Home Archive by category ರಾಜ್ಯ (Page 51)

ಮಕ್ಕಳ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮುಂಬೈ: ಮಲಾಡ್‍ಪೂರ್ವದ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಯುವ ವಿಭಾಗದ ಆಶ್ರಯದಲ್ಲಿ ಅಕ್ಟೋಬರ್ 30ರಂದು ಮಲಾಡ್ ಪೂರ್ವದ ಚಿಲ್ಡ್ರನ್ಸ್ ಅಕಾಡೆಮಿ ಶಾಲೆಯ ಸಭಾಂಗಣದಲ್ಲಿ ದಿನಪೂರ್ತಿ ನಡೆಯಲಿರುವ ಮಕ್ಕಳ ಉತ್ಸವದ ಆಮಂತ್ರನ ಪತ್ರಿಕೆಯನ್ನು ಬಿಲ್ಲವರ ಅಸೋಸಿಯೇಷನ್ ಮಲಾಡ್ ಸ್ಥಳೀಯ ಕಚೇರಿಯ ಕಾರ್ಯಾಲಯದಲ್ಲಿ ಪೂಜಾ ಸಮಿತಿಯ ಅಧ್ಯಕ್ಷರಾದ ನ್ಯಾಯವಾದಿ ಜಗನ್ನಾಥ್

ಕುಂಬಳೆ ಅನಂತಪುರ ಶ್ರೀ ಪದ್ಮನಾಭ ದೇವಸ್ಥಾನ : ದೇವರ ಮೊಸಳೆ “ಬಬಿಯಾ” ವಿಧಿವಶ

ಕಾಸರಗೋಡು ಜಿಲ್ಲೆಯ ಕುಂಬಳೆಯ ಅನಂತಪುರ ಶ್ರೀ ಪದ್ಮನಾಭ ದೇವಸ್ಥಾನದ ಕೆರೆಯಲ್ಲಿ ಬಹುಕಾಲದಿಂದ ಇದ್ದ ದೇವರ ಮೊಸಳೆ ಎಂದು ಪ್ರತೀತಿ ಪಡೆದಿದ್ದ ಬಬಿಯಾ ಎಂಬ ಹೆಸರಿನ ಮೊಸಳೆ ಮೃತಪಟ್ಟಿದೆ. ದೇವಸ್ಥಾನದ ನಿತ್ಯದ ಮಧ್ಯಾಹ್ನದ ಪೂಜೆಯ ಬಳಿಕ ಅನ್ನ ನೈವೇದ್ಯವನ್ನು ಮೊಸಳೆಗೆ ಬಡಿಸಲಾಗುತ್ತಿತ್ತು. ದೇವಸ್ಥಾನದ ನೈವೇದ್ಯವನ್ನು ತಿಂದು ಬದುಕುತ್ತಿದ್ದ ಈ ಬಬಿಯಾ ಹೆಸರಿನ ಮೊಸಳೆ ಯಾವತ್ತಿಗೂ ಜನರಿಗೆ ತೊಂದರೆ ಮಾಡಿದ್ದೆ ಇಲ್ಲ. ಕೆಲವೊಮ್ಮೆ ದೇವಸ್ಥಾನದ ಕೆರೆಯಿಂದ ಸಮೀಪದ

ಭಾರತ್ ಜೋಡೋ : ರಾಹುಲ್ ಜೊತೆಯಾದ ಎಂ.ಆರ್. ಸೀತಾರಾಂ: ಯಾತ್ರೆಯ ಸಕಾರಾತ್ಮಕ ಪರಿಣಾಮಗಳ ಕುರಿತು ಚರ್ಚೆ

ಬೆಂಗಳೂರು,ಅ,8: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರೊಂದಿಗೆ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಎಂ.ಆರ್.ಸೀತಾರಾಂ ಇಂದು ಜೊತೆಯಾದರು. ತುಮಕೂರು ಜಿಲ್ಲೆಯ ಮಾಯಸಂದ್ರದಿಂದ ಬಾನಸಂದ್ರ ವರೆಗೆ ಮೂರು ಗಂಟೆಗಳ ಕಾಲ 12 ಕಿಲೋಮೀಟರ್ ದೂರ ಸಾಗಿದರು. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಪಾದಯಾತ್ರೆ ಯಶಸ್ವಿಯಾಗುತ್ತಿರುವ ಬಗ್ಗೆ ಎಂ.ಆರ್. ಸೀತಾರಾಂ ಸಂತಸ ಹಂಚಿಕೊಂಡರು. ಪಕ್ಷ ಸಂಘಟನೆ ಕುರಿತಂತೆಯೂ ಚರ್ಚಿಸಿದರು. ಬಳಿಕ

ಮೀಸಲಾತಿ ಹೆಚ್ಚಳ ಅನುಮೋದನೆ ಪಡೆಯಲು ವಿಶೇಷ ಅದಿವೇಶನ ಸಧ್ಯಕಿಲ್ಲ

ಎಸ್ಸಿ, ಎಸ್‍ಟಿ ಮೀಸಲಾತಿ ಪ್ರಮಾಣ ಹಳ್ಳಕ್ಕೆ ರಾಜ್ಯ ಸರ್ಕಾರ ಸಂಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಲಭಿಸಿದ್ದು, ಇದಕ್ಕಾಗಿ ಸದನದ ಅನುಮೋದನೆ ಪಡೆಯುವುದಕ್ಕೆ ಸದ್ಯಕ್ಕೆ ವಿಶೇಷ ಅಧಿವೇಶನ ಕರೆಯುವ ಸಾಧ್ಯತೆ ಇಲ್ಲ ಎಂದು ತಿಳಿದು ಬಂದಿದೆ. ನ್ಯಾಯಾಧೀಶ ನಾಗಮೋಹನ್ ದಾಸ್ ವರದಿ ಅನುಷ್ಠಾನಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಎಂದು ಸಂಪುಟ ಸಭೆ ನಂತರ ಕಾನೂನು ಸಚಿವ ಮಾಧುಸ್ವಾಮಿ ಹೇಳಿಕೆ ನೀಡಿದ್ದಾರೆ. ಎಸ್‍ಸಿ ಸಮುದಾಯದ ಮೀಸಲಾತಿ ಪ್ರಮಾಣ 15-17ಕ್ಕೆ

ಉದ್ಯಾವರ : ಅಂಡರ್ ಪಾಸ್ ನಿರ್ಮಾಣಕ್ಕೆ ಆಗ್ರಹ

ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ಕಾಮಗಾರಿ ನಡೆಯುತ್ತಿರುವ ಉದ್ಯಾವರದಲ್ಲಿ ಅಂಡರ್ ಪಾಸ್ ನಿರ್ಮಿಸಿ ರಸ್ತೆಯ ಇಕ್ಕೆಡೆಗಳಲ್ಲಿರುವವರಿಗೆ ಆಚೀಚೆ ದಾಟಲು ಸೌಕರ್ಯವನ್ನು ಒದಗಿಸಿ ಕೊಡಬೇಕೆಂದು ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಹಾಗೂ ಊರವರು ನಡೆಸುತ್ತಿರುವ ಪ್ರತಿಭಟನಾ ಧರಣಿಗೆ ಅಧಿಕೃತರ ಭಾಗದಿಂದ ಸ್ಪಂದನೆ ಇಲ್ಲದೇ ಇರುವ ಹಿನ್ನೆಯಲ್ಲಿ ಧರಣಿಯನ್ನು ಅನಿರ್ಧಿಷ್ಟಾವಧಿಗೆ ಮುಂದುವರಿಸಿದ್ದಾರೆ. ಮಂಜೇಶ್ವರ ಶಾಸಕ ಎಕೆ ಎಂ ಅಶ್ರಫ್ ರವರ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ:ನಾಟಕಕಾರ, ಸಾಹಿತ್ಯ ಮತ್ತು ಸಮಾಜ ಸೇವಕ ದಿ ಎ. ಶಿವಾನಂದ ಕರ್ಕೇರ ಅವರ ಸವಿ ನೆನಪು ಕಾರ್ಯಕ್ರಮ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ನಾಟಕಕಾರ, ಸಾಹಿತ್ಯ ಮತ್ತು ಸಮಾಜ ಸೇವಕ ದಿ ಎ. ಶಿವಾನಂದ ಕರ್ಕೇರ ಅವರ ಸವಿ ನೆನಪು ಕಾರ್ಯಕ್ರಮವನ್ನು ನಗರದ ತುಳು ಭವನದಲ್ಲಿ ಆಯೋಜಿಸಲಾಗಿತ್ತು. ಮಂಗಳೂರಿನ ಉರ್ವಸ್ಟೋರಿನ ತುಳಭವನದಲ್ಲಿ ಸಿರಿ ಚಾವಡಿಯಲ್ಲಿ ನಾಟಕಕಾರ , ಸಾಹಿತ್ಯ ಮತ್ತು ಸಮಾಜ ಸೇವಕ ದಿ ಎ. ಶಿವಾನಂದ ಕರ್ಕೇರ ಅವರ ಸವಿ ನೆನಪು ಕಾರ್ಯಕ್ರಮದ ಪ್ರಯಕ್ತ ಅವರ ಭಾವಚಿತ್ರಕ್ಕೆ ಗಣ್ಯರು ಪುಪ್ಪನಮನ ಸಲ್ಲಿಸಿದರು. ಇನ್ನು ಸಭಾ ಕಾರ್ಯಕ್ರಮವನ್ನು ಪ್ರಪುಲ್ಲ

ಗುಜರಾತ್ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ವಿಷ್ಣುಪಾಂಡ್ಯಾವರವರಿಗೆ ‘ಲಿಟೆರರಿ ಅವಾರ್ಡ್’

ಬೆಂಗಳೂರಿನ ಸೌಂದರ್ಯ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ ಸಭಾಂಗಣದಲ್ಲಿ ಗ್ಲೋಬಲ್ ಮೋಟಿವೇಷನಲ್ ಸ್ಟ್ರಿಪ್ಸ್ ಅಡ್ಮಿನಿಸ್ಟ್ರೇಷನ್ ಹಾಗೂ ಗುಜರಾತ್ ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ ಆಯೋಜಿಸಿದ್ದ ‘ಲಿಟೆರರಿ ಅವಾರ್ಡ್’ ಕಾರ್ಯಕ್ರಮವನ್ನು ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಧ್ಯಕ್ಷರು ಮತ್ತು ಎಲ್ಲಾ ಅತಿಥಿ ಗಣ್ಯರು ಸೇರಿ ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಅತಿಥಿಗಳಾದ ಕರ್ನಾಟಕ

ಅನ್ಯಜಾತಿಯ ಯುವಕನೊಂದಿಗೆ ಮಗಳು ಪರಾರಿ ,ಕುಟುಂಬದ ಮೂವರು ಆತ್ಮಹತ್ಯೆ

ಶಿಡ್ಲಘಟ್ಟ : ಶಿಡ್ಲಘಟ್ಟ ಗ್ರಾಮಾಂತರ ಪೋಲಿಸ್ ಠಾಣೆಯ ವ್ಯಾಪ್ತಿಯ ಹಂಡಿಗನಾಳ ಗ್ರಾಮದಲ್ಲಿ ಮಗಳು ಅನ್ಯಜಾತಿ ಯುವಕನೊಂದಿಗೆ ಪರಾರಿಯಾದ ಕಾರಣ ಮನನೊಂದು ಒಂದೇ ಕುಟುಂಬದ ಮೂವರು ವಿಷಪೂರಿತ ಗುಳಿಗೆ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡವರು ಶ್ರೀರಾಮಪ್ಪ,ಸರೋಜ ಹಾಗೂ ಮನೋಜ್ ಎಂದು ತಿಳಿದುಬಂದಿದೆ.ಅರ್ಚನಾ ಎಂಬಾಕೆ ಹಂಡಿಗನಾಳ ಗ್ರಾಮದ ಚಾಲಕ ನಾರಾಯಣಸ್ವಾಮಿ ಎಂಬಾತನೊಂದಿಗೆ ಪರಾರಿಯಾಗಿದ್ದಳು. ಇದರಿಂದ ಮನನೊಂದ ಆಕೆಯ ತಂದೆ, ತಾಯಿ

ಡಾ.ಎಸ್ ರಾಧಾಕೃಷ್ಣನ್ ಅವರ ನೆನಪಿಗಾಗಿ ಶಿಕ್ಷಕ್ ಸಮ್ಮಾನ್-2022

ಸ್ವತಂತ್ರ ಮಾನ್ಯತೆ ಪಡೆದ ಶಾಲಾ ಶಿಕ್ಷಕರ ಒಕ್ಕೂಟ ಪಸ್ಟ್ ಕರ್ನಾಟಕ ಸಂಸ್ಥೆಯು ಡಾ.ಎಸ್ ರಾಧಾಕೃಷ್ಣನ್ ಅವರ ನೆನಪಿಗಾಗಿ ಶಿಕ್ಷಕ್ ಸಮ್ಮಾನ್-2022 ಅನ್ನು ಆಯೋಜಿಸಲಾಗಿತ್ತು. “ಶಿಕ್ಷಣದ ಚೇತರಿಕೆಯ ಹೃದಯದಲ್ಲಿ ಶಿಕ್ಷಕರು” ಎಂಬ ವಿಷಯದೊಂದಿಗೆ ಅಂತರರಾಷ್ಟ್ರೀಯ ಶಿಕ್ಷಕರ ದಿನವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಬಿಝಡ್ ಸಂಸ್ಥೆಯ ಅಧ್ಯಕ್ಷರಾದ ಡಾ ಅಫ್ಶಾದ್ ಅಹ್ಮದ್ ಮತ್ತು ಪ್ರಧಾನ ಕಾರ್ಯದರ್ಶಿ ಬೀಬಿ ಆಯಿಷಾ ಶೇಖ್ ಮತ್ತು ಇಸಿ ಮತ್ತು ಸದಸ್ಯರು

ದಲಿತ ಮಹಿಳೆಗೆ ಸೇರಿರುವ ಎರಡು ಎಕರೆ ಭೂಮಿ ಕಬಳಿಸಿದ ಆರ್ಟ್ ಆಫ್ ಲೀವಿಂಗ್ ಆಶ್ರಮ: ಸಮತಾ ಸೈನಿಕ ದಳದಿಂದ ಬೃಹತ್ ಹೋರಾಟದ ಎಚ್ಚರಿಕೆ

ಬೆಂಗಳೂರು; ಆರ್ಟ್ ಆಫ್ ಲೀವಿಂಗ್ ನ ಶ್ರೀ ರವಿಶಂಕರ್ ಗುರೂಜಿ ಆಶ್ರಮದಿಂದ ದಲಿತ ವೃದ್ಧ ಮಹಿಳೆಗೆ ಸೇರಿದ ಎರಡು ಎಕರೆ ಭೂಮಿ ಕಬಳಿಸಿದ್ದು, ಇದನ್ನು ವಿರೋಧಿಸಿ ಕನಕಪುರ ರಸ್ತೆಯ ಉದಿಪಾಳ್ಯ ಆಶ್ರಮದ ಮುಂದೆ ಇದೇ 29 ರಂದು ಭಾರೀ ಪ್ರತಿಭಟನೆ ನಡೆಸುತ್ತಿದ್ದು, ನ್ಯಾಯ ಸಿಗುವ ತನಕ ಹೋರಾಟ ಮುಂದುವರೆಸುವುದಾಗಿ ಸಮತಾ ಸೈನಿಕ ದಳ ಎಚ್ಚರಿಕೆ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮತಾ ಸೈನಿಕ ದಳದ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಆರ್ ಚಂದ್ರಶೇಖರ್, ಬೆಂಗಳೂರು