Home Archive by category ಕರಾವಳಿ (Page 929)

ಬಿಎಸ್‌ ಎನ್‌ ಎಲ್ ಬಗ್ಗೆ ಜನತೆ ಇಟ್ಟಿರುವ ವಿಶ್ವಾಸ ಉಳಿಸಿಕೊಳ್ಳಿ : ಪುತ್ತೂರು ಶಾಸಕ ಸಂಜೀವ ಮಠಂದೂರು 

ಪುತ್ತೂರು: ನಮ್ಮಲ್ಲಿಗೆ ಹಲವು ಸಂಸ್ಥೆಗಳ ಮೊಬೈಲ್ ನೆಟ್‌ವರ್ಕ್ಗಳು ಬಂದಿದ್ದರೂ ಅಷ್ಟೇ ವೇಗವಾಗಿ ಮಾಯವಾಗಿ ಹೋಗಿದೆ. ಇವೆಲ್ಲದರ ನಡುವೆ ಬಿಎಸ್‌ಎನ್‌ಎಲ್ ಸಂಸ್ಥೆಯ ಬಗ್ಗೆ ಜನರು ವಿಶ್ವಾಸವಿಟ್ಟು ಅದನ್ನು ಬಳಕೆ ಮಾಡುತ್ತಿದ್ದಾರೆ. ಜನರು ಬಿಎಸ್‌ಎನ್‌ಎಲ್ ಸಂಸ್ಥೆಯ ಬಗ್ಗೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಬೇಕು ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದರು. ಅವರು

ದಲಿತ ಕವಿ ಡಾ. ಸಿದ್ದಲಿಂಗಯ್ಯ ರವರಿಗೆ ಗೌರವಪೂರ್ಣ ವಿದಾಯ

ದಲಿತ ಕವಿ, ಹಿರಿಯ ಸಾಹಿತಿ ಡಾ.ಸಿದ್ದಲಿಂಗಯ್ಯನವರಿಗೆ ಅಂತಿಮ ವಿದಾಯ ಹೇಳಲಾಗಿದೆ. ಬೆಂಗಳೂರಿನ ಜ್ಞಾನಭಾರತಿಯ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಹಿರಿಯ ಸಾಹಿತಿ, ಕವಿ ಡಾ.ಸಿದ್ದಲಿಂಗಯ್ಯನವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ರಾಷ್ಟ್ರಕವಿ ಪ್ರೊ. ಜಿ.ಎಸ್.ಶಿವರುದ್ರಪ್ಪ ಅವರ ಸಮಾಧಿ ಪಕ್ಕದಲ್ಲೇ ಡಾ.ಸಿದ್ದಲಿಂಗಯ್ಯನವರ ಅಂತ್ಯಸಂಸ್ಕಾರ ನಡೆಸಲಾಯಿತು. ಮೂರು ಸುತ್ತಿನ ಕುಶಾಲತೋಪು ಸಿಡಿಸಿ ಗೌರವ ನಮನ ಸಲ್ಲಿಸಲಾಯಿತು. ಬೌದ್ಧ ಧರ್ಮದ

ತೈಲ ಬೆಲೆ ಏರಿಕೆ ಖಂಡಿಸಿ ಕಾರ್ಕಳದಲ್ಲಿ ಕಾಂಗ್ರೆಸ್‌ ನಿಂದ ಪ್ರತಿಭಟನೆ

ಇಂಧನ ತೈಲ ಬೆಲೆ ಏರಿಕೆ ಖಂಡಿಸಿ ಕಾರ್ಕಳದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು. ಕಾರ್ಕಳದ ಸ್ಥಳೀಯ ಪೆಟ್ರೋಲ್ ಬಂಕ್ ಎದುರುಗಡೆ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ಮಾತನಾಡಿ, ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಕೇಂದ್ರ ರಾಜ್ಯ ಸರಕಾರದಿಂದ ಜನ ವಿರೋಧಿ ನೀತಿಯಿಂದಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸತತವಾಗಿ ಏರಿಸಿ ಶತಕವನ್ನು ದಾಟಿಸಿದ್ದಾರೆ. ಇದು ಬಿಜೆಪಿ ಸರಕಾರದ ಸಾಧನೆಯ ವಿಷಯವಾಗಿದೆ. ಮೊದಲೇ

ಕಾಪುವಿನಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ವಿನಯಕುಮಾರ್ ಸೊರಕೆ ನೇತೃತ್ವದಲ್ಲಿ ಇಂಧನ ಬೆಲೆ ಏರಿಕೆಯ ವಿರುದ್ಧ ಕಾಪು ಪೆಟ್ರೋಲ್ ಬಂಕ್‌ನ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ವಿಭಿನ್ನವಾಗಿ ನಡೆದ ಪ್ರತಿಭಟನೆಯಲ್ಲಿ ಕ್ರಿಕೆಟ್ ಆಟಗಾರನ ಮಾದರಿ, ಕೇಕ್ ತುಂಡರಿಸುವುದು, ಮಹಿಳಾ ಕಾಂಗ್ರೆಸ್‌ನಿಂದ ತಟ್ಟೆ ಬಡೆಯುವ ಮೂಲಕ ಎಲ್ಲರ ಗಮನ ಸೆಳೆದರು. ಈ ಸಂದರ್ಭ ಮಾತನಾಡಿದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಕೊವೀಡ್ ಸಂಕಷ್ಟ ಕಾಲದಲ್ಲಿ ಜನರ ಪರವಾಗಿ ನಿಲ್ಲಬೇಕಾಗಿದ್ದ

ಪುತ್ತೂರಿನಲ್ಲಿ ‘ಭತ್ತ ಬೆಳೆಯೋಣ ಬದುಕು ಕಟ್ಟೋಣ’ ಆಂದೋಲನ

ದಕ್ಷಿಣ ಕನ್ನಡ ಜಿಲ್ಲೆ ಹಿಂದೆ ಪೂರ್ಣ ಪ್ರಮಾಣದಲ್ಲಿ ಭತ್ತದ ಬೇಸಾಯದ ಜಿಲ್ಲೆಯಾಗಿದ್ದು, ಇತ್ತೀಚಿನ ವರ್ಷಗಳಲ್ಲಿ ಬೇಸಾಯವೇ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಇದೀಗ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಆಶಯದಂತೆ ಮತ್ತೆ ದ.ಕ. ಜಿಲ್ಲೆಯನ್ನು ಬೇಸಾಯ ವೈಭವದ ಜಿಲ್ಲೆ ಮಾಡುವ ಉದ್ದೇಶ ಇಟ್ಟುಕೊಂಡು ಭತ್ತ ಬೆಳೆಯೋಣ.. ಬದುಕು ಕಟ್ಟೋಣ ಎಂಬ ಆಂದೋಲನ ಆರಂಭಿಸಲಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ

ಉದಯ್ ಗಾಣಿಗ ಕೊಲೆ ಪ್ರಕರಣ: ಆರೋಪಿಗಳ ರಕ್ಷಣೆಗೆ ನಿಂತರೆ ನಾವು ಸಹಿಸುವುದಿಲ್ಲ: ವಿನಯಕುಮಾರ್ ಸೊರಕೆ

ಕುಂದಾಪುರ: ಸಾಮಾಜಿಕ ಕಾರ್ಯಕರ್ತ ಯಡಮೊಗೆ ಉದಯ್ ಗಾಣಿಗ ಕೊಲೆ ಆರೋಪಿಗಳಿಗೆ ಕೆಲ ಬಿಜೆಪಿ ಮುಖಂಡರು ರಕ್ಷಣೆ ಕೊಡುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿದ್ದು, ಅದು ಯಾರೇ ಆಗಿರಲಿ, ಆರೋಪಿಗಳ ರಕ್ಷಣೆಗೆ ನಿಂತರೆ ನಾವು ಸಹಿಸುವುದಿಲ್ಲ. ಮುಂಬರುವ ಅಧಿವೇಶನದಲ್ಲಿ ನಮ್ಮ ಪಕ್ಷದ ಶಾಸಕರು ನ್ಯಾಯಕ್ಕಾಗಿ ಈ ಬಗ್ಗೆ ಧ್ವನಿ ಎತ್ತುತ್ತಾರೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ವಾಗ್ದಾಳಿ ನಡೆಸಿದರು. ಅವರು ದುಷ್ಕರ್ಮಿಗಳಿಂದ ಹತ್ಯೆಯಾದ ಮೃತ ಯಡಮೊಗೆಯ ಉದಯ್

ತಸ್ತೀಕ್ ವಿಚಾರದಲ್ಲಿ ರಾಜಕೀಯ ಬೇಡ : ಹರೀಶ್ ಕುಮಾರ್

ತಸ್ತೀಕ್ ಹಣದ ವಿಚಾರದಲ್ಲಿ ರಾಜಕೀಯ ಪ್ರೇರಿತ ಹೇಳಿಕೆ ನೀಡುವ ಮೂಲಕ ಜನರ ಭಾವನಯೊಂದಿಗೆ ಆಟವಾಡುವುದು ಬೇಡ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ವಿಧಾನಪರಿಷತ್ ಸದಸ್ಯರು ಆದ ಕೆ.ಹರೀಶ್ ಕುಮಾರ್ ಹೇಳಿದ್ದಾರೆ. ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ತಸ್ತೀಕ್ ಹಣ ನೀಡುವ ವಿಚಾರದಲ್ಲಿ ಸಾರ್ವಜನಿಕವಾಗಿ ಚರ್ಚೆಯಾಗುವ ವಿಚಾರ ಯಾವುದು ಇಲ್ಲ. ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ತಸ್ತೀಕ್ ಹಣವನ್ನು

NRIಗಳಿಗೆ ವ್ಯಾಕ್ಸಿನ್ ನೀಡುವ ಅಭಿಯಾನಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಶ್ಲಾಘನೆ

ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಭಾರತೀಯ ರೆಡ್ ಕ್ರಾಸ್ ಸೊಸೈಟಿ, ದ.ಕ ಸೇರಿ NRI ಗಳಿಗೆ ವ್ಯಾಕ್ಸಿನ್ ನೀಡುವ ಅಭಿಯಾನ ಹಮ್ಮಿಕೊಂಡಿದ್ದು ಕೆನರಾ ಹೈಸ್ಕೂಲಿನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಭಾಗವಹಿಸಿ ಈ ಮಾದರಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿದೇಶದಲ್ಲಿ ಉದ್ಯೋಗದಲ್ಲಿರುವ ಅನಿವಾಸಿ ಭಾರತೀಯರು ಮತ್ತೆ ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳುವಾಗ ಅವರಿಗೆ ಲಸಿಕೆ ಪಡೆದುಕೊಳ್ಳುವುದು

ಅಡ್ಯಾರ್: ನೆನೆಗುದಿಗೆ ಬಿದ್ದಿದ್ದ ಸಮಸ್ಯೆಗೆ ಪರಿಹಾರ ಒದಗಿಸಿದ ಶಾಸಕ ಡಾ.ಭರತ್ ಶೆಟ್ಟಿ

ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯಾರ್ ದೋಟ ಎಂಬಲ್ಲಿ ಹಲವಾರು ವರ್ಷಗಳಿಂದ ಮಳೆ ನೀರು ಹಲವಾರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗುತ್ತಿತ್ತು. ಇತ್ತೀಚೆಗೆ ಸುರಿದ ಭಾರಿ ಮಳೆಗೆ ಹಲವಾರು ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಸಾರ್ವಜನಿಕರಿಗೆ ತೊಂದರೆ ಉಂಟಾಗಿರುವುದನ್ನು ಮನಗಂಡು ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಮತ್ತು

ಮಂಗಳೂರಲ್ಲಿ ಅಕ್ರಮವಾಗಿ ನುಸುಳಿದ್ದ ಶ್ರೀಲಂಕಾ ಪ್ರಜೆಗಳ ಬಂಧನ

ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 38 ತಮಿಳುನಾಡಿಗೆ ಬಂದಿದ್ದಾರೆ. ಇವರಲ್ಲಿ ಬಹುತೇಕ ಮಂದಿ ಶ್ರೀಲಂಕಾದ ಉತ್ತರ ಭಾಗದವರು. ಶ್ರೀಲಂಕಾದಿಂದ ತಮಿಳುನಾಡಿನ ತೂತುಕುಡಿಗೆ ಬಂದು ಅಲ್ಲಿಂದ ಕೆನಡಾಗೆ ಹೋಗುವವರಿದ್ದರು. ಆದರೆ ತಮಿಳುನಾಡು ಚುನಾವಣೆ ಹಿನ್ನೆಲೆ ಅವರನ್ನ ಮಂಗಳೂರಿಗೆ ತಂದು ಬಿಡಲಾಗಿತ್ತು. ಅಲ್ಲಿ ಚುನಾವಣೆ ಹಿನ್ನೆಲೆ ತಪಾಸಣೆ ಕಾರ್ಯ ಚುರುಕಾಗಿದ್ದ ಹಿನ್ನೆಲೆ ಇವರು ಮಂಗಳೂರಿಗೆ ಆಗಮಿಸಿದ್ದಾರೆ. ಇನ್ನು ಮಂಗಳೂರಿಗೆ ಬಂದು ಎರಡು ಲಾಡ್ಜ್ ಮತ್ತು ಎರಡು