ಬೇರೆಲ್ಲೂ ಕಾಣದ ವಿಶಿಷ್ಠ ಉತ್ಸವ : ಇಳಿದ ಕೊಪ್ಪರಿಗೆ: ಮಹಾಸಂಪ್ರೋಕ್ಷಣೆ : ಯಶಸ್ವಿಯನೀರಾಟ : ಚಿಣ್ಣರ ಸಂಭ್ರಮ ಸುಬ್ರಹ್ಮಣ್ಯ: ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದ ವಾರ್ಷಿಕ ಜಾತ್ರಾ ಮಹೋತ್ಸವವವು ಸೋಮವಾರ ಕೊಪ್ಪರಿಗೆ ಇಳಿಯುವುದರೊಂದಿಗೆ ಸಂಪನ್ನಗೊoಡಿತು. ಮುಂಜಾನೆ ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತರಾಮ ಎಡಪಡಿತ್ತಾಯರು ವೈದಿಕ ವಿದಾನ
ಚಿತ್ರಾಪುರ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಚಿತ್ರಾಪುರ ಇಲ್ಲಿನ ಜೀರ್ಣೋದ್ಧಾರಕ್ಕೆ ಸರ್ವ ಭಕ್ತರು ಕೈ ಜೋಡಿಸಿ ದೇವಸ್ಥಾನವನ್ನು ಐತಿಹಾಸಿಕವಾಗಿ ಬೆಳಗಿಸಿ ಶ್ರೀ ದೇವಿಯ ಆಶೀರ್ವಾದ ಪಡೆಯುವಂತಾಗಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಬ್ರಹ್ಮಕಲಶಾಧಿ ದಾರ್ಮಿಕ ಸೇವಾ ಕಾರ್ಯಗಳು ಮಾ.5 ರಿಂದ 13 ರವರೆಗೆ ಜರಗಲಿದ್ದು ,13 ರಂದು ಬ್ರಹ್ಮಕಲಶ ಮತ್ತು 14 ರಿಂದ ಜಾತ್ರಾ ಮಹೋತ್ಸವ
ಕಡಬ: ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.21ರಿಂದ ನಡೆಯಲಿರುವ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅಧ್ಯಕ್ಷತೆ ವಹಿಸಿದ್ದರು.ಬ್ರಹ್ಮರಥೋತ್ಸವ ಬಗ್ಗೆ ಚರ್ಚೆ ನಡೆಯಿತು. ಬ್ರಹ್ಮರಥೋತ್ಸವ ಸೇವೆಯಲ್ಲಿ ಭಕ್ತರಿಗೆ ಗರಿಷ್ಠ 100 ಸೇವಾ ರಶೀದಿಗಳನ್ನು ನೀಡಲು ಮತ್ತು ಸೇವಾರ್ಥಿಗಳಿಗೆ
ಮಂಗಳೂರು: ಕಟೀಲು ಯಕ್ಷಗಾನ ಮೇಳಗಳ ಪ್ರದರ್ಶನ ವನ್ನು ಕಾಲಮಿತಿಗೊಳಪಡಿಸುವ ನಿರ್ಧಾರವನ್ನು ಹಿಂಪಡೆಯಬೇಕು, ಯಕ್ಷಗಾನ ಪರಂಪರೆಯಂತೆ ರಾತ್ರಿ ಯಿಂದ ಬೆಳಗ್ಗಿನವರೆಗೆ ಯಕ್ಷಗಾನ ಪ್ರದರ್ಶನಗೊಳ್ಳಬೇಕು ಎಂದು ಆಗ್ರಹಿಸಿ ಶ್ರೀ ಕಟೀಲು ಮೇಳದ ಯಕ್ಷಗಾನ ಸೇವಾ ಸಮಿತಿಗಳು ಮತ್ತು ಖಾಯಂ ಸೇವಾದಾರರ ಒಕ್ಕೂಟವಾದ ಶ್ರೀ ಕಟೀಲು ಯಕ್ಷಸೇವಾ ಸಮನ್ವಯ ಸಮಿತಿ ದಕ್ಷಿಣ ಕನ್ನಡ ಮತ್ತು ಉಡುಪಿ ವತಿಯಿಂದ ನ. 6ರಂದು ಬೆಳಗ್ಗೆ 8.30ರಿಂದ ಬಜಪೆ ಶ್ರೀ ಶಾರದಾ ಶಕ್ತಿ ಮಂಟಪದಿಂದ ಶ್ರೀ ಕ್ಷೇತ್ರ
ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷೆ, ದೈವಾರಾಧನೆಯ ಕುರಿತು ಅಶ್ಲೀಲವಾಗಿ ಪೋಸ್ಟ್ ಮಾಡುವ ವ್ಯಕ್ತಿಗಳ ವಿರುದ್ಧ ತುಳುನಾಡು ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ ಕಾನೂನು ಸಮರಕ್ಕೆ ಮುಂದಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ತುಳು ಭಾಷಿಗರನ್ನು, ದೈವಾರಾಧನೆ, ತುಳು ಕಲಾವಿದರ ಕುರಿತು ಅಶ್ಲೀಲ ಪದ ಬಳಕೆ ಮಾಡಿರುವ ಕನ್ನಡಿಗ ಶಿವರಾಜ್ ಎಂಬವರ ಮೇಲೆ ಕಾನೂನು ಕ್ರಮ ಜರಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ಮನವಿ ಸಲ್ಲಿಸಿರುವ ಸಂಘಟನೆಯ ಪ್ರಮುಖರಿಗೆ ಸಕಾರಾತ್ಮಕವಾಗಿ
ಮಂಗಳೂರು ತಾಲೂಕಿನ ಅದ್ಯಪಾಡಿ ಬೈಲು ಮಾಗಣೆಯ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಬೀಬಿಲಚ್ಚಿಲ್ ಇಲ್ಲಿ ನಡೆಯಲಿರುವ ಬ್ರಹ್ಮಲಕಶೋತ್ಸವ ಹಾಗೂ ಅಷ್ಟಪವಿತ್ರ ನಾಗಬ್ರಹ್ಮಮಂಡಲೋತ್ಸವ ಪ್ರಯುಕ್ತ ಅಕ್ಟೋಬರ್ 17ರಿಂದ 2023 ಜನವರಿ 31ರ ವರೆಗೆ 108 ದಿನದ ಸಂಧ್ಯಾ ಭಜನಾ ಸಂಕೀರ್ತನೆ ನಡೆಯಲಿದೆ. ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ 2023ರ ಫೆಬ್ರವರಿ 1ರಿಂದ ಸೂರ್ಯೋದಯದಿಂದ ಫೆಬ್ರವರಿ 2, 2023ರ ಸೂರ್ಯೋದಯದವರೆಗೆ ಏಕಹಾ ಭಜನಾ ಮಂಗಳೋತ್ಸವ ನಡೆಯಲಿದೆ. ನಿನ್ನೆಯಿಂದ
ಕಾಸರಗೋಡು ಜಿಲ್ಲೆಯ ಕುಂಬಳೆಯ ಅನಂತಪುರ ಶ್ರೀ ಪದ್ಮನಾಭ ದೇವಸ್ಥಾನದ ಕೆರೆಯಲ್ಲಿ ಬಹುಕಾಲದಿಂದ ಇದ್ದ ದೇವರ ಮೊಸಳೆ ಎಂದು ಪ್ರತೀತಿ ಪಡೆದಿದ್ದ ಬಬಿಯಾ ಎಂಬ ಹೆಸರಿನ ಮೊಸಳೆ ಮೃತಪಟ್ಟಿದೆ. ದೇವಸ್ಥಾನದ ನಿತ್ಯದ ಮಧ್ಯಾಹ್ನದ ಪೂಜೆಯ ಬಳಿಕ ಅನ್ನ ನೈವೇದ್ಯವನ್ನು ಮೊಸಳೆಗೆ ಬಡಿಸಲಾಗುತ್ತಿತ್ತು. ದೇವಸ್ಥಾನದ ನೈವೇದ್ಯವನ್ನು ತಿಂದು ಬದುಕುತ್ತಿದ್ದ ಈ ಬಬಿಯಾ ಹೆಸರಿನ ಮೊಸಳೆ ಯಾವತ್ತಿಗೂ ಜನರಿಗೆ ತೊಂದರೆ ಮಾಡಿದ್ದೆ ಇಲ್ಲ. ಕೆಲವೊಮ್ಮೆ ದೇವಸ್ಥಾನದ ಕೆರೆಯಿಂದ ಸಮೀಪದ
ಬೈಂದೂರು ತಾಲೂಕಿನ ಸುಪ್ರಸಿದ್ಧ ದೇವಸ್ಥಾನ ಶ್ರೀ ಭದ್ರಕಾಳಿ ದೇವಸ್ಥಾನ ಚಣಕ್ಕಳಿ ಬಡಾಕೆರೆ ಇಂದು ವಿಜಯ ದಶಮಿ ಪ್ರಯುಕ್ತ ಮಂಜುನಾಥ್ ಅಡಿಗ ಬಡಾಕೆರೆ ಇವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನದ ಮೂಲಕ ಇಂದು ದೇವಿಯ ಸನ್ನಿಧಾನದಲ್ಲಿ ದುರ್ಗಾ ಹೋಮ ವಿಶೇಷ ಮಹಾಪೂಜೆ ಅನ್ನದಾನ ಸೇವೆ ಸಂಪನ್ನಗೊಂಡಿದೆ. ಸಂಜೆ 6:00 ರಿಂದ 8.30 ರವರೆಗೆ ಶ್ರೀ ರಾಮ ಭಜನಾ ಮಂಡಳಿ ಬಡಾಕೆರೆ ಇವರಿಂದ ಭಜನಾ ಕಾರ್ಯಕ್ರಮವು ಅದ್ದೂರಿನಿಂದ ನಡೆದಿದೆ. ಈ ಸಂದರ್ಭದಲ್ಲಿ ಸಂತೋಷ್ ಮೊಗವೀರ
ದಸರಾ ಸಂಭ್ರಮಾಚರಣೆಯ ಅಂಗವಾಗಿ ಆಸಕ್ತಿ ಮಂಗಳೂರು, ಕಲಾಸಕ್ತರ ಬಳಗ ಹಾಗೂ ಚುಟುಕು ಸಾಹಿತ್ಯ ಪರಿಷತ್ ಅವರು ಆಯೋಜನೆ ಮಾಡಿದಂತಹ ಕವಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ನಗರದ ಶ್ರೀ ಮಂಗಳಾದೇವಿ ದೇವಸ್ಥಾನದ ಕಲಾ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ರಮಾನಾಥ ಹೆಗ್ಡೆ ಉದ್ಘಾಟಿಸಿದರು. ಚುಟುಕು ಸಾಹಿತ್ಯ ಪರಿಷತ್ನ ಜಿಲ್ಲಾಧ್ಯಕ್ಷರಾದ ಹರೀಶ್ ಸುಲಾಯ ಒಡ್ಡಂಬೆಟ್ಟು ಅಧ್ಯಕ್ಷತೆ ವಹಿಸಿದ್ದರು.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನವು ನವರಾತ್ರಿ ಉತ್ಸವಕ್ಕೆ ಪ್ರಸಿದ್ಧಿ ಪಡೆದಿದೆ. ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಕಟೀಲು ದೇವಳಕ್ಕೆ ಲಕ್ಷಾಂತರ ಮಂದಿ ಭಕ್ತರು ಬೇಟಿ ನೀಡುತ್ತಿದ್ದಾರೆ. ಬೇರೆ ದೇವಸ್ಥಾನಗಳಲ್ಲಿನ ನವರಾತ್ರಿ ಉತ್ಸವಕ್ಕಿಂತ ಇಲ್ಲಿನ ಆಚರಣೆ ಭಿನ್ನವಾಗಿರುತ್ತದೆ. ನವರಾತ್ರಿ ಉತ್ಸವ ಸಂದರ್ಭದಲ್ಲಿ ಹುಲಿ ವೇಷ ಮೆರವಣಿಗೆ ಬರುವುದು ಇಲ್ಲಿನ ವಿಶೇಷ. ನವರಾತ್ರಿಯ ಲಲಿತಾ ಪಂಚಮಿಯ ದಿನ ಕಟೀಲು ಗ್ರಾಮ, ಕೊಡೆತ್ತೂರು, ಮೂಲ




























