Home Archive by category ರಾಜ್ಯ (Page 12)

ಕುಂದಾಪುರ:ವಿದ್ಯಾರ್ಥಿ ಪರಿಷತ್ ಪ್ರದಗ್ರಹಣ ಹಾಗೂ ಕಾನೂನು ಅರಿವು ಸಮಾರಂಭ

ನಾಯಕನಾಗಿ ಬೆಳೆಯುವವನಿಗೆ ಸಮಯ ಸಂದರ್ಭಕ್ಕೆ ತಕ್ಕಂತೆ ವರ್ತಿಸುವ ಜ್ಞಾನವೂ ಇರಬೇಕು. ಆಗ ಮಾತ್ರ ಅವರ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ನಿರಂತರ ಓದು ಭವಿಷ್ಯವನ್ನು ರೂಪಿಸುವ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ದಾರಿಯಾಗುತ್ತದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ ಸಿದ್ದಲಿಂಗಪ್ಪ ಅಭಿಪ್ರಾಯಪಟ್ಟರು.ಅವರು ಸುಜ್ಞಾನ ಎಜ್ಯುಕೇಶನ್ ಟ್ರಸ್ಟ್ (ರಿ)

ಮಡಿಕೇರಿ-ಸಂಪಾಜೆ ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ

ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಭಾಗದಲ್ಲಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ, ಸಾರ್ವಜನಿಕರ ಹಿತಾಸಕ್ತಿಯಿಂದ ಜು.18 ರಿಂದ 22ರ ವರೆಗೆ ಪ್ರತಿ ದಿನ ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 275 ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕಿ.ಮೀ. 90.05 ರಿಂದ 90.10ರ

ಅಂಕೋಲದ ಶಿರೂರಿನಲ್ಲಿ ಗುಡ್ಡ ಕುಸಿತ ಪ್ರಕರಣ,ರಸ್ತೆ ಸಂಚಾರ ಸಂಪೂರ್ಣ ಬಂದ್

ಶಿರೂರು ಟೋಲ್ ಗೇಟ್ ನಲ್ಲಿ ಕಳೆದ ಎರಡು ಮೂರು ದಿನಗಳಿಂದ ನಿಂತಿರುವ ಲಾರಿ ಡ್ರೈವರ್ ಗಳ ಗೋಳು ಕೇಳುವವರೇ ಇಲ್ಲದಂತಾಗಿದೆ. ಅಂಕೋಲದ ಶಿರೂರಿನಲ್ಲಿ ಗುಡ್ಡ ಕುಸಿತ ಉಂಟಾದ ಹಿನ್ನಲೆಯಲ್ಲಿ, ರಸ್ತೆ ಸಂಚಾರ ಸಂಪೂರ್ಣ ಬಂದ್ ಅಗಿರುವ ಹಿನ್ನಲೆಯಲ್ಲಿ, ಉಡುಪಿ ಜಿಲ್ಲೆಯ ಶಿರೂರು ಟೋಲ್ ಗೇಟ್‌ನಲ್ಲಿ ನೂರಾರು ಲಾರಿಗಳು ಸಾಲು ಸಾಲಾಗಿ ನಿಂತುಕೊಂಡಿವೆ. ಕಳೆದ ಮೂರ್ನಾಲ್ಕು ದಿನಗಳಿಂದ ಲಾರಿಗಳು ಇಲ್ಲೆ ಬಾಕಿಯಾಗಿದ್ದು, ಲಾರಿ ಡ್ರೈವರ್ ಗಳ ಕೈಯಲ್ಲಿದ್ದ ಹಣ ಹಾಗೂ ಆಹಾರ

 ಮಡಿಕೇರಿ : ಸಂಪಾಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ

ಮಡಿಕೇರಿ : ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಭಾಗದಲ್ಲಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಹಿತಾಸಕ್ತಿಯಿಂದ ಜು.18 ರಿಂದ 22ರ ವರೆಗೆ ಪ್ರತಿ ದಿನ ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ – 275ರ ಸಂಪಾಜೆಯಿಂದ ಮಡಿಕೇರಿ ನಡುವಿನ

ಚಿಕ್ಕಮಗಳೂರು : ಮುಳ್ಳಯ್ಯನಗಿರಿಗೆ ಆಗಮಿಸುವ ಪ್ರವಾಸಿಗರಿಗೆ ಪ್ರವೇಶ ನಿಷೇಧ – ಜಿಲ್ಲಾಧಿಕಾರಿ ಮೀನಾ ನಾಗರಾಜ್

ಚಿಕ್ಕಮಗಳೂರು: ಶೃಂಗೇರಿ, ನರಸಿಂಹರಾಜಪುರ, ಮೂಡಿ ಗೆರೆ, ಕಳಸ ಕುದುರೆಮುಖ ಭಾಗದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಜಿಲ್ಲೆಯಲ್ಲಿನ ಪ್ರವಾಸಿತಾಣಗಳಿಗೆ ಬರುವ ಪ್ರವಾಸಿಗರು ತಮ್ಮ ಪ್ರವಾಸವನ್ನು ಮುಂದೂಡುವಂತೆ ಮನವಿ ಮಾಡಿ ಮುಳ್ಳಯ್ಯನಗಿರಿ ಪ್ರದೇಶಕ್ಕೆ ಜು.22ರ ವರೆಗೆ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಅತಿಯಾದ ಮಳೆಯಿಂದಾಗಿ ಮುಳ್ಳಯ್ಯನಗಿರಿ ಪ್ರದೇಶಕ್ಕೆ ತೆರಳುವ ಮಾರ್ಗದ ಕೆಲವು ಕಡೆಗಳಲ್ಲಿ ಸಣ್ಣ ಪ್ರಮಾಣದ ಗುಡ್ಡ ಕುಸಿತ

ಬೈಂದೂರು: ಬಾವಿಗೆ ಕಾಲು ಜಾರಿ ಬಿದ್ದು ಸಾವು

ಬೈಂದೂರು:ಬೈಂದೂರು ತಾಲೂಕಿನ ಬಡಾಕೆರೆ ಗ್ರಾಮದ ಪೋಸ್ಟ್ ನಿವಾಸಿ ಕೃಷಿಕ ಮಂಜುನಾಥ ಶೇಟ್ (85) ಎಂಬುವವರು ತೆಂಗಿನ ತೋಟದಲ್ಲಿ ತೆಂಗಿನಕಾಯಿ ಹೆಕ್ಕಲು ಹೋದಂತಹ ಸಮಯದಲ್ಲಿ ಬಾವಿ ಬದಿಯಲ್ಲಿ ಬಿದ್ದಿರುವ ತೆಂಗಿನಕಾಯಿಯನ್ನು ಹೆಕ್ಕುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಮಂಜುನಾಥ ಶೇಟ್ ಅವರು ಬೆಳಗಿನ ಸಮಯದಲ್ಲಿ ತೆಂಗಿನ ತೋಟಕ್ಕೆ ಹೋಗಿ ತೋಟದಲ್ಲಿ ಬಿದ್ದಿರುವ ಕಾಯಿಯನ್ನು ಹೆಕ್ಕುವ ಅಭ್ಯಾಸವನ್ನು

ಬೆಂಗಳೂರು ಸಹಿತ ರಾಜ್ಯದಲ್ಲಿ ಹೆಚ್ಚಿದ ಡೆಂಗಿ

ಭಾನುವಾರ 954 ಜನರನ್ನು ಡೆಂಗಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಲ್ಲಿ 159 ಮಂದಿ ಡೆಂಗಿ ಹೊಂದಿರುವುದು ದೃಢ ಪಟ್ಟಿದೆ ಎಂದು ಕರ್ನಾಟಕ ಆರೋಗ್ಯ ಇಲಾಖೆ ತಿಳಿಸಿದೆ. ಡೆಂಗಿ ಬಾಧಿತರಲ್ಲಿ ಎಲ್ಲ ಪ್ರಾಯದವರೂ ಇದ್ದು ಭಾನುವಾರದ 159 ಪ್ರಕರಣದಲ್ಲಿ 80 ಬೆಂಗಳೂರು ನಗರ ವ್ಯಾಪ್ತಿಯದಾಗಿದೆ. ಸದ್ಯ 301 ಜನರು ಡೆಂಗಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರುಷದ ಒಟ್ಟು ಡೆಂಗಿ ಪ್ರಕರಣ 7,165 ಎಂದು ಆರೋಗ್ಯ ಇಲಾಖೆ ಹೇಳಿದೆ. ಡೆಂಗಿ ಜ್ವರಕ್ಕೆ

ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಪ್ರತಿಭಟನೆ

ಉಳ್ಳಾಲ: ಹಾಲಿನ ದರವನ್ನು ಏರಿಸುವ ಮೂಲಕ ರಾಜ್ಯದ ಮಕ್ಕಳಿಗೆ ಹಾಲು ಕುಡಿಯದಂತೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ನೀತಿಯಿಂದಾಗಿ ಮಕ್ಕಳು ಪೌಷ್ಠಿಕಾಂಶದ ಕೊರತೆಯಿಂದ ಬಳಲಿದ್ದಾರೆ. ಹಿಂದೆ ಮಕ್ಕಳಲ್ಲಿ ಇದ್ದಂತಹ ನ್ಯೂನ್ಯತೆಗಳು ಮತ್ತೆ ಮರುಕಳಿಸಲಿದೆ ಎಂದು ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯೆ ಧನಲಕ್ಷ್ಮೀ ಗಟ್ಟಿ ಹೇಳಿದರು. ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಮಹಿಳಾ ಮೋರ್ಚಾದ ವತಿಯಿಂದ ಹಾಲಿನ ದರ ಏರಿಕೆ ಖಂಡಿಸಿ ರಾಜ್ಯ ಸರಕಾರದ ವಿರುದ್ಧ

ನಾಟಿ ಮಾಡುವ ವೇಳೆ ಕುಸಿದು ಬಿದ್ದು ಮಹಿಳೆ ಸಾವು

ಹೆಬ್ರಿ : ಮುದ್ರಾಡಿ ರಾಂಬೆಟ್ಟು ನಿವಾಸಿ ದಿ.ಉಪೇಂದ್ರ ಆಚಾರ್ಯ ಅವರ ಪತ್ನಿ ಕುಸುಮಾ ಆಚಾರ್ಯ ಎಂಬವರು ಶುಕ್ರವಾರ ಬೇಸಾಯದ ಗದ್ದೆಯಲ್ಲಿ ನೇಜಿ ನಾಟಿ ಮಾಡುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಕುಸುಮಾ ಆಚಾರ್ಯ ಹೆಬ್ರಿ ವಿಶ್ವಕರ್ಮ ಸಮಾಜ ಸೇವಾ ಸಂಘದ ಕಾರ್ಯಕ್ರಮ ಮತ್ತು ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಸೇವಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಇವರು ಹೆಬ್ರಿ ವಿಶ್ವಕರ್ಮ ಮಹಿಳಾ ಮಂಡಳಿಯ ಸಕ್ರಿಯ ಸದಸ್ಯರಾಗಿದ್ದರು. ಮೃತರು

ಜೆಸಿಬಿಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಮೃತ್ಯು

ಉಡುಪಿ: ಜೆಸಿಬಿಗೆ ಬೈಕ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.ಮೃತ ಸವಾರನನ್ನು ನಾಯರ್ ಕೋಡು ನಿವಾಸಿ ಪ್ರತ್ಯಕ್ಷ ಶೆಟ್ಟಿ (21 ) ಎಂದು ಗುರುತಿಸಲಾಗಿದೆ. ತಮ್ಮನನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಹಿಂಬದಿ ಸವಾರ ಸಹೋದರ ಪ್ರೀತಿಶ್ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾನೆ. ಮೂರು ತಿಂಗಳ ಹಿಂದೆಯಷ್ಟೇ ತಂದೆಯನ್ನು ಕಳೆದುಕೊಂಡಿದ್ದ, ಪ್ರತ್ಯಕ್ಷ ಶೆಟ್ಟಿ ಮನೆಯ ಆದರ