ವಿಟ್ಲ: ವಿದ್ಯುತ್ ಶಾಕ್ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರ ತಾಲೂಕಿನ ಎಣ್ಮಕಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯನಡ್ಕದ ಸಾಯ ಎಂಬಲ್ಲಿ ನಡೆದಿದೆ. ನಾರಾಯಣ ನಾಯ್ಕ ಅವರ ಪುತ್ರ ಜತೇಶ್ (7 ವ) ಮೃತ ಬಾಲಕ. ವ್ಯಕ್ತಿಯೋರ್ವರು ಹಂದಿ ಹಿಡಿಯಲು ಅಕ್ರಮವಾಗಿ ಗದ್ದೆಯಲ್ಲಿ ವಿದ್ಯುತ್ ಅಳವಡಿಸುರುವುದೇ ಘಟನೆಗೆ ಕಾರಣವೆಂದು ಆರೋಪಿಸಿರುವ ಸಂದೇಶಗಳು ಸಾಮಾಜಿಕ
ವಿಟ್ಲ: ಪುತ್ತೂರು ಹಾಗೂ ವಿಟ್ಲದಲ್ಲಿ ಅಂಬೇಡ್ಕರ್ ಭವನಕ್ಕೆ ಮಂಜೂರಾದ ನಿವೇಶನದಲ್ಲಿ ಅಂಬೇಡ್ಕರ್ ಭವನಕ್ಕೆ ಕೂಡಲೇ ಶಂಕುಸ್ಥಾಪನೆ ನೆರವೇರಿಸಬೇಕು ಹಾಗೂ 2 ಭವನಗಳಿಗೂ ಹೆಚ್ಚಿನ ಅನುದಾನ ನೀಡುವಂತೆ ಒತ್ತಾಯಿಸಿ ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ವಿಟ್ಲ ಇದರ ವತಿಯಿಂದ ವಿಟ್ಲ ಕಚೇರಿಯಿಂದ ಬಳಿಯಿಂದ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ಶಾಸಕರ ಕಚೇರಿ ತನಕ ಕಾಲ್ನಡಿಗೆ ಜಾಥಾ ನಡೆಸಿ ಮನವಿ ಸಲ್ಲಿಸಿದರು. ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಸೇಸಪ್ಪ
ವಿಟ್ಲ: ಆಟೋ ರಿಕ್ಷಾ ಚಾಲಕರೋರ್ವರು ಹಠಾತ್ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ನ.9 ರಂದು ಬಂಟ್ವಾಳ ತಾಲೂಕಿನ ಮಾಣಿ ಸಮೀಪ ನಡೆದಿದೆ. ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಜಯಕರ ಪೂಜಾರಿ (45) ಮೃತರು. ಜಯಕರ ಪೂಜಾರಿ ರವರು ಆಟೋ ರಿಕ್ಷಾ ಚಾಲಕರಾಗಿದ್ದು, ಪ್ರತಿದಿನ ಬೆಳಗ್ಗೆ ಕೆಲ ಮಕ್ಕಳನ್ನು ಶಾಲೆಗೆ ಬಿಡುತ್ತಿದ್ದರು. ಎಂದಿನಂತೆ ಇಂದು ಮಕ್ಕಳನ್ನು ಆಟೋ ರಿಕ್ಷಾದಲ್ಲಿ ಶಾಲೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಮಕ್ಕಳು ಜೆರಾಕ್ಸ್ ಶಾಪ್ ಹತ್ತಿರ ಆಟೋ
ವಿಟ್ಲ: ಕಾರಣಿಕ ಕ್ಷೇತ್ರಗಳಲ್ಲೊಂದಾದ ವೀರಕಂಬ ಗ್ರಾಮದ ಕೆಲಿಂಜ ಶ್ರೀ ಉಳ್ಳಾಲ್ತಿ ಕ್ಷೇತ್ರದ ಕಾಣಿಕೆ ಡಬ್ಬಿಯನ್ನು ಯಾರೋ ಖದೀಮರು ಎಗರಿಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ.ಕೆಲಿಂಜ ಕ್ಷೇತ್ರಕ್ಕೆ ಬಹಳ ಪುರಾತನ ಇತಿಹಾಸವಿದ್ದು ಇಲ್ಲಿ ವರ್ಷಂಪ್ರತಿ ನಡೆಯುವ ಮೆಚ್ಚಿ ಜಾತ್ರೆಗೆ ಅಪಾರ ಮಹಿಮೆ ಇದೆ. ಬೇರೆ ಬೇರೆ ಊರಿನ ಸಾವಿರಾರು ಭಕ್ತರು ಇಲ್ಲಿನ ಜಾತ್ರೆಯಲ್ಲಿ ಭಾಗವಹಿಸುತ್ತಾರೆ.ಈ ಮಾರ್ಗದಿಂದ ಹಾದು ಹೋಗುವ ಅನೇಕ ಭಕ್ತರು ಕ್ಷೇತ್ರದ ಎದುರು ತಮ್ಮ ವಾಹನವನ್ನು
ವಿಟ್ಲ: ಸಮಸ್ಯೆಗಳ ಕೂಪವಾಗಿ ವಿಟ್ಲ ಪಟ್ಟಣ ಮಾರ್ಪಾಡಾಗಿದೆ. ಸಮಸ್ಯೆಯಿಂದ ಕಂಗಾಲಾದ ಜನಅವರ ಕಷ್ಟಗಳನ್ನು ನಮ್ಮಲ್ಲಿ ಹೇಳುವ ಪರಿಸ್ಥಿತಿ ಇದೀಗ ನಿರ್ಮಾಣವಾಗಿದೆ. ಅದ್ದರಿಂದ ಬಿಜೆಪಿಯ ಕಾರ್ಯವೈಖರಿ ಏನೆಂಬುದು ಜನರಿಗೆ ಮನದಟ್ಟಾಗಿದೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಹೇಳಿದರು. ಅವರು ವಿಟ್ಲ ಪಟ್ಟಣ ಪಂಚಾಯತ್ ನ ದುರವಸ್ಥೆಯ ವಿರುದ್ಧ ವಿಟ್ಲ – ಉಪ್ಪಿನಗಂಡಿ ಬ್ಲಾಕ್ ಕಾಂಗ್ರೆಸ್ ಹಾಗೂ ವಿಟ್ಲ ನಗರ ಪಂಚಾಯತ್ ವತಿಯಿಂದ
ವಿಟ್ಲ: ಪೆಟ್ರೋಲ್ ಸುರಿದು ಯುವಕನನ್ನು ಕೊಲೆ ಮಾಡಿದ್ದೇನೆ ಎಂದು ಹೇಳಿದ್ದ ವ್ಯಕ್ತಿಯೋರ್ವನನ್ನು ವಿಟ್ಲ ಪೋಲೀಸರು ಬಂಧಿಸಿದ್ದು, ವಿಚಾರಣೆ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೋಳಂತೂರು ನಿವಾಸಿ ಅದ್ದು ಯಾನೆ ಅದ್ರಾಮ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಬಂಟ್ವಾಳ-ವಿಟ್ಲ ಠಾಣಾ ವ್ಯಾಪ್ತಿಯ ಗಡಿ ಭಾಗದ ಸುರಿಬೈಲು ನಿವಾಸಿ ಸಪ್ಪಿ (ಸಮಾದ್) (19) ಮೃತ ಯುವಕ. ಅದ್ರಾಮ ಸಲಿಂಗಕಾಮಿಯಾಗಿದ್ದು, ಮಂಚಿ-ಇರಾ-ಮುಡಿಪು ರಸ್ತೆಯ ನಿರ್ಜನ ಪ್ರದೇಶದ ಗುಡ್ಡದಲ್ಲಿ
ವಿಟ್ಲ : ಶಿಕ್ಷಣ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ÷್ಯದಿಂದಾಗಿ 92ವರ್ಷಗಳ ಇತಿಹಾಸ ಹೊಂದಿದ ಕುಳಾಲು ಸರಕಾರಿ ಶಾಲೆಯ ಕಟ್ಟಡ ಕುಸಿಯುತ್ತಿದ್ದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 92ವರ್ಷಗಳನ್ನು ಪೂರೈಸಿದ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕುಳಾಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೀಗ ಶತಮಾನದತ್ತ ದಾಪುಗಾಲು ಹಾಕುತ್ತಿದೆ. ಆದರೆ ಕುಸಿಯುವ ಹಂತದಲ್ಲಿರುವ ನಾಲ್ಕು ಕೊಠಡಿಗಳನ್ನು ತೆರವುಗೊಳಿಸಿ ಆರು ಹೊಸ ಕೊಠಡಿಗಳನ್ನು ನೀಡುವಂತೆ
ಬಂಟ್ವಾಳ ತಾಲೂಕು ಕಚೇರಿಯಲ್ಲಿ ಭೂದಾಖಲೆಗಳು ಕಾಣೆಯಾಗುತ್ತಿವೆ! ಅಧಿಕಾರಿಗಳ ಬೇಜವಾಬ್ದಾರಿ ಇದಕ್ಕೆ ಕಾರಣ ಮತ್ತು ಆ ಮೂಲಕ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಆದುದರಿಂದ ನಾಪತ್ತೆಯಾದ ನಮ್ಮ ಕಡತಗಳನ್ನು ಹುಡುಕಿ ಕೊಡಬೇಕೆಂದು ವಿಟ್ಲದ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಆಗ್ರಹಿಸಿದೆ .ವಿಟ್ಲದ ಪ್ರೆಸ್ಕ್ಲಬ್ನಲ್ಲಿ ವಿಟ್ಲದ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಬಿ.ಕೆ.ಸೇಸಪ್ಪ ಬೆದ್ರಕಾಡು ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಗ್ಗೆ ತಹಶೀಲ್ದಾರರಿಗೆ, ಸಹಾಯಕ
ವಿಟ್ಲ: ಬರಿಮಾರಿನಲ್ಲಿ ಹೈಟೆಕ್ ಅಕ್ರಮ ಮರಳು ದಂಧೆ ನಡೆಯುತ್ತಿದ್ದು ಸಾರ್ವಜನಿಕರು ಲಾರಿಗಳನ್ನು ತಡೆ ಹಿಡಿದು ಪ್ರತಿಭಟಿಸಿದ್ದಾರೆ. ಎಗ್ಗಿಲ್ಲದೆ ಮರಳು ಮಾಫಿಯಾ ನಡೆಯುತ್ತಿದ್ದು ಪಂ.ಅಧ್ಯಕ್ಷೆಯ ನೇತೃತ್ವದಲ್ಲಿ ಸ್ಥಳೀಯರು ಬರಿಮಾರಿನಲ್ಲಿ ಮರಳು ಲಾರಿಗಳನ್ನು ತಡೆದುಹಿಡಿದ್ದಾರೆ. ಈ ವೇಳೆ ಲಾರಿ ತಡೆದ ಕಾರ್ಯಕರ್ತರಿಗೆ ಲಾರಿಗಳನ್ನು ಬಿಡುವಂತೆ ಬಿಜೆಪಿ ಮುಖಂಡರಿಂದಲೂ, ಪೆÇಲೀಸರಿಂದ ಒತ್ತಡ ಹೇರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬೋಟು, ಕ್ರೇನ್ ಬಳಸಿ ಹೈಟೆಕ್
ವಿಟ್ಲ: ವಿಟ್ಲ ಅಕ್ಷಯ ಸಭಾಭವನದಲ್ಲಿ ಮೂರ್ಜೆ (ಮೂರ್ಕಜೆ) ನಂದರವoಶ ಒಕ್ಕಲಿಗ ಗೌಡ ತರವಾಡು ಟ್ರಸ್ಟಿನ ವತಿಯಿಂದ ನಡೆದ ಗುರುವಂದನಾ – ಕುಟುಂಬ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರು ಇದೊಂದು ಔಚಿತ್ಯಪೂರ್ಣ ಕಾರ್ಯಕ್ರಮವಾಗಿದೆ. ಶ್ರದ್ದಾ ಭಕ್ತಿಯಿಂದ ಬದುಕಿದರೆ ಜೀವನಪಾವನವಾಗುತ್ತದೆ. ಗುರುವಿನ ಮಾತಿನಲ್ಲಿ ನಂಬಿಕೆ ಇಟ್ಟರೆ ಬದುಕು