Home Archive by category ವಿಟ್ಲ

ವಿಟ್ಲ: ವಿಟ್ಲ-ಕನ್ಯಾನ ರಸ್ತೆಯೂ ತೀರಾ ಹದಗೆಟ್ಟು ಹೋಗಿದ್ದು, ಇದರಿಂದ ರೊಚ್ಚಿಗೆದ್ದ ಸಾರ್ವಜನಿಕರು ಶವದ ಆಕೃತಿ ರಚಿಸಿ ರಸ್ತೆಯಲ್ಲಿ ಇಟ್ಟು ಆಕ್ರೋಶ ಹೊರಹಾಕಿದ್ದಾರೆ.

ಮಂಜೇಶ್ವರ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬೈರಿಕಟ್ಟೆ ಎಂಬಲ್ಲಿ ರಸ್ತೆ ಸಂಪೂರ್ಣವಾಗಿ ಹೊಂಡ ಗುಂಡಿಗಳಿಂದ ಕೂಡಿದ್ದು, ವಾಹನ ಬಿಡಿ, ಪಾದಚಾರಿಗಳಿಗೆ ನಡೆದಾಡಲು ತೊಂದರೆಯಾಗುತ್ತಿದೆ. ಕೆಲವು ವರ್ಷಗಳ ಹಿಂದೆ ಈ ರಸ್ತೆಯ ಒಂದು ಬದಿಗೆ ಇಂಟರ್ ಲಾಕ್ ಅಳವಡಿಸಿದ್ದು, ಅದೀಗ ಕಿತ್ತು ಹೋಗಿದೆ. ಈ ರಸ್ತೆ ವಿಟ್ಲದಿಂದ ಕನ್ಯಾನ, ಬಾಯಾರು, ಉಪ್ಪಳ, ಆನೆಕಲ್ಲು, ಮಂಜೇಶ್ವರ

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಕಾರು

ವಿಟ್ಲ: ಕಂಬಳಬೆಟ್ಟು ಮುಖ್ಯ ರಸ್ತೆಗೆ ಏಕಾಏಕಿ ಆಗಮಿಸಿದ ಬೈಕ್ ತಪ್ಪಿಸಲು ಪ್ರಯತ್ನಿಸಿದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ಬೈಕ್ ಗಳಿಗೆ ಡಿಕ್ಕಿಯಾಗಿ ಮಣ್ಣಿನ ದಿಬ್ಬದ ಮೇಲೆ ಮಗುಚಿ ಬಿದ್ದಿದೆ. ಬೈಕ್ ಸವಾರ ಅರ್ಕೆಜಾಲು ನಿವಾಸಿ ಯತೀಶ ಗಾಯಗೊಂಡಿದ್ದಾರೆ. ಕಾರು ಚಾಲಕ ಬೊಳಂತಿಮೊಗರು ನಿವಾಸಿ ಸನನ್ ಅಪಾಯದಿಂದ ಪಾರಾಗಿದ್ದಾರೆ. ವಿಟ್ಲ ಕಬಕ ರಸ್ತೆಯ ಕಂಬೆಟ್ಟುವಿನಲ್ಲಿ ಅರ್ಕೆಜಾಲು ಒಳ ರಸ್ತೆಯಿಂದ ಮುಖ್ಯ ರಸ್ತೆಗೆ ನುಗ್ಗಿದ ಬೈಕ್ ಗೆ ನಿಯಂತ್ರಣ ಕಳೆದುಕೊಂಡ ಕಾರು

ವಿಟ್ಲ: 94 ಹಕ್ಕು ಪತ್ರ ವಿಚಾರ: ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ದಾಂಧಲೆ ನಡೆಸಿದ ವ್ಯಕ್ತಿಗಳು

ವಿಟ್ಲ: ಮನೆ ಅಡಿಸ್ಥಳದ ಹಕ್ಕು ಪತ್ರ ಪಡೆಯುವ ವಿಚಾರದಲ್ಲಿ ನಿರೀಕ್ಷಕರ ಕಛೇರಿಯಲ್ಲಿ ಕೆಲವು ವ್ಯಕ್ತಿಗಳು ಮೇಜಿನ ಗಾಜು ಪುಡಿ ಮಾಡಿ ದಾಂಧಲೆ ನಡೆಸಿದ ಘಟನೆ ವಿಟ್ಲದ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ನಡೆದಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಬಂದೋಬಸ್ತು ಕಲ್ಪಿಸಿದ್ದಾರೆ.ವೀರಕಂಬ ನಿವಾಸಿ ಶೇಖ್ ಶಿಬಾನ್ ಎಂಬರು ಇತ್ತೀಚೆಗೆ ಸರ್ಕಾರಿ ಜಾಗದಲ್ಲಿ ನೂತನ ಮನೆ ನಿರ್ಮಾಣ ಮಾಡಿದ್ದರು. ಅಡಿಸ್ಥಳವನ್ನು ತಮ್ಮ ಹೆಸರಿಗೆ ಮಾಡಿಕೊಳ್ಳುವ ನಿಟ್ಟಿನಲ್ಲಿ 94ಸಿ ಅಡಿಯಲ್ಲಿ

ಸಾಲೆತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿ

ಸಾಲೆತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯಲ್ಲಿದ್ದ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಭಾಗಶ: ಜಖಂಗೊಂಡ ಘಟನೆ ಸಾಲೆತ್ತೂರು ಜಂಕ್ಷನ್‌ನಲ್ಲಿ ನಡೆದಿದೆ. ಮುಡಿಪು ಕಡೆಯಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಟೊಯೊಟಾ ಅರ್ಬನ್ ಕ್ರೂಸರ್ ಕಾರು ಸಾಲೆತ್ತೂರು ಜಂಕ್ಷನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿದ್ದ ಭಾರಿ ಗಾತ್ರದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಭಾಗಶ: ಜಖಂಗೊಂಡಿದ್ದು ಅಪಘಾತದ

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ

ಉಪ್ಪಿನಂಗಡಿ : ರಾತ್ರೋ ರಾತ್ರಿ ಮಹಿಳೆಯ ಕತ್ತು ಹಿಸುಕಿ ಕೊಲೆ

ಮಹಿಳೆಯೋರ್ವರನ್ನು ಕತ್ತು ಹಿಸುಕಿ ಕೊಲೆಗೈದ ಘಟನೆ ಪೆರ್ನೆ ಗ್ರಾ.ಪಂ ವ್ಯಾಪ್ತಿಯ ಬಿಳಿಯೂರಿನ ದರ್ಖಾಸ್ ನಲ್ಲಿ ನಡೆದಿದೆ. ಕೊಲೆಯ ಬಗ್ಗೆ ಅಕ್ಕನ ಮಗನಾದ ಅಪ್ರಾಪ್ತ ಬಾಲಕನ ಮೇಲೆ ತೀವ್ರ ಸಂಶಯ ವ್ಯಕ್ತವಾಗಿದೆ. ದರ್ಖಾಸ್ ನ ಹೇಮಾವತಿ ಮೃತ ಮಹಿಳೆಯಾಗಿದ್ದು, ಜೂನ್ 16 ರಂದು ಮಧ್ಯರಾತ್ರಿ ಹೃದಯಘಾತದಿಂದ ಮೃತಪಟ್ಟಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದ್ರೆ ಅವರ ಸಾವಿನ ಬಗ್ಗೆ ಸಾಕಷ್ಟು ಅನುಮಾನ ಮೂಡಿದ್ದರಿಂದ ಪೊಲೀಸರು ಸ್ಥಳಕ್ಕಾಗಮಿಸಿ ಮಹಜರು ನಡೆಸಿದ್ದಾರೆ. ಈ

ವಿಟ್ಲ: ವಿದ್ಯುತ್ ತಂತಿಗೆ ಸಿಲುಕಿ ನವಿಲು ಮೃತ್ಯು

ವಿಟ್ಲ: ವಿದ್ಯುತ್ ತಂತಿಗೆ ಸಿಲುಕಿ ನವಿಲು ಮೃತಪಟ್ಟ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ನವಿಲು ಮೃತಪಟ್ಟ ಬಗ್ಗೆ ಇಲ್ಲಿನ ರಿಕ್ಷಾ ಚಾಲಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯವರು ಮೃತ ನವಿಲನ್ನು ಸ್ಥಳದಿಂದ ಅನಂತಾಡಿ ಆರಣ್ಯ ಇಲಾಖೆಯ ಸಿಬ್ಬಂದಿಯವರಿಗೆ ಹಸ್ತಾಂತರ ಮಾಡಿದ್ದಾರೆ.

ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ & ಗೈಡ್ಸ್ ವಾರ್ಷಿಕ ಬೇಸಿಗೆ ಶಿಬಿರ

ವಿಟ್ಲ: ಮಾಣಿ , ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ & ಗೈಡ್ಸ್ ವಾರ್ಷಿಕ ಶಿಬಿರವನ್ನು ಕಶೆಕೋಡಿಯ ಶ್ರೀ ಲಕ್ಷ್ಮೀವೆಂಕರಮಣ ದೇವಸ್ಥಾನ ಬಾಳ್ತಿಲ ಗ್ರಾಮದಲ್ಲಿ ಏಪ್ರಿಲ್ 6 ಮತ್ತು 7 ರಂದು ಹಮ್ಮಿಕೊಳ್ಳಲಾಯಿತು. ಶಿಬಿರವನ್ನು ಪೂರ್ವಾಹ್ನ 9.30ಕ್ಕೆ ಸ್ಕೌಟ್ಸ್ & ಗೈಡ್ಸ್ ಸ್ಥಳೀಯ ಸಂಸ್ಥೆ ಮಾಣಿ ಮತ್ತು ಬಾಲವಿಕಾಸ ಟ್ರಸ್ಟ್ ಮಾಣಿಯ ಅಧ್ಯಕ್ಷರೂ ಆಗಿರುವ ಶ್ರೀ ಪ್ರಹ್ಲಾದ ಶೆಟ್ಟಿ .ಜೆ ರವರು ಶಾಲಾ ಆವರಣದಲ್ಲಿ ಹಣ್ಣಿನ

ವಿಟ್ಲ: ಖಾಸಗಿ ಬಸ್ ಹಾಗೂ ಪಿಕಪ್ ವಾಹನ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಖಾಸಗಿ ಬಸ್ಸಿಗೆ ಪಿಕಪ್ ವಾಹನ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ನಡೆದಿದೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿಯಾಗಿದೆ. ಪಿಕಪ್ ನಲ್ಲಿ ಹಲವು ಮಂದಿ ಇದ್ದರೆನ್ನಲಾಗಿದೆ. ಖಾಸಗಿ ಬಸ್‌ನಲ್ಲೂ ಹಲವು ಪ್ರಯಾಣಿಕರಿದ್ದು, ಅಪಘಾತದಿಂದ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

“ಬಾಲವಿಕಾಸದಲ್ಲಿ ಲಿಟ್ಲ್ ಪರ್ಲ್ಸ್ ಫೆಸ್ಟ್ – 2023-24”

ವಿಟ್ಲ :ಮಾರ್ಚ್ 23: ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನರ್ಸರಿ ತರಗತಿಯ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ‘ಲಿಟ್ಲ್ ಪರ್ಲ್ಸ್ ಫೆಸ್ಟ್- 2023-24 ಜರುಗಿತು. ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದ ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರಾದ ಪ್ರಹ್ಲಾದ್ ಶೆಟ್ಟಿ ಜೆ , ” ಮಾಣಿಯಂತಹ ಗ್ರಾಮೀಣ ಪ್ರದೇಶ ದಲ್ಲಿ ಕಡಿಮೆ ಖರ್ಚಿನಲ್ಲಿ ಬಾಲವಿಕಾಸ ಆಂಗ್ಲ ಮಾಧ್ಯಮ