Home Archive by category ಕರಾವಳಿ (Page 874)

ಕೋವಿಡ್ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ವಾರಾಂತ್ಯದಲ್ಲಿ ನಿರ್ಬಂಧ

ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಕಾಲಕಾಲಕ್ಕೆ ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ನಿಬರ್ಂಧಗಳನ್ನು ವಿಧಿಸಿದ ನಂತರವೂ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗುತ್ತಿದೆ. ನೆರೆಯ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್

ಕೋವಿಡ್ ಸೋಂಕು ನಿಯಂತ್ರಿಸಲು ಅಗತ್ಯ ಕ್ರಮವಹಿಸಿ: ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸಲು ಸಂಬಂಧಿಸಿದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳು ಅಗತ್ಯ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ.ವಿ ಅವರು ತಿಳಿಸಿದರು.ಕೋವಿಡ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅವರು ಆಗಸ್ಟ್ 04ರ ಬುಧವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲೆಯ ಗ್ರಾಮ ಪಂಚಾಯತ್‍ಗಳ ಅಧ್ಯಕ್ಷರು, ಉಪಾಧ್ಯಕ್ಷರು, ತಾಲೂಕು ಆರೋಗ್ಯಾಧಿಕಾರಿಗಳು, ಪಂಚಾಯತ್

ಪ್ರಮಾಣ ವಚನ ಸ್ವೀಕಾರವನ್ನು ಟಿವಿಯಲ್ಲಿಯೇ ನೋಡಿ ಸಂಭ್ರಮಿಸಿದ ಕೋಟ ಕುಟುಂಬಿಕರು

  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಿ ಸ್ಥಾನ ಪಡೆದುಕೊಂಡ ಕೋಟ ಶ್ರೀನಿವಾಸ ಪೂಜಾರಿಯವರ ಹುಟ್ಟೂರಾದ ಕೋಟದ ಮನೆಯಲ್ಲಿ ಕುಟುಂಬಿಕರು ಸರಳವಾಗಿ ಸಂಭ್ರಮಿಸಿದರು. ಶ್ರೀನಿವಾಸ ಪೂಜಾರಿಯವರ ಸಚಿವರಾಗುವ ಪ್ರಮಾಣವಚನಕ್ಕೆ ಬೆಂಗಳೂರಿಗೆ ತೆರಳಿದ್ದರೂ ಕೂಡ ಪತ್ನಿ ಶಾಂತಾ ಅವರು ಮನೆಯಲ್ಲಿ ತಮ್ಮ ದೈನಂದಿನ ಕೆಲಸದಲ್ಲಿಯೇ ಮಗ್ನರಾಗಿದ್ದರು. ಕಾರ್ಯಕರ್ತರ ಸದ್ದು ಗದ್ದಲವಿದಲ್ಲದೆ ಕೋಟ ಅವರ ಮನೆ ಸಂಪೂರ್ಣ ಶಾಂತವಾಗಿತ್ತು. ಸಚಿವರಾಗಿ ಪ್ರಮಾಣ ವಚನ

ಕರಾವಳಿಯ ಮೂವರಿಗೆ ಸಚಿವ ಸ್ಥಾನ

ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟಕ್ಕೆ29 ಶಾಸಕರು ಸೇರ್ಪಡೆಗೊಂಡಿದ್ದು, ರಾಜಭವನದ ಗಾಜಿನ ಮನೆಯಲ್ಲಿ ಪದಗ್ರಹಣ ಮಾಡಿದರು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು. ಮೊದಲಿಗೆ ಗೋವಿಂದ ಕಾರಜೋಳ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬಳಿಕ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಬಿ.ಶ್ರೀರಾಮುಲು, ವಿ.ಸೋಮಣ್ಣ, ಉಮೇಶ್ ಕತ್ತಿ, ಎಸ್. ಅಂಗಾರ, ಜೆ.ಸಿ.ಮಾಧುಸ್ವಾಮಿ, ಅರಗಜ್ಞಾನೇಂದ್ರ, ಡಾ. ಅಶ್ವಥ ನಾರಾಯಣ, ಸಿ.ಸಿ.ಪಾಟೀಲ್, ಆನಂದ್ ಸಿಂಗ್, ಕೋಟಾ

ಟೋಕಿಯೋ ಒಲಿಂಪಿಕ್ಸ್: ಭಾರತದ ಬಾಕ್ಸರ್ ಲವ್ಲೀನಾ ಬೊರ್ಗೊಹೈನ್‍ಗೆ ಕಂಚಿನ ಪದಕ

ಟೋಕಿಯೊ ಒಲಿಂಪಿಕ್ಸ್ ನಲ್ಲಿ ಮಹಿಳೆಯರ ವೆಲ್ಟರ್ ವೇಟ್ (69ಕೆಜಿ)ವಿಭಾಗದ ಸೆಮಿ ಫೈನಲ್ ನಲ್ಲಿ ಭಾರತದ ಬಾಕ್ಸರ್ ಲವ್ಲೀನಾ ಬೊರ್ಗೊಹೈನ್ ಸೋಲನುಭವಿಸಿದರು. ಈ ಮೂಲಕ ಅವರು ಕಂಚಿನ ಪದಕಕ್ಕೆ ತೃಪ್ತಿಪಟ್ಟರು. ಬುಧವಾರ ಟೋಕಿಯೊ ಒಲಿಂಪಿಕ್ಸ್ ನ ವನಿತೆಯರ 69 ಕೆಜಿ ವಿಭಾಗದಲ್ಲಿ ಬಾಕ್ಸರ್ ಲವ್ಲಿನಾ ಅವರು ತಮ್ಮ ಎದುರಾಳಿ ವಿಶ್ವಚಾಂಪಿಯನ್ ಟರ್ಕಿಯ ಬುಸೆನಾ ಸುರ್ಮೆನೆಲಿ ವಿರುದ್ಧ ಪರಾಜಯಗೊಳ್ಳುವ ಮೂಲಕ ಚಿನ್ನದ ಪದಕ ಗೆಲ್ಲುವ ಅವಕಾಶದಿಂದ ವಂಚಿತರಾದಂತಾಗಿದೆ. 69ಕೆಜಿ

ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಎನ್‌ಐಎ ದಾಳಿ : ಐಸಿಸ್ ಸಂಪರ್ಕ ಶಂಕೆ

ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಇಂದು ನಸುಕಿನಲ್ಲಿ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಬೆಳ್ಳಂಬೆಳಗ್ಗೆ ಬೆಂಗಳೂರಿನಿಂದ ಆಗಮಿಸಿದ ಅಧಿಕಾರಿಗಳು ಮನೆಗೆ ಬಂದು ತನಿಖೆ ಆರಂಭಿಸಿದ್ದಾರೆ. ನಾಲ್ಕು ಕಾರುಗಳಲ್ಲಿ 25 ಮಂದಿಯಿದ್ದ ತಂಡ ಉಳ್ಳಾಲದ ಮಾಸ್ತಿಕಟ್ಟೆಗೆ ಆಗಮಿಸಿದೆ. ಎನ್‌ಐಎ ಜೊತೆಗೆ ಮಂಗಳೂರಿನ ಸ್ಥಳೀಯ ಪೊಲೀಸರು ಕೂಡ ಭದ್ರತೆ ಒದಗಿಸಿದ್ದಾರೆ. ಹತ್ತು ವರ್ಷಗಳ ಹಿಂದೆ ಇದಿನಬ್ಬ ಅವರ ಮೊಮ್ಮಗಳು ಕೇರಳದಲ್ಲಿ ನಾಪತ್ತೆಯಾಗಿದ್ದು

ಇಂದಿನ ನಿಮ್ಮ ರಾಶಿ ಭವಿಷ್ಯ

ಶ್ರೀ ಕ್ಷೇತ್ರ ಇಡಗುಂಜಿ ಮಹಾಗಣಪತಿ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ ಜೀವನ ಎಂದ ಮೇಲೆ ಖುಷಿ, ಸಂಕಟ, ಲಾಭ-ನಷ್ಟ ಇವೆಲ್ಲಾ ನಾಣ್ಯದ ಎರಡು ಮುಖಗಳಿದ್ದಂತೆ. ಅನೇಕ ಸವಾಲುಗಳು ಬರುತ್ತವೆ, ಅದನ್ನು ಮೆಟ್ಟಿ ನಿಂದಾಗ ಖುಷಿ, ಅದೃಷ್ಟಿ ಹಿಂಬಾಲಿಸುತ್ತದೆ. ಈ ವಾರ ನಿಮ್ಮ ಜೀವನ ಖುಷಿಯಿಂದ ಇರಲಿ ಎಂಬುವುದೇ ನಮ್ಮ ಆಶಯ. ಕೆಲವೊಂದು ಮುನ್ನೆಚ್ಚರಿಕೆ ತೆಗೆದುಕೊಂಡರೆ ಮುಂದೆ ಬರುವ ಅಪಾಯ ತಪ್ಪಿಸಬಹುದು ಅಂತಾರೆ. ಹಾಗೆಯೇ

ಗಡಿಭಾಗಕ್ಕೆ ಹೊಂದಿಕೊಂಡಿರುವ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ, ಕಟ್ಟುನಿಟ್ಟಿನ ನಿರ್ಬಂಧಗಳ ನಂತರವು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗಿರುವ ಹಿನ್ನಲೆಯಲ್ಲಿ ಅದರ ಕಣ್ಗಾವಲು, ನಿಯಂತ್ರಣ ಮತ್ತು ಜಾಗೃತಿಗೆ ಸಂಬಂಧಿಸಿದಂತೆ ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಶೇಷ ಸರ್ವೇಕ್ಷಣೆಯನ್ನು ನಿರ್ದೇಶಿಸಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನೇ

ಭಾಷಾ ಬಾಂಧವ್ಯದಿಂದ ಸೌಹಾರ್ದತೆ ಸಾಧ್ಯ – ಡಾ. ತಮಿಳ್ ಸೆಲ್ವಿ

ನಾವು ನಮ್ಮದಲ್ಲದ ಭಾಷೆ ಮತ್ತು ಸಂಸ್ಕೃತಿಯನ್ನು ಅರ್ಥ ಮಾಡಿಕೊಂಡರೆ ಆ ಭಾಷೆ ಬಗ್ಗೆ ಅರಿವು ಹೆಚ್ಚಾಗಿ ಸೌಹಾರ್ದತೆ ಸಾಧ್ಯವಾಗುತ್ತದೆ. ತಮಿಳು-ಕನ್ನಡದ ದೃಷ್ಟಿಯಿಂದ ಇದು ಅತೀ ಮುಖ್ಯ. ಇದರಿಂದ ರಾಜ್ಯಗಳ ನಡುವಿನ ಹಲವು ಸಮಸ್ಯೆಗಳು ಪರಿಹಾರ ಕಾಣಬಹುದು ಎಂದು ಖ್ಯಾತ ಭಾಷಾ ವಿದ್ವಾಂಸರು ಮತ್ತು ಮದ್ರಾಸ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಮುಖ್ಯಸ್ಥರಾದ ಡಾ.ತಮಿಳ್ ಸೆಲ್ವಿ ಹೇಳಿದ್ದಾರೆ. ತೆಂಕನಿಡಿಯೂರಿನ ಸರಕಾರಿಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ

ರಾಜಧರ್ಮದ ಕುರಿತು ಭಾಷಣ ಮಾಡಿದ್ರೆ ಸಾಲದು, ಅನುಷ್ಠಾನಕ್ಕೆ ತರುವ ಕೆಲಸವಾಗಬೇಕು: ಮಾಜಿ ಸಚಿವ ರಮಾನಾಥ ರೈ

ಬಂಟ್ವಾಳ: ಬಿಪಿಎಲ್ ಕಾರ್ಡ್ ರದ್ದುಮಾಡುವುದು, ಅದನ್ನು ಪುನರ್ ವಿಮರ್ಶೆ ಮಾಡಿ ಕೊಡಿಸುತ್ತೇವೆ ಎನ್ನುವುದು ಆಡಳಿತ ಪಕ್ಷದ ಪ್ರಚಾರದ ತಂತ್ರ ಎಂದು ಮಾಜಿ ಸಚಿವ ಬಿ. ರಮನಾಥ ರೈ ಆರೋಪಿಸಿದ್ದಾರೆ. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿ ರಾಜಧರ್ಮದ ಕುರಿತು ಕೇವಲ ಭಾಷಣ ಮಾಡಿದರೆ ಸಾಲದು ಅದನ್ನು ಅನುಷ್ಟಾನಕ್ಕೆ ತರಬೇಕು ಎಂದು ಸಲಹೆ ನೀಡಿದ್ದಾರೆ. ಆಡಳಿತ ಪಕ್ಷಕ್ಕೆ ಸಂಬಂಧಪಟ್ಟವರೇ ಬಿಪಿಎಲ್ ಕಾರ್ಡ್ ರದ್ದು