Home Archive by category ರಾಜ್ಯ (Page 37)

ಸುಸ್ಥಿರ, ಸುವ್ಯಸ್ಥಿತ ಸಮನ್ವಯದ ಅಭಿವೃದ್ಧಿಗಾಗಿ ಬಿಜೆಪಿಗೆ ಜನಾದೇಶ ಖಚಿತ: ಗೋಪಾಲಕೃಷ್ಣ ಅಗರ್ವಾಲ್

ಮಂಗಳೂರು: ಸುಸ್ಥಿರ, ಸುವ್ಯವಸ್ಥಿತ ಮತ್ತು ಸಮನ್ವಯದ ಅಭಿವೃದ್ಧಿ ಕಾರ್ಯಗಳಿಗಾಗಿ ಕರ್ನಾಟಕದಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರಕಾರವನ್ನು ಪುನರಾಯ್ಕೆ ಮಾಡುವುದು ನಿಶ್ಚಿತವಾಗಿದೆ ಎಂದು ಬಿಜೆಪಿಯ ರಾಷ್ಟ್ರೀಯ ವಕ್ತಾರ ಗೋಪಾಲಕೃಷ್ಣ ಅಗರ್ವಾಲ್ ಪ್ರತಿಪಾದಿಸಿದರು. ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತವನ್ನು 5

ಸಮಾನ ಮನಸ್ಕರು ಒಂದಾಗಿ ಬಿಜೆಪಿ ಸೋಲಿಸಬೇಕು : ರಮಾನಾಥ ರೈ

ಬಂಟ್ವಾಳ : ಮತೀಯವಾದಿ, ಫ್ಯಾಸಿಸ್ಟರಿಂದ ದೇಶಕ್ಕೆ ಅಪಾಯವಿದೆ. ಒಂದೇ ದೇಶ, ಒಂದೇ ಪಕ್ಷ, ಒಂದೇ ನಾಯಕತ್ವ ಎಂಬರ್ಥದಲ್ಲಿ ಬಿಜೆಪಿಗರು ಮಾತನಾಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಮುನ್ಸೂಚನೆಯಾಗಿದೆ. ಹೀಗಾಗಿ ಸಮಾನ ಮನಸ್ಕರು ಒಂದಾಗಿ ಚುನಾವಣೆ ಎದುರಿಸಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ಬಂಟ್ವಾಳದಲ್ಲಿ ನಡೆದ ಸಿಪಿಐ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು. ಎಡಪಂಥಿಯ ಚಿಂತನೆಗಳು ಹಾಗೂ

ಉಳ್ಳಾಲ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನ ಬೆಂಬಲ ಇಲ್ಲ : ರಿಯಾಝ್ ಫರಂಗಿಪೇಟೆ

ಉಳ್ಳಾಲ : ಮೇ 10 ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಎಸ್.ಡಿ.ಪಿ.ಐ ಪಕ್ಷಕ್ಕೆ ಕ್ಷೇತ್ರದಲ್ಲಿ ಅಭೂತಪೂರ್ವ ಜನಬೆಂಬಲ ದೊರೆಯುತ್ತಿದ್ದು, ಕಾಂಗ್ರೆಸ್ ಪಕ್ಷಕ್ಕೆ ಮತ ಯಾಚನೆ ಮಾಡಲು ಕಾರ್ಯಕರ್ತರು ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆಯಲ್ಲದೆ ಜನ ಸಾಮಾನ್ಯರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಎಂದು ಎಸ್.ಡಿ. ಪಿ.ಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಅವರು,

ಮಲ್ಲೇಶ್ವರಂ : ಕಾಂಗ್ರೆಸ್ ನಿಂದ ಬೃಹತ್ ರೋಡ್ ಶೋ

ಬೆಂಗಳೂರು : ಕಾಂಗ್ರೆಸ್ ಅಭ್ಯರ್ಥಿ ಅನೂಪ್ ಅಯ್ಯಂಗಾರ್ ಪರ ಮಾಜಿ ಸಚಿವ ಎಂ.ಆರ್.ಸೀತಾರಾಂ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು. ಸಹಸ್ರಾರು ಕಾಂಗ್ರೆಸ್ ಕಾರ್ಯಕರ್ತರು ಏರ್ ರ್ಪೋರ್ಸ್, ಅಶೋಕ್ ನಗರ, ರಾಮಯ್ಯ ರಸ್ತೆ, ಮತ್ತಿಕೆರೆ, ತ್ರಿವೇಣೆ ರಸ್ತೆ ಯಶವಂತಪುರ ಸರ್ಕಲ್, ಸುಬ್ರಮಣ್ಯನಗರ ,ಮಿಲ್ಕ್ ಕಾಲೋನಿ, ಗಾಯಿತ್ರಿನಗರ ಮೂಲಕ ಬೃಹತ್ ರೋಡ್ ಶೋ ಸಾಗಿತು. ನೂರಾರು ಬೈಕ್ ಗಳು, ಕಲಾತಂಡಗಳು ರೋಡ್ ಶೋಗೆ ಮೆರಗು ನೀಡಿತು. ಇದೇ ಸಂದರ್ಭದಲ್ಲಿ ಸೀತಾರಾಂ ಮಾತನಾಡಿ

ಕಟಪಾಡಿ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಮತಯಾಚನೆ

ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರು ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಪ್ರಮುಖರು ಜೊತೆಗಿದ್ದರು.

ಕಾಪು ಪಡು ವ್ಯಾಪ್ತಿಯಲ್ಲಿ ಕೋಟ ಶ್ರೀನಿವಾಸ ಪೂಜಾರಿಯೊಂದಿಗೆ ಗುರ್ಮೆ ಮತ ಯಾಚನೆ

ಕಾಪು ಪುರಸಭೆ ವ್ಯಾಪ್ತಿಯ ಕಾಪು ಪಡು ಗ್ರಾಮ ವ್ಯಾಪ್ತಿಯ ರಾಮನಗರ ಕಾರ್ಯಕರ್ತರ ಸಭೆಯಲ್ಲಿ ವಿಧಾನ ಸಭಾ ಚುನಾವಣೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಮಾನ್ಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಕ್ಷೇತ್ರ ಚುನಾವಣೆ ಉಸ್ತುವಾರಿ ಸುಲೋಚನಾ ಭಟ್, ಹಿರಿಯರಾದ ಗಂಗಾಧರ್ ಸುವರ್ಣ, ಪುರಸಭೆ ಬಿಜೆಪಿ ಅಧ್ಯಕ್ಷರು ಸಂದೀಪ್ ಶೆಟ್ಟಿ, ಪುರಸಭೆ ಸದಸ್ಯರು ನಿತಿನ್ ಕುಮಾರ್,

ಪಡುಬಿದ್ರಿ ಬಿಜೆಪಿ ಮಹಾಶಕ್ತಿ ಕೇಂದ್ರದ ಚುನಾವಣಾ ಕೇಂದ್ರ : ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರಿಂದ ಉದ್ಘಾಟನೆ

ಭಾರತೀಯ ಜನತಾ ಪಾರ್ಟಿ ಪಡುಬಿದ್ರಿ ಮಹಾಶಕ್ತಿಕೇಂದ್ರದ ಚುನಾವಣಾ ಕಾರ್ಯಾಲಯದ ಉದ್ಘಾಟನೆಯನ್ನು ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಚುನಾವಣೆಗೆ ಸ್ಪರ್ಧಿಸಲು ಆರಂಭದಲ್ಲಿ ಪೈಪೋಟಿ, ಆದರೆ ಪಕ್ಷ ನಿರ್ಣಯಿಸಿ ಟಿಕೇಟ್ ಒರ್ವರಿಗೆ ನೀಡಿತು ಎಂದಾದರೆ, ಮತ್ತೆ ನಮ್ಮ ಅಭ್ಯರ್ಥಿ ಪರ ನಿಷ್ಠೆಯಿಂದ ಕೆಲಸ ನಡೆಸುವುದೇ ನಮ್ಮ ಪಕ್ಷದ ಸಿದ್ಧಾಂತ. ಈ ಹಿಂದೆ ನಾನು

ವಿಧಾನ ಸಭಾ ಚುನಾವಣೆ-ಪುತ್ತೂರಿನಲ್ಲಿ ಒಟ್ಟು 13 ಮಂದಿಯಿಂದ ನಾಮಪತ್ರ ಸಲ್ಲಿಕೆ

ಪುತ್ತೂರು: ಕರ್ನಾಟಕ ವಿಧಾನ ಸಭಾ ಚುನಾವಣೆ- 2023ಕ್ಕೆ ಸಂಬಂಧಿಸಿದಂತೆ ಪುತ್ತೂರು ವಿಧಾನ ಸಭಾ ಕ್ಷೇತ್ರ-206ರಲ್ಲಿ ಒಟ್ಟು 13 ನಾಮಪತ್ರಗಳು ಸಲ್ಲಿಕೆಯಾಗಿದೆ. ಎ.13ರಂದು ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡು ನಾಮಪತ್ರ ಸಲ್ಲಿಸುವ ಪ್ರಕ್ರಿಯೆಗಳು ಪ್ರಾರಂಭಗೊಂಡು ನಾಮಪತ್ರ ಸಲ್ಲಿಸಲು ಎ.20 ಅಂತಿಮ ದಿನವಾಗಿತ್ತು. ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆಯಾಗಿರುವ ಕಡಬ ತಾಲೂಕು ಕುಂತೂರು ಕುಂಡಡ್ಕದ ಆಶಾ ತಿಮ್ಮಪ್ಪ, ಕಾಂಗ್ರೆಸ್ ಪಕ್ಷದ

ಬ್ಯಾಟರಾಯನಪುರದ ಕುವೆಂಪು ನಗರದಲ್ಲಿ ಕೃಷ್ಣ ಭೈರೇಗೌಡರ ಪರ ಮತಯಾಚನೆ

ಬ್ಯಾಟರಾಯನಪುರ ವಿಧಾನಸಭಾ ಕ್ಷೇತದ ಕುವೆಂಪು ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣ ಭೈರೇಗೌಡರ ಪರವಾಗಿ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಮತಯಾಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಾ ರಾಮಯ್ಯ, ಕೃಷ್ಣ ಭೈರೇಗೌಡ ಮಾದರಿ ರಾಜಕಾರಣಿಯಾಗಿದ್ದು, ಕ್ಷೇತ್ರದಲ್ಲಿ ಜನಪರ ಕೆಲಸ ಮಾಡುತ್ತಿದ್ದಾರೆ. ಕೃಷ್ಣ ಭೈರೇಗೌಡರನ್ನು ಅಧಿಕ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಿನಾಕ್ಷೀ ಕೃಷ್ಣ

ಏ.23ಕ್ಕೆ ಬೈಂದೂರಿಗೆ ಡಿಕೆಶಿ

ಕುಂದಾಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಮಕುಮಾರ್ ಅವರು ಎ.23ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ಬೈಂದೂರಿನಲ್ಲಿ ನಡೆಯಲಿರುವ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಬೈಂದೂರು ಕಾಂಗ್ರೆಸ್ ಕಛೇರಿಯಲ್ಲಿ ಆಯೋಜಿಸಲಾದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, ಕ್ಷೇತ್ರದಲ್ಲಿ ಈಗಾಗಲೇ ಕಾಂಗ್ರೆಸ್ ಪರ ಅಲೆ ಇದ್ದು, ಡಿಕೆಶಿ ಅವರ ಕಾರ್ಯಕ್ರಮದಲ್ಲಿಯೇ ಬಿಜೆಪಿಯ ಹಲವು ಮುಖಂಡರು ಹಾಗೂ