Home Archive by category ರಾಜ್ಯ (Page 31)

ಕರ್ನಾಟಕದಲ್ಲಿ “ಮದ್ರಾಸ್ ಐ” ರೋಗದ ಆತಂಕ

ಕರ್ನಾಟಕದಲ್ಲಿ ಪಿಂಕ್ ಐ, ಕಾಂಜಂಕ್ಟಿವಿಟಿಸ್ ಅಥವಾ ಮದ್ರಾಸ್ ಐ ರೋಗ ಹೆಚ್ಚಾಗಿ ಮಕ್ಕಳಲ್ಲಿ ಕಂಡು ಬರುತ್ತಿದ್ದು, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಮದ್ರಾಸ್ ಐ ರೋಗ ಹೆಚ್ಚಾಗಿ ಇರುವುದರಿಂದ ಪೋಷಕರಲ್ಲಿ ಆತಂಕ ಹೆಚ್ಚಿದ್ದು, ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂಜರಿಯುತ್ತಿದ್ದಾರೆ. ಇನ್ನು ಈ ರೋಗ ರಾಜ್ಯದಲ್ಲಿ ದಿನದಿಂದ

ಬೆಂಗಳೂರಿನಲ್ಲಿ ಶಂಕಿತ ಭಯೋತ್ಪಾದಕರ ಬಂಧನ ವಿಚಾರ : ಕರಾವಳಿ ಭಾಗದಲ್ಲಿ ಕಟ್ಟೆಚ್ಚರ

ಬೆಂಗಳೂರಲ್ಲಿ ಶಂಕಿತ ಭಯೋತ್ಪಾದಕರನ್ನು ಬಂಧಿಸಿದ ಬಳಿಕ ಕರಾವಳಿಯಲ್ಲಿ ವಿದ್ವಂಸಕ ಚಟುವಟಿಕೆ ಮೇಲೆ ಹದ್ದಿನ ಕಣ್ಣಿರಿಸಿರುವ ಪೊಲೀಸರು ಜನ ನಿಬಿಡ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ದೇವಸ್ಥಾನ, ಪ್ರವಾಸಿ ಕೇಂದ್ರ ಸೇರಿದಂತೆ ಆಯಾಕಟ್ಟಿನ ಸ್ಥಳಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಶ್ವಾನ ದಳ, ಮಸೂರ ದರ್ಶಕದಿಂದ ತಪಾಸಣೆ ನಡೆಸಲರಾಂಭಿಸಿದ್ದಾರೆ. ಈಗಾಗಲೇ ಉಡುಪಿ ಕೃಷ್ಣ ಮಠ, ಉಚ್ಚಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರ, ಆಟಿ ಮಾರಿಪೂಜೆ ಸಂಭ್ರಮದಲ್ಲಿರುವ ಕಾಪುವಿನ

ರಾಜ್ಯದಲ್ಲಿ ಮುಂದುವರೆದ ಮಳೆ – ಮುನ್ನೆಚ್ಚರಿಕೆಯಿಂದ ಇರುವಂತೆ ಸಿಎಂ ಸಿದ್ದರಾಮಯ್ಯ ಟ್ವೀಟ್

ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಹಠಾತ್ ಪ್ರವಾಹ ಸಂಭವಿಸಬಹುದೆಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಹಠಾತ್ ಪ್ರವಾಹ ಸಂಭವಿಸಬಹುದೆಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಎಂದಿದ್ದಾರೆ.

ಕರುನಾಡ ರತ್ನ ಪ್ರಶಸ್ತಿಗೆ v4 ಸುದ್ದಿ ವಾಹಿನಿಯ ವರದಿಗಾರ ಕೆ.ಎಂ.ಖಲೀಲ್ ಆಯ್ಕೆ

ಕರುನಾಡ ರತ್ನ ಪ್ರಶಸ್ತಿಗೆ ಕೆ.ಎಂ.ಖಲೀಲ್ ಆಯ್ಕೆ ಕಾರ್ಕಳ: ಸುಮಾರು 40 ವರ್ಷಗಳಿಂದ ಛಾಯಾಗ್ರಾಹಕ ಹಾಗೂ ವಿಡಿಯೋ ಗ್ರಾಫರ್ ಆಗಿ ದುಡಿಯುತ್ತಿರುವ ಅದರ ಜೊತೆಗೆ 17 ವರ್ಷಗಳಿಂದ ಮಂಗಳೂರಿನ ಪ್ರತಿಷ್ಠಿತ v4 ಸುದ್ದಿವಾಹಿನಿಯಕಾರ್ಕಳ ತಾಲೂಕಿನ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಎಂ.ಖಲೀಲ್ ಅವರ ಮಾಧ್ಯಮ ಕ್ಷೇತ್ರದ ಸಾಧನೆಗಾಗಿ ಈ ವರ್ಷದ ಕರುನಾಡ ರತ್ನ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಸಂಘಟಕ ಡಾ.ಬಿ.ಎನ್.ಹೊರಪೇಟಿ ತಿಳಿಸಿದ್ದಾರೆ. ಬೆಂಗಳೂರಿನ ಸುಚಿತ್ರ

ವಿಧಾನಸಭೆಯಿಂದ ಅಮಾನತುಗೊಂಡ ಬಿಜೆಪಿ ಶಾಸಕರು ಅಮಾನತು

ಬೆಂಗಳೂರು: ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ಮಾತಿನ ಚಕಮಕಿ ನಡೆದು ಸದನದಲ್ಲಿ ಬಜೆಪಿ ಶಾಸಕರು ವಿಧಾನಸಭೆ ಉಪ ಸಭಾಧ್ಯಕ್ಷರ ಮೇಲೆ ಕಾಗದ ಚೂರುಗಳನ್ನು ತೂರಿದ ಘಟನೆಗೆ ಸಂಬಂಧಿಸಿ 10 ಮಂದಿ ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಲಾಗಿದೆ. ಅಶ್ವತ್ಥ ನಾರಾಯಣ, ಆರ್.ಅಶೋಕ್, ವೇದವ್ಯಾಸ ಕಾಮತ್, ಅರಗಜ್ಞಾನೇಂದ್ರ, ಸುನೀಲ್ ಕುಮಾರ್, ಅರವಿಂದ ಬೆಲ್ಲದ್, ಯಶ್‍ಪಾಲ್ ಸುವರ್ಣ, ಧೀರಜ್ ಮುನಿರಾಜ್, ಉಮಾನಾಥ್ ಕೋಟ್ಯಾನ್, ಭರತ್

KSRTC ಪ್ರಭಾರಿ ವ್ಯವಸ್ಥಾಪಕನ ವಿರುದ್ಧ ಪ್ರತಿಭಟನೆ – ತಲೆ ಕೂದಲು ಇಟ್ಟು ಸವಿತಾ ಸಮಾಜದಿಂದ ಪ್ರತಿಭಟನೆ

ಬಸ್ ಡಿಪೋ ಸಿಬ್ಬಂದಿಗಳಿಗೆ ಬೈಯ್ಯುವ ಬರದಲ್ಲಿ ಜಾತಿ ನಿಂದನೆ ಮಾಡಿರುವ ಕೆ.ಎಸ್.ಆರ್.ಟಿ.ಸಿ ಪ್ರಭಾರಿ ವ್ಯವಸ್ಥಾಪಕ. ಜಗನ್ನಾಥ್ ಅವರನ್ನು ಕೂಡಲೇ ಕೆಲಸದಿಂದ ವಜಾಗೊಳಿಸುವಂತೆ ಆಗ್ರಹಿಸಿ ಸವಿತಾ ಸಮಾಜದ ವತಿಯಿಂದ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಸಕಲೇಶಪುರದ ಡಿಪೋ ಎದುರು ಮೂಟೆಯಲ್ಲಿ ಕೇಶ ತುಂಬಿಸಿಟ್ಟು ಸವಿತಾ ಸಮಾಜದವರು ಪ್ರತಿಭಟನೆ ನಡೆಸಿದರು. ನಮ್ಮ ಸಮುದಾಯದ ಭಾವನೆಗೆ ಧಕ್ಕೆ ತಂದಿರುವ ತಪ್ಪಿತಸ್ಥ ಅಧಿಕಾರಿಯಾದ ಡಿಪೋ ಪ್ರಭಾರಿ ವ್ಯವಸ್ಥಾಪಕ

ಮಂಜೇಶ್ವರ : ಮನೆ ಮನೆಗೆ ತೆರಳಿ ಪ್ಲಾಸ್ಟಿಕ್ ಸಂಗ್ರಹ

ಮಂಜೇಶ್ವರದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ಮೂಲನೆಗೆ ಹಸಿರು ಕರ್ಮ ಸೇನೆಯ ಕಾರ್ಯಕರ್ತರು ಮುಂದಾಗಿದ್ದಾರೆ. ಮನೆ ಮನೆಗೆ ಭೇಟಿ ನೀಡಿ ಶುಲ್ಕವನ್ನು ಪಡೆದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಕೊಂಡೊಯ್ಯುತ್ತಿರುವುದು ಸ್ಥಳೀಯರಲ್ಲಿ ಅಲ್ಪವಾದರೂ ಸಮಾಧಾನವನ್ನು ಹುಟ್ಟಿಸಿದೆ. ಕೆಲವೊಂದು ಕುಟುಂಬಗಳು ಈಗಲೂ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯಗಳನ್ನು ಹಾಕುತ್ತಿರುವುದು ಮುಂದುವರಿದಿದೆ. ಇಂತಹ ತ್ಯಾಜ್ಯಗಳನ್ನು ಹುಡುಕಿಕೊಂಡು ಬರುತ್ತಿರುವ ಬೀದಿ ನಾಯಿಗಳು

ಮಂಜೇಶ್ವರ : ತೋಟದ ಕೆಲಸಕ್ಕಿದ್ದ ವ್ಯಕ್ತಿ ಕುಸಿದು ಬಿದ್ದು ಮೃತ್ಯು || A MAN WHO WAS WORKING IN THE GARDEN COLLAPSED AND DIED

ಮಂಜೇಶ್ವರದ ವರ್ಕಾಡಿ ಕುಂಡಡ್ಕ ಎಂಬಲ್ಲಿ ರಬ್ಬರ್ ತೋಟದಲ್ಲಿ ಕೆಲಸಕ್ಕಿದ್ದ ತನಿಯ ಎಂಬ ವ್ಯಕ್ತಿ ದಿಢೀರ್ ಅಸೌಖ್ಯಕ್ಕೊಳಗಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮಜೀರ್ ಪಳ್ಳ ಟೌನ್ ಸೋಶಿಯಲ್ ವರ್ಕ್ ತಂಡದ ಅಧ್ಯಕ್ಷ ಮುಸ್ತಫಾ ಕಡಂಬಾರ್ ರವರ ನೇತೃತ್ವದ ಕಾರ್ಯಕರ್ತರು ವರ್ಕಾಡಿ ಸರಕಾರಿ ಆಸ್ಪತ್ರೆಗೆ ತಲುಪಿಸಿದ್ದಾರೆ. ಬಳಿಕ ವ್ಯಕ್ತಿಯ ವಿಳಾಸವನ್ನು ಪತ್ತೆ ಹಚ್ಚಿದ ಕಾರ್ಯಕರ್ತರು ಕಾಞಂಗಾಡಿನಲ್ಲಿರುವ ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ

 ಜೈನ ಮುನಿಗಳಾದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ನಾಪತ್ತೆಯಾದ ಪ್ರಕರಣ : ಇಬ್ಬರು ಪೊಲೀಸರ ವಶಕ್ಕೆ || Acharya Shri 108 Kamkumarnandi Maharaj

ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನ ಮುನಿಗಳಾದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೈನ ಮುನಿಗಳು ಹತ್ಯೆಯಾಗಿರುವುದು ಬೆಳಕಿಗೆ ಬಂದಿದೆ. ಜು.5ರ ರಾತ್ರಿ ಆಶ್ರಮದ ಕೋಣೆಯಲ್ಲಿದ್ದ ಮುನಿಗಳು, ಜು.6 ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದರು. ಈ ಕುರಿತು ಭಕ್ತರು ಜೈನ ಬಸದಿಯ ಸುತ್ತಮುತ್ತ ಹುಡುಕಾಟ ನಡೆಸಿದ್ದರು. ಆದರೆ, ಎಲ್ಲಿಯೂ ಪತ್ತೆಯಾಗದ ಹಿನ್ನಲೆ ಆಚಾರ್ಯ

ಬಜೆಟ್ ಸುಳ್ಳು ಭರವಸೆಗಳ ಕಂತೆ : ನಳಿನ್‌ಕುಮಾರ್ ಕಟೀಲ್

ಮಂಗಳೂರು : ಗ್ಯಾರಂಟಿ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸದೆ ರಾಜ್ಯದ ಜನತೆಯನ್ನು ವಂಚಿಸಿದ ಕಾಂಗ್ರೆಸ್ ಸರಕಾರ ಇದೀಗ ಸುಳ್ಳು ಭರವಸೆಗಳ ಬಜೆಟ್ ಮಂಡಿಸಿ ಮತ್ತೆ ಜನರ ವಂಚಿಸಲು ಪ್ರಯತ್ನಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಗ್ಯಾರಂಟಿಗಳ ಜಾರಿಗೆ 57,910 ಕೋಟಿ ರೂ. ವೆಚ್ಚ ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ. ಆದರೆ ಆದಾಯ ಸಂಗ್ರಹದ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ನಿರುದ್ಯೋಗಿ ಪದವೀಧರರಿಗೆ ಮಾಸಿಕ ಭತ್ಯೆ