ಬ್ರಹ್ಮಾವರ: ನೈರುತ್ಯ ಪಧವೀಧರ ಶಿಕ್ಷಕರ ಚುನಾವಣೆಯ ಮತದಾನ ಬ್ರಹ್ಮಾವರದ ಮತಗಟ್ಟೆಗಳಲ್ಲಿ ನಡೆಯುತ್ತಿದೆ. ಮತಗಟ್ಟೆಯಲ್ಲಿ ಶಿಕ್ಷಕರ ಕ್ಷೇತ್ರದಿಂದ 322 ಪುರುಷರು, 417 ಮಹಿಳೆಯರು ಮತ್ತು ಪಧವೀಧರ ಕ್ಷೇತ್ರದಿಂದ 1489 ಪುರುಷರು 1657 ಮಹಿಳೆಯರು ಮತದಾರರನ್ನು ಹೊಂದಿದೆ.
ವಿಧಾನ ಸಭಾ ಚುನಾವಣೆಯಲ್ಲಿ ಸಿಕ್ಕಿಂನಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಮತ್ತು ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಎರಡನೆಯ ಬಾರಿ ಅಧಿಕಾರದ ಗದ್ದುಗೆಗೆ ಏರಿವೆ. ಎಸ್ಕೆಎಂ- ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾವು ಎರಡನೆಯ ಬಾರಿ ಏಕೈಕ ಪಕ್ಷವಾಗಿ ಅಧಿಕಾರಕ್ಕೆ ಏರಿದೆ. ಅದು ವಿಧಾನ ಸಭೆಯ 32ರಲ್ಲಿ 31 ಸ್ಥಾನ ಗೆದ್ದುಕೊಂಡಿತು. ರಾಷ್ಟ್ರೀಯ ಪಕ್ಷಗಳಿಗೆ ಸಿಕ್ಕಿಂ ಮಣೆ ಹಾಕಿಲ್ಲ. ಅರುಣಾಚಲ ಪ್ರದೇಶದಲ್ಲಿ ಬಿಜೆಪಿಯು 46 ಸ್ಥಾನಗಳಲ್ಲಿ ಗೆಲುವು ಕಂಡು ಮತ್ತೆ
ಕರ್ನಾಟಕ ವಿಧಾನ ಪರಿಷತ್ ನ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಇಂದು ನಡೆಯುತ್ತಿದೆ. ಖ್ಯಾತ ವೈದ್ಯರಾದ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಸ್ಪರ್ಧಿಸುತ್ತಿದ್ದು, ಉತ್ತಮ ಪ್ರಚಾರವನ್ನು ಮಾಡಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದಂತೆ ವಿವಿಧೆಡೆ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ, ಅಲ್ಲಿನ ಶಿಕ್ಷಕರನ್ನು ಭೇಟಿಯಾಗಿ ಅವರೊಂದಿಗೆ ಚರ್ಚಿಸಿ,
ಉಳ್ಳಾಲ: ನೈರುತ್ಯ ಕ್ಷೇತ್ರ ಶಿಕ್ಷಣ ಕಾಶಿಯಾಗಿಯೇ ಮುಂದುವರಿಯುತ್ತಿದೆ ಹೊರತು ಉದ್ಯೋಗ ನೀಡುವ ಯಾವುದೇ ಸಂಸ್ಥೆಗಳು ಇಲ್ಲಿ ಆರಂಭವಾಗುತ್ತಿಲ್ಲ. ಪದವೀಧರರಿಗೆ ನಿರುದ್ಯೋಗದ ಸಮಸ್ಯೆ ಜ್ವಲಂತ ಇದ್ದರೂ ವಿಧಾನಸಭೆಯಲ್ಲಿ ಚರ್ಚೆಗಳೇ ಆಗದೇ ಅನಾವಶ್ಯಕ ವಿಚಾರಗಳೇ ಮೇಳೈಸುತ್ತಿವೆ ಎಂದು ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ದಿನಕರ್ ಉಳ್ಳಾಲ್ ಹೇಳಿದರು. ಕುತ್ತಾರು ಖಾಸಗಿ ಹೊಟೇಲಿನಲ್ಲಿ ಹಮ್ಮಿಕೊಂಡ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಣ, ಜಾತಿ,
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸುತ್ತಿಲ್ಲ. ಅಲ್ಟ್ರಾ ಎಕ್ಸ್ಟ್ರೀಮ್ ಎಡಪಂಥೀಯರು ಆಡಳಿತ ನಡೆಸುತ್ತಿದ್ದಾರೆ. ರಾಜ್ಯ ಶಿಕ್ಷಣ ನೀತಿ ಅನುಷ್ಠಾನ ಸಮಿತಿಯಲ್ಲಿ ಹಿಂದು ವಿರೋಧಿಗಳನ್ನೇ ತುಂಬಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಆರೋಪಿಸಿದ್ದಾರೆ. ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿಯ ಹೋಟೆಲ್ ಕಿದಿಯೂರಿನ ಮಾಧವ ಕೃಷ್ಣ ಸಭಾಂಗಣದಲ್ಲಿ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ
ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಸ್ಪರ್ಧಿಸುತ್ತಿದ್ದು, ಅವರು ಶಿವಮೊಗ್ಗದ ವಿವಿಧೆಡೆ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿದರು. ಕರ್ನಾಟಕ ವಿಧಾನ ಪರಿಷತ್ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯ ನಡೆಯುತ್ತಿದೆ. ಖ್ಯಾತ ಹೃದ್ರೋಗ ಶಸ್ತ್ರಚಿಕಿತ್ಸಾ ತಜ್ಞರು ಹಾಗೂ ಸೇವಾ ಮನೋಭಾವನೆಯುಳ್ಳ ವೈದ್ಯರಾದ ಡಾ. ನರೇಶ್ಚಂದ್ ಹೆಗ್ಡೆ ಅವರು ಸ್ಪರ್ಧಿಸುತ್ತಿದ್ದಾರೆ.
ಪ್ರಚಾರ ನಡೆಸಬಾರದ 48 ಗಂಟೆಗಳ ಕಾಲ ಧ್ಯಾನ ಮಾಡುವ ಮೋದಿಯವರ ಕಾರ್ಯವು ಸ್ಪಷ್ಟವಾಗಿ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಜೂನ್ 1ರಂದು ಮೋದಿಯವರ ವಾರಣಾಸಿ ಕ್ಷೇತ್ರಕ್ಕೂ ಸೇರಿ ಕೊನೆಯ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದೆ. ಅದರಲ್ಲಿ ಲಾಭ ಪಡೆಯಲು ಪ್ರಧಾನಿ ಮೋದಿಯವರು ಪ್ರಚಾರ ಮಾಡಬಾರದ 48 ಗಂಟೆಗಳ ಸದ್ದಿಲ್ಲದ ಕಾಲವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಆ ಮೂಲಕ ಮತದಾರರ ಮೇಲೆ ಧಾರ್ಮಿಕ
ಪುತ್ತೂರು: ರಾಜ್ಯ ವಿಧಾನ ಪರಿಷತ್ನ ಆರು ಸ್ಥಾನಗಳಿಗೆ ಜೂನ್ 3ರಂದು ನಡೆಯುವ ಚುನಾವಣೆಯಲ್ಲಿ ಎಲ್ಲ ಆರು ಸ್ಥಾನಗಳಲ್ಲೂ ಬಿಜೆಪಿ- ಜೆಡಿಎಸ್ ಮೈತ್ರಿಕೂಟ ಗೆಲುವು ಸಾಧಿಸಲಿದೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಬಂಡಾಯವಿದ್ದರೂ, ಬಿಜೆಪಿಯಂಥ ರಾಷ್ಟ್ರೀಯ ಪಕ್ಷದ ಸಂಘಟನಾ ಸಾಮರ್ಥ್ಯದ ಎದುರು ಬಂಡಾಯ ಅಭ್ಯರ್ಥಿ ಗೆಲುವು ಸಾಧಿಸಲು ಸಾಧ್ಯವೇ ಇಲ್ಲ ಎಂದು ಹಿರಿಯ ಬಿಜೆಪಿ ಮುಖಂಡರೂ, ವಿಧಾನ ಪರಿಷತ್ ಸದಸ್ಯರೂ ಆದ ಪ್ರತಾಪ ಸಿಂಹ ನಾಯಕ್ ಹೇಳಿದರು.
ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಕಾಂಗ್ರೆಸ್ ಪ್ರಚಾರ ಪತ್ರದಲ್ಲಿ ಕಾಂಗ್ರೆಸ್ ಮುಖಂಡರೊಬ್ಬರ ಭಾವಚಿತ್ರದ ಬದಲು ಬಿಜೆಪಿ ಮುಖಂಡನ ಭಾವಚಿತ್ರ ಮುದ್ರಿಸಲ್ಪಟ್ಟಿದೆ! ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾಕ್ಟರ್ ಕೆ.ಕೆ.ಮಂಜುನಾಥ್ ಕುಮಾರ್ ಅವರ ಚುನಾವಣಾ ಪ್ರಚಾರ ಪತ್ರದಲ್ಲಿ ಈ ಎಡವಟ್ಟು ಕಂಡು ಬಂದಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ಪ್ರಚಾರ ಪತ್ರದಲ್ಲಿ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿಯ ಬದಲು ಬಿಜೆಪಿ
ಪ್ರಧಾನಿ ಮೋದಿಯವರ ಸರಕಾರವು 22 ಮಂದಿ ಉದ್ಯಮಿಗಳ 16 ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿ, ಹಿಮಾಚಲ ಪ್ರದೇಶಕ್ಕೆ 9,000 ಕೋಟಿ ರೂಪಾಯಿ ನೆರೆ ಪರಿಹಾರ ನೀಡದೆ ತಾರತಮ್ಯ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಹೇಳಿದರು. ಹಿಮಾಚಲ ಪ್ರದೇಶದ ಸಿಮ್ಲಾದಲ್ಲಿ ಚುನಾವಣಾ ಪ್ರಚಾರ ನಡೆಸಿದ ರಾಹುಲ್ ಗಾಂಧಿಯವರು ಪ್ರವಾಹ ಪರಿಹಾರ ನೀಡದೆಯೇ ಮೋದಿಯವರು ನೆರೆ ಪರಿಹಾರ ನೀಡಿದ್ದು ಬೇರೆಯದಕ್ಕೆ ಬಳಕೆ ಮಾಡಿದ್ದಾರೆ ಎಂದು ಹಸಿ ಸುಳ್ಳು ಹೇಳುತ್ತಿದ್ದಾರೆ. ಅಷ್ಟೇ