Home Archive by category ರಾಷ್ಟ್ರೀಯ (Page 15)

ಜನವರಿ 29,ಭಾರತೀಯ ವೃತ್ತಪತ್ರಿಕೆ ದಿನ

ಕೆಲವರ ದಿನ ಆರಂಭವಾಗುವುದೇ ದಿನ ಪತ್ರಿಕೆಯನ್ನು ಓದುವ ಮೂಲಕ. ಕೈಯಲ್ಲಿ ಒಂದು ಕಪ್ ಕಾಫಿ ಅಥವಾ ಟೀ ಜೊತೆಗೆ ದಿನಪತ್ರಿಕೆಯಿದ್ದರೆ ಸುದ್ದಿಯನ್ನು ಓದುತ್ತಾ ಓದುಗರು ತಮ್ಮ ದಿನವನ್ನು ಆರಂಭಿಸುತ್ತಾರೆ. ರಾಜ್ಯ, ದೇಶ, ವಿದೇಶಗಳಲ್ಲಿ ನಡೆಯುವ ಸುದ್ದಿಗಳನ್ನು ಜನರಿಗೆ ತಲುಪಿಸುವ ದಿನ ಪತ್ರಿಕೆಗಳು ಇವತ್ತಿಗೂ ನಂಬಿಕೆಗೆ ಅರ್ಹವಾಗಿದೆ. ಹೀಗಾಗಿ ಪ್ರತಿ ವರ್ಷ ಜ. 29ರಂದು

ಭಾರತದ ಡಬಲ್ಸ್ ಟೆನ್ನಿಸಿಗರು

ಆಸ್ಟ್ರೇಲಿಯಾ ಓಪನ್ ಟೆನ್ನಿಸ್‍ನಲ್ಲಿ 43ರ ಪ್ರಾಯದಲ್ಲಿ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಜೊತೆಗೆ ಪುರುಷರ ಡಬಲ್ಸ್ ಗೆದ್ದು ರೋಹನ್ ಬೋಪಣ್ಣ ಸಾಧನೆ ಮಾಡಿದರು. ಅತಿ ಹಿರಿಯ ಗ್ರಾನ್‍ಸ್ಲಾಮ್ ವಿನ್ನರ್, ಅತಿ ಹಿರಿಯ ಟೆನ್ನಿಸ್ ಡಬಲ್ಸ್ ಒನ್ ಇತ್ಯಾದಿ ಸಾಧನೆ ಕರ್ನಾಟಕದ ಕೊಡವ ರೋಹನ್ ಬೋಪಣ್ಣ ಅವರದಾಯಿತು. ಭಾರತದ ಜಾಗತಿಕ ಗ್ರಾನ್‍ಸ್ಲಾಮ್ ಸಾಧಕರಾದ ಸಾನಿಯಾ ಮಿರ್ಜಾ, ಲಿಯಾಂಡರ್ ಪಯಸ್, ಮಹೇಶ್ ಭೂಪತಿ ಮೊದಲಾದವರ ಸಾಲಿಗೆ ಬೋಪಣ್ಣ

ನಿತೀಶ್ ಕುಮಾರ್ ಇಂಡಿಯಾ ಮೈತ್ರಿಕೂಟ ಬಿಡುತ್ತಿರುವ ಬಗ್ಗೆ ಮೊದಲೇ ಸುಳಿವು ಸಿಕ್ಕಿತ್ತು: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಬಿಹಾರ ಮುಖ್ಯಮಂತ್ರಿ ಬಿಜೆಪಿಯೊಂದಿಗೆ ಕೈಜೋಡಿಸುವ ವಿಚಾರದ ಬಗ್ಗೆ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಹಾಗೂ ಅವರ ಮಗ ತೇಜಸ್ವಿ ಯಾದವ್ ಅವರು ಐದು ದಿನಗಳ ಹಿಂದೆಯೇ ನನಗೆ ಮಾಹಿತಿ ನೀಡಿದ್ದರು. ಅದು ಈಗ ನಿಜವಾಗಿದೆ. ಅವರು ಹೋಗುವುದಾದರೆ ಹೋಗಲಿ ಎಂದು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಿತೀಶ್ ಕುಮಾರ್ ಅವರು ಇಂಡಿಯಾ ಮೈತ್ರಿಕೂಟ ಬಿಡುತ್ತಿರುವ ಬಗ್ಗೆ ಮುಂಚೆಯೇ ಸುಳಿವು

ಪಾಟ್ನಾ: ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ

ಬಿಹಾರ ರಾಜಕೀಯ ಭಾರಿ ಕುತೂಹಲ ಕೆರಳಿಸಿದ್ದು, ನಿತೀಶ್‌ ಕುಮಾರ್‌ ಬಿಹಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಹಾರ ರಾಜ್ಯಪಾಲರನ್ನು ಭೇಟಿ ಮಾಡಿದ ನಿತೀಶ್‌ ಕುಮಾರ್‌ ಅಧಿಕೃತವಾಗಿ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಆರ್‌ಜೆಡಿ, ಕಾಂಗ್ರೆಸ್‌, ಎಡರಂಗ ಹಾಗೂ ಜೆಡಿಯು ಮೈತ್ರಿ ಸರ್ಕಾರ ಪತನಗೊಂಡಿದೆ. ಇನ್ನೊಂದೆಡೆ, ಬಿಜೆಪಿ ಜತೆಗೆ ಸೇರಿ ಇಂದು ಸಂಜೆ ಮತ್ತೆ ಜೆಡಿಯು – ಬಿಜೆಪಿ ಸರ್ಕಾರ ರಚನೆಯಾಗೋದು ಸಹ ಬಹುತೇಕ ಖಚಿತವಾಗಿದೆ. ಭಾನುವಾರ

ಒಣಗುತ್ತಿರುವ ಗಣರಾಜ್ಯ ತತ್ವಗಳು || Republic Day

ಗಣರಾಜ್ಯ ಎನ್ನುವುದು ಹಳೆಯ ಕಲ್ಪನೆ. ಅದರ ಆಧುನಿಕ ರೂಪವೇ ಪ್ರಜಾಪ್ರಭುತ್ವ. ಸೆಪ್ಟೆಂಬರ್ 15ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಆಯಿತು. 2023ರ ಅಂದು ಸಂವಿಧಾನದ ಪೀಠಿಕೆ ಓದುವ ದೊಡ್ಡ ಆಂದೋಲನವೇ ನಡೆಯಿತು. ಭಾರತವು 1947ರಲ್ಲಿ ಸ್ವಾತಂತ್ರ್ಯ ಪಡೆದರೂ ಗಣರಾಜ್ಯ ಇಲ್ಲವೇ ಪ್ರಜಾಪ್ರಭುತ್ವ ದೇಶವಾದುದು 1950ರ ಜನವರಿ 26ರಂದು. ಆದ್ದರಿಂದ ಈ ದಿನ ದೇಶದ ಪ್ರಜಾಪ್ರಭುತ್ವ ದಿನ, ಗಣರಾಜ್ಯೋತ್ಸವ ದಿನ ಎನ್ನುವುದು ಸಹ ರೂಢಿ. ಈ ಸಂವಿಧಾನವನ್ನು ಎರಡು

ಇಂಡಿಯ ಮೈತ್ರಿಗೆ ಮುತ್ತಡೆ

ಇಂಡಿಯಾ ಮೈತ್ರಿ ಕೂಟದ ಕ್ಷೇತ್ರ ಹಂಚಿಕೆಯು ಪಡುವಣ ಬಂಗಾಳ ಮತ್ತು ಪಂಜಾಬಗಳಲ್ಲಿ ಒಂದು ಸಮಸ್ಯೆ ಆಗಿದೆ. ತೃಣಮೂಲ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಪಶ್ಚಿಮ ಬಂಗಾಳದ 42 ಮತ್ತು ಪಂಜಾಬಿನ 13 ತಮ್ಮ ಆಸ್ತಿ ಎಂದು ನಂಬಿವೆ. ಬಹು ಕಾಲ ಸಿಪಿಎಂ ಮತ್ತು ಕಾಂಗ್ರೆಸ್ ಪಕ್ಷಗಳು ಬಂಗಾಳದ್ದು ಮತ್ತು ಪಂಜಾಬಿನದು ತಮ್ಮ ಆಸ್ತಿ ಎಂದು ತಿಳಿದಿದ್ದವು. ಆ ಕಾಲವೆಲ್ಲ ಬದಲಾಗಿರುವುದು ಚರಿತ್ರೆ. ಮಮತಾ ಬ್ಯಾನರ್ಜಿಯವರು ರಾಜೀವ್ ಗಾಂಧಿಯವರ ಮೂಲಕ ಕಾಂಗ್ರೆಸ್ ಹೊಕ್ಕು ಆಮೇಲೆ

ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರ ಭಾರತ ರತ್ನ ಪುರಸ್ಕಾರ

ಜನವರಿ 24 ಸಮಾಜವಾದಿ ಕರ್ಪೂರಿ ಠಾಕೂರ್ ಬದುಕಿದ್ದರೆ ನೂರು ವರುಷ. ಅದರ ಮೊದಲ ದಿನ ಜನವರಿ 23ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ಘೋಷಿಸಿದರು. 1954ರ ಜನವರಿ 2ರಲ್ಲಿ ಆರಂಭವಾದುದು ಭಾರತ ರತ್ನ ಪ್ರಶಸ್ತಿ. ಇದು ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಆಗಿದೆ. 1966ರಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರಿಗೆ ಮರಣೋತ್ತರ ಪ್ರಶಸ್ತಿ ನೀಡುವುದು ಆರಂಭವಾಗಿ ಕರ್ಪೂರಿ ಠಾಕೂರ್ ಸೇರಿ 15 ಮಂದಿಗೆ

ಕೊಪ್ಪದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

*ಚಿಕ್ಕಮಗಳೂರು:ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಕೊಪ್ಪ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಪ್ರಕಾಶ್ ಪೂಜಾರಿಯವರ ನೇತೃತ್ವದಲ್ಲಿ ಜನವರಿ 21ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಮಹಾಮಂಡಲದ ಸದಸ್ಯರಾದ ರತ್ನಾಕರ್ ಸಾಲ್ಯಾನ್ ಗೋವಾ,ಚಿಕ್ಕಮಂಗಳೂರು ಜಿಲ್ಲಾ ಒಕ್ಕೂಟದ ಅಧ್ಯಕ್ಷರಾದ ಹೆಚ್ ಎಂ

ಅಯೋಧ್ಯೆಯಲ್ಲಿ ದ.ಕ. ಜಿಲ್ಲೆಯ ಬಿಜೆಪಿ ಮುಖಂಡರು

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ಇಡೀ ದೇಶದಲ್ಲೂ ರಾಮಮಂದಿರದ ಉದ್ಘಾಟನೆ ಸಂಭ್ರಮ ಮನೆ ಮಾಡಿದೆ. ರಾಮಲಲ್ಲಾ ಪ್ರತಿಷ್ಠಾಪನೆಯ ಸಂಭ್ರಮದಲ್ಲಿ ಭಾಗಿಯಾಗಲು ಮಂಗಳೂರಿನಿಂದ ಬಿಜೆಪಿಯ ಜಿಲ್ಲಾ ಕೋಶಾಧಿಕಾರಿ ಜಿತೇಂದ್ರ ಕೊಟ್ಟಾರಿಯವರೂ ತೆರಳಿದ್ದಾರೆ. ಅವರ ಜೊತೆಗೆ ಡಾ. ಡಿ ವಿರೇಂದ್ರ ಹೆಗ್ಗಡೆ, ಡಾ. ಕಲ್ಲಡ್ಕ ಪ್ರಭಾಕರ್ ಭಟ್, ನಿಟ್ಟೆ ಸಂಸ್ಥೆಯ ವಿಶಾಲ್ ಹೆಗ್ಡೆ, ಎಂ.ಬಿ. ಪುರಾಣಿಕ್ ದಂಪತಿ, ಸೇರಿದಂತೆ ಜಿಲ್ಲೆಯ ಎಲ್ಲಾ

ಮುಂಬೈ: ಜ.21ರಂದು ಕೋಟಿ ಚೆನ್ನಯ ಸ್ಪೋರ್ಟ್ಸ್ ಮೀಟ್ – 2024

ಬಿಲ್ಲವರ ಎಸೋಸಿಯೇಶನ್ ಮುಂಬಯಿ ವತಿಯಿಂದ ಜ.21ರಂದು ಕೋಟಿ ಚೆನ್ನಯ ಸ್ಪೋರ್ಟ್ಸ್ ಮೀಟ್ 2023-24 ಎಂಬ ಕಾರ್ಯಕ್ರಮವು ಮುಂಬೈನ ಯೂನಿವರ್ಸಿಟಿ ಸ್ಪೋರ್ಟ್ಸ್ ಗ್ರೌಂಡ್ ನ್ಯೂ ಮರೀಸ್ ಲೈನ್ಸ್‌ನಲ್ಲಿ ನಡೆಯಲಿದೆ. ಈ ಕ್ರೀಡೋತ್ಸವವು ಬೆಳಿಗ್ಗೆ 7.30ರಿಂದ ಸಂಜೆ 5 ಗಂಟೆಯವರೆಗೆ ವಿವಿಧ ಸ್ಪರ್ಧೆಗಳು ನಡೆಯಲಿದ್ದು, ಕ್ರೀಡೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಂಬೈ ಬಿಲ್ಲವ ಅಸೋಸಿಯೇಶನ್‌ನ ಅಧ್ಯಕ್ಷರಾದ ಹರೀಶ್ ಜಿ ಅಮೀನ್ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದು, ಹರಿಕಥಾ