Home Archive by category ಕರಾವಳಿ (Page 874)

ವಿಟ್ಲ:ಮನೆಗೊಂದು ಸಸಿ ಪರಿಸರ ಜಾಗೃತಿ ಕಾರ್ಯಕ್ರಮ

ವಿಟ್ಲ: ನವಭಾರತ್ ಯುವಕ ಸಂಘ ಅನಂತಾಡಿ ವತಿಯಿಂದ ಪರಿಸರ ಸಂರಕ್ಷಣಾ ಪ್ರಯುಕ್ತ ಮನೆಗೊಂದು ಸಸಿ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು. ಅನಂತಾಡಿ ಗ್ರಾಮದ ಸುತ್ತ ಮುತ್ತಲಿನ ಹಲವಾರು ಮನೆಗಳಿಗೆ ಆರ್ಯುವೇದಿಕ್ ಸಂಬಧಿಸಿದ ಸಸಿಗಳನ್ನು ನೀಡಿದರು.ಈ ಕಾರ್ಯ ಕ್ರಮದಲ್ಲಿ ನವಭಾರತ್ ಅಧ್ಯಕ್ಷ ಪವನ್ ಕುಮಾರ್ ಅನಂತಾಡಿ, ಸಂಘದ ಎಲ್ಲಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು.‌

ನಾಸ್ಡಾಕ್ ದುಬೈನ ಖಾಸಗಿ ಮಾರುಕಟ್ಟೆ ಪ್ರವೇಶಿಸಿದ ಮಲಬಾರ್ ಗೋಲ್ಡ್ & ಡೈಮಂಡ್ಸ್

ಬೆಂಗಳೂರು: ಜಗತ್ತಿನ ಅತಿ ದೊಡ್ಡ ಜ್ಯುವೆಲ್ಲರಿ ರೀಟೇಲರ್‌ಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್‌ನ ಅಂತಾರಾಷ್ಟ್ರೀಯ ಹೂಡಿಕೆ ಅಂಗಸಂಸ್ಥೆಯಾಗಿರುವ ಮಲಬಾರ್ ಇನ್ವೆಸ್ಟ್‌ಮೆಂಟ್ಸ್ ದುಬೈ ಇಂಟರ್‌ನ್ಯಾ?ನಲ್ ಫೈನಾನ್ಷಿಯಲ್ ಸೆಂಟರ್(ಡಿಐಎಫ್‌ಸಿ) ಅನ್ನು ಪ್ರವೇಶಿಸಿದೆ. ಮತ್ತು ನಾಸ್ಡಾಕ್ ದುಬೈನ ಸೆಂಟ್ರಲ್ ಸೆಕ್ಯೂರಿಟೀಸ್ ಡೆಪೋಸಿಟರಿ(ಸಿಎಸ್‌ಡಿ)ಯಲ್ಲಿ ತನ್ನ ಷೇರುಗಳನ್ನು ನೋಂದಣಿ ಮಾಡಿದೆ. ಇದರ ಮೂಲಕ ಮಲಬಾರ್ ಗ್ರೂಪ್ ಮಹತ್ವದ ಹೆಜ್ಜೆ ಇಟ್ಟಿದೆ. ಈ

ಕೆಮ್ಮಾರ: ಇಲಿಪಾಷಾಣ ತಿಂದು ಎರಡೂವರೇ ವರ್ಷದ ಹೆಣ್ಣು ಮಗು ಸಾವು

ಇಲಿ ಪಾಷಾಣ ತಿಂದು ಎರಡೂವರೇ ವರ್ಷದ ಹೆಣ್ಣು ಮಗುವೊಂದು ಮೃತಪಟ್ಟ ಘಟನೆ ಬಜತ್ತೂರು ಗ್ರಾಮದ ಕೆಮ್ಮಾರದಲ್ಲಿ ನಡೆದಿದೆ. ಕೆಮ್ಮಾರ ನಿವಾಸಿ, ನಿವೃತ್ತ ಸೈನಿಕ ಸೈಜು ಎಂಬವರ ಪುತ್ರಿ, ಎರಡೂವರೇ ವರ್ಷದ ಶ್ರೇಯಾ ಮೃತಪಟ್ಟ ಮಗು. ಜೂ.19ರಂದು ಬೆಳಿಗ್ಗೆ ಮಗುವಿನ ತಂದೆ, ತಾಯಿ ನಾಯಿ ಗೂಡಿನ ಮೇಲಿದ್ದ ಪಿವಿಎಸ್ ಪೈಪು ಸೇರಿದಂತೆ ಇನ್ನಿತರ ಸಾಮಾಗ್ರಿಗಳನ್ನು ಕ್ಲೀನ್ ಮಾಡಿದ್ದು ಇದರಲ್ಲಿ ಎರಡು-ಮೂರು ತಿಂಗಳ ಹಿಂದೆ ತಂದಿದ್ದ ಇಲಿ ಪಾಷಾಣದ ಟ್ಯೂಬ್ ಸಹ ಇತ್ತು. ಮನೆಯವರು ಕೆಲಸ

ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಮದುವೆ: ಎಸಿ ಮದನ್ ಮೋಹನ್ ನೇತೃತ್ವದಲ್ಲಿ ದಾಳಿ

ನಗರದ ಮಂಗಳಾದೇವಿ ದೇವಸ್ಥಾನದ ಸಮೀಪದ ವೇದಿಕೆಯಲ್ಲಿ ಏಕಕಾಲದಲ್ಲಿ ನಾಲ್ಕು ಮದುವೆ ಕಾರ್ಯಕ್ರಮಗಳು ನಡೆಸುತ್ತಿದ್ದ ಸಂದರ್ಭ ಎಸಿ ಮದನ್ ಮೋಹನ್ ನೇತೃತ್ವದ ತಂಡ ದಾಳಿ ನಡೆಸಿ, ಕೇಸು ದಾಖಲಿಸಿದೆ. ನಿಯಮಬಾಹಿರವಾಗಿ ಮದುವೆ ಸಮಾರಂಭ ಆಯೋಜಿಸಿರುವುದಾಗಿ ಬಂದ ದೂರಿನ ಹಿನ್ನೆಲೆ ಈ ದಾಳಿ ನಡೆದಿದೆ. ಪಕ್ಷದ ನಾಯಕರೊಬ್ಬರ ಪುತ್ರಿಯ ಮದುವೆ ಸೇರಿದಂತೆ ಇನ್ನೂ ಮೂರು ವಿವಾಹಗಳು ನಡೆಯುತ್ತಿದ್ದವೆನ್ನಲಾಗಿದೆ. ಮದುವೆ ನೂರಕ್ಕೂ ಹೆಚ್ಚು ಜನರ ಗುಂಪುಗೂಡಿದ್ದರು ಎಂದು

ಸವಣೂರಿನಲ್ಲಿ ಕೋವಿಡ್ ಕಾರ್ಯಪಡೆಯ ಸಭೆ

ಸವಣೂರು: ಕೋವಿಡ್ ಪಾಸಿಟಿವ್ ಬಂದವರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗೆ ಸೇರಿಸಬೇಕು.ಹೋಂ ಐಸೋಲೇಶನ್ ನಿಂದ ಇತರರಿಗೆ ಹರಡುವ ಸಾಧ್ಯತೆ ಜಾಸ್ತಿ.ಆದ್ದರಿಂದ ಕಡ್ಡಾಯವಾಗಿ ಪಾಸಿಟಿವ್ ಬಂದವರನ್ನೂ ಕೇರ್ ಸೆಂಟರ್ ಗೆ ಸೇರಿಸಬೇಕು. ಕುರಿತು ಎಲ್ಲರೂ ಗಮನಹರಿಸಬೇಕೆಂದು ಸಚಿವ ಎಸ್.ಅಂಗಾರ ಸೂಚನೆ ನೀಡಿದರು. ಅವರು ಸವಣೂರು ಗ್ರಾ.ಪಂ.ನಲ್ಲಿ ಕೋವಿಡ್ ಕಾರ್ಯಪಡೆಯ ವರದಿ ಪರಿಶೀಲನೆ ನಡೆಸಿ ಮಾತನಾಡಿದರು. ಸಾರ್ವಜನಿಕರ ಹಿತದೃಷ್ಟಿಯಿಂದ ಕೋವಿಡ್ ಕೇರ್ ಸೆಂಟರ್ ಗೆ

ಸಕಲೇಶಪುರ: ನೊಂದ ಮಹಿಳೆ ಮಗುವನ್ನು ಕೊಂದು ತಾನು ಆತ್ಮಹತ್ಯೆ

ಸಕಲೇಶಪುರ: ತಾಲೂಕಿನ ಆನೇಮಹಲ್ ಗ್ರಾಮದಲ್ಲಿ ಮರುಮದುವೆಯಿಂದ ನೊಂದ ಮಹಿಳೆಯೊಬ್ಬರು ಮಗುವನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಗ್ರಾಮದ ಮೋಹನ್ ಎಂಬುವವರ ಪತ್ನಿ ಪ್ರಜ್ವಲ(26) ಹಾಗೂ ಎರಡುವರೆ ವರ್ಷದ ಪುತ್ರಿ ಸಾಧ್ವಿ ಆತ್ಮಹತ್ಯೆಗೀಡಾದವರು. ಮಹಿಳೆಯ ಪತಿ ಮೋಹನ್ ಮನೆಯಿಂದ ಹೊರಹೋದ ನಂತರ ಮನೆಯ ಪ್ಯಾನಿಗೆ ಮಗುವನ್ನು ಸೀರೆಯಿಂದ ನೇಣು ಹಾಕಿ ಮತ್ತೊಂದು ಸೀರೆಯಿಂದ ತಾನು ಅದೇ ಪ್ಯಾನ್‌ಗೆ ನೇಣು ಬೀಗಿದುಕೊಂಡು ಆತ್ಮಹತ್ಯೆಮಾಡಿಕೊಂಡಿದ್ದಾರೆ. ಪತಿ ಮೋಹನ್

ಪುತ್ತೂರಿನಲ್ಲಿ ಹಡಿಲು ಗದ್ದೆಯ ಬೇಸಾಯ: ಶಾಸಕ ಸಂಜೀವ ಮಠಂದೂರು ಚಾಲನೆ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ವಿನೂತನ ಯೋಜನೆಯ ಅಂಗವಾಗಿ ಕುರಿಯ ಗ್ರಾಮದ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ – ಕುರಿಯ ನೇತೃತ್ವದಲ್ಲಿ ಹಡಿಲು ಗದ್ದೆಯನ್ನು ಬೇಸಾಯ ಮಾಡಬೇಕು ಎನ್ನುವ ಕೋರಿಕೆಯ ಮೇರೆಗೆ ಕುರಿಯ ಗ್ರಾಮದ ಮುಳಿಯ ಶ್ಯಾಮ ಭಟ್ ಅವರ ಕುಟುಂಬದ ಗದ್ದೆಯಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಕೃಷಿ ಆಂದೋಲನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ

ಭೂಗತವಾಗುತ್ತಿರುವ ಪಡುಬಿದ್ರಿ ಸ್ಮಶಾನ ಮುಕ್ತಿಗಾಗಿ ಬೇಡಿಕೆ..

ತನ್ನ ಅಸ್ಥಿತ್ವವನ್ನೇ ಕಳೆದುಕೊಂಡು ಭೂಗತದ ಅಂಚಿನಲ್ಲಿರುವ ಪಡುಬಿದ್ರಿ ಸ್ಮಶಾನ ಉಳಿಸುವಂತೆ ಅಂಬೇಡ್ಕರ್ ಯುವಸೇನೆಯ ತಾಲೂಕು ಅಧ್ಯಕ್ಷ ಲೋಕೇಶ್ ಕಂಚಿನಡ್ಕ ಹೆಸರಲ್ಲಿ ಸಾಮಾಜಿಕ ಜಲತಾಣ ದಲ್ಲಿ ಫೋಸ್ಟೊಂದು ಹರಿದಾಡುತ್ತಿದಂತೆ ಚುರುಕಾದ ಪಡುಬಿದ್ರಿ ಗ್ರಾ.ಪಂ. ಅಧ್ಯಕ್ಷ ರವಿ ಶೆಟ್ಟಿ ಭೇಟಿ ನೀಡಿ ಸಮಸ್ಯೆ ತಕ್ಷಣವೇ ಪರಿಹಾರ ಮಾಡುವ ಭರವಸೆ ವ್ಯಕ್ತ ಪಡಿಸಿದ್ದಾರೆ. ಪಡುಬಿದ್ರಿಯ ಕಂಚಿನಡ್ಕ ಭಾಗದಲ್ಲಿ ಇರುವ ಏಕೈಕ ಸಾರ್ವಜನಿಕ ರುದ್ರಭೂಮಿ ಇದಾಗಿದೆ, ಇಲ್ಲಿ ಎಲ್ಲಾ