Home Archive by category ಮನರಂಜನೆ (Page 8)

Mangaluru – 3D Tiger Face Mode ಹುಲಿವೇಷಕ್ಕೆ ಹೈಲೆಟ್ ಆಯ್ತು 3ಡಿ ಟೈಗರ್ ಫೇಸ್ ಮೌಲ್ಡ್

ದಸರಾ ಬಂತೆಂದರೆ ಎಲ್ಲೆಡೆ ಸಂಭ್ರಮದ ವಾತಾವರಣ…. ಅದರಲ್ಲೂ ಕರಾವಳಿಯಲ್ಲಿ ಹುಲಿವೇಷದ್ದೇ ಕಾರುಬಾರು, ಹುಲಿವೇಷಕ್ಕೆ ಹೈಲೆಟ್ ಆಗಿರುವುದು ಹುಲಿಮುಖದ ಆಕಾರ….ಅದಕ್ಕಾಗಿಯೇ ಮಂಗಳೂರಿನ ಯುವಕನೋರ್ವ 3ಡಿ ಟೈಗರ್ ಫೇಸ್ ಮೌಲ್ಡ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹಾಗಾದ್ರೆ ಆತ ಯಾರು ಎನ್ನುವ ಕುತೂಹಲ ನಿಮ್ಮಲ್ಲಿದ್ರೆ. ಈ ಸ್ಟೋರಿ ನೋಡಿ.. ಇವ್ರ ಹೆಸರು ಅನಿಲ್

ಸವಿರುಚಿ – ಗೆಣಸಲೆ – ಕಾಯಿ ಗೆಣಸಲೆ ವೈವಿಧ್ಯ

ಸಾಲು ಸಾಲು ಚೌತಿ ನವರಾತ್ರಿ ದೀಪಾವಳಿ ಹಬ್ಬ ಹರಿದಿನ ಬಂದಾಗಲೇ ಸಿಹಿತಿಂಡಿಗಳ ಘಮ ಘಮ ಹಳ್ಳಿ ರೆಸಿಪಿಗಳು ಹಲಸಿನ ಹಣ್ಣಾಗುವಾಗ ಗೆಣಸಲೆ ಸವಿರುಚಿ ಬಿಟ್ಟಿರಲಾಗದೆ ಇಲ್ಲದಾಗ ಮಾಡುವ ಕಾಯಿ (ತೆಂಗಿನ) ಗೆಣಸಲೆಗೆ ರುಚಿ ತಿಂದವನಿಗೆ ಗೊತ್ತು ಇದು ಸಿಕ್ಕಾಪಟ್ಟೆ ತುಂಬಾ ಟೇಸ್ಟಿ ಎಂದವರು ಹೇಳುತ್ತಾರೆ ಬಾಳೆ ಎಲೆಯಲ್ಲಿ ಮಾಡುವ ಈ ತಿಂಡಿಗೆ ನಮ್ಮ ಈಗಿನ ಪಿಜ್ಜಾ – ಬರ್ಗರ್ ಏನು ಅಲ್ಲ. ಬಾಳೆಲೆಯ ಊಟದಲ್ಲಿರುವ ಮಜಾನೇ ಬೇರೆ ಮಾಡುವ ಹಾಗೆ ಬಾಳೆಎಲೆಯಲ್ಲಿ ಮಾಡುವ ಕಡುಬು,

ಮಂಗಳೂರು: ರಾಜ್ಯಾದ್ಯಂತ “ಕುದ್ರು” ಸಿನಿಮಾ ಬಿಡುಗಡೆ

ಮೋಕ್ಷ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ಭಾಸ್ಕರ್ ನಾಯ್ಕ್ ರಚಿಸಿ ನಿರ್ದೇಶಿಸಿ, ನಿರ್ಮಿಸಿರುವ, ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಸಿನಿಮಾ ಕರ್ನಾಟಕದಾದ್ಯಂತ ಬಿಡುಗಡೆಗೊಂಡಿತು. ನಗರದ ಭಾರತ್ ಮಾಲ್‍ನ ಬಿಗ್ ಸಿನಿಮಾಸ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ತೆಲಿಕೆದ ಬೊಳ್ಳಿ ನಟ ಡಾ. ದೇವದಾಸ್ ಕಾಪಿಕಾಡ್ ಅವರು ದೀಪ ಬೆಳಗಿಸುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ರು. ಈ ವೇಳೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಈ ಸಿನಿಮಾ

ಬೆಳ್ತಂಗಡಿ : ಒಕ್ಕಣ್ಣನ ವರ್ಣ ಉಳ್ಳಿಂಜದಲ್ಲಿ ಒಂದೇ ಅಡಿಕೆಯಲ್ಲಿ ಚತುರ್ಥ (ನಾಲ್ಕು) ಅಡಿಕೆ ಗಿಡ (ಪೂಗಸಿರಿ)

ಕರಾವಳಿಯ ಮುಖ್ಯ ಬೆಳೆ ಅಡಿಕೆ ಅದರಲ್ಲೂ ಒಕ್ಕಣ್ಣ ಇದನ್ನು ನಂಬಬಾರದು ಎಂದು ನಮ್ಮ ಹಿರಿಯರ ಮಾತು ಅಕ್ಷರಶಃ ಸತ್ಯ. ಇದರಲ್ಲಿ ಏರಿಳಿತಗಳು ಸಾಮಾನ್ಯ ಹಾಗೆ ಪ್ರಕೃತಿ ವೈಪರೀತ್ಯಗಳು ಇನ್ನೊಂದೆಡೆ ಮಹಾಮಾರಿ ಕೊಳೆರೋಗ ಹಳದಿ ರೋಗ ಎಲೆ ಚುಕ್ಕೆ ರೋಗಗಳು ಅಲ್ಲದೆ ಅಡಿಕೆಯಲ್ಲಿರುವ ಔಷಧೀಯ ಗುಣಗಳು ಹಾಗೆ ಕೃಷಿಗೆ ಕಾಡುಪ್ರಾಣಿಗಳ ಹಾವಳಿ ಆನೆ ,ಕಾಡೆಮ್ಮೆ ,ಹಂದಿ, ಮಂಗ ಮುಂತಾದವುಗಳು ಕೃಷಿಕರನ್ನು ಬೆಚ್ಚಿ ಬೀಳಿಸುತ್ತದೆ ಪ್ರಯೋಗಗಳು ಬಹಳಷ್ಟು ನಡೆದರು ಪ್ರಕೃತಿಯ ಮುಂದೆ ನಾವು

ಯುಎಇ: ಸಪ್ಟೆಂಬರ್ 24 ರಂದು ಪುಳಿಮುಂಚಿ ತುಳು ಚಿತ್ರದ ಪ್ರೀಮಿಯರ್ ಪ್ರದರ್ಶನದ ಟಿಕೆಟ್ ಬಿಡುಗಡೆ

ಬಹು ನಿರೀಕ್ಷೆಯ ಪುಳಿಮುಂಚಿ ತುಳು ಚಿತ್ರದ ಪ್ರೀಮಿಯರ್ ಪ್ರದರ್ಶನದ ಟಿಕೆಟ್ ಬಿಡುಗಡೆ ಕಾರ್ಯಕ್ರಮವು ಯುಎಇಯ ಅಜ್ಮಾನ್ ನ ಇಂಡಿಯನ್ ಅಸೋಸಿಯೇಷನ್ ಸಭಾಂಗಣದಲ್ಲಿ ಸಪ್ಟೆಂಬರ್ 24 ರಂದು ಜರಗಲಿದೆ. ಮಾರ್ಗದೀಪ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಯುಎಇಯ ವತಿಯಿಂದ ನಡೆಯುವ ಒಂಬತ್ತನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ವೇದಿಕೆಯಲ್ಲಿ ಮಧ್ಯಾಹ್ನ 12.30 ಕ್ಕೆ ಟಿಕೆಟ್ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಫೆಮಿನಾ ಮಿಸ್ ಇಂಡಿಯಾ ಗೋವಾ 2019 ಶಾಸ್ತ್ರ ಶೆಟ್ಟಿ ಇವರು

ಮಂಗಳೂರು: ಚಂದನ ವಾಹಿನಿಯಲ್ಲಿ ಅಂಬರ್ ಮರ್ಲೆರ್ ತುಳು ಸಾಮಾಜಿಕ ಹಾಸ್ಯ ಧಾರಾವಾಹಿ ಪ್ರಸಾರ

ಅರ್ನ ಕ್ರಿಯೇಷನ್ಸ್ ಸಂಸ್ಥೆಯ ‘ಅಂಬರ ಮರ್ಲೆರ್’ ಎಂಬ ತುಳು ಸಾಮಾಜಿಕ ಹಾಸ್ಯ ಧಾರಾವಾಹಿಯು ಚಂದನ ವಾಹಿನಿಯಲ್ಲಿ ಸೆ.24ರಿಂದ ಪ್ರತಿ ಭಾನುವಾರ ಪ್ರಸಾರವಾಗಲಿದೆ ಎಂದು ನಿರ್ಮಾಪಕ ಹಾಗೂ ಪ್ರಧಾನ ನಿರ್ದೇಶಕ ಸುಂದರ್ ರೈ ಮಂದಾರ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಪ್ರತಿ ಭಾನುವಾರ ಮಧ್ಯಾಹ್ನ 1.30ರಿಂದ 2 ಗಂಟೆಯವರೆಗೆ ಧಾರಾವಾಹಿ ಪ್ರಸಾರವಾಗಲಿದೆ. ನಟರಾದ ನವೀನ್ ಡಿ. ಪಡೀಲ್, ಅರವಿಂದ್ ಬೋಳಾರ್, ದೀಪಕ್ ರೈ ಪಾಣಾಜೆ, ಪುಷ್ಪರಾಜ್

ಮಂಗಳೂರು: ಸ್ಟಾರ್ ಸುವರ್ಣದಲ್ಲಿ “ಸರ್ಕಸ್” ತುಳು ಚಿತ್ರದ ಪ್ರಸಾರ

ತುಳು ಚಿತ್ರರಂಗದಲ್ಲಿ ಹಲವಾರು ದಾಖಲೆಗಳನ್ನು ಬರೆದ ಸರ್ಕಸ್ ಸಿನಿಮಾ ಸೆಪ್ಟಂಬರ್ 10ರಂದು ಸಂಜೆ 6 ಗಂಟೆಗೆ ಸ್ಟಾರ್ ಸುವರ್ಣದಲ್ಲಿ ಪ್ರಸಾರಗೊಳ್ಳಲಿದೆ. ಕೋಸ್ಟಲ್‌ವುಡ್‌ನಲ್ಲಿ ಸಿನಿ ಪ್ರೇಕ್ಷಕರನ್ನು ಮೋಡಿ ಮಾಡಿದ ಸಿನಿಮಾ ಎಂದರೆ ಅದು ಸರ್ಕಸ್ ಸಿನಿಮಾ. ಬಿಗ್‌ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಅಭಿನಯದ ತುಳು ಸಿನಿಮಾವಾಗಿದ್ದು, ಯಶಸ್ವಿಯನ್ನು ಕಂಡಿದೆ. ಇದೀಗ ಅದೇ ಸಿನಿಮಾ ಟೀವಿಯಲ್ಲೂ ಪ್ರಸಾರ ಆಗುತ್ತಿದೆ. ಈ ಚಿತ್ರದ ಹಕ್ಕನ್ನು ಸ್ಟಾರ್ ಸುವರ್ಣ ಚಾನೆಲ್

ಮಂಗಳೂರು: ಸೆ.15ರಂದು ಅಸ್ಮಿತಾಯ್ ಕೊಂಕಣಿ ಸಿನಿಮಾ ತೆರೆಗೆ

ಕೊಂಕಣಿಯ ಕಲೆ, ಸಾಹಿತ್ಯ, ಸಂಸ್ಕೃತಿಯ ಎಲ್ಲಾ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಮಾಡಿದ, ಗಿನ್ನೆಸ್ ದಾಖಲೆ ಬರೆದ ಪ್ರಮುಖ ಸಾಂಸ್ಕೃತಿಕ ಸಂಘಟನೆ ಮಾಂಡ್ ಸೊಭಾಣ್ ಬ್ಯಾನರ್ ಅಡಿಯಲ್ಲಿ ತಯಾರಾದ “ಅಸ್ಮಿತಾಯ್” ಚಲನಚಿತ್ರವು ಸೆಪ್ಟೆಂಬರ್ 15 ರಂದು ತೆರೆ ಕಾಣಲಿದೆ ಎಂದು ಚಿತ್ರ ಬರಹಗಾರ ಎರಿಕ್ ಒಝೆರಿಯೊ ತಿಳಿಸಿದಿದ್ದಾರೆ. ಎರಿಕ್ ಒಝೇರಿಯೊ ಬರೆದ ಮೂಲಕತೆಗೆ ಜೊಯೆಲ್ ಪಿರೇರಾ ಚಿತ್ರಕತೆ ಮತ್ತು ಸಂಭಾಷಣೆಯ, ಯುವ ನಿರ್ದೇಶಕ ವಿಲಾಸ್ ರತ್ನಾಕರ್ ಕ್ಷತ್ರಿಯ

ಉಡುಪಿ: ಹುಲಿ ಕುಣಿತ ಬೀಟ್‍ಗೆ ಹೆಜ್ಜೆ ಹಾಕಿದ ನಟ ರಕ್ಷಿತ್ ಶೆಟ್ಟಿ ಮತ್ತು ತಂಡ

ಉಡುಪಿಯ ಮಲ್ಪೆ ಸಮೀಪದ ಕೊಳ ಎಂಬಲ್ಲಿ ನಡೆದ ಹುಲಿ ವೇಷ ಸ್ಪರ್ಧೆಯಲ್ಲಿ ಸಪ್ತಸಾಗರದಾಚೆ ಎಲ್ಲೋ ಚಿತ್ರತಂಡದ ಕಲಾವಿದರು ಭಾಗವಹಿಸಿದ್ದರು. ನಟ ರಕ್ಷಿತ್ ಶೆಟ್ಟಿ ಮತ್ತು ತಂಡ ಭೇಟಿ ನೀಡಿ ಹುಲಿ ಕುಣಿತ ಬೀಟ್‍ಗೆ ಹೆಜ್ಜೆ ಹಾಕಿದರು. ರಕ್ಷಿತ್ ಶೆಟ್ಟಿಗೆ ಚಿತ್ರದ ಹೀರೋಯಿನ್ ರುಕ್ಮಿಣಿ ವಸಂತ್, ನಿರ್ದೇಶಕ ಹೇಮಂತ್ ಸಾಥ್ ನೀಡಿದರು.