Home Archive by category ರಾಜ್ಯ (Page 50)

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತಿಪ್ಪಣ್ಣ ಹೆಳವರ ಇವರಿಗೆ ಅಭಿನಂದನಾ ಕಾರ್ಯಕ್ರಮ

ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಖಾನಾಪುರ ಗ್ರಾಮದ ಶ್ರೀ ವೀರಗಂಟಿ ಮಡಿವಾಳೇಶ್ವರ ದೇವಸ್ಥಾನದಲ್ಲಿ 2022-,2023ನೇ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀ ತಿಪ್ಪಣ್ಣ ಹೆಳವರ ನಾಗನೂರ ಇವರಿಗೆ ಖಾನಾಪುರ ಗ್ರಾಮದ ಅಖಿಲ ಕರ್ನಾಟಕ ಹೆಳವ ಸಮಾಜದಿಂದ ಅಭಿನಂದನಾ ಗೌರವದಿಂದ ಸನ್ಮಾನಿಸಿದರು.ಈ ವೇಳೆ ಪೂಜ್ಯ ಶ್ರೀ ಕಲ್ಯಾಣದಯ್ಯ ಸ್ವಾಮೀಜಿಗಳು

ರಾಜ್ಯದಲ್ಲಿ 3 ದಿನ ಭಾರೀ ಮಳೆ : ಭಾರತೀಯ ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರಾವಳಿಯ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಹೆಚ್ಚು ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡು, ಮಲೆನಾಡು, ಕರಾವಳಿ ಭಾಗಗಳಲ್ಲಿ ನ. 17ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ,

ಬಂಡೀಪುರದ ಬಫರ್ ವಲಯದಲ್ಲಿ ಹುಲಿಗಳ ಉಪಟಳ: ಹುಲಿ ಪತ್ತೆಗೆ ಕ್ಯಾಮೆರಾ ಅಳವಡಿಕೆ

ಗುಂಡ್ಲುಪೇಟೆ ತಾಲೋಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಫರ್ ವಲಯದ ತೆರಕಣಾಂಬಿ ಸೆಕ್ಷನ್ 4ರ ಕಾಡಂಚಿನ ಗ್ರಾಮಗಳ ಸರಹದ್ದಿನ ದೇಪಾಪುರದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹುಲಿ ಉಪಟಳ ನೀಡುತ್ತಿದ್ದು ಜಾನುವಾರುಗಳ ಮೇಲೆ ದಾಳಿ ಮಾಡುತಿದೆ ಎಂದು ಗ್ರಾಮಸ್ಥರು ಮತ್ತು ಜನಪ್ರತಿನಿಧಿಗಳ ದೂರು ನೀಡಿದ ಹಿನ್ನೆಲೆಯಲ್ಲಿ ಬಂಡೀಪುರ ಹುಲಿ ಯೋಜನೆಯ ಅರಣ್ಯ ಸಂರಕ್ಷಣಧಿಕಾರಿ ಮತ್ತು ನಿರ್ದೇಶಕರಾದ ಪಿ.ರಮೇಶ್ ಕುಮಾರ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದರು. ಮುಖ್ಯ

ಬೆಂಗಳೂರು : ಅರಮನೆಯಂತೆ ಕಂಗೋಳಿಸುತ್ತಿದೆ ಕೆಂಪೇಗೌಡ ವಿಮಾನ ನಿಲ್ದಾಣ

ದೇಶಿ ಹಾಗೂ ವಿದೇಶಿ ಪ್ರಯಾಣಿಕರಿಗೆ ಐಶಾರಾಮಿ ಸೇವೆಯನ್ನು ಇಲ್ಲಿ ಒದಗಿಸಲಾಗುತ್ತದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನವ ವಿನ್ಯಾಸದ ಹೈಟೆಕ್ ನಿಲ್ದಾಣ ಅನಾವರಣಗೊಂಡಿದೆ ಟರ್ಮಿನಲ್ 2 ಅನ್ನು ಉದ್ಯಾನ ನಗರಿ ಬೆಂಗಳೂರಿನ ಗೌರವಾರ್ಥವಾಗಿ ವಿನ್ಯಾಸಗೊಳಿಸಲಾಗಿದೆ. ಉದ್ಯಾನವನದಲ್ಲಿ ನಡೆದಂತ ಅನುಭವವನ್ನು ಇದು ಪ್ರಯಾಣಿಕರಿಗೆ ನೀಡುತ್ತದೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುಮಾರು 5000 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಹೊಸ

ಆಲೂರಿನಲ್ಲಿ ವ್ಯಕ್ತಿಯ ಮೇಲೆ ಕಾಡಾನೆ ದಾಳಿ

ಆಲೂರು ತಾಲೂಕಿನ ಪಾಳ್ಯ ಹೋಬಳಿ ನೀಡನೂರು ಗ್ರಾಮದ ದೇವರಾಜು ಎಂಬುವರನ್ನು 15 ದಿನದ ಹಿಂದೆ ಕಾಡಾನೆ ದಾಳಿ ಮಾಡಿ ಪ್ರಾಣಾಪಯದಿಂದ ಪಾರಾಗಿ ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಅರಣ್ಯ ವಲಯ ಅಧಿಕಾರಿ ಮರಿಸ್ವಾಮಿ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅರಣ್ಯ ವಲಯ ಅಧಿಕಾರಿ ಮರಿಸ್ವಾಮಿಯವರು ಮೇಲಾಧಿಕಾರಿಯವರ ಸಮ್ಮುಖದಲ್ಲಿ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲು

ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ (Lohitashwa) ನಿಧನರಾಗಿದ್ದಾರೆ. ಹಲವು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಐಸಿಯುನಲ್ಲಿ ಇರಿಸಲಾಗಿತ್ತು. ಇಂದು (ನವೆಂಬರ್ 8) ಅವರು ಕೊನೆಯುಸಿರು ಎಳೆದಿದ್ದಾರೆ. ಲೋಹಿತಾಶ್ವ ಅವರಿಗೆ 80 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ಅವರಿಗೆ ಇನ್ಫೆಕ್ಷನ್​ ಆಗಿತ್ತು. ಹಾಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಇನ್ನೇನು ಗುಣಮುಖರಾಗುತ್ತಾರೆ

ಸರ್ವ ಧರ್ಮ ಸಮ್ಮೇಳನ : ಧರ್ಮ ಸಾಗರದಲ್ಲಿ ಸೌಹಾರ್ದತೆಯ ಅಲೆಗಳಾಗಿ ಸಾಗೋಣ – ಮುನಿ ಶ್ರೀ ರಶ್ನಿ ಕುಮಾರ್ ಜೀ

ಬೆಂಗಳೂರು: ನ, 6: ವಿಜಯನಗರಜ ಅರ್ಹಂ ಭವನದಲ್ಲಿ ಧರ್ಮ ಧರ್ಮಗಳ ನಡುವೆ ಸಾಮರಸ್ಯ ಬೆಸೆಯುವ ಸರ್ವ ಧರ್ಮ ಸಮ್ಮೇಳನ ಹಾಗೂ ಸರ್ವಧರ್ಮ ಆಧ್ಯಾತ್ಮಿಕ ಸ್ನೇಹ ಮಿಲನ-2022 ಕಾರ್ಯಕ್ರಮ ಸಂತಸ, ಸಡಗರದಿಂದ ನೆರವೇರಿತು. ಧರ್ಮ ಧರ್ಮಗಳ ನಡುವೆ, ಧಾರ್ಮಿಕ ಮುಖಂಡರ ಮಧ್ಯೆ ಪರಸ್ಪರ ಗೌರವ ನೀಡುವ, ಆಲಂಗಿಸಿಕೊಂಡು ಬೆನ್ನು ತಟ್ಟುವ, ಸಾಮರಸ್ಯದಲ್ಲಿ ನಿಮಗಿಂತ ನಾವೇ ಒಂದು ಹೆಜ್ಜೆ ಮುಂದೆ ಎನ್ನುವ ಭಾವನೆ ಪ್ರತಿಯೊಬ್ಬರಲ್ಲೂ ಕಂಡು ಬಂತು. ಸಮ್ಮೇಳನದಲ್ಲಿ ವಿಶ್ವ ಮಾನವ ಸಂದೇಶ

ಕೇರಳದ ಅನನ್ಯತೆ ಅರಸಿ ಗ್ರಾಮಗಳ ಪ್ರವಾಸದಲ್ಲಿರುವ ಯುವಕರು

ಮಂಜೇಶ್ವರ: ಜಗತ್ತಿನ ಮಲಯಾಳಿಗಳಿಗೆ ಕೇರಳದ ಬಗ್ಗೆ ವಿಭಿನ್ನ ಅಭಿವ್ಯಕ್ತಿ ನೀಡುವ ಹಾಗೂ ಕೇರಳವನ್ನು ಸುಲಭವಾಗಿ ಅರ್ಥ ಮಾಡಿಕೊಳ್ಳುವ ನಿಟ್ಟಿನಲ್ಲಿ ಮಲಪ್ಪುರಂ ಜಿಲ್ಲೆಯ ಇಬ್ಬರು ಯುವಕರು ಕೇರಳದ ಅನನ್ಯತೆ ಅರಸಿ ಗ್ರಾಮಗಳ ಪ್ರವಾಸದ ಹೆಸರಿನಲ್ಲಿ ಕೇರಳದ ಉತ್ತರ ಭಾಗವಾದ ಗಡಿನಾಡ ಪ್ರದೇಶಕ್ಕೆ ತಲುಪಿದ್ದಾರೆ. ಕೇರಳ ಎಂದರೇನು ಎಂಬುದನ್ನು ತಿಳಿದುಕೊಳ್ಳಲು ಹಾಗೂ ಅಲ್ಲಿನ ಭಾಷೆ, ಸಂಸ್ಕೃತಿ, ಅಭಿರುಚಿ, ವಿವಿಧ ವ್ಯಾಪಾರ, ಕೃಷಿ, ಪ್ರವಾಸೋದ್ಯಮ ಮತ್ತಿತರ ಅಪರೂಪದ

ರಾಜ್ಯಮಟ್ಟದ ವಿಶ್ವಕರ್ಮ ಕಾಷ್ಠಶಿಲ್ಪ ಸಭಾ ದಶಮಾನೋತ್ಸವ ಆಚರಣೆ

ಬೆಂಗಳೂರು; ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕೌಶಲ್ಯ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದು, ಈ ಯೋಜನೆಯಡಿ ಇರುವ ಉಜ್ವಲ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಅರಿವು ಮೂಡಿಸಲು ನವೆಂಬರ್ 6 ರಂದು ಯಲಹಂಕದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ವಿಶ್ವಕರ್ಮ ಕಾಷ್ಠಶಿಲ್ಪ ಸಭಾ ದಶಮಾನೋತ್ಸವ ಸಮಾರಂಭ ಆಯೋಜಿಸಲಾಗಿದೆ ಎಂದು ವಿಶ್ವ ಕರ್ಮ ಕಾಷ್ಠಶಿಲ್ಪ ಅಧ್ಯಕ್ಷ ಎಮ್.ಜಿ. ನಾಗೇಶ್ ಆಚಾರ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮರದ

ಬಂಡೀಪುರ : ಜಿಂಕೆ ಮಾಂಸ ಸಹಿತ ಓರ್ವ ಆರೋಪಿಯ ಬಂಧನ

ಗುಂಡ್ಲುಪೇಟೆ ತಾಲೂೀಕಿನ ಬಂಡೀಪುರ ಹುಲಿ ಪ್ರದೇಶದ ಮದ್ದೂರು ವಲಯದ ನೇರಳೆ ಮರದ ಅರಣ್ಯ ಪ್ರದೇಶದಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಹೊತ್ತುಕೊಂಡು ಬರುತ್ತಿದ್ದ ವೇಳೆ ಅರಣ್ಯಾಧಿಕಾರಿಗಳಿ ದಾಳಿ ಮಾಡಿ ಓರ್ವನನ್ನು ಬಂಧಿಸಿರುವ ಘಟನೆ ನಡೆದಿದೆ. ಮದ್ದೂರು ಕಾಲೋನಿಯ ಷಣ್ಮುಖ(35) ಬಂಧಿತ ಆರೋಪಿ. ಉಳಿದ ನಾಲ್ಕು ಮಂದಿ ಪರಾರಿಯಾಗಿದ್ದಾರೆ. ಮದ್ದೂರು ವಲಯದ ನೇರಳೆ ಮರದ ಅರಣ್ಯ ಪ್ರದೇಶದ ಉಪ ವಲಯ ಅರಣ್ಯಾಧಿಕಾರಿ ರವಿಕುಮಾರ್ ಸಗೂರು , ಅರಣ್ಯ ರಕ್ಷಕ ನವೀನ ಹಾಗೂ ಸಿಬ್ಬಂದಿ