ಭಾರತದ ಆರ್ಥಿಕ ರಾಜಧಾನಿ ಎನ್ನಲಾದ ಮುಂಬಯಿ ಜಗತ್ತಿನ ಅತಿ ಟ್ರಾಫಿಕ್ ಒತ್ತಡದ ನಗರವಾಗಿ ಮೊದಲ ಸ್ಥಾನದಲ್ಲಿದೆ. ಆ ಕಾರಣಕ್ಕೆ ಜನರು, ಕೆಲಸದ ಮಾನಸಿಕ ಒತ್ತಡಕ್ಕೆ ಒಳಗಾಗುವುದಾಗಿಯೂ ಹೇಳಲಾಗಿದೆ. ಅತಿ ಟ್ರಾಫಿಕ್ನ ಎಲ್ಲ ನಗರಗಳವರು ಹೆಚ್ಚು ಕಲುಷಿತ ಗಾಳಿ ಸೇವಿಸಬೇಕಾದ ಸ್ಥಿತಿ ಎದುರಿಸುತ್ತಿರುವುದಾಗಿ ಹೇಳಲಾಗಿದೆ.ಈ ನಿಟ್ಟಿನಲ್ಲಿ ನೈಜೀರಿಯಾದ ಲಾಗೋಸ್,
ದೇಶಾದ್ಯಂತ ಹೆದ್ದಾರಿಗಳನ್ನು ಬಳಕೆ ಮಾಡುವ ವಾಹನ ಚಾಲಕರು ಸೋಮವಾರದಿಂದ ಟೋಲ್ಗಳಲ್ಲಿ ಹೆಚ್ಚಿನ ಶುಲ್ಕವನ್ನು ನೀಡಬೇಕಾಗುತ್ತದೆ. ದೇಶಾದ್ಯಂತ ಹೆದ್ದಾರಿಗಳ ಟೋಲ್ ಶುಲ್ಕವನ್ನು ಸರಾಸರಿ ಶೇ. 5ರಷ್ಟು ಏರಿಕೆ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ನಿರ್ಧರಿಸಿದೆ. ಸಾಮಾನ್ಯವಾಗಿ ಟೋಲ್ ಶುಲ್ಕ ಪ್ರತಿವರ್ಷ ಹೆಚ್ಚಾಗುತ್ತದೆ. ಇದರಂತೆ ಎಪ್ರಿಲ್ 1 ರಿಂದ ಪರಿಷ್ಕ್ರತ ಶುಲ್ಕ ಜಾರಿಯಾಗಬೇಕಿತ್ತು. ಆದರೆ, ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ
ಯಮುನಾ ನದಿಯ ದಡದಲ್ಲಿ ತಾಜ್ ಎನ್ಕ್ಲೇವ್ ಗೀತಾ ಕಾಲೋನಿಯಲ್ಲಿ ಅಕ್ರಮವಾಗಿ ಕಟ್ಟಿರುವ ಶಿವ ಮಂದಿರವನ್ನು ಕೆಡವಲು ದಿಲ್ಲಿ ಉಚ್ಚ ನ್ಯಾಯಾಲಯವು ಕಟ್ಟಳೆ ಇಟ್ಟಿತು. ಯಮುನಾ ನದಿಯ ದಡದಲ್ಲಿನ ಅಕ್ರಮ ಕಟ್ಟುಗೆಗಳನ್ನು ತೆರವುಗೊಳಿಸಿದರೆ ಶಿವನೂ ಸಂತೋಷ ಪಡುತ್ತಾನೆ. ಶಿವನಿಗೆ ನಮ್ಮ ರಕ್ಷಣೆಯ ಅಗತ್ಯವಿಲ್ಲ. ನಮಗೆ ಶಿವನ ರಕ್ಷಣೆ ಆಶೀರ್ವಾದ ಬೇಕು ಅಷ್ಟೆ. ಮೊದಲು ಅಕ್ರಮ ಕಟ್ಟಡಗಳು ತೆರವಾಗಲಿ ಎಂದು ದಿಲ್ಲಿ ಉಚ್ಚ ನ್ಯಾಯಾಲಯದ ಜಸ್ಟಿಸ್ ಧರ್ಮೇಶ್ ಶರ್ಮಾ ಮಂದಿರ ಒಡೆಯಲು
ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಂದರ್ಭ ಸಾಣೂರುನಲ್ಲಿ ಬಸ್ಸು ನಿಲ್ದಾಣಕ್ಕೆ ಜಾಗ ಕಾದಿರಿಸದೆ ಇರುವುದರಿಂದ ಪ್ರಯಾಣಿಕರು ರಸ್ತೆಯಲ್ಲಿ ಬಿಸಿಲು ಮಳೆಗೆ ಮೈಯೊಡ್ಡಿ ನಿಲ್ಲುವ ಕಠಿಣ ಪರಿಸ್ಥಿತಿ ಉಂಟಾಗಿದೆ. ಸಾಣೂರು ಗ್ರಾಮದ ಪುಲ್ಕರಿ ಬೈಪಾಸನಿಂದ ಮರತಂಗಡಿ ಸಾಣೂರು ಪದವಿಪೂರ್ವ ಕಾಲೇಜಿನವರೆಗೆ ಸಾಣೂರು ಸೇತುವೆ ಬಳಿ ಸುಮಾರು 500 ಮೀಟರ್ ಹೊರತುಪಡಿಸಿ ರಾಷ್ಟ್ರೀಯ ಹೆದ್ದಾರಿ 4 ಬೃಹತ್ ಹೆದ್ದಾರಿ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು ಹಳೆ ಬಸ್ಸು
2023ರಲ್ಲಿ ಪ್ರಪಂಚದಲ್ಲಿ 1,153 ಜನರಿಗೆ ಮರಣದಂಡನೆ ನೆರವೇರಿಸಿದ್ದು ಇದು ದಶಕದಲ್ಲೇ ಅತಿ ಹೆಚ್ಚು ಎಂದು ಲಂಡನ್ ಮೂಲದ ಅಮ್ನೆಸ್ಟಿ ಇಂಟರ್ನಾ್ಯಶನಲ್ ಹೇಳಿದೆ. ಇಷ್ಟೊಂದು ಮರಣದಂಡನೆ ನೆರವೇರಿರುವುದು 2015ರ ಬಳಿಕ ಅತಿ ಹೆಚ್ಚಿನದಾಗಿದೆ. 2023ರಲ್ಲಿ ಮರಣದಂಡನೆ ನೆರವೇರಿದ ಪ್ರಮಾಣವು 2022ಕ್ಕಿಂತ 30 ಶೇಕಡಾ ಹೆಚ್ಚು. ಮರಣದಂಡನೆ ಶಿಕ್ಷೆ ತೀರ್ಪು ನೀಡಿಕೆ ಕೂಡ 2023ರಲ್ಲಿ 20 ಶೇಕಡಾ ಅಧಿಕರಿಸಿದೆ ಎಂದು ಅಮ್ನೆಸ್ಟಿ ಇಂಟರ್ನಾ್ಯಶನಲ್ ಹೇಳಿದೆ. ಹಾಗಾದರೂ
ಚಲನಚಿತ್ರೋತ್ಸವದಲ್ಲಿ ಭಾರತದ ಪಾಯಲ್ ಕಪಾಡಿಯಾರ ಕಿರು ಚಿತ್ರ ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ ಚಿತ್ರವು ಅತ್ಯುತ್ತಮ ಪ್ರಶಸ್ತಿ ಪಡೆದಿದೆ. ಕಿರುಚಿತ್ರ ವಿಭಾಗದಲ್ಲಿ ಪಾಯಲ್ರ ಈ ಚಿತ್ರವು ಗ್ರಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದುಕೊಂಡಿದೆ. ಮುಂಬಯಿ ಮೂಲದ ಪಾಯಲ್ರಿಗೆ ಕಿರುಚಿತ್ರ ತಯಾರಿಕೆ ಮತ್ತು ಪ್ರಶಸ್ತಿ ಹೊಸತಲ್ಲ. 2021ರ ಕಾನ್ ಚಿತ್ರೋತ್ಸವದಲ್ಲಿ ಅವರ ‘ನೈಟ್ ಆಫ್ ನೋಯಿಂಗ್ ನತಿಂಗ್’ ಗೋಲ್ಡನ್ ಐ ಪ್ರಶಸ್ತಿ ಪಡೆದಿತ್ತು.
ಸತ್ಯಪಾಲ್ ಮಲಿಕ್ ಅವರ ಕಚೇರಿಗಳ ಮೇಲೆ ಆರು ತಿಂಗಳ ಹಿಂದೆ ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆಗಳ ದಾಳಿಯೋ ದಾಳಿಗೆ ಕಾರಣ ಪುಲ್ವಾಮಾದ ಕೊಲೆಗಳು ಎಂಬುದು ಒಂದು ಮಾತು. 2019ರಲ್ಲಿ 40 ಸಿಆರ್ಪಿಎಫ್ ಸೈನಿಕರು ಪುಲ್ವಾಮಾದಲ್ಲಿ ಸ್ಫೋಟಕ್ಕೆ ಸಿಕ್ಕಿ ಸತ್ತರು. ಇದನ್ನು ಚುನಾವಣಾ ವಿಷಯ ಮಾಡಿ ಬಿಜೆಪಿಯು ಅದೇ ವರುಷ ನಡೆದ ಲೋಕಸಭಾ ಚುನಾವಣೆಯಲ್ಲಿ ಗೆದ್ದಿತು ಎಂದು ಜಮ್ಮು ಮತ್ತು ಕಾಶ್ಮೀರ ರಾಜ್ಯದ ಕೊನೆಯ ರಾಜ್ಯಪಾಲರಾಗಿದ್ದ ಸತ್ಯ ಪಾಲ್ ಮಲಿಕ್ ಕಳೆದ ವರುಷ
ರೆಮಲ್ ಚಂಡಮಾರುತವು ಪಡುವಣ ಬಂಗಾಳದಲ್ಲಿ ಹದಿನಾರಕ್ಕೂ ಹೆಚ್ಚು ಮತ್ತು ಬಾಂಗ್ಲಾದೇಶದಲ್ಲಿ ಹದಿನೆಂಟಕ್ಕೂ ಹೆಚ್ಚು ಜನರ ಪ್ರಾಣ ಹರಣ ಮಾಡಿದೆ. ಇದೇ ವೇಳೆ ಅಮೆರಿಕ ಸಂಯುಕ್ತ ಸಂಸ್ಥಾನದ ಬಯಲು ಪ್ರದೇಶದಲ್ಲಿ ದಿಗಿಣ ಹಾಕಿದ ಸುಳಿಗಾಳಿಯು ನಾಲ್ಕು ಮಕ್ಕಳ ಸಹಿತ ಹದಿನೆಂಟಕ್ಕೂ ಹೆಚ್ಚು ಮಂದಿಯ ಜೀವವನ್ನು ಹೀರಿದೆ. ರೆಮಲ್ ಚಂಡ ಸುಂಟರ ಕುಣಿತಕ್ಕೆ ಮರಗಳುರುಳಿ, ಕಟ್ಟಡಗಳು ಜರಿದು, ಭೂಕುಸಿತ ಉಂಟಾಗಿ, ಮಾಡಿನ ತಗಡುಗಳು ತರಗೆಲೆಗಳಾಗಿ ಹಾರಿ ಎಲ್ಲೆಲ್ಲೂ ವೇಗದ ಗಾಳಿ ಮತ್ತು
ಜಗತ್ತಿನಲ್ಲೇ ಹೋಟೆಲ್ ಉದ್ಯಮದಲ್ಲಿ ಪ್ರಸಿದ್ಧಿಯನ್ನು ಪಡೆದವರು ನಮ್ಮ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯವರು.ಪುಣೆಯ ರಾಷ್ಟ್ರೀಯ ಹೆದ್ದಾರಿಯ ಬಳಿ ಇರುವ ಪಂಜುರ್ಲಿ ಗ್ರೂಪಿನ “ವಿಶ್ವನಾಥ್ ಪ್ಯಾಲೆಸ್” ಹೋಟೆಲ್ ಬದುಕಿಗೊಂದು ಭರವಸೆಯ ಬೆಳಕಾಗಿದೆ. ಉಪಹಾರ ಸೇವಿಸುವುದಕ್ಕಾಗಿ ಹೋಟೆಲ್ ಒಳಗಡೆ ಹೆಜ್ಜೆ ಇಟ್ಟಾಗ ಪ್ರತೀ ಹೆಜ್ಜೆಗೂ ಇಲ್ಲಿನ ಗೋಡೆಗಳ ಮೇಲಿನ ಭಿತ್ತಿ ಪತ್ರಗಳು ಮೈ
ಸುಪ್ರೀಂ ಕೋರ್ಟಿನ ಮಾಜೀ ನ್ಯಾಯಾಧೀಶರಾದ ಮದನ್ ಲೋಕೂರ್, ದಿಲ್ಲಿ ಹೈಕೋರ್ಟಿನ ನಿವೃತ್ತ ಜಸ್ಟಿಸ್ ಎ. ವಿ. ಶಾ ಮತ್ತು ದ ಹಿಂದೂ ಪತ್ರಿಕೆಯ ಹಿಂದಿನ ಸಂಪಾದಕರಾದ ಎನ್. ರಾಮ್ ಅವರುಗಳು ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿಯವರನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದಾರೆ. ರಾಜಕೀಯ ವೇದಿಕೆಯ ಬದಲು ಜನತಾ ವೇದಿಕೆಯಲ್ಲಿ ಜನಪರ ಕಾರ್ಯಕ್ರಮಗಳನ್ನು ಕುರಿತು ಈ ಚರ್ಚೆ ಆಗಬೇಕಾದುದು ಈಗಿನ ಅಗತ್ಯ ಎಂದು ಅವರು ತಿಳಿಸಿದ್ದಾರೆ. ಒಂದು ವೇಳೆ ಮೋದಿಯವರಿಗಾಗಲಿ,