Home Archive by category ರಾಷ್ಟ್ರೀಯ

ಕಾರವಾರ: ಸಬ್ ಮರೀನ್‌ನಲ್ಲಿ ರಾಷ್ಟ್ರಪತಿ ಮುರ್ಮು ಪಯಣ

ಕಾರವಾರ: ಕದಂಬ ನೌಕಾನೆಲೆಯಲ್ಲಿ ‘ಐಎನ್‌ಎಸ್ ವಾಘಶೀರ್’ ಜಲಾಂತರ್ಗಾಮಿ ನೌಕೆಯಲ್ಲಿ (ಸಬ್‌ಮೆರಿನ್) ರಾಷ್ಟ್ರಪತಿ ದ್ರೌಪದಿ ಮುರ್ಮು ಭಾನುವಾರ ಸಂಚಾರ ನಡೆಸಿದರು. ಎಪಿಜೆ ಅಬ್ದುಲ್ ಕಲಾಂ ಬಳಿಕ ಜಲಾಂತರ್ಗಾಮಿ ನೌಕೆಯಲ್ಲಿ ಸಂಚರಿಸಿದ ಸಾಧನೆ ಮಾಡಿದ ಎರಡನೇ ರಾಷ್ಟ್ರಪತಿ ಅವರಾದರು.ಗೋವಾದಿಂದ ಬೆಳಿಗ್ಗೆ 9 ಗಂಟೆ ಸುಮಾರಿಗೆ ನೌಕಾದಲದ ವಿಶೇಷ ಹೆಲಿಕಾಪ್ಟರ್‌ನಲ್ಲಿ

ರಾಜ್ಯದಲ್ಲಿ ಸೀಸನಲ್ ಫ್ಲೂ(ಶೀತಜ್ವರ) ಹೆಚ್ಚಳ: ಆರೋಗ್ಯ ಸೇವೆಗಳ ಆಯುಕ್ತಾಲಯದಿಂದ ಮಾರ್ಗಸೂಚಿ ಬಿಡುಗಡೆ

ಹವಾಮಾನ ಬದಲಾವಣೆಯಿಂದಾಗಿ ರಾಜ್ಯದಲ್ಲಿ ಸೀಸನಲ್ ಫ್ಲೂ(ಶೀತಜ್ವರ) ಹೆಚ್ಚಳ ಆಗುತ್ತಿದ್ದು, ಡಿಸೆಂಬರ್, ಜನವರಿಯಿಂದ ಮಾರ್ಚ್ ತನಕ ಸೀಸನಲ್ ಫ್ಲೂ ಹೆಚ್ಚಳದ ಭೀತಿ ಇದೆ. ಹೀಗಾಗಿ ಆರೋಗ್ಯ ಸೇವೆಗಳ ಆಯುಕ್ತಾಲಯವು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಸೀಸನಲ್ ಫ್ಲೂ ಸಾಮಾನ್ಯವಾಗಿ ಒಂದು ವಾರಗಳ ಕಾಲ ಕಾಡಲಿದ್ದು, ಕೆಲವೊಮ್ಮೆ 3 ವಾರಗಳ ವರೆಗೂ ಮುಂದುವರಿಯುತ್ತದೆ. ಹೀಗಾಗಿ ಶೀತಜ್ವರ ಹರಡುವುದನ್ನು ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ

ರಾಷ್ಟ್ರೀಯ ಈಜುಸ್ಪರ್ಧೆಯಲ್ಲಿಆಯ್ಕೆಯಾದ ಮಂಗಳಾ ಈಜು ಕ್ಲಬ್ ಸದಸ್ಯೆಯರಾದ ಚಾರ್ವಿ ಎಂ ಹಾಗೂ ಪ್ರಾಪ್ತಿ ಜೆ.ಪಿ

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಈಜುಸ್ಪರ್ಧೆಯಲ್ಲಿ ಮಂಗಳಾ ಈಜು ಕ್ಲಬ್ನ ಸದಸ್ಯೆಯಾದ ಕು| ಚಾರ್ವಿ ಎಂ (ಲೇಡಿಹಿಲ್ಲ್ ವಿಕ್ಟೋರಿಯ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿನಿ) ಇವರು 14 ವರ್ಷದ ಬಾಲಕಿಯರ ವಿಭಾಗದಲ್ಲಿ 2 ಚಿನ್ನ, 2 ಬೆಳ್ಳಿ ಹಾಗೂ 1 ಕಂಚು ಸೇರಿದಂತೆ ಒಟ್ಟು 5 ಪದಕಗಳನ್ನು ಮತ್ತು ಮಂಗಳಾ ಈಜು ಕ್ಲಬ್ನ ಇನ್ನೋರ್ವ ಸದಸ್ಯೆಯಾದ ಕು| ಪ್ರಾಪ್ತಿ ಜೆ.ಪಿ. (ಸೈಂಟ್ ಅಲೋಸಿಯಸ್ ಹೈಯರ್ ಪ್ರೈಮರಿ ಸ್ಕೂಲ್,

ಗೋವಾ| ನೈಟ್ ಕ್ಲಬ್‌ನಲ್ಲಿ ಅಗ್ನಿ ಅವಘಡ: ಮೃತರ ಸಂಖ್ಯೆ 25ಕ್ಕೆ ಏರಿಕೆ

ಗೋವಾದ ನೈಟ್ ಕ್ಲಬ್‌ವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 25 ಮಂದಿ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ಈ ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ, ಮೃತರ ಕುಟುಂಬಸ್ಥರಿಗೆ ತಲಾ ಎರಡು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಶನಿವಾರ ತಡರಾತ್ರಿ ಗೋವಾ ರಾಜಧಾನಿ ಪಣಜಿಯಿಂದ ಸುಮಾರು 25 ಕಿಮೀ ದೂರ ಇರುವ ಬಿರ್ಚ್ ಬೈ ರೋಮಿಯೊ ಲೇನ್‌ನಲ್ಲಿರುವ ನೈಟ್ ಕ್ಲಬ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 25 ಮಂದಿ ಮೃತಪಟ್ಟು,

ಎಸ್ ಕೆ ಪೂಜಾರಿ ಅವರಿಗೆ ವಿಶ್ವಮಾನ್ಯ ಪ್ರಶಸ್ತಿ ಪ್ರದಾನ

ಮಸ್ಕತ್:ಕನ್ನಡ ಸಂಘ ಮಸ್ಕತ್ ಮತ್ತು ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಸಹಯೋಗದೊಂದಿಗೆ ಒಮಾನ್ ದೇಶದ ಮಸ್ಕತ್ ನ ಬೌಷರ್ ಸಿಬಿಎಫ್ಎಸ್ ಸಭಾಂಗಣದಲ್ಲಿ ದಿನಾಂಕ 28-11-2025 ರಂದು ಮೊನ್ನೆ ನಡೆದ “3ನೇ ವಿಶ್ವ ಕನ್ನಡ ಹಬ್ಬ” ಆಚರಣೆಯ ಯು ನಡೆಯಿತು. ಕನ್ನಡ ಹಬ್ಬದ ಸುಸಂದರ್ಭದಲ್ಲಿ ಮಸ್ಕತ್ ನ ಹೆಸರಾಂತ ಸಮಾಜ ಸೇವಕರು, ಯಶಸ್ವಿ ಉದ್ಯಮಿಗಳು, ಶ್ರೀ ಗಣೇಶ ಫೆಸ್ಟಿವಲ್ ಮಸ್ಕತ್ ಸಮಿತಿಯ ಅಧ್ಯಕ್ಷರು, ಒಮಾನ್ ಬಿಲ್ಲವಾಸ್ ಕೂಟದ ಸ್ಥಾಪಕ ಸದಸ್ಯರು ಮತ್ತು

ಜೇನಿನ ಸಿಹಿಯ ಹಿಂದೆ ಶ್ರಮದ ಸವಿ: ದ.ಕನ್ನಡ, ತುಮಕೂರು ಜೇನುತುಪ್ಪದ ಸಾಧನೆ ಹಾಡಿಹೊಗಳಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ, ದಕ್ಷಿಣ ಕನ್ನಡ ಮತ್ತು ತುಮಕೂರು ಜಿಲ್ಲೆಗಳ ಜೇನುತುಪ್ಪದ ಅಸಾಧಾರಣ ಗುಣಮಟ್ಟವನ್ನು ಉಲ್ಲೇಖಿಸಿ, ಅದರ ಹಿಂದೆ ಇರುವ ರೈತರ ಶ್ರಮವನ್ನು ಹಾಡಿಹೊಗಳಿದರು. ದ.ಕ. ಜಿಲ್ಲೆಯ ಪರಿಸರವು ಉತ್ತಮ ಗುಣಮಟ್ಟದ ಜೇನು ಉತ್ಪಾದನೆಗೆ ಹೇಳಿ ಮಾಡಿಸಿದಂತಿದೆ. ಈ ಸಾಮರ್ಥ್ಯವನ್ನು ಗುರುತಿಸಿ, ಗ್ರಾಮಜನ್ಯ ಎಂಬ ಸಂಸ್ಥೆಯು ಜೇನನ್ನು ಬ್ರಾಂಡ್ ಮಾಡಿ ನಗರ ಮಾರುಕಟ್ಟೆಗೆ ತಲುಪಿಸುತ್ತಿದ್ದು, ಇದರಿಂದ ರೈತರಿಗೆ ಭಾರಿ

ಮುಂಬಯಿಯಲ್ಲಿ ಕುಲಾಲ ಭವನ ಮಂಗಳೂರು ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಮುಂಬಯಿ ಅ6.ಕುಲಾಲ ಸಂಘ ಮುಂಬಯಿಯ ಮಂಗಳೂರಿನ ಯೋಜನೆಯಾದ ಕುಲಾಲ ಭವನ ಮಂಗಳೂರು ಲೋಕಾರ್ಪಣೆಯ ಆಮಂತ್ರಣ ಪತ್ರಿಕೆಯು ಪವಿತ್ರವಾದ ಶ್ರೀಕೃಷ್ಣನ ಸನ್ನಿದಿಯಾದ ಪೇಜಾವರ ಮಠದಲ್ಲಿ ಬಿಡುಗಡೆಗೊಳ್ಳುದರೊಂದಿಗೆ ಭಗವಂತನ ಆಶೀರ್ವಾದದಿಂದ ಮುಂದಿನ ಎಲ್ಲಾ ಕಾರ್ಯಗಳು ಸುಗಮವಾಗಿ ಸಾಗುವುದು. ಶತಮಾನದತ್ತ ಮುನ್ನಡೆಯುತ್ತಿರುವ ಕುಲಾಲ ಸಂಘ ಮುಂಬಯಿ ಇದೀಗ ಮಂಗಳೂರಲ್ಲಿ ಕುಲಾಲ ಭವನವನ್ನು ಲೋಕಾರ್ಪಣೆ ಮಾಡುತ್ತಿದ್ದು ಸಂಘದ ಮುಂದಿನ ಯೋಜನೆಯು ಸಮಾಜದ ಮಕ್ಕಳನ್ನು ಉತ್ತಮ ಶಿಕ್ಷಣದ ಮೂಲಕ

ಕರೂರು ರ್‍ಯಾಲಿಯ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 39ಕ್ಕೆ ಏರಿಕೆ

ಚೆನ್ನೈ: ಕರೂರಿನಲ್ಲಿ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ರ್‍ಯಾಲಿಯ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ಮೃತರಲ್ಲಿ 16 ಮಹಿಳೆಯರು, 8 ಮಕ್ಕಳಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭಿಸಿರುವ ಟಿವಿಕೆ ಮುಖ್ಯಸ್ಥ, ನಟ ವಿಜಯ್‌ ಕರೂರಿನಲ್ಲಿ ಶನಿವಾರ(ಸೆ.27) ಬೃಹತ್‌ ‌ರ್‍ಯಾಲಿ ಆಯೋಜಿಸಿದ್ದರು. ನೆಚ್ಚಿನ ನಟನನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರಿಂದ ಕಾಲ್ತುಳಿತ

ಪಣಂಬೂರು ;ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣದಲ್ಲಿ ಹೊರ ರಾಜ್ಯದ ಇಬ್ಬರು ಆರೋಪಿಗಳ ಸೆರೆ

ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ 62 ನೇ ತೋಕೂರು ಗ್ರಾಮದ, ತೋಕೂರು ರೈಲ್ವೇ ಸ್ಟೇಶನ್ ಬಳಿ ಸಾರ್ವಜನಿಕರು ಓಡಾಡುವ ರಸ್ತೆಯ ಬದಿಯಲ್ಲಿ ಇಬ್ಬರು ಯುವಕರು ಮಾದಕ ವಸ್ತು ವಶದಲ್ಲಿ ಹೊಂದಿ ಮಾರಾಟ

ಮಂಗಳೂರು:ಕರಾವಳಿಯಾದ್ಯಂತ ನೆತ್ತೆರೆಕೆರೆ ತುಳು ಸಿನಿಮಾ ಬಿಡುಗಡೆ

ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ ನಿದೇರ್ಶನದಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣದಲ್ಲಿ ತಯಾರಾದ “ನೆತ್ತೆರೆಕೆರೆ ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಕಂಡಿತು. ನಗರದ ಭಾರತ್ ಸಿನಿಮಾಸ್‌ನಲ್ಲಿ ನಟ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ನೆತ್ತೆರೆಕೆರೆ ಸಿನಿಮಾ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಲಿ ಎಂದರು. ಪತ್ರಕರ್ತರು ಮತ್ತು ಸಿನಿಮಾ ನಿರ್ಮಾಪಕರಾದ ಪ್ರಕಾಶ್ ಪಾಂಡೇಶ್ವರ್ ಅವರು