Home Archive by category ರಾಜ್ಯ (Page 11)

ಶಿಗ್ಗಾಂವಿ ಫಲಿತಾಂಶ, ಯಾಸಿರ್ ಅಹಮದ್​ ಖಾನ್​ ಪಠಾಣ್ ಗೆ ಗೆಲುವು

ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿಗೆ ಸೋಲಾಗಿದೆ. ಈ ಮೂಲಕ ಬೊಮ್ಮಾಯಿ ಕುಟುಂಬದ ಮೂರನೇ ತಲೆಮಾರು ವಿಧಾನಸಭೆ ಪ್ರವೇಶಿಸುವುದು ತಪ್ಪಿಹೋಗಿದೆ. ಬಂಡಾಯದ ಬಿಸಿಯ ನಡುವೆಯೂ ಸ್ಪರ್ಧಿಸಿದ್ದ ಕಾಂಗ್ರೆಸ್​ನ ಯಾಸಿರ್ ಅಹಮದ್​ ಖಾನ್​ ಪಠಾಣ್ ಗೆಲುವು ಸಾಧಿಸಿದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲಿ

ಸಂಡೂರು ಕ್ಷೇತ್ರದ ಉಪಚುನಾವಣೆ: ಅನ್ನಪೂರ್ಣ ತುಕರಾಂಗೆ ಗೆಲುವು

ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದ ಸಂಸದ ಇ ತುಕಾರಾಂ ಪತ್ನಿ ಅನ್ನಪೂರ್ಣ ತುಕಾರಾಮ ಅವರು ವಿಜಯಶಾಲಿಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರಿಗೆ ಸೋಲಾಗಿದೆ. 2023ರಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದಿಂದ ಇ ತುಕಾರಾಂ ಸ್ಪರ್ಧಿಸಿ ಗೆಲವು ಸಾಧಿಸಿದ್ದರು. ಆದರೆ, 2024ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಇ

ಗಣೇಶ್‌ ಕೆ. ಶೆಟ್ಟಿ ಸಾರಥ್ಯದಲ್ಲಿ ತುಳುಕೂಟ ಗೋವಾ ಲೋಕಾರ್ಪಣೆ

ಪಣಜಿ: ಗೋವಾದ ತುಳುವರನ್ನು ಸಂಘಟಿಸಿ ಗಣೇಶ್‌ ಕೆ. ಶೆಟ್ಟಿ ಇರ್ವತ್ತೂರು ಅಧ್ಯಕ್ಷತೆಯಲ್ಲಿ ರಚಿಸಲ್ಪಟ್ಟಿರುವ ತುಳುಕೂಟ ಗೋವಾ ಘಟಕ ಅದ್ದೂರಿ ಕಾರ್ಯಕ್ರಮದೊಂದಿಗೆ ಲೋಕಾರ್ಪಣೆಗೊಂಡಿದೆ. ತುಳುನಾಡಿನಿಂದ ಬಂದಿದ್ದ ಗಣ್ಯರು ಹಾಗೂ ಗೋವಾದ ಪ್ರಮುಖರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ತುಳುಕೂಟ ಗೋವಾದ ಅಧ್ಯಕ್ಷ ಗಣೇಶ್‌ ಕೆ. ಶೆಟ್ಟಿ ಇರ್ವತ್ತೂರು ಗೋವಾದಲ್ಲಿ ತುಳುಕೂಟ ಆರಂಭಿಸಲು ಕಾರಣವಾದ ಅಂಶಗಳನ್ನು ವಿವರಿಸಿದರು. ಮುಂಬೈ ಮತ್ತು

ನಟ ಕಿಚ್ಚ ಸುದೀಪ್ ಅವರಿಗೆ  ಮಾತೃ ವಿಯೋಗ

ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್‌ ಅವರು ಬೆಳಗ್ಗೆ 7 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕೆಲವು ಸಮಯದಿಂದ ಸರೋಜಾ ಅವರು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸರೋಜಾ ಸಂಜೀವ್ ಅವರು ಕೊನೆಯುಸಿರೆಳೆದಿದ್ದಾರೆ.

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ

ಬಿವಂಡಿ ಕ್ಷೇತ್ರದ ಉಸ್ತುವಾರಿಯಾಗಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಆಯ್ಕೆ

ಮುಂಬೈ:ಲೋಕಸಭಾ ಉಪಚುನಾವಣೆ ಸಲುವಾಗಿ ಬಿವಂಡಿ ಕ್ಷೇತ್ರದ ಉಸ್ತುವಾರಿಯಾಗಿ ಕರ್ನಾಟಕ ರಾಜ್ಯದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಆಯ್ಕೆಯಾಗಿದ್ದಾರೆ. ಇಂದು ಅವರು ಬಿವಂಡಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಭೇಟಿ ನೀಡಿ ಚುನಾವಣಾ ಪೂರ್ವ ತಯಾರಿಯಾ ಬಗ್ಗೆ ಜಿಲ್ಲಾ ಅಧ್ಯಕ್ಷ ರಶೀದ್ ತಾಯಿರ್ ಮೊಮಿನ್ ಹಾಗೂ ಪಕ್ಷದ ಪ್ರಮುಖ ನಾಯಕರ ಜೊತೆ ಚರ್ಚಿಸಿದ್ದಾರೆ. ಈ ಸಂದರ್ಭ ಪಕ್ಷದ ಮುಖಂಡರು ಐವನ್ ಡಿಸೋಜರವರನ್ನು ಆತ್ಮೀಯವಾಗಿ ಗೌರವ ಪೂರ್ವಕವಾಗಿ ಸ್ವಾಗತಿಸಿದರು.

ಮಧೂರು: ಮೂಡಪ್ಪ ಸೇವೆಗೆ ಬೇಕಾದ ಅಕ್ಕಿಗಾಗಿ ಭತ್ತ ನಾಟಿಗೆ ಚಾಲನೆ

ಇತಿಹಾಸ ಪ್ರಸಿದ್ಧ ಮಧೂರು ಶ್ರೀಮದನಂತೇಶ್ವರ ಸಿದ್ಧಿವಿನಾಯಕ ಕ್ಷೇತ್ರದ ಬ್ರಹ್ಮಕಲಶ ಹಾಗೂ ಮೂಡಪ್ಪ ಸೇವೆಗೆ ಬೇಕಾದ ಅಕ್ಕಿಯನ್ನು ಸಾವಯವ ಕೃಷಿಯ ಮೂಲಕ ತಯಾರಿಸಲು ಭತ್ತದ ನಾಟಿ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರದಲ್ಲಿ ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ಕ್ಷೇತ್ರದ ಅರ್ಚಕರಾದ ಶ್ರೀ ವೇಣುಗೋಪಾಲ ಕಲ್ಲೂರಾಯರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ಏರಿಕ್ಕಳ ಬಯಲಿನಲ್ಲಿ ಶ್ರೀ

ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಳ

ತೈಲ ಮಾರಾಟ ಕಂಪನಿಗಳು  ಭಾನುವಾರದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ದರವನ್ನು 39 ರೂ. ಗೆ ಹೆಚ್ಚಿಸಿವೆ. ದೆಹಲಿಯಲ್ಲಿ ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್‌ ದರವು ₹ 1,691ಕ್ಕೆ ಏರಿಕೆ ಆಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಏರಿಕೆಗೆ ಅನುಗುಣವಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ಕಂಪನಿಗಳು ತಿಳಿಸಿವೆ. 14.2 ಕೆ.ಜಿಯ ಗೃಹ ಬಳಕೆ ಸಿಲಿಂಡರ್‌ ದರವು ಯಥಾಸ್ಥಿತಿಯಲ್ಲಿದೆ.

ತುಂಗಭದ್ರಾ ಡ್ಯಾಂ ಗೇಟ್‌ ನ ಚೈನ್ ಲಿಂಕ್ ಕಟ್: ನದಿಪಾತ್ರದ ಗ್ರಾಮಗಳು ಜಲಾವೃತವಾಗುವ ಆತಂಕ

ಕೊಪ್ಪಳ:ತುಂಗಭದ್ರಾ ಅಣೆಕಟ್ಟೆಯ 19ನೇ ಗೇಟ್ ಲಿಂಕ್ ‌ಮುರಿದು ಸಾಕಷ್ಟು ಪ್ರಮಾಣದಲ್ಲಿ ‌ನೀರು ಹರಿದು ಹೋಗುತ್ತಿರುವ ಕಾರಣ ಜಲಾಶಯಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್‌ ಸಂಖ್ಯೆ 19ರಲ್ಲಿ ಚೈನ್‌ ಲಿಂಕ್‌ ತುಂಡಾಗಿರುವ ಕಾರಣ ನದಿಗೆ ಅಪಾರ ಪ್ರಮಾಣದ ನೀರು ಹರಿಸಲಾಗುತ್ತಿದೆ. ನೀರಿನ ರಭಸಕ್ಕೆ ತುಂಡಾಗಿರುವ ಭಾಗವೂ ಕಾಣುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ

ಕುರ್ಚಿ ಉಳಿಸಿ ಬಜೆಟ್: ಕೇಂದ್ರದ ವಿರುದ್ಧ ರಾಹುಲ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್ ಅನ್ನು ‘ಕುರ್ಚಿ ಉಳಿಸಿ ಬಜೆಟ್’ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ‘ಈ ಬಜೆಟ್ ಇತರೆ ರಾಜ್ಯಗಳ ವೆಚ್ಚದಲ್ಲಿ ಬಿಜೆಪಿ ಮಿತ್ರಪಕ್ಷಗಳಿಗೆ ‘ಪೊಳ್ಳು ಭರವಸೆ’ಗಳನ್ನು ನೀಡಿದೆ’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ‘2024ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರಣಾಳಿಕೆ ಹಾಗೂ ಹಿಂದಿನ ಬಜೆಟ್‌ಗಳ