Home Archive by category ರಾಜ್ಯ (Page 72)

ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ: ಪ್ರಮಾಣವಚನ ಬೋಧಿಸಿದ ರಾಜ್ಯಪಾಲ ಟಿ.ಸಿ.ಗೆಹ್ಲೋಟ್

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಸವರಜ ಬೊಮ್ಮಾಯಿ ಅವರಿಗೆ ಪ್ರಮಾಣ ಬೋಧಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆ ಪ್ರಮಾಣ ವಚನ ಬೋಧಿಸಿದರು. ದೇವರ ಹೆಸರಿನಲ್ಲಿ ಪ್ರಮಾಣ

ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ನಾಳೆ ಮಧ್ಯಾಹ್ನ ಪ್ರಮಾಣ ವಚನ

ರಾಜ್ಯದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರನ್ನು ನೇಮಕ ಮಾಡಲಾಗಿದೆ. ಶಾಸಕಾಂಗದ ಪಕ್ಷದ ಸಭೆಯ ಬಳಿಕ ಅಧಿಕೃತವಾಗಿ ಘೋಷಣೆ ಮಾಡಲಾಯಿತು. ಮಂಗಳವಾರ ರಾತ್ರಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಬುಧವಾರ ಮಧ್ಯಾಹ್ನ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ಹೈಕಮಾಂಡ್ ವೀಕ್ಷಕರಾಗಿ ನೇಮಿಸಿದ್ದ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಕಿಶನ್

ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು

ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬಂದು 2 ವರ್ಷದ ಸಂದರ್ಭದಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಸಿಎಂ ಯಡಿಯೂರಪ್ಪ ರಾಜೀನಾಮೆ ಘೋಷಿಸಿದ್ದರು. ಅಲ್ಲದೇ ರಾಜಭವನಕ್ಕೆ ಕಾಲ್ನಡಿಗೆಯಲ್ಲೇ ತೆರಳಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. ಇದೀಗ ಬಿಎಸ್ ಯಡಿಯೂರಪ್ಪ ಅವರ ಸಿಎಂ ಸ್ಥಾನಕ್ಕೆ ನೀಡಿದಂತ ರಾಜೀನಾಮೆ ಪತ್ರವನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ. ಈ ಮೂಲಕ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ

ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ.ಎಸ್. ಯಡಿಯೂರಪ್ಪ

ಕೊನೆಗೂ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.ರಾಜ್ಯ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿಂದು ಏರ್ಪಡಿಸಿದ್ದ ಸಮಾರಂಭದಲ್ಲಿ ವಿದಾಯ ಭಾಷಣ ಮಾಡಿದ ಅವರು, ತಮ್ಮ ರಾಜಕೀಯ ಏಳು ಬೀಳುಗಳನ್ನು ಹೇಳುವಾಗ ಭಾವುಕರಾದರು. ಇಲ್ಲಿಂದ ನೇರವಾಗಿ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದರು. 75 ವರ್ಷದ ಬಳಿಕ ಎರಡು ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಲು ಅವಕಾಶ ಮಾಡಿಕೊಟ್ಟ

ಬಹುಭಾಷಾ ಹಿರಿಯ ನಟಿ ಜಯಂತಿ ಇನ್ನಿಲ್ಲ

ಆರು ಭಾಷೆಗಳಲ್ಲಿ ನಟಿಸಿದ್ದ ಕನ್ನಡದ ಹಿರಿಯ ನಟಿ ಇಂದು ನಿಧನರಾದರು . ‘ ಜೇನುಗೂಡು ‘ ಚಿತ್ರವು ಜಯಂತಿ ಅವರು ನಾಯಕಿ ನಟಿಯಾಗಿ ನಟಿಸಿದ ಮೊದಲ ಸಿನಿಮಾ. ನಾಲ್ಕು ಬಾರಿ ಅತ್ಯುತ್ತಮ ನಟಿ ರಾಜ್ಯ ಪ್ರಶಸ್ತಿ ಪಡೆದಿದ್ದ ಜಯಂತಿ ಅವರು 500 ಕ್ಕೂ ಹೆಚ್ಚು ಚಿತ್ರದಲ್ಲಿ ನಟಿಸಿದ್ದರು. 1945 ರ ಜನವರಿ 6 ರಂದು ಜನಿಸಿದ್ದ ಜಯಂತಿ ಅವರ ಮೂಲ ಹೆಸರು ಕಮಲ ಕುಮಾರಿ ಎಂಬುದಾಗಿತ್ತು . ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಅವರು ಇಂದು ಅವರ ಬೆಂಗಳೂರಿನ […]

ವರುಣನ ಆರ್ಭಟ ಜಮೀನಿಗೆ ನುಗ್ಗಿದ ನೀರು : ಶುಂಠಿ ಬೆಳೆ ನೀರುಪಾಲು

ಆಲೂರು: ಆಲೂರು ತಾಲೂಕಿನಾದ್ಯಂತ ವರುಣ ಆರ್ಭಟಿಸಿ ಬೊಬ್ಬಿರಿಯುತ್ತಿದ್ದು ತಾಲೂಕು ಪಾಳ್ಯ ಚಂದ್ರಶೇಖರ್ ಎಂಬುವವರು ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಶುಂಠಿ ಬೆಳೆಗೆ ಶಂಕುತೀರ್ಥ ಹೊಳೆಯ ನೀರು ದಿಡೀರನೆ ನುಗ್ಗಿದ ಪರಿಣಾಮವಾಗಿ ಶುಂಠಿ ಬೆಳೆಯುವ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿ ಹೋಗಿದೆ ಅಲ್ಲದೆ ಭತ್ತದ ನಾಟಿಗಾಗಿ ಸಿದ್ದಪಡಿಸಿದ್ದ ಸಸಿ ಕೂಡ ನೀರಿನಲ್ಲಿ ಕೊಚ್ಚಿ ಹೋಗಿರುವ ಪ್ರಸಂಗ ತಾಲೂಕಿನಲ್ಲಿ ನಡೆದಿದ್ದು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ಬೆಳೆ

ಆರೋಗ್ಯದಿಂದ ಎಲ್ಲರೂ ಎಚ್ಚರದಿಂದ ಇರಿ : ನಾಗಮಂಗಲ ಶಾಸಕ ಸುರೇಶಗೌಡ ಹೇಳಿಕೆ

ನಾಗಮಂಗಲ: ಪ್ರತಿಯೊಬ್ಬರು ಸಮಾಜದಲ್ಲಿ ಇಂದಿನ ಪರಿಸ್ಥಿತಿಗೆ ಅನುಗುಣವಾಗಿ ಎಲ್ಲರೂ ಆರೋಗ್ಯದಿಂದ ಎಚ್ಚರಿಕೆಯಿಂದ ಇರುವಂತೆ ಶಾಸಕ ಸುರೇಶಗೌಡ ಕರೆ ನೀಡಿದರು. ಅವರಿಂದು ನಾಗಮಂಗಲ ಕಾಲೇಜು ಕ್ರೀಡಾಂಗಣದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಹಾಗೂ ಕೂಲಿ ಕಾರ್ಮಿಕರಿಗೆ ಆಹಾರಧಾನ್ಯ ಕಿಟ್ ವಿತರಿಸುತ್ತ ಕರೋನಾ ಮಹಾಮಾರಿಯ ಕಡಿಮೆ ಯಾಗಿದೆ ಎಂದು ಎಚ್ಚರ ತಪ್ಪಿದರೆ ಅಪಾಯ ಆದ್ದರಿಂದ ಸಾಮಾಜಿಕ ಅಂತರದೊಂದಿಗೆ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ತಿಳಿಸಿದರು. ಈ

ಆಲೂರಿನಾದ್ಯಂತ ಭಾರೀ ಮಳೆ: ರೈತರ ಜಮೀನಿಗೆ ನುಗ್ಗಿದ ನೀರು

ಆಲೂರು: ಆಲೂರು ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದ್ದು, ತಾಲೂಕು ಪಾಳ್ಯ ಹೋಬಳಿ ಮಡಬಲು ಗ್ರಾಮದ ಚಂದ್ರಶೇಖರ್ ಎಂಬುವವರ ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಶುಂಠಿ ಬೆಳೆಗೆ ಶಂಕುತೀರ್ಥ ಹೊಳೆಯ ನೀರು ದಿಢೀರನೆ ನುಗ್ಗಿದ ಪರಿಣಾಮವಾಗಿ ಶುಂಠಿ ಬೆಳೆ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿ ಹೋಗಿದೆ. ಅಲ್ಲದೆ ಭತ್ತದ ನಾಟಿಗಾಗಿ ಸಿದ್ದಪಡಿಸಿದ್ದ ಸಸಿಗಳು ಕೂಡ ನೀರಿನಲ್ಲಿ ಕೊಚ್ಚಿ ಹೋಗಿರುವ ಪ್ರಸಂಗ ತಾಲೂಕಿನಲ್ಲಿ ನಡೆದಿದ್ದು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ

ಸಕಲೇಶಪುರದ ದೋಣಿಗಾಲ್ ಎಂಬಲ್ಲಿ ಭೂಕುಸಿತ:ಗುಂಡ್ಯ ಚೆಕ್ ಪೋಸ್ಟ್‌ನಲ್ಲಿ ವಾಹನಗಳಿಗೆ ತಡೆ

ಗುಂಡ್ಯ: ಎಡೆಬಿಡದೆ ಸುರಿದ ಭಾರಿ ಮಳೆಯಿಂದಾಗಿ ಸಕಲೇಶಪುರ ತಾಲೂಕಿನ ದೋಣಿಗಾಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 75 ಬಳಿ ಭೂಕುಸಿತವಾಗಿದೆ. ಬೆಂಗಳೂರು ಹಾಗೂ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದೆ. ಪ್ರಸಿದ್ದ ಪುಣ್ಯ ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳ, ಸೌತ್ತಡ್ಕ ಕ್ಷೇತ್ರಕ್ಕೆ ಭೇಟಿ ನೀಡುವ ವಾಹನದ ಚಾಲಕರು ಪರಾಡುತ್ತಿರುವ ಮಾಹಿತಿ ಲಭಿಸಿದೆ. ಇನ್ನು ಮುಂಜಾಗೃತವಾಗಿ ಗುಂಡ್ಯ ಚೆಕ್ ಪೋಸ್ಟ್ ಗಳಲ್ಲಿಯೇ ವಾಹನಗಳಿಗೆ ತಡೆ

ರಾಜೀನಾಮೆ ಸುಳಿವು ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಕೊನೆಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಮ್ಮ ರಾಜೀನಾಮೆಯ ಸುಳಿವು ನೀಡಿದ್ದಾರೆ. ಕೇಂದ್ರದ ವರಿಷ್ಠರು ನೀಡುವ ಆದೇಶವನ್ನು ಚಾಚು ತಪ್ಪದೆ ಪಾಲಿಸುತ್ತೇನೆ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 25ರ ನಂತರ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ. ನನ್ನ ಪರ ಪ್ರತಿಭಟನೆ ನಡೆಸುವುದು ಸರಿಯಲ್ಲ. ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ನಡೆದುಕೊಳ್ಳುತ್ತೇನೆ ಎಂದು ಹೇಳುವ ಮೂಲಕ ರಾಜೀನಾಮೆ ನೀಡುವುದರ ಕುರಿತು ಸುಳಿವು ನೀಡಿದ್ದಾರೆ. ಇಡೀ