Home Archive by category ಕರಾವಳಿ (Page 907)

ಉಪ್ಪಿನಂಗಡಿ: ನದಿ ಸ್ನಾನಕ್ಕಿಳಿದ ಬಾಲಕರಿಬ್ಬರು ನೀರಿನಲ್ಲಿ ಮುಳುಗಿ ಸಾವು

ಉಪ್ಪಿನಂಗಡಿ: ಸ್ನಾನಕ್ಕೆಂದು ನೇತ್ರಾವತಿ ನದಿಗಿಳಿದ ಗದಗ ಮೂಲದ ಕಾರ್ಮಿಕ ಕುಟುಂಬದ ಬಾಲಕರಿಬ್ಬರು ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸೋಮವಾರ ಸಂಜೆ ನಡೆದಿದೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸುಬ್ಬನಹಳ್ಳಿ ನಿವಾಸಿ ಧರ್ಮ, ಮೀನಾಕ್ಷಿ ದಂಪತಿ ಮಕ್ಕಳಾದ ನಿಂಗರಾಜು (16), ಸತೀಶ್ (14) ಮೃತಪಟ್ಟವರು. ನಿಂಗರಾಜು ಗದಗ ಮುರಾರ್ಜಿ ದೇಸಾಯಿ ವಸತಿ ಶಾಲೆ

ಬೆಳಗಾವಿಯಲ್ಲಿ ಮಾಜಿ ಕೇಂದ್ರ ಸಚಿವ ಬಾಬಾ ಗೌಡ ಪಾಟೀಲ್ ಅವರ ನೆನಪು ಹಾಗೂ ಶ್ರದ್ಧಾಂಜಲಿ

ಕರ್ನಾಟಕದ ಹಿರಿಯ ರೈತ ನಾಯಕ ರೈತಸಂಘದ ಮೊದಲ ಶಾಸಕ ಮಾಜಿ ಕೇಂದ್ರ ಸಚಿವರಾದ ಬಾಬಾ ಗೌಡ ಪಾಟೀಲ್ ರವರ ನೆನಪು ಹಾಗೂ ಶ್ರದ್ಧಾಂಜಲಿ ಸಭೆಯನ್ನು ಬೆಳಗಾವಿಯ ಕೆ.ಪಿ.ಟಿ.ಸಿ.ಎಲ್ ಸಭಾಭವನದಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಪ್ರಾಸ್ತಾವಿಕ ಗೌರವಾಧ್ಯಕ್ಷರಾದ ಚಾಮರಸ ಮಾಲೀ ಪಾಟೀಲ್ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಹಿರಿಯ ಸಾಮಾಜಿ ಹೋರಾಟಗಾರರಾದ ಎಸ್.ಆರ್.ಹೀರೇಮಠ್, ಮಾಜಿ ಸಚಿವರಾದ ಶಶಿಕಾಂತ್ ನಾಯಕ್,

ವಿಪರೀತ ಬೆಲೆಯೇರಿಕೆಯಿಂದ ದೇಶದ ಜನರ ಬದುಕು ತತ್ತರ- ಸುನೀಲ್‌ ಕುಮಾರ್ ಬಜಾಲ್

ಲಾಕ್ಡೌನ್ ಅವಧಿಯಲ್ಲಿ ಜನಸಾಮಾನ್ಯರಿಗೆ ಉದ್ಯೋಗವಿಲ್ಲದೆ , ವ್ಯಾಪಾರವಿಲ್ಲದೆ ಬದುಕು ನಡೆಸಲು ಅಸಾಧ್ಯವಾಗದಂತಹ ಪರಿಸ್ಥಿಯಲ್ಲಿರುವಾಗ ನಮ್ಮನ್ನಾಳುವ ಕೇಂದ್ರ ಸರಕಾರ ಪೆಟ್ರೋಲ್, ಡೀಸಲ್, ಅಡುಗೆ ಅನಿಲ ಸಹಿತ, ಗೃಹ ಉಪಯೋಗಿ ವಸ್ತಗಳ ವಿಪರೀತ ಬೆಲೆಯೇರಿಕೆಯಿಂದ ದೇಶದ ಜನರ ಬದುಕು ತತ್ತರಗೊಂಡಿದೆ ಎಂದು ಸಿಪಿಐಎಂ ಪಕ್ಷದ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್‌ ಕುಮಾರ್ ಬಜಾಲ್ ರವರು ಆಕ್ರೋಶ ವ್ಯಕ್ತಪಡಿಸಿದರು. ಅವರು ಪೆಟ್ರೋಲ್, ಡೀಸಲ್, ಗ್ಯಾಸ್ ದರ

ಅಪಘಾತದಲ್ಲಿ ಗಂಭೀರ ಗಾಯಗೊಂಡ ಛಾಯಾಗ್ರಾಹಕ ಚಿಕಿತ್ಸೆಗೆ ಸ್ಪಂದಿಸದೆ ಸಾವು

ಕುಂದಾಪುರ: ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡ ಛಾಯಾಗ್ರಾಹಕನೋರ್ವ ಆಸ್ಪತ್ರೆಯಲ್ಲಿ ಸಾವು-ಬದುಕಿನ ಹೋರಾಟ ನಡೆಸಿ ಕೊನೆಗೂ ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಬೆಳಿಗ್ಗೆ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳಿದಿದ್ದಾರೆ. ನಾವುಂದದ ಮಾನಸ ಸ್ಟೂಡಿಯೋ ಮಾಲೀಕ ಹೇರೂರು ಅಶೋಕ್ ಶೆಟ್ಟಿ (58) ಸಾವನ್ನಪ್ಪಿದವರು. ಅಶೋಕ್ ಶೆಟ್ಟಿ ಬೆಂಗಳೂರಿನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಫೋಟೋಗ್ರಫಿ ಮುಗಿಸಿ ಭಾನುವಾರ ತಡರಾತ್ರಿ ತಮ್ಮ ಕಾರಿನಲ್ಲಿ ಪುತ್ರ

ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ಕಾಂಗ್ರೆಸ್ ಧ್ವನಿಯಾಗಲಿದೆ: ಡಿ.ಕೆ. ಶಿವಕುಮಾರ್ 

ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ಕಾಂಗ್ರೆಸ್ ಸದನದ ಒಳಗೆ ಹಾಗೂ ಹೊರಗೆ ಮೀನುಗಾರರ ಧ್ವನಿಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಮಂಗಳೂರು ಸುಲ್ತಾನ್‌ಬತ್ತೇರಿಯ ಬೋಳೂರಿನ ಮೊಗವೀರ ಸಮುದಾಯ ಭವನದಲ್ಲಿ ಜಿಲ್ಲಾ ಮೊಗವೀರರ ಕುಂದು ಕೊರೆತೆಗಳನ್ನು ಅಧ್ಯಯನ ಸಭೆಯಲ್ಲಿ ಮಾತನಾಡಿದರು. ಕೇರಳ, ಗೋವಾದಲ್ಲಿರುವಂತೆ ಕರ್ನಾಟಕದಲ್ಲೂ ಕರಾವಳಿಯ ತೀರದಲ್ಲಿ ಬದುಕುತ್ತಿರುವ ಮೀನುಗಾರರಿಗೆ ಅನ್ಯಾಯವಾಗಬಾರದು. ಆಂದ್ರದಲ್ಲಿ ದೊರೆಯುವಂತೆ ಡೀಸೆಲ್

ಮೀನುಗಾರರಿಗೆ ಸರ್ಕಾರ ಪರಿಹಾರವನ್ನು ನೀಡಿಲ್ಲ: ಮಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್

ದಕ್ಷಿಣ ಕನ್ನಡ ಜಿಲೆಯಲ್ಲಿ ಮೀನುಗಾರರ ಸಮಸ್ಯೆಗಳನ್ನು ಆಲಿಸುವ ನಿಟ್ಟಿನಲ್ಲಿ ಮಂಗಳೂರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ಕೊಟ್ಟಿದ್ದಾರೆ. ಮೀನುಗಾರರ ಸಮಸ್ಯೆಗಳನ್ನ ಆಲಿಸಿ, ಬಳಿಕ ನಗರದ ಓಶಿಯನ್ ಪರ್ಲ್‌ನಲ್ಲಿ ಸುದ್ಧಿಗೋಷ್ಠಿ ನಡೆಸಿದ್ರು. ಈಗಾಗಲೇ ಮಂಗಳೂರಿನ ಮೀನುಗಾರರ ಜೊತೆ ಈಗಾಗಲೇ ಚರ್ಚೆ ಮಾಡಿದ್ದೇನೆ.ಪಕ್ಷದ ಕಾರ್ಯಕ್ರಮದ ಸಲುವಾಗಿ ಮಂಗಳೂರಿಗೆ ಬಂದಿಲ್ಲ. ಇನ್ನು ಮೇಕೆದಾಟು ಯೋಜನೆ ರಾಜ್ಯಕ್ಕೆ ಅತೀ ಮುಖ್ಯವಾದ ಯೋಜನೆವಾಗಿದೆ. ಈ ಹಿಂದೆ ನಾನು

ತೈಲ ಬಾಂಡ್ ಬಗ್ಗೆ ಸುಳ್ಳು ಪ್ರಚಾರದಿಂದ ಸಮಾಜಕ್ಕೆ ತಪ್ಪು ಸಂದೇಶ: ಕಾವು ಹೇಮನಾಥ ಶೆಟ್ಟಿ 

ಪುತ್ತೂರು: ಇಂಧನ ಬೆಲೆ ಏರಿಕೆಯ ಪ್ರಸ್ತುತ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ತೈಲ ಬಾಂಡ್ ಬಗ್ಗೆ ಸುಳ್ಳು ಹೇಳಿಕೆಯನ್ನು ಪ್ರಚಾರ ಪಡಿಸಿ ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಾ ಜನರಿಗೆ ತಪ್ಪು ದಾರಿಗೆ ಎಳೆಯುವ ಪ್ರಯತ್ನ ನಡೆಯುತ್ತಿದೆ ಎಂದು ಕೆಪಿಸಿಸಿ ಸಂಯೋಜಕರಾದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಆರೋಪಿಸಿದ್ದಾರೆ. ಅವರು ಪುತ್ತೂರಿನ ರೋಟರಿ ಸಭಾಂಗಣದಲ್ಲಿ ಪತ್ರಕರ್ತರೊಂದಿಗೆ ನಡೆದ `ಪೆಟ್ರೋಲ್ ಬೆಲೆ ಏರಿಕೆ-ಆಯಿಲ್

ಪುಂಜಾಲಕಟ್ಟೆ ಹೆದ್ದಾರಿ ಅಗಲಿಕರಣ ವಿಚಾರ: ಸಿಗದ ಪರಿಹಾರ, ಪ್ರತಿಭಟನೆಯ ಎಚ್ಚರಿಕೆ

ಬಂಟ್ವಾಳ ಪುಂಜಾಲಕಟ್ಟೆ ಹೆದ್ದಾರಿ ಅಗಲಗೊಳ್ಳುವ ಕಾರ್ಯದ ಸಂದರ್ಭ ತಮ್ಮ ಜಮೀನು ಸ್ವಾಧೀನಪಡಿಸಿಕೊಂಡಿದ್ದರೂ ಇದುವರೆಗೂ ಪರಿಹಾರ ಬಾರದೇ ಇರುವ ಹಿನ್ನೆಲೆಯಲ್ಲಿ ಜುಲೈ ೨೦ರೊಳಗೆ ಈ ಕುರಿತು ಯಾವುದೇ ಪರಿಹಾರ ಬರದಿದ್ದರೆ ತಮ್ಮ ಜಮೀನಿಗೆ ಬೇಲಿ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಭೂಮಿ ಕಳೆದುಕೊಂಡವರು ನಾವೂರಿನಲ್ಲಿ ಎಚ್ಚರಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಸಂತ್ರಸ್ತರ ಪರವಾಗಿ ಮಾತನಾಡಿದ ಸಿಪ್ರಿಯನ್ ಸಿಕ್ವೇರಾ ಮತ್ತು ಸದಾನಂದ ನಾವೂರು, ಬಂಟ್ವಾಳ ಪುರಸಭಾ

ಕೋವಿಡ್ ನಿಯಮ ಪಾಲಿಸಿಕೊಂಡು ದೇವರ ದರ್ಶನ ಪಡೆದ ಭಕ್ತಾದಿಗಳು

ಇಂದಿನಿಂದ ರಾಜ್ಯದಾದ್ಯಂತ ಬಹುತೇಕ ಲಾಕ್‌ಡೌನ್ ಸಡಿಲಿಕೆಯಾಗಿದೆ. ಎರಡು ತಿಂಗಳುಗಳಿಂದ ಭಕ್ತಾದಿಗಳಿಗೆ ಮುಚಿದ್ದ ದೇವಸ್ಥಾನಗಳು ತೆರೆದಿದ್ದು. ಕರಾವಳಿಯಲ್ಲಿ ವಿವಿಧ ದೇವಸ್ಥಾನಗಳಿಗೆ ಭಕ್ತ ಸಾಗರ ಹರಿದಿ ಬಂದಿದ್ದು. ಭಕ್ತರು ದೇವರ ದರ್ಶನ ಪಡೆದು ಪುನೀತರಾದರು. ಸಮಾರು ಎರಡು ತಿಂಗಳುಗಳ ಕಾಲ ಲಾಕ್‌ಡೌನ್‌ನಿಂದಾಗಿದೆ ಭಕ್ತಾದಿಗಳಿಗೆ ಮುಚ್ಚಿದ್ದ ದೇವಸ್ಥಾನಗಳು ಇಂದು ತರೆದಿವೆ. ಸರ್ಕಾರದ ಆದೇಶದಂತೆ ದೇವರ ದರ್ಶನಕ್ಕೆ ಮಾತ್ರ ಅವಕಾಶವಿದ್ದು ಯಾವುದೇ ಸೇವೆಗಳಿಗೆ

ಮೂಡುಬಿದರೆಯಲ್ಲಿ ಎರಡು ತಿಂಗಳ ಬಳಿಕ ಬಸ್ ಸಂಚಾರ

ಎರಡು ತಿಂಗಳ ಲಾಕ್ ಡೌನ್ ಮುಗಿದು ಮೂಡುಬಿದಿರೆಯಲ್ಲಿ ಸೋಮವಾರದಂದು ಶೇ ೫೦ರಷ್ಟು ಖಾಸಗಿ ಬಸ್ಸುಗಳು ರಸ್ತೆಗಿಳಿದು ಓಡಾಟ ಆರಂಭಿಸಿದವು.ಖಾಸಗಿ ಬಸ್ಸುಗಳು ರಸ್ತೆಗಿಳಿದುದರಿಂದ ಜನರು ತಾವು ಹೋಗಬೇಕಾದ ಸ್ಥಳಗಳಿಗೆ ಬೆಳಗಿನಿಂದಲೇ ಬಸ್ಸುಗಳನ್ನು ಆಶ್ರಯಿಸಿದರು. ಲಾಕ್ ಡೌನ್ ಸಂದರ್ಭದಲ್ಲಿ ಖಾಸಗಿ ಬಸ್ಸು ತಂಗುದಾಣದ ಆವರಣದಲ್ಲಿ ಇತರ ವಾಹನಗಳು ಬಂದು ನಿಲ್ಲುತ್ತಿದ್ದವು. ಅದರಂತೆ ಸೋಮವಾರವು ಕೂಡಾ ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳನ್ನು ಬಸ್ಸು ನಿಲ್ದಾಣದ