Home Archive by category ರಾಜ್ಯ

ಕಾರ್ಮಿಕ ವಿಮಾ ಯೋಜನೆಯ ಸೌಲಭ್ಯಗಳು ಸಿಗದ ಬಗ್ಗೆ ಸದನದ ಗಮನಕ್ಕೆ ತಂದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಕಾಪು: ರಾಜ್ಯದಲ್ಲಿ ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಲು ಪ್ರತಿ ಜಿಲ್ಲೆಯಲ್ಲಿಯೂ ಕಾರ್ಮಿಕ ರಾಜ್ಯ ವಿಮಾ ಯೋಜನೆಯ ಆಸ್ಪತ್ರೆಗಳಿದ್ದು, ಮಾರಾಣಾಂತಿಕ ಖಾಯಿಲೆಗಳಿಗೆ ಬೇಕಾದ ಔಷಧೋಪಚಾರಗಳ ಕೊರತೆ ಇರುವುದು ಸರಕಾರದ ಗಮನಕ್ಕೆ ಬಂದಿದೆಯೇ..? ಬಂದಿದ್ದಲ್ಲಿ ಕೈಗೊಂಡ ಕ್ರಮವೇನು ಹಾಗೂ ಕಳೆದ 2 ವರ್ಷಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ನೊಂದಾಯಿತ ಕಟ್ಟಡ

ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ- ಸಿಎಂ ಸಿದ್ದರಾಮಯ್ಯ

ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಭಾನುವಾರ ಹೇಳಿದರು. ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ 2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಿ ಮಾತನಾಡಿದ ಮುಖ್ಯಮಂತ್ರಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಅರೆಭಾಷೆ ಗೌಡರು ಹೆಚ್ಚಾಗಿ ವಾಸಿಸುತ್ತಿದ್ದು, ಇವರ ಜನಸಂಖ್ಯೆ ಮೂರು ಲಕ್ಷಕ್ಕೂ ಹೆಚ್ಚಿದೆ

ಜೇನಿನ ಸಿಹಿಯ ಹಿಂದೆ ಶ್ರಮದ ಸವಿ: ದ.ಕನ್ನಡ, ತುಮಕೂರು ಜೇನುತುಪ್ಪದ ಸಾಧನೆ ಹಾಡಿಹೊಗಳಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ, ದಕ್ಷಿಣ ಕನ್ನಡ ಮತ್ತು ತುಮಕೂರು ಜಿಲ್ಲೆಗಳ ಜೇನುತುಪ್ಪದ ಅಸಾಧಾರಣ ಗುಣಮಟ್ಟವನ್ನು ಉಲ್ಲೇಖಿಸಿ, ಅದರ ಹಿಂದೆ ಇರುವ ರೈತರ ಶ್ರಮವನ್ನು ಹಾಡಿಹೊಗಳಿದರು. ದ.ಕ. ಜಿಲ್ಲೆಯ ಪರಿಸರವು ಉತ್ತಮ ಗುಣಮಟ್ಟದ ಜೇನು ಉತ್ಪಾದನೆಗೆ ಹೇಳಿ ಮಾಡಿಸಿದಂತಿದೆ. ಈ ಸಾಮರ್ಥ್ಯವನ್ನು ಗುರುತಿಸಿ, ಗ್ರಾಮಜನ್ಯ ಎಂಬ ಸಂಸ್ಥೆಯು ಜೇನನ್ನು ಬ್ರಾಂಡ್ ಮಾಡಿ ನಗರ ಮಾರುಕಟ್ಟೆಗೆ ತಲುಪಿಸುತ್ತಿದ್ದು, ಇದರಿಂದ ರೈತರಿಗೆ ಭಾರಿ

ಹಿರಿಯ ನಟ ಎಂ.ಎಸ್.ಉಮೇಶ್ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್. ಉಮೇಶ್  ಅವರು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತರಾಗಿದ್ದಾರೆ. ಉಮೇಶ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾಗ ಅನೇಕ ಕಲಾವಿದರು ಹೋಗಿ ಮಾತನಾಡಿಸಿದ್ದರು. ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದರು. ಆದರೆ ಪ್ರಾರ್ಥನೆ ಫಲಿಸಿಲ್ಲ. ಚಿಕಿತ್ಸೆ ಫಲಕಾರಿ ಆಗದೇ

ಡಿ. 20 ರಂದು ಜಾಗತಿಕ ಅಲ್ಯುಮ್ನಿ ಮೀಟ್ “Nitte Nexus 2025”-ಬೆಂಗಳೂರಿನಲ್ಲಿ ನಡೆದ ಪೂರ್ವಭಾವಿ ಸಭೆ

WENAMITAA (NMAMIT Alumni Association) ಮತ್ತು ನಿಟ್ಟೆ ಮಹಾಲಿಂಗ ಅಡಿಯಂತಾಯ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NMAMIT), ನಿಟ್ಟೆ — ಇವರ ಸಂಯುಕ್ತ ಆಶ್ರಯದಲ್ಲಿ ಜಾಗತಿಕ ಅಲ್ಯುಮ್ನಿ ಮೀಟ್ “Nitte Nexus 2025” ಅನ್ನು 20 ಡಿಸೆಂಬರ್ 2025 ರಂದು, ಸಂಜೆ 4 ಗಂಟೆಯಿಂದ ಆರಂಭವಾಗಿ, ಮುಲ್ಕಿ ಸುಂದರ ರಾಮ ಶೆಟ್ಟಿ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಪೂರ್ವಸಭೆಯನ್ನು ಇಂದು ಬೆಂಗಳೂರಿನ ರಿಚ್ಮಂಡ್ ಸರ್ಕಲ್‌ನ ಹೋಟೆಲ್

ನ್ಯಾಯಾಲಯದಲ್ಲಿ ಅರೆ ಕಾನೂನು ಸ್ವಯಂ ಸೇವಕರ (Para Legal Volunteers) ಆಯ್ಕೆಗೆ ಅರ್ಜಿಯ ಕೊನೆಯ ದಿನಾಂಕ ವಿಸ್ತರಣೆ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ರವರ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ಹಾಗೂ ಅಧೀನ ಕಾರ್ಯನಿರ್ವಹಿಸುತ್ತಿರುವ ತಾಲೂಕು ಕಾನೂನು ಸೇವಾ ಸಮಿತಿ ಸುಳ್ಯ ಇವರ ಕಾರ್ಯವ್ಯಾಪ್ತಿಯಲ್ಲಿ ಅರೇ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಶಿಕ್ಷಕರು / ನಿವೃತ್ತ ಶಿಕ್ಷಕರು, ವಿವಿಧ ಇಲಾಖೆಯ ನಿವೃತ್ತ ಸರ್ಕಾರಿ

ಬನ್ನೇರುಘಟ್ಟ ಲಯನ್ಸ್ ತಂಡದಿಂದ ದೀಪಾವಳಿ ಫೋಟೋ ಶೂಟ್ – ಗ್ರಾಮೀಣ ಮಹಿಳೆಯರೊಂದಿಗೆ ಸಂವಾದ

ಬೆಂಗಳೂರು : ಬೆಳಕಿನ ಹಬ್ಬವಾದ ದೀಪಾವಳಿ ಆಚರಣೆಯ ಅಂಗವಾಗಿ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಗ್ರೇಟರ್ ಬನ್ನೇರಘಟ್ಟ ಸದಸ್ಯರು ಕನಕಪುರದ ಸಮೀಪದ ಹೋರಳುಗಲ್ಲು ಗ್ರಾಮಕ್ಕೆ ಸ್ನೇಹ ಮತ್ತು ಸೇವೆಯ ಉದ್ದೇಶದ ಪ್ರವಾಸವನ್ನು ಆಯೋಜಿಸಿದರು. ಈ ಸಂದರ್ಭದಲ್ಲಿ’ದೀಪದಿಂದ ದೀಪವಾ’ ಎಂಬಆಶಯದೊಂದಿಗೆ ಬೆಳಕನ್ನು ಮತ್ತು ಒಗ್ಗಟ್ಟಿನ ಶಕ್ತಿಯನ್ನು ಬಿಂಬಿಸುವ ವಿಂಟೇಜ್ ಶೈಲಿಯ ಫೋಟೋ ಶೂಟ್ ನಡೆಸಲಾಯಿತು. ಇದೆ ವೇಳೆ ಹೋರಳುಗಲ್ಲು ಗ್ರಾಮದ ಗ್ರಾಮೀಣ ಮಹಿಳೆಯರು ಮತ್ತು

ಹಾಸನ: ಹಾಸನಾಂಬ ದೇವಿ ದರ್ಶನದ ಬಳಿಕ ಭೀಕರ ಅಪಘಾತ: ಇಬ್ಬರ ಸಾವು

ಹಾಸನಾಂಬ ದೇವಿ ದರ್ಶನ ಮುಗಿಸಿ ವಾಪಾಸ್ ಬೆಂಗಳೂರಿಗೆ ಹೋಗುವ ದಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ಬಸವರಾಜು ಮತ್ತು ಅನುಶ್ರೀ (19) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಛಾಯಾ (20) ಹಾಗೂ ಮತ್ತೊಂದು ಬೈಕ್ ಸವಾರ ಮೊಹಮ್ಮದ್ ಶಾಹಿದ್ ಅವರನ್ನು ಚನ್ನರಾಯಪಟ್ಟಣ ತಾಲ್ಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಛಾಯಾ ಅವರ ಸ್ಥಿತಿ ಚಿಂತಾಜನಕವಾಗಿದೆ. ಪೊಲೀಸ್

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಪ್ರಯುಕ್ತ ನಾಟಕ ಪ್ರದರ್ಶನ

ಬೆಂಗಳೂರು:ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಬನ್ನೇರುಘಟ್ಟ ಲಯನ್ಸ್ ಕ್ಲಬ್ ವತಿಯಿಂದ ಕಿರು ನಾಟಕ ಪ್ರದರ್ಶನ ಬೆಂಗಳೂರಿನ ಟಿ.ಜಾನ್ ನರ್ಸಿಂಗ್ ಕಾಲೇಜಿನಲ್ಲಿ ಶನಿವಾರ ಆಯೋಜಿಸಲಾಯಿತು. ವೃತ್ತಿಪರ ರಂಗಭೂಮಿ ಕಲಾವಿದರು ಪ್ರದರ್ಶಿಸಿದ ಈ ನಾಟಕವು ಒತ್ತಡ, ಗಲಾಟೆ ಹಾಗೂ ಮನೋವೈಕಲ್ಯಗಳಂತಹ ವಿಷಯಗಳು ಮಾನಸಿಕ ಆರೋಗ್ಯದ ಮೇಲೆ ಬೀರುವ ಪ್ರಭಾವವನ್ನು ಮನಮುಟ್ಟುವಂತೆ ತೋರಿಸಿತು.ಸುಮಾರು 300 ವಿದ್ಯಾರ್ಥಿಗಳು, ಬೋಧಕ ವರ್ಗ ಮತ್ತು ಲಯನ್ಸ್ ಸದಸ್ಯರು

ಹಾಸನಾಂಬ ದರ್ಶನ: ಸಂಸದರಿಂದ ‘ಗೋಲ್ಡನ್ ಐಡಿಯಾ’ – ₹5 ಲಕ್ಷ ನೀಡಿ 1,200 ಟಿಕೆಟ್ ಖರೀದಿ, ಕಾರ್ಯಕರ್ತರಿಗೆ ವಿತರಣೆ

ಹಾಸನ: ಜಿಲ್ಲೆಯ ಹಾಸನಾಂಬ ದೇವಿಯ ದರ್ಶನ ವ್ಯವಸ್ಥೆಯಲ್ಲಿ ಸಂಸದರು ತೋರಿದ ವಿಶಿಷ್ಟ ನಡೆ ಎಲ್ಲೆಡೆ ಶ್ಲಾಘನೆಗೆ ಪಾತ್ರವಾಗಿದೆ. ಜಿಲ್ಲಾಡಳಿತದ ಪಾಸ್‌ ನಿಯಮಗಳನ್ನು ಗೌರವಿಸಿ, ಯಾವುದೇ ರಾಜಕೀಯ ಒತ್ತಡವಿಲ್ಲದೆ ಕಾರ್ಯಕರ್ತರಿಗೆ ದರ್ಶನದ ಅವಕಾಶ ಕಲ್ಪಿಸಿರುವ ಸಂಸದರ ಕ್ರಮ ‘ಗೋಲ್ಡನ್ ಐಡಿಯಾ’ ಆಗಿದೆ. ಈ ಬಾರಿ ಹಾಸನಾಂಬ ಜಾತ್ರೆಯಲ್ಲಿ ವಿಐಪಿ (ಗೋಲ್ಡನ್) ಪಾಸ್‌ಗಳಿಗೆ ಅಪಾರ ಬೇಡಿಕೆ ಕಂಡುಬಂದಿತ್ತು. ಭಾನುವಾರದಂದು ದರ್ಶನಾರ್ಥಿಗಳ ಸಂಖ್ಯೆ ತೀವ್ರ