Home ಕರಾವಳಿ Archive by category ಸುಳ್ಯ (Page 43)

ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಸಚಿವ ಅಂಗಾರ ಭೇಟಿ : ಉಪ್ಪುಕಳ ಗ್ರಾಮಕ್ಕೆ ಶೀಘ್ರದಲ್ಲೇ ಸೇತುವೆ ನಿರ್ಮಾಣದ ಭರವಸೆ

ಮಳೆಯಿಂದ ಹಾನಿಗೊಳಗಾಗಿದ್ದ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಉಪ್ಪುಕಳ ಗ್ರಾಮಕ್ಕೆ ಬಂದರು ಹಾಗೂ ಮೀನುಗಾರಿಕೆ ಸಚಿವ ಅಂಗಾರ ಭೇಟಿ ನೀಡಿದ್ದು, ಶೀಘ್ರದಲ್ಲೇ ಸೇತುವೆ ನಿರ್ಮಾಣದ ಭರವಸೆ ನೀಡಿದರು. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 124 ಸೇತುವೆಗಳು ನಿರ್ಮಾಣವಾಗಿವೆ. ವಿಶೇಷ ಪ್ರಾಶಸ್ತ್ಯ ನೀಡಿ ಗ್ರಾಮಗಳನ್ನು ಬೆಸೆಯುವ ಸಂಪರ್ಕ ಸೇತುವೆ ನಿರ್ಮಿಸಲಾಗುತ್ತದೆ.

ಮಳೆಯಿಂದಾಗಿ ಪೆರುವಾಜೆಯ ನಾಗನಮಜಲಿನಲ್ಲಿ ರಸ್ತೆಯಲ್ಲಿ ಬಿರುಕು : ಪೆರುವಾಜೆ ಗ್ರಾಮದ ನೋಡೆಲ್ ಅಫೀಸರ್‍ಗಳು ಭೇಟಿ, ಪರಿಶೀಲನೆ

ಸುಳ್ಯ ತಾಲೂಕು ಪೆರುವಾಜೆ ಗ್ರಾಮದ ಮೂರನೆಯ ವಾರ್ಡಿನ ನಾಗನ ಮಜಲು ಎಂಬಲ್ಲಿ ರಸ್ತೆ ಬಿರುಕು ಬಿಟ್ಟ ವರದಿಗೆ ಸ್ಪಂದಿಸಿದ ತಾಲೂಕು ತಹಶೀಲ್ದಾರ್ ಶ್ರೀಮತಿ ಅನಿತಾ ಲಕ್ಷ್ಮಿ ಆದೇಶದ ಮೇರೆಗೆ ಪೆರುವಾಜೆ ಗ್ರಾಮದ ನೋಡಲ್ ಆಫೀಸರ್ ಗಳಾದ ಪೆರುವಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ ಮತ್ತು ಗ್ರಾಮ ಲೆಕ್ಕಾಧಿಕಾರಿ ಶಿವರಾಜ್ ಹಾಗೂ ಮೆಸ್ಕಾಂ ಅಧಿಕಾರಿ ಪ್ರಸಾದ್ ಕೆ.ವಿ. ಅವರು ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ

ಭೂಕಂಪನದಿಂದ ಹಾನಿಗೀಡಾದ ಮನೆಗೆ ಸಚಿವರ ಭೇಟಿ

ಕೆಲದಿನಗಳ ಹಿಂದೆ ಭೂಕಂಪನದಿಂದ ಹಾನಿಗೊಳಪಟ್ಟ ಸುಳ್ಯ ತಾಲೂಕಿನ ವಸಂತ ಭಟ್ ಅವರ ಮನೆಗೆ ಕಂದಾಯ ಸಚಿವರಾದ ಆರ್. ಅಶೋಕ್, ಇಂಧನ,ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್, ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಸುಳ್ಯ ತಾಲೂಕು ತಹಶೀಲ್ದಾರ್ ಅನಿತಾ ಲಕ್ಷ್ಮೀ ಅವರು ಜು.7ರ ಗುರುವಾರ ಭೇಟಿ

ಸುಳ್ಯ ತಾಲೂಕಿನ ನಾಗೇಶ್ ಬೆಳ್ಳಾರೆ ಇವರಿಗೆ ಯುವ ರತ್ನ ಅಪ್ಪು ಪ್ರಶಸ್ತಿ

ದಿನಾಂಕ 25.6.2022. ಎ. ವಿ ವರದಚಾರ್ ಮೆಮೋರಿಯಲ್ ಹಾಲ್ ಮಲ್ಲೇಶ್ವರಂ ಬೆಂಗಳೂರು. ಕಲಾ ಸಂಗಮ ಬೆಂಗಳೂರು ಇವರು ಹಮ್ಮಿಕೊಂಡ ಕನ್ನಡ ರಾಜ ರತ್ನ ಸವಿ ನೆನಪಿಗಾಗಿ ಯುವ ರತ್ನ ಅಪ್ಪು ಗೀತಾ ಗಾಯನ, ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯ ವ್ಯಕ್ತಿಗಳು. ಡಾ. ಆಂಜನಪ್ಪ MBBS_MS, General surgery gastroenterologist, ಶಶಿಧರ್ ಕೋಟೆ ಚಲನಚಿತ್ರ ನಟರು ಮತ್ತು

ಕರಾವಳಿಯಲ್ಲಿ ಮತ್ತೆ ವರುಣನ ಆರ್ಭಟ : ತಾತ್ಕಲಿಕ ನೆರೆಯಿಂದ ಜನರ ಪರದಾಟ

ಕರಾವಳಿಯಲ್ಲಿ ರಾತ್ರಿಯಿಡೀ ಭಾರೀ ಮಳೆಯಾಗಿದ್ದು ನದಿ, ತೊರೆಗಳು ತುಂಬಿ ಹರಿಯತೊಡಗಿದೆ. ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಪ್ರವಾಹ‌ ಸ್ಥಿತಿ ಎದುರಾಗಿದೆ. ಮುಂಜಾಗ್ರತೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲೆ, ಕಾಲೇಜಿಗೆ ರಜೆ ಸಾರಲಾಗಿದೆ. ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ಎರಡು ದಿನಗಳಿಂದ ನಿರಂತರ ಮಳೆಯಾಗಿದೆ. ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗಿದ್ದರಿಂದ ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಪ್ರವಾಹ ಸ್ಥಿತಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಗಮನ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಭೇಟಿ ನೀಡಿದರು.ಅವರಿಗೆ ಆಶ್ಲೇಷ ವಸತಿ ಗೃಹದ ಎದರು ಭಾಗದಲ್ಲಿ ಗೌರವವಂದನೆ ಸಲ್ಲಿಸಲಾಯಿತು. ಸಚಿವ ಎಸ್. ಅಂಗಾರ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಪೆÇಲೀಸ್ ಆಯುಕ್ತ ಹೃಷಿಕೇಶ್ ಸೋನಾವಾಣೆ, ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ದ.ಕ ಜಿಲ್ಲಾ ಕಾರ್ಯನಿರ್ವಹಣಾಧಿಕಾರಿ

ಸುಳ್ಯದ ಅವಿನಾಶ್ ಬಸ್ ಗಳ ಮಾಲಕ ನಾರಾಯಣ ರೈ ಆತ್ಮಹತ್ಯೆ

ಕೆಲ ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸುಳ್ಯದ ಅವಿನಾಶ್ ಬಸ್ ಗಳ ಮಾಲಕ ನಾರಾಯಣ ರೈ (73) ಕಳೆದ ರಾತ್ರಿ ಕುತ್ತಿಗೆಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.ಮಾನಸಿಕವಾಗಿ ತೀವ್ರ ನೊಂದಿದ್ದರೆನ್ನಲಾಗಿದೆ. ಕಳೆದ ರಾತ್ರಿ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಇವರು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಸುಳ್ಯದ ಗ್ರಾಮೀಣ ಭಾಗದಲ್ಲಿ ಬಸ್ ಸೌಲಭ್ಯ ಇಲ್ಲದಂತಹ

ರಾಜ್ಯ ರೈತಸಂಘ ಉಬರಡ್ಕ ಮಿತ್ತೂರು ಗ್ರಾಮ ಘಟಕದ ಪುನರ್ರಚನೆ

ಕರ್ನಾಟಕ ರಾಜ್ಯ ರೈತಸಂಘ ಉಬರಡ್ಕ ಮಿತ್ತೂರು ಗ್ರಾಮ ಘಟಕದ ಪುನರ್ರಚನೆ ಹಾಗೂ ಸಭಾ ಕಾರ್ಯಕ್ರಮ ಉಬರಡ್ಕ ಮಿತ್ತೂರು ಪಂಚಾಯತ್ ಸಭಾಭವನದಲ್ಲಿ ರೋಹನ್ ಪೀಟರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತಾನಾಡಿದ ರಾಜ್ಯಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಕೇಂದ್ರ ಸರಕಾರ ಸುಗ್ರಿವಾಜ್ಞೆಯ ಮೂಲಕ ತಂದಿರುವ ಜನವೀರೊಧಿ ಮೂರು ಮಸೂದೆಗಳಿಂದ ಭಾರತದ ಆಹಾರ ಸಾರ್ವಭೌಮತ್ವದ ದುಷ್ಪರಿಣಾಮ ಬೀರುತ್ತದೆ. ದೇಶಿಯ ಕೃಷಿ ಸಂಸೃತಿ ಸಂಪೂರ್ಣ

ಸೆಲ್ಫಿ ತೆಗೆಯಲು ನದಿಗೆ ಇಳಿದ ಯುವಕ ನೀರುಪಾಲು

ಕಡಬ: ವಾಹನ ನಿಲ್ಲಿಸಿ ನದಿಯ ಬಂಡೆಯಲ್ಲಿ ಸೆಲ್ಫೀ ತೆಗೆಯಲು ಮುಂದಾದ ಯುವಕನೋರ್ವ ನೀರಲ್ಲಿ ಮುಳುಗಿ ಕಣ್ಮರೆಯಾದ ಘಟನೆ ಕಡಬ ತಾಲೂಕಿನ ನೆಲ್ಯಾಡಿ, ಗುಂಡ್ಯ ಸಮೀಪದಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ನೀರಲ್ಲಿ ಮುಳುಗಿದ ಯುವಕನನ್ನು ರಾಜಸ್ಥಾನ ಮೂಲದ ಸೀತಾರಾಮ್ ಎಂದು ತಿಳಿದು ಬಂದಿದೆ.ಇಬ್ಬರು ಯುವಕರು ತಮ್ಮ ಆಟೋಮೊಬೈಲ್ ಸ್ಪೇರ್‍ಪಾಡ್ಸ್ ಪಾರ್ಸಲ್ ಸಾಗಾಟದಟೆಂಪೊವಾಹನವನ್ನು ರಾಷ್ಟ್ರೀಯ ಹೆದ್ದಾರಿ 75ರ ಬದಿಯಲ್ಲಿ ನಿಲ್ಲಿಸಿ ಗುಂಡ್ಯ ಹೊಳೆಯ ಬಂಡೆಯೊಂದರ ಮೇಲೆ

ಸುಬ್ರಹ್ಮಣ್ಯ ಪೊಲೀಸ್ ಠಾಣಾ ಕಾಮಗಾರಿ ಶೀಘ್ರ ಪ್ರಾರಂಭ : ಗೃಹ ಸಚಿವ ಅರಗ ಜ್ಞಾನೇಂದ್ರ

ಕಡಬ: ರಾಜ್ಯದಲ್ಲಿ ಪೊಲೀಸ್ ಇಲಾಖೆ ಬಲವರ್ಧನೆಗೆ ನಮ್ಮ ಸರಕಾರ ಹೆಚ್ಚಿನ ಮಹತ್ವ ನೀಡುತ್ತಿದೆ. ಸುಮಾರು ೧೦೦ ಪೊಲೀಸ್ ಠಾಣೆಗಳ ಹೊಸ ಕಟ್ಟಡವನ್ನು ೨೦೦ ಕೋಟಿ ರೂ ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುವುದು. ಸುಬ್ರಹ್ಮಣ್ಯ ಪೊಲೀಸ್ ಠಾಣೆಗೂ ರೂ. ೧ ಕೋಟಿ ಅನುದಾನ ಇಡಲಾಗಿದೆ ಸದ್ಯದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಅವರು ಸೋಮವಾರ ರಾತ್ರಿ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಬೇಟಿ ನೀಡಿ ಪತ್ರಕತ್ರರೊಂದಿಗೆ ಮಾತನಾಡಿದರು.