Home Archive by category ಕ್ರೈಮ್

ಬಂಟ್ವಾಳ: ವ್ಯಕ್ತಿಯೋರ್ವರ ಚಿನ್ನದ ಸರ, ಹಣ ಕಸಿದು, ಹಲ್ಲೆ ನಡೆಸಿ, ಜೀವ ಬೆದರಿಕೆ

ವ್ಯಕ್ತಿಯೋರ್ವರು ತನ್ನ ಮೋಟಾರ್ ಸೈಕಲ್ ನಲ್ಲಿ ಕಛೇರಿಗೆ ಹೋಗುತ್ತಿರುವಾಗ, ಕಾರಿನಲ್ಲಿ ಬಂದ ಆರೋಪಿಗಳು ವ್ಯಕ್ತಿಯ ಕುತ್ತಿಗೆಯಲ್ಲಿದ್ದ 5 ಪವನ್ ಚಿನ್ನದ ಸರ, ಪರ್ಸ್ ನಲ್ಲಿದ್ದ ಹಣವನ್ನು ಕಸಿದುಕೊಂಡು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಘಟನೆ ಬಂಟ್ವಾಳ ತಾಲೂಕಿನ ಮಾಣಿ ಜಂಕ್ಷನ್‌ನಲ್ಲಿ ನಡೆದಿದೆ. ಮಾಣಿ ಗ್ರಾಮ ಬಂಟ್ವಾಳ ನಿವಾಸಿ ಸ್ಟೀವನ್

ಪಟಾಕಿ ಟುಸ್ ಮಾಡುವ ಹೊತ್ತಲ್ಲಿ

ದಕ್ಷಿಣ ಕನ್ನಡ ಜಿಲ್ಲಾಡಳಿತವು ಜಿಲ್ಲೆಯ ಎಲ್ಲ ಸುಡುಮದ್ದು ತಯಾರಿಕಾ ಘಟಕಗಳನ್ನು ಮುಂದಿನ ಆದೇಶದವರೆಗೆ ಅಮಾನತಿನಲ್ಲಿ ಇಟ್ಟಿದೆ. ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಕುಡ್ತ್ಯಾರುನಲ್ಲಿ ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಸಾವು ನೋವು ಸಂಭವಿಸಿರುವುದು ಇದಕ್ಕೆ ಕಾರಣ. 2008ರ ಸ್ಫೋಟಕ ಕಾಯ್ದೆಯ ನಿಯಮಾವಳಿ ಪ್ರಕಾರ ಈ ತಾತ್ಕಾಲಿಕ ಸುಡುಮದ್ದು ತಯಾರಿಕೆ ನಿಲುಗಡೆಯ ಆದೇಶ ನೀಡಲಾಗಿದೆ. ಈಗ ಉತ್ಸವಗಳ ಕಾಲ. ಉತ್ಸವಗಳಲ್ಲಿ ಮುಸ್ಲಿಮರು ತಯಾರಿಸುವ ದುಡುಮ್

ಉಡುಪಿ: ನಟೋರಿಯಸ್ ಬನಿಯನ್ ಗ್ಯಾಂಗ್!: ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರಿಂದ ತನಿಖೆ

ಇತ್ತೀಚೆಗೆ ಉಡುಪಿಯ ಸಂತಕಟ್ಟೆ ಬಳಿ ನಡೆದ ದರೋಡೆ ಪ್ರಕರಣದ ತನಿಖೆ  ಕೈಗೆತ್ತಿಕೊಂಡ ಉಡುಪಿ ಪೊಲೀಸರಿಗೆ ಶಾಕ್ ಕಾದಿತ್ತು. ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯ ಪರಿಶೀಲಿಸಿದಾಗ ಅದರಲ್ಲಿ ಕಂಡ ದೃಶ್ಯಗಳನ್ನು ಕಂಡು ಪೊಲೀಸರು  ಬೆಚ್ಚಿ ಬಿದ್ದಿದ್ದರು. ದಿಲ್ಲಿ ಕ್ರೈಮ್-2 ವೆಬ್ ಸೀರೀಸ್‌ನ ಕಚ್ಚಾ ಬನಿಯನ್ ಗ್ಯಾಂಗ್ ಮಾದರಿಯಲ್ಲೇ.. ಬರೀ ಚೆಡ್ಡಿ ಧರಿಸಿ, ಮೈಗೆ ಎಣ್ಣೆ ಹಚ್ಚಿಕೊಂಡು, ಸೊಂಟದಲ್ಲೊಂದು ಚಪ್ಪಲಿ ಕಟ್ಟಿಕೊಂಡು ಈ ಗ್ಯಾಂಗ್   ದರೋಡೆ ನಡೆಸುತ್ತೆ.  ಬಳಿಕ

ಉಳ್ಳಾಲ : ಚೂರಿ ಇರಿದು ಯುವಕನ ಹತ್ಯೆ

ಉಳ್ಳಾಲ: ಯುವಕನೋರ್ವನನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಸಾರಸ್ವತಕಾಲನಿ ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಸಾರಸ್ವತಕಾಲನಿ ನಿವಾಸಿ ವರುಣ್ (28) ಹತ್ಯೆಯಾದವರು. ಸ್ಥಳೀಯ ಸೂರಜ್ ಎಂಬಾತ ಕೃತ್ಯ ಎಸಗಿರುವುದಾಗಿ ಪೆÇಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಕೊಲ್ಯ ಜಾಯ್ಲಾಂಡ್ ಶಾಲೆ ಸಮೀಪ ತಡರಾತ್ರಿ ವೇಳೆ ಸೂರಜ್ ಹಾಗೂ ಇನ್ನಿಬ್ಬರು ಮದ್ಯಪಾನ ನಡೆಸುತ್ತಿರುವುದನ್ನು ವರುಣ್ ಪ್ರಶ್ನಿಸಿದ್ದರು. ಇದರಿಂದ ಐದು

ಉಳ್ಳಾಲ: ತಲಪಾಡಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಸಾರಾಯಿ ದಂಧೆ: ಮೂವರ ವಶಕ್ಕೆ

ಗಡಿಭಾಗವಾದ ತಲಪಾಡಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಅಕ್ರಮ ಸಾರಾಯಿ ದಂಧೆ ಜಾಲವೊಂದನ್ನು ಮಂಗಳವಾರ ತಡರಾತ್ರಿ ಪತ್ತೆಹಚ್ಚಿರುವ ಅಬಕಾರಿ ಪೊಲೀಸ್ರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ಸಂದರ್ಭ ತಲಪಾಡಿ ಮಸೀದಿ ಬಳಿಯ ನಿವಾಸಿ ಸತೀಶ್ ತಲಪಾಡಿ, ಕುಂಜತ್ತೂರು ನಿವಾಸಿಗಳಾದ ನೌಷಾದ್ ಹಾಗೂ ಅನ್ಸೀಫ್ ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಓರ್ವ ಪರಾರಿಯಾಗಿದ್ದಾನೆ ಎಂದು ಅಬಕಾರಿ ಪೊಲೀಸ್ರು ತಿಳಿಸಿದ್ದಾರೆ. ದಾಳಿ ವೇಳೆ ಸತೀಶ್ ತಲಪಾಡಿ ಮನೆಯಿಂದ ಲೀಟರ್ ಗಟ್ಟಲೆ

ಕಾಪು: ಸಮಾಜ ಸೇವಕ ಲೀಲಾಧರ್ ಶೆಟ್ಟಿ ದಂಪತಿ ಆತ್ಮಹತ್ಯೆ

ರಂಗ ಕಲಾವಿದ, ಸಮಾಜ ಸೇವಕ ಕೆ.ಲೀಲಾಧರ ಶೆಟ್ಟಿ (68) ಹಾಗೂ ವಸುಂಧರಾ ಶೆಟ್ಟಿ (58) ದಂಪತಿ ಮಂಗಳವಾರ ತಡರಾತ್ರಿ ಮನೆಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್ ಬರೆದಿಟ್ಟಿದ್ದು ಪೆÇಲೀಸರು ತನಿಖೆ ನಡೆಸುತ್ತಿದ್ದಾರೆ. ಲೀಲಾಧರ ಶೆಟ್ಟಿ ಕಲೆ, ಸಂಸ್ಕೃತಿ, ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದವರು. ಸಮಾಜಮುಖಿ ಕಾರ್ಯಗಳಿಂದ ಕಾಪು

ಓಡುವ ರೈಲಿನಲ್ಲಿ ನಡೆದ ಅತ್ಯಾಚಾರ : ಆರೋಪಿ ಸೆರೆ

ಮಧ್ಯ ಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಓಡುತ್ತಿರುವ ರೈಲಿನಲ್ಲಿ 30ರ ಮಹಿಳೆಯ ಅತ್ಯಾಚಾರ ನಡೆದಿದ್ದು, ಆರೋಪಿಯನ್ನು ಸಿಆರ್‍ಪಿ ಪಡೆಯವರು ಬಂಧಿಸಿ ಸಾತ್ನಾ ಪೆÇೀಲೀಸರಿಗೆ ಒಪ್ಪಿಸಿದರು. ಬಂಧಿತ ಆರೋಪಿ ಉತ್ತರ ಪ್ರದೇಶ ಮೂಲದ ಸದ್ಯ ಕಟ್ನಿ ನಿವಾಸಿ ಆಗಿರುವ 23ರ ಪಂಕಜ್ ಕುಶ್ವಾಹ. ಮೂತ್ರಾಲಯದ ಬಳಿ ಈ ಅತ್ಯಾಚಾರ ನಡೆದಿದೆ. ಸಾತ್ನಾದಲ್ಲಿ ರೈಲು ನಿಲ್ಲುತ್ತಲೇ ಮಹಿಳೆ ಕಂಡ ಸಿಆರ್‍ಪಿ ಪೇದೆಗಳನ್ನು ಕೂಗಿ ಕರೆದು ಆರೋಪಿಯನ್ನು ತೋರಿಸಿದ್ದಾಳೆ. ಓಡತೊಡಗಿದ

ಶಂಕರನಾರಾಯಣ ಹೊಕ್ಕ ಮೂರು ಜಿಲ್ಲೆಯ ಕಳ್ಳರು

ಮೂರು ಜಿಲ್ಲೆಗಳ ಮೂವರು ಕಳ್ಳರು ಸೇರಿ ಕುಂದಾಪುರ ತಾಲೂಕಿನ ಶಂಕರನಾರಾಯಣದ ಗೋಳಿಕಟ್ಟೆಯಲ್ಲಿನ ಬಿಎಸ್ಎನ್ಎಲ್ ಟವರ್ ಹೊಕ್ಕು ಬ್ಯಾಟರಿ ಬಾಕ್ಸ್ ಕದ್ದಿದ್ದರು. ಮೂವರನ್ನೂ ಬಂಧಿಸಿದ ಪೋಲೀಸರು ಕುಂದಾಪುರ ನ್ಯಾಯಾಲಯದಲ್ಲಿ ನಿಲ್ಲಿಸಿ, ಜೈಲಿಗೆ ಕಳುಹಿಸಿದ್ದಾರೆ. ಉಡುಪಿ ಉದ್ಯಾವರ ಪಿತ್ರೋಡಿಯ 45ರ ಬಾಲಕೃಷ್ಣ, ಬಂಟ್ವಾಳ ಫರಂಗಿಪೇಟೆಯ 38ರ ಬದ್ರುದ್ದೀನ್, ಹೊನ್ನಾವರ ಕರ್ಕಿ ಮೂಲದ ಉಡುಪಿ ಲಕ್ಷ್ಮಿನಗರ ನಿವಾಸಿ 36ರ ಉಸ್ಮಾನ್ ಬಂಧಿತರು. ಅವರಿಂದ ಬ್ಯಾಟರಿ ಸಾಗಿಸಲು ಬಳಸಿದ

ಕುಣಿಗಲ್: ಬೋರ್ ವೆಲ್ ಲಾರಿ-ಕಾರು ನಡುವೆ ಅಪಘಾತ: ದ.ಕ. ಜಿಲ್ಲೆಯ ಇಬ್ಬರು ಮೃತ್ಯು

ಬೋರ್ ವೆಲ್ ಲಾರಿ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜ್ಯ ಹೆದ್ದಾರಿ ೩೩ ಕುಣಿಗಲ್ ತಾಲೂಕಿನ ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ ಇಂದು ಮುಂಜಾನೆ ಸಂಭವಿಸಿದೆ. ಮೃತರನ್ನು ಬಜ್ಪೆ ಮೂಲದ ಕಿಶೋರ್ ಶೆಟ್ಟಿ(35) ಮತ್ತು ಫಿಲೀಪ್ ಮೇರಿ ಲೋಬೋ (34) ಎಂದು ಗುರುತಿಸಲಾಗಿದೆ.ನಿತೀಶ್ ಭಡಾರಿ(35), ಪ್ರೀತಿ ಲೋಬೋ(29) ಮತ್ತು ಹರೀಶ್(62)

ಗಂಗೊಳ್ಳಿ : ಮೀನುಗಾರಿಕ ಬೋಟಿಗೆ ಬೆಂಕಿ : ಅಪಾರ ನಷ್ಟ

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಗಂಗೊಳ್ಳಿಯ ಮ್ಯಾಗನೀಸ್ ರಸ್ತೆಯಲ್ಲಿ ಮೀನುಗಾರಿಕ ಬೋಟಿಗೆ ಬೆಂಕಿ ತಗುಲಿದ ಘಟನೆ ನಡೆದಿದೆ. ದುರ್ಘಟನೆಯು ಪಟಾಕಿಯ ಕಿಡಿಯಿಂದ ಸಂಭವಿಸಲಾಗಿದೆ ಎಂದು ಶಂಕಿಸಲಾಗಿದೆ. ಇದರಿಂದಾಗಿ ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದೆ. ಯಾವುದೇ ಸಾವು-ನೋವು ಉಂಟಾಗಿಲ್ಲ. ಈ ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.