪೇಟೆಯು ಸಹಜ ಸ್ಥಿತಿಗೆ ಮರಳಿದ್ದು ಅಂಗಡಿ ಮುಂಗಡಿಗಳು ತೆರೆದು ಕೊಂಡಿದೆ, ವಾಹನ ಸಂಚಾರ, ಜನ ಸಂದಣಿ ಮಾಮೂಲಿಯಂತೆ ಇದೆ. ಶಾಲಾ ಕಾಲೇಜುಗಳು ತೆರೆದು ಕೊಂಡಿದೆ. ಬೆಳ್ಳಾರೆ ಪೇಟೆ ಮತ್ತು ಪರಿಸರದಲ್ಲಿ ಬಿಗು ಪೆÇಲೀಸ್ ಬಂದೋಬಸ್ತ್
ಸುಳ್ಯ : ಮಂಗಳೂರು ಸಮಾಚಾರ ಪತ್ರಿಕೆಯ ಪ್ರಾರಂಭವೇ ಪತ್ರಿಕಾ ದಿನಾಚರಣೆಗೆ ನಾಂದಿಯಾಗಿದೆ. ಅದೊಂದು ಪೂರ್ಣ ಪ್ರಮಾಣದ ಪತ್ರಿಕೆಯಾಗಿ ಬೆಳೆದಿತ್ತು. ಆದರೆ ಇಂದಿನ ಕಾಲಘಟ್ಟದಲ್ಲಿ ಮುದ್ರಣ ಮಾಧ್ಯಮ ಕಳೆಗುಂದುತ್ತಿದೆ. ಆದರೂ ತಾಲೂಕು ಮಟ್ಟದ ಪತ್ರಿಕೆಗಳಿಗೆ ಇಂದಿನ ಕಾಲದಲ್ಲಿ ಓದುಗರಿದ್ದಾರೆ. ಜನರ ವಿಶ್ವಾಸದಿಂದಾಗಿ ಪತ್ರಿಕೋದ್ಯಮವು ಇಂದು ಉದ್ಯಮವಾಗಿ ಬೆಳೆದಿದೆ ಎಂದು ಕೇಂದ್ರ ಸಂವಹನ ಶಾಖೆ, ಸಮಾಚಾರ ಮತ್ತು ಪ್ರಸಾರ ಸಚಿವಾಲಯದ ಕ್ಷೇತ್ರ ಪ್ರಚಾರಾಧಿಕಾರಿ ಜೀತು

























