Home Archive by category ರಾಜಕೀಯ (Page 56)

ಸೆ. 17 ರಂದು “ರಾಷ್ಟ್ರೀಯ ನಿರುದ್ಯೋಗ ದಿನ” ಆಚರಣೆ: ಯುವ ಜನರ ಆಕ್ರೋಶ ಪ್ರಧಾನಿವರೆಗೆ ಮುಟ್ಟಿಸುತ್ತೇವೆ – ರಕ್ಷಾ ರಾಮಯ್ಯ

ಬೆಂಗಳೂರು: ದೇಶದಲ್ಲಿ ದಿನದಿಂದ ದಿನಕ್ಕೆ ನಿರುದ್ಯೋಗ ಸಮಸ್ಯೆ ಬಿಗಡಾಯಿಸುತ್ತಿದ್ದು, ತಕ್ಷಣ ಉದ್ಯೋಗ ಒದಗಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಲು ಸೆಪ್ಟೆಂಬರ್ 17 ರಂದು “ರಾಷ್ಟ್ರೀಯ ನಿರುದ್ಯೋಗ ದಿನ” ಆಚರಿಸಲಾಗುವುದು ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಹೇಳಿದ್ದಾರೆ. ಬೆಲೆ ಏರಿಕೆ ವಿರೋಧಿಸಿ

ಗಣಪತಿ ಮೂರ್ತಿ 2-4 ಅಡಿ ನಿರ್ಬಂಧ ಹಿಂಪಡೆಯಲು ಸರಕಾರಕ್ಕೆ ಡಿ.ಕೆ. ಶಿವಕುಮಾರ್ ಆಗ್ರಹ

ಬೆಂಗಳೂರು: ‘ಗಣೇಶ ಹಬ್ಬಕ್ಕೆ ಕೇವಲ ಮೂರು ದಿನ ಬಾಕಿ ಇರುವಾಗ ರಾಜ್ಯ ಸರಕಾರವು ಮನೆಯಲ್ಲಿ 2 ಅಡಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಗಣೇಶ ಮೂರ್ತಿ ಇಡಬೇಕೆಂಬ ಅರ್ಥಹೀನ ನಿರ್ಬಂಧ ಹೇರುವ ಮೂಲಕ ಮೂರ್ತಿ ತಯಾರಕರ ಬದುಕಿನ ಜತೆ ಚೆಲ್ಲಾಟವಾಡಿದೆ. ತಕ್ಷಣ ಈ ಆದೇಶ ಹಿಂಪಡೆಯಬೇಕು ಅಥವಾ ಮೂರ್ತಿ ತಯಾರಿಕರಿಗೆ ಪರಿಹಾರ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. ‘ಕಳೆದ 2 ತಿಂಗಳಿಂದ ಗಣೇಶ ಮೂರ್ತಿ

ಕೋವಿಡ್ ಲಸಿಕೆ ಹಂಚಿಕೆಯಲ್ಲಿ ತಾರತಮ್ಯ : ಮೂಡುಬಿದರೆಯಲ್ಲಿ ಕಾಂಗ್ರೆಸ್‍ನಿಂದ ಪ್ರತಿಭಟನೆ

ಮೂಡುಬಿದಿರೆ: ತಾಲೂಕಿನ ವಿವಿಧ ಕಡೆ ಕೋವಿಡ್ ಲಸಿಕೆ ಕೊಡುವಲ್ಲಿ ತಾರತಮ್ಯವಾಗುತ್ತಿದೆ ಎಂದು ಆರೋಪಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಹಸೀಲ್ದಾರ್ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಯಿತು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಕೋವಿಡ್ ವ್ಯಾಕ್ಸಿನ್ ವಿಚಾರದಲ್ಲಿ ಶಾಸಕರು, ಬಿಜೆಪಿ ಮುಖಂಡರು ತಾರತಮ್ಯ ಮಾಡುತ್ತಿದ್ದಾರೆ. ಸರ್ಕಾರಿ ಆರೋಗ್ಯ ಕೇಂದ್ರಗಳು, ಪಂಚಾಯಿತಿ ಕಾರ್ಯಾಲಯ ಅಥವಾ ಶಾಲೆಗಳಲ್ಲಿ ಕೋವಿಡ್

ಕಾರ್ಮಿಕ ಇಲಾಖೆ ನೀಡುವ ಆಹಾರ ಕಿಟ್‍ನಲ್ಲಿ ತಾರತಮ್ಯ : ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಪ್ರತಿಭಟನೆ

ಬಂಟ್ವಾಳ: ಕೆಎಸ್‍ಆರ್‍ಟಿಸಿಯ ಐಸಿಯು ಬಸ್ ಸೇವೆ, ಕೋವಿಡ್ ವ್ಯಾಕ್ಸಿನ್ ನೀಡಿಕೆ ಹಾಗೂ ಕಾರ್ಮಿಕ ಇಲಾಖೆಯಿಂದ ನೀಡುವ ಆಹಾರದ ಕಿಟ್‍ನಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಬಿ.ಸಿ. ರೋಡಿನ ಮಿನಿವಿಧಾನ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಸರಕಾರದ ಸೌಲಭ್ಯಗಳು ನೀಡಿಕೆಯಲ್ಲಿ ಕಾಂಗ್ರೆಸ್ ಹಾಗೂ

ಮೂಡುಬಿದಿರೆಯ ಪುರಸಭೆ- ಗ್ರಾ.ಪಂ ಸದಸ್ಯರಿಗೆ ಪ್ರಶಿಕ್ಷಣ ವರ್ಗ ಕಾರ್ಯಕ್ರಮ

ಮೂಡುಬಿದಿರೆ : ಭಾರತೀಯ ಜನತಾ ಪಾರ್ಟಿ ಮೂಲ್ಕಿ-ಮೂಡುಬಿದಿರೆ ಮಂಡಲದ ವತಿಯಿಂದ ಪುರಸಭೆ ಮತ್ತು ಗ್ರಾ.ಪಂಚಾಯತ್ ಸದಸ್ಯರಿಗೆ ಪ್ರಶಿಕ್ಷಣ ವರ್ಗ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ  ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಂಘಟನೆಯ ಆಧಾರ ಕಾರ್ಯಕರ್ತರು. ಕಾರ್ಯಕರ್ತರನ್ನು ಸಜ್ಜುಗೊಳಿಸಬೇಕು ಮತ್ತು ವಿಚಾರವಂತರಾಗಿ ಸಾಗಬೇಕೆನ್ನುವ ದೃಷ್ಠಿಕೋನದಿಂದ ಪ್ರಶಿಕ್ಷಣ ವರ್ಗ ರೂಪುಗೊಂಡಿದೆ. ಹಲವು ವರ್ಷಗಳ ನಂತರ ಜನರು

ಇದು ಜನಾಶೀರ್ವಾದ ಅಲ್ಲ, ಜನರ ಕ್ಷಮೆ ಕೋರುವ ಯಾತ್ರೆ ಆಗಬೇಕು: ಸಲೀಂ ಅಹ್ಮದ್

‘ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ರಾಜ್ಯಕ್ಕೆ ನಿರಂತರ ಅನ್ಯಾಯ ಮಾಡುತ್ತಿದ್ದು, ಅವರು ಜನಾಶೀರ್ವಾದ ಯಾತ್ರೆ ಬದಲು ಜನರ ಕ್ಷಮೆ ಕೋರುವ ಯಾತ್ರೆ ನಡೆಸಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ಕಿಡಿಕಾರಿದ್ದಾರೆ. ‘ಕೋವಿಡ್ 2ನೇ ಅಲೆಯಲ್ಲಿ ಲಕ್ಷಾಂತರ ಜನರ ಸಾವಿಗೆ ಕಾರಣರಾಗಿದ್ದಕ್ಕೆ, ಸ್ವರ್ಗ ತೋರಿಸುತ್ತೇವೆ ಎಂದು ಅಧಿಕಾರಕ್ಕೆ ಬಂದು ಜನರಿಗೆ ನರಕ ತೋರಿಸುತ್ತಿರುವುದಕ್ಕೆ, ಕೇಂದ್ರದ ಮಲತಾಯಿ ಧೋರಣೆ, ರಾಜ್ಯಕ್ಕೆ

ಕೋವಿಡ್ ಮಾರ್ಗಸೂಚಿ ಕೇಂದ್ರ ಸಚಿವರಿಗೆ ಅನ್ವಯವಾಗುವುದಿಲ್ಲವೇ?: ರಾಮಲಿಂಗಾ ರೆಡ್ಡಿ

ಬೆಂಗಳೂರು:‘ಕೇಂದ್ರ ಸಚಿವರು ಕಾನೂನಿಗಿಂತ ದೊಡ್ಡವರೆ? ಕೋವಿಡ್ ಮಾರ್ಗಸೂಚಿ ಇವರಿಗೆ ಅನ್ವಯವಾಗುವುದಿಲ್ಲವೇ? ಬಿಜೆಪಿಯವರಿಗೊಂದು ಕಾನೂನು, ಜನಸಾಮಾನ್ಯರು ಮತ್ತು ವಿರೋಧ ಪಕ್ಷದವರಿಗೊಂದು ಕಾನೂನು ಇದೆಯೇ?’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ ಅವರು ಪ್ರಶ್ನಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ರಾಮಲಿಂಗಾರೆಡ್ಡಿ ಅವರು ಸೋಮವಾರ ಪತ್ರಿಕಾಗೋಷ್ಠಿ ನಡೆಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ

ವೀಕೆಂಡ್ ಕರ್ಫ್ಯೂ ಅನಗತ್ಯ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

 ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಹೊಸ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಆದರೂ, ಶನಿವಾರ ಮತ್ತು ರವಿವಾರ ವೀಕೆಂಡ್ ಕರ್ಫ್ಯೂ ವಿಧಿಸುತ್ತಿದ್ದಾರೆ. ಕೋವಿಡ್ ಕೇವಲ ಶನಿವಾರ ಮತ್ತು ರವಿವಾರ ಮಾತ್ರ ಬರುತ್ತದಾ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದರು. ಈ ಕುರಿತು ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಕೋವಿಡ್ ಲಸಿಕೆ ಹಾಕುವುದರಲ್ಲಿ ವಿಜಯಪುರ ನಗರ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಕೊರೊನಾ 3ನೇ ಅಲೆ ನಮ್ಮ ಮೇಲೆ ಹೆಚ್ಚಿಗೆ ಪರಿಣಾಮ

ಬಿಜೆಪಿ ಜಿಲ್ಲೆಗೆ ಹೊಸ ಯೋಜನೆಗಳನ್ನು ತಂದಿಲ್ಲ- ಮಾಜಿ ಸಚಿವ ರಮಾನಾಥ ರೈ ಹೇಳಿಕೆ

ಮಂಗಳೂರಿನ ಉರ್ವಸ್ಟೋರ್ ಬಳಿ ಇತ್ತೀಚಿಗೆ ಉದ್ಘಾಟನೆಗೊಂಡ ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನವನ್ನು ಮಾಜಿ ಸಚಿವ ಬಿ.ರಮಾನಾಥ್ ರೈ ಸೇರಿದಂತೆ ಕಾಂಗ್ರೆಸ್ ನಿಯೋಗ ಭೇಟಿ ನೀಡಿದ್ರು. ತದ ಬಳಿಕ ಸುದ್ದಿಗಾರದೊಂದಿಗೆ ಮಾತನಾಡಿದ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತ ನಡೆಸುತ್ತಿದ್ದ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ನಡೆದಿದೆ. ಅದರಲ್ಲೂ, ಹೊಸ ಜಿಲ್ಲಾಧಿಕಾರಿ ಕಚೇರಿ, ಜಿಲ್ಲೆಗೆ ಪಶುವೈದ್ಯಕೀಯ ಕಾಲೇಜು ನಿರ್ಮಾಣ, ಕೆಲವೊಂದು

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಗಾಂಧೀಜಿಗೆ ಅಪಮಾನ : ಕಾಂಗ್ರೆಸ್‍ನಿಂದ ಪ್ರತಿಭಟನೆ

ದ.ಕ ಜಿಲ್ಲಾಡಳಿತ ವತಿಯಿಂದ ನೆಹರೂ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ರವರು ಸಿದ್ದಪಡಿಸಿದ ಭಾಷಣದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಹೆಸರನ್ನು ಕೊನೆಯಲ್ಲಿ ಉಲ್ಲೇಖಿಸಿದ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಟೌನ್ ಹಾಲ್ ಮುಂಭಾಗದ ಗಾಂಧಿ ಪ್ರತಿಮೆ ಎದುರುಗಡೆ ಪ್ರತಿಭಟನೆ ನಡೆಯಿತು. ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹರೀಶ್ ಕುಮಾರ್ ದೇಶಕ್ಕಾಗಿ ಸ್ವಾತಂತ್ರ್ಯ ತಂದುಕೊಟ್ಟವರು