Home Archive by category ರಾಜಕೀಯ (Page 2)

ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ ; ಭಾರತ ದೇಶದಲ್ಲಿ ನಿಷೇಧಿತ ಮಾದಕ ವಸ್ತುವಾದ MDMA ಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ದಿನಾಂಕ :01-09-2025 ರಂದು ಮಂಗಳೂರು ನಗರದ ಉಳ್ಳಾಲ್ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ ನಲ್ಲಿ ಭಾರತ ದೇಶದಲ್ಲಿ ನಿಷೇಧಿತ ಮಾದಕ ವಸ್ತುವಾದ MDMA ಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂಬುವರಿಂದ 15 ಗ್ರಾಂ MDMA, ಡಿಯೋ ಬೈಕ್, ಎರಡು ಮೊಬೈಲ್ ಫೋನ್, ಪೋರ್ಟಬಲ್

ರಾಷ್ಟ್ರೀಯ ಹೆದ್ದಾರಿ 66 ಕ್ಕೆ ಸಂಬಂಧಿಸಿದಂತೆ ಇಲಾಖಾಧಿಕಾರಿಗಳ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸಂಭಂದಿಸಿದಂತೆ ಜಿಲ್ಲಾಧಿಕಾರಿಗಳಾದ ಕೋರ್ಟ್ ಹಾಲ್ ಕಚೇರಿಯಲ್ಲಿ ಇಂದು ದಿನಾಂಕ 02-09-2025 ರಂದು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.ಸಭೆಯಲ್ಲಿ ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಮಂಜೂರಾಗಿದ್ದು ಶೀಘ್ರದಲ್ಲೇ ಕಾಮಗಾರಿ ಆರಂಭಿಸುಂತೆ ಜೊತೆಗೆ ಸಂಚಾರಕ್ಕೆ ಬದಲಿ ರಸ್ತೆ ಗುರುತಿಸುವಂತೆ ಮತ್ತು ಉಚ್ಚಿಲ ಹಾಗೂ ಪಡುಬಿದ್ರಿ

ಮೂಡುಬಿದಿರೆ:18 ಮಂದಿ ಸಾಧಕರಿಗೆ ಸಮಾಜಮಂದಿರ ಗೌರವ

ವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ 18 ಮಂದಿ ಸಾಧಕರನ್ನು ಸಮಾಜ ಮಂದಿರ ಪುರಸ್ಕಾರದೊಂದಿಗೆ ಗೌರವಿಸಲಾಗುವುದೆಂದು ಸಭಾದ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ತಿಳಿಸಿದ್ದಾರೆ.ಐದು ದಿನಗಳ ಉತ್ಸವದ ಅವಧಿಯಲ್ಲಿ ಹಂತ ಹಂತವಾಗಿ ಸಾಧಕರನ್ನು ಗೌರವಿಸಲಾಗುವುದು. ಸಮಾಜ ಮಂದಿರ ಗೌರವ 2025 ಕ್ಕೆ ಆಯ್ಕೆಯಾಗಿದ್ದಾರೆ. ವೇ.ಮೂ ಎಂ. ಹರೀಶ್ ಭಟ್ (ಧಾರ್ಮಿಕ), ಆಡ್ಲಿನ್ ಜೆ. ಜತನ್ನ (ಶಿಕ್ಷಣ), ಗೌರಾ ಗೋವರ್ಧನ್ (ಶಿಕ್ಷಣ, ಸಾಹಿತ್ಯ), ಹರ್ಷವರ್ಧನ್ ಪಡಿವಾಳ್ (ಆಹಾರ ಉದ್ಯಮ)

ಬೈಂದೂರು :  ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ದುರ್ಗಾಪರಮೇಶ್ವರಿ ದೇವಸ್ಥಾನ ಉಪ್ಪುಂದ ಇದರ 52ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಪ್ಪುಂದ ಅಧ್ಯಕ್ಷ ಯು ಸಂದೇಶ್ ಭಟ್ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಉಪ್ಪುಂದ – ಬಿಜೂರು ಗ್ರಾಮ ವ್ಯಾಪ್ತಿಯ ಎಸ್. ಎಸ್. ಎಲ್. ಸಿ ಹಾಗೂ ದ್ವಿತೀಯ ಪಿ.ಯು.ಸಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ದುರ್ಗಾಪರಮೇಶ್ವರಿ ದೇವಸ್ಥಾನ

ಮೂಡುಬಿದಿರೆ; ಉದ್ಯಮಿ ನಂದ ಕುಮಾರ್ ಕುಡ್ವರಿಗೆ ಸಮಾಜ ಮಂದಿರ ಪುರಸ್ಕಾರ- 2025

ಸಮಾಜ ಮಂದಿರ ಸಭಾ (ರಿ) ವತಿಯಿಂದ ಜರಗಲಿರುವ 78ನೇ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವದಲ್ಲಿ ಈ ಬಾರಿ ಉದ್ಯಮಿ, ಧಾರ್ಮಿಕ ನೇತಾರ ನವಮಿ ಸಮೂಹ ಸಂಸ್ಥೆಗಳ ನಂದ ಕುಮಾರ್ ಆರ್. ಕುಡ್ವ ಅವರಿಗೆ ಸಮಾಜ ಮಂದಿರ ಪುರಸ್ಕಾರ 2025 ನೀಡಿ ಗೌರವಿಸಲಾಗುವುದು ಎಂದು ಸಮಾಜ ಮಂದಿರ ಸಭಾದ ಅಧ್ಯಕ್ಷ , ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ತಿಳಿಸಿದ್ಧಾರೆ. ಸೆ 22ರಿಂದ 26ರವರೆಗೆ ಮೂಡುಬಿದಿರೆ ಸಮಾಜ ಮಂದಿರದಲ್ಲಿ ಪ್ರತೀ ದಿನ ಸಂಜೆ 7 ರಿಂದ ಸಾಹಿತ್ಯ […]

ಉಡುಪಿ : ನಗರ ಸಭೆಯಿಂದ ಬನ್ನಂಜೆ ವೃತ್ತದಲ್ಲಿ ಸುಂದರ ನಾರಾಯಣ ಗುರು ವೃತ್ತ ನಿರ್ಮಾಣಕ್ಕೆ ರಘುಪತಿ ಭಟ್ ಒತ್ತಾಯ

ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಉಡುಪಿ ಬನ್ನಂಜೆಯ ನಾರಾಯಣಗುರು ವೃತ್ತವನ್ನು ತೆರವುಗೊಳಿಸಿರುವುದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ನಾರಾಯಣ ಗುರು ಹೆಸರಿನ ವೃತ್ತವಿದ್ದ ಜಾಗದಲ್ಲಿ ಬ್ಯಾಂಕ್ ಆಫ್ ಬರೋಡ ನಾಮ ಫಲಕದ ವೃತ್ತ ರಚಿಸಿದ್ದು, ಇಲ್ಲಿದ್ದ ವೃತ್ತವನ್ನು ಪೊದೆಗಳಲ್ಲಿ ಬಿಸಾಡಿರುವುದು ಖಂಡನೀಯ. ಇದು ದಾರ್ಶನಿಕ ಮಹಾನ್ ಪುರುಷರಿಗೆ ಮಾಡಿದ ಮಹಾ ಅಪಮಾನವಾಗಿದೆ. ನಾನು ಶಾಸಕನಾಗಿದ್ದ ಅವಧಿಯಲ್ಲಿ ವಿಶೇಷವಾಗಿ ಪ್ರಯತ್ನಿಸಿದ ಫಲವಾಗಿ ಬನ್ನಂಜೆ ವೃತ್ತಕ್ಕೆ

ತೋಕೂರು: ಬಾಲ್ಯದಲ್ಲಿ ಮಕ್ಕಳಿಗೆ ಸ್ಪರ್ಧಾ ಮನೋಭಾವವನ್ನು ಬೆಳೆಸಿಕೊಳ್ಳುವುದು ಉತ್ತಮ – ಸುನೀತಾ ಗುರುರಾಜ್

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆ, ಬ್ರಹ್ಮಶ್ರೀ ನಾರಾಯಣ ಗುರು ಯುವ ವೇದಿಕೆ, ಅಭಿವೃದ್ಧಿ ಸಮಿತಿ ಮತ್ತು ಗುರು ಮಂದಿರ ನಿರ್ಮಾಣ ಸಮಿತಿ, ಎಸ್. ಕೋಡಿ, ತೋಕೂರು ಇದರ ಸಹಭಾಗಿತ್ವದಲ್ಲಿ ಸಪ್ಟೆಂಬರ್ 7,.2025 ರಂದು ನೆರವೇರಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜನ್ಮದಿನಾಚರಣೆಯ ಪ್ರಯುಕ್ತ ಸ್ಥಳೀಯ ಮಕ್ಕಳಿಗೆ, ಆಶುಭಾಷಣ, ರಸಪ್ರಶ್ನೆ ಸಂಗೀತ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆಯನ್ನು ಬ್ರಹ್ಮಶ್ರೀ

ಪಡುಬಿದ್ರಿ: ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ದಾರ ಪ್ರಕ್ರಿಯೆ ಅವಲೋಕನ ಸಭೆ

ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ದಾರ ಪ್ರಕ್ರಿಯೆಗಳ ಸಂಬಂಧವಾಗಿ ಪಡುಬಿದ್ರಿಯ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಸಭಾಂಗಣದಲ್ಲಿ ಶನಿವಾರದಂದು ಅವಲೋಕನ ಸಭೆಯು ನಡೆಯಿತು. ಮುಂದಿನ ಮಳೆಗಾಲದೊಳಗೆ ಪಡುಬಿದ್ರಿಯ ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಆಗಬೇಕಿದ್ದು, ಈ ಮಹತ್ಕಾರ್ಯಕ್ಕೆ ಗ್ರಾಮಸ್ಥರ ಸಹಭಾಗಿತ್ವ ಮತ್ತು ದೇಣಿಗೆಯೊಂದಿಗಿನ ಸಹಕಾರದಿಂದ ದೇವಾಲಯದ ಪುನ‌ರ್ ನಿರ್ಮಾಣ ಆಗಬೇಕಿದೆ’ ಸಕಲ ಅಡೆತಡೆಗಳ ಮೀರಿ

ಮೂಡುಬಿದಿರೆ:ಸವಾಲುಗಳನ್ನು ಎದುರಿಸಿ ಆತ್ಮ ಸ್ಥೈರ್ಯವನ್ನು ಬೆಳೆಸಿಕೊಳ್ಳುವುದೇ ನಿಜವಾದ ಶಿಕ್ಷಣ ರಾಜ್ಯಪಾಲ ನ್ಯಾ. ಅಬ್ದುಲ್ ನಝೀರ್

ಪದವಿ ಪೂರೈಸುವುದು ಅಥವಾ ಕಂಠಪಾಠ ಮಾಡಿ ರ‍್ಯಾಂಕ್, ಪದಕ ಪಡೆಯುವುದು ಶಿಕ್ಷಣ ಅಲ್ಲ. ಬದುಕಿನಲ್ಲಿ ಎದುರಾಗುವ ಸವಾಲು ಹಾಗೂ ಸಮಸ್ಯೆಗಳನ್ನು ಮೆಟ್ಟಿ ನಿಲ್ಲುವ ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳುವುದೇ ನಿಜವಾದ ಶಿಕ್ಷಣ ಎಂದು ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ. ಅಬ್ದುಲ್ ನಜೀರ್ ಹೇಳಿದರು.ಮಂಗಳೂರು ವಿವಿ ಘಟಕ ಕಾಲೇಜು ಬನ್ನಡ್ಕ ಇಲ್ಲಿ ಶನಿವಾರ ಪ್ರೇರಣಾ ದಿವಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಕೇವಲ ಭವಿಷ್ಯದ ನೌಕಕರಾಗಬಾರದು.

ಪುತ್ತೂರು : ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಸಭೆ

ಪುತ್ತೂರು ಆಗಸ್ಟ್ 29 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ “ಬದಲಾವಣೆಗಾಗಿ ಕೊಡುಗೆ “ಎಂಬ ಘೋಷ ವಾಕ್ಯದೊಂದಿಗೆ ನಾಯಕರ ಸಭೆಯು ಪುತ್ತೂರು ಎಮ್.ಡಿ.ಎಸ್ ಸಭಾಂಗಣದಲ್ಲಿ ನಡೆಯಿತುಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಬಾವು ರವರು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ರವರು ಮಾತನಾಡಿ ಪಕ್ಷವನ್ನು ಬೂತ್