ವಿಟ್ಲ : ಶಿಕ್ಷಣ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ÷್ಯದಿಂದಾಗಿ 92ವರ್ಷಗಳ ಇತಿಹಾಸ ಹೊಂದಿದ ಕುಳಾಲು ಸರಕಾರಿ ಶಾಲೆಯ ಕಟ್ಟಡ ಕುಸಿಯುತ್ತಿದ್ದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 92ವರ್ಷಗಳನ್ನು ಪೂರೈಸಿದ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕುಳಾಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೀಗ ಶತಮಾನದತ್ತ ದಾಪುಗಾಲು ಹಾಕುತ್ತಿದೆ. ಆದರೆ
ಬಂಟ್ವಾಳ ತಾಲೂಕು ಕಚೇರಿಯಲ್ಲಿ ಭೂದಾಖಲೆಗಳು ಕಾಣೆಯಾಗುತ್ತಿವೆ! ಅಧಿಕಾರಿಗಳ ಬೇಜವಾಬ್ದಾರಿ ಇದಕ್ಕೆ ಕಾರಣ ಮತ್ತು ಆ ಮೂಲಕ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಆದುದರಿಂದ ನಾಪತ್ತೆಯಾದ ನಮ್ಮ ಕಡತಗಳನ್ನು ಹುಡುಕಿ ಕೊಡಬೇಕೆಂದು ವಿಟ್ಲದ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಆಗ್ರಹಿಸಿದೆ .ವಿಟ್ಲದ ಪ್ರೆಸ್ಕ್ಲಬ್ನಲ್ಲಿ ವಿಟ್ಲದ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಬಿ.ಕೆ.ಸೇಸಪ್ಪ ಬೆದ್ರಕಾಡು ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಗ್ಗೆ ತಹಶೀಲ್ದಾರರಿಗೆ, ಸಹಾಯಕ
ವಿಟ್ಲ: ಬರಿಮಾರಿನಲ್ಲಿ ಹೈಟೆಕ್ ಅಕ್ರಮ ಮರಳು ದಂಧೆ ನಡೆಯುತ್ತಿದ್ದು ಸಾರ್ವಜನಿಕರು ಲಾರಿಗಳನ್ನು ತಡೆ ಹಿಡಿದು ಪ್ರತಿಭಟಿಸಿದ್ದಾರೆ. ಎಗ್ಗಿಲ್ಲದೆ ಮರಳು ಮಾಫಿಯಾ ನಡೆಯುತ್ತಿದ್ದು ಪಂ.ಅಧ್ಯಕ್ಷೆಯ ನೇತೃತ್ವದಲ್ಲಿ ಸ್ಥಳೀಯರು ಬರಿಮಾರಿನಲ್ಲಿ ಮರಳು ಲಾರಿಗಳನ್ನು ತಡೆದುಹಿಡಿದ್ದಾರೆ. ಈ ವೇಳೆ ಲಾರಿ ತಡೆದ ಕಾರ್ಯಕರ್ತರಿಗೆ ಲಾರಿಗಳನ್ನು ಬಿಡುವಂತೆ ಬಿಜೆಪಿ ಮುಖಂಡರಿಂದಲೂ, ಪೆÇಲೀಸರಿಂದ ಒತ್ತಡ ಹೇರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬೋಟು, ಕ್ರೇನ್ ಬಳಸಿ ಹೈಟೆಕ್
ವಿಟ್ಲ: ವಿಟ್ಲ ಅಕ್ಷಯ ಸಭಾಭವನದಲ್ಲಿ ಮೂರ್ಜೆ (ಮೂರ್ಕಜೆ) ನಂದರವoಶ ಒಕ್ಕಲಿಗ ಗೌಡ ತರವಾಡು ಟ್ರಸ್ಟಿನ ವತಿಯಿಂದ ನಡೆದ ಗುರುವಂದನಾ – ಕುಟುಂಬ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರು ಇದೊಂದು ಔಚಿತ್ಯಪೂರ್ಣ ಕಾರ್ಯಕ್ರಮವಾಗಿದೆ. ಶ್ರದ್ದಾ ಭಕ್ತಿಯಿಂದ ಬದುಕಿದರೆ ಜೀವನಪಾವನವಾಗುತ್ತದೆ. ಗುರುವಿನ ಮಾತಿನಲ್ಲಿ ನಂಬಿಕೆ ಇಟ್ಟರೆ ಬದುಕು
ವಿಟ್ಲ: ದಿನದಿಂದ ದಿನಕ್ಕೆ ಬೆಳವಣಿಗೆ ಕಾಣುತ್ತಿರುವ ವಿಟ್ಲ ಪಟ್ಟಣ ಪಂಚಾಯತ್ ಸಮಸ್ಯೆಯ ಆಗರವಾಗಿ ಜನರು ಪರಿತಪಿಸುವಂತ ಸ್ಥಿತಿ ನಿರ್ಮಾಣವಾಗಿದೆ. ಆದರೆ ಈ ಭಾಗದ ಶಾಸಕರು ಮಾತ್ರ ಪಟ್ಟಣ ಪಂಚಾಯತ್ ನಲ್ಲಿ ಸಭೆ ನಡೆಸಿ ಕೇವಲ ಸಲಹೆ ಸೂಚನೆಗಳನ್ನು ಕೊಟ್ಟು ಹೋಗುವ ಮೂಲಕ ಜನರ ಆಕಾಂಕ್ಷೆಗಳಿಗೆ ತಣ್ಣೀರೆರೆಯುವ ಕೆಲಸ ಮಾಡುತ್ತಿದ್ದಾರೆ. ಇಲ್ಲಿರುವ ಸಮಸ್ಯೆಗಳಿಗೊಂದು ಅವರು ಸರಿಯಾದ ಪರಿಹಾರ ಕ್ರಮ ಕೈಗೊಳ್ಳಬೇಕಾಗಿರುವುದು ಅನಿವಾರ್ಯವಾಗಿದೆ. ಇಲ್ಲವಾದಲ್ಲಿ ಮುಂದಿನ
ವಿಟ್ಲ: ನಾನು ಇದೇ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧಿಸಿ, ಗೆದ್ದು ಶಾಸಕಿಯಾಗಿ ಹಿಂದಿನ ಅವಧಿಯಲ್ಲಿ ಮಂಜೂರುಗೊಳಿಸಿದ್ದ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಿ ತೋರಿಸಿಕೊಡುವುದಾಗಿ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ಹೇಳಿದ್ದಾರೆ. ಕಬಕ-ವಿಟ್ಲ ರಸ್ತೆ ದುರಸ್ತಿಗೆ ಆಗ್ರಹಿಸಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮತ್ತು ಕಬಕ ವಲಯ ಕಾಂಗ್ರೆಸ್ನ ಆಶ್ರಯದಲ್ಲಿ ಕಬಕದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೆಶಿಸಿ ಅವರು ಮಾತನಾಡಿದರು.ಕಳೆದ ಅವಧಿಯಲ್ಲಿ ನಾನು ಮೆಡಿಕಲ್
ವಿಟ್ಲ: ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಪ್ಯಾಸೆಂಜರ್ ರೈಲಿನಡಿಗೆ ನೇರಳಟ್ಟೆ ಸಮೀಪ ವ್ಯಕ್ತಿಯೊಬ್ಬರು ಬಿದ್ದು ತೀವ್ರ ಗಾಯಗೊಂಡ ಮತ್ತು ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲೆಂದು ಅದೇ ರೈಲಿನಲ್ಲಿ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಕರೆತಂದಾಗ ದಾರಿ ಮಧ್ಯೆ ಮೃತಪಟ್ಟ ಘಟನೆ ಅ.16ರಂದು ರಾತ್ರಿ ನಡೆದಿದೆ. ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ರೈಲು ನೇರಳಕಟ್ಟೆ ಸಮೀಪ ನಿಧಾನವಾಗಿ ಚಲಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ರೈಲ್ವೇ ಹಳಿಗೆ
ವಿಟ್ಲ: ಅಂಗಡಿಯೊಂದರ ಶಟರ್ ನಲ್ಲಿ ಯಾರೋ ಕಿಡಿಗೇಡಿಗಳು Name jihad ಬರಹ ಎಂದು ಬರೆದ ಘಟನೆ ವಿಟ್ಲ ಪೇಟೆಯ ಹೃದಯ ಭಾಗದಲ್ಲಿರುವ ದೀಪಕ್ ವಾಚ್ ವರ್ಕ್ಸ್ನಲ್ಲಿ ನಡೆದಿದೆ. ಅ.11 ರಂದು ರಾತ್ರಿ ವೇಳೆ ಘಟನೆ ನಡೆದಿದ್ದು, ಅ12 ರಂದು ಮುಂಜಾನೆ ಅಂಗಡಿ ಮಾಲೀಕರು ಬಾಗಿಲು ತೆಗೆಯಲು ಬಂದು ನೋಡಿದಾಗ ಬೆಳಕಿಗೆ ಬಂದಿದೆ ಎನ್ನಲಾಗಿದೆ.ಈ ಬಗ್ಗೆ ಅಂಗಡಿ ಮಾಲೀಕ ಅಬ್ದುಲ್ ವಿಟ್ಲ ಠಾಣೆಗೆ ದೂರು ನೀಡಿದ್ದು, ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಯಾರೋ ಇಬ್ಬರು ಬರುತ್ತಿರುವುದು
ವಿಟ್ಲ: ಕೇರಳದಲ್ಲಿ ನಡೆದ ರೈಲು ಅಪಘಾತದಲ್ಲಿ ವಿಟ್ಲ ಸಮೀಪದ ಕಡಂಬು ಎಂಬಲ್ಲಿಯ ಯುವಕ ಮೃತಪಟ್ಟಿದ್ದಾರೆ.ವಿಟ್ಲ ಸಮೀಪದ ಕಡಂಬು ನಿವಾಸಿ ಪಿಲಿವಲಚ್ಚಿಲ್ ನಿವಾಸಿ ಅಶ್ರಫ್ ಉಸ್ಮಾನ್ ಅವರ ಪುತ್ರ ಮಹಮ್ಮದ್ ಅನಾಸ್(19) ಮೃತಪಟ್ಟ ಯುವಕ. ಈತ ಎಸಿ ಮೆಕಾನಿಕ್ ಆಗಿದ್ದು, ಎಸಿ ಟ್ರೈನಿಂಗ್ ಗಾಗಿ ಕೇರಳದ ಕೊಚ್ಚಿಗೆ ತೆರಳಿದ್ದರು. ತನ್ನ ಕೆಲಸ ಕಾರ್ಯ ಮುಗಿಸಿ, ಊರಿಗೆ ಟೈನ್ ನಲ್ಲಿ ಹಿಂತಿರುಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಹೊರಗಡೆ ಎಸೆಯಲ್ಪಟ್ಟು, ಸ್ಥಳದಲ್ಲೇ
ರಾಜ್ಯದ ಲ್ಲಿನ ಪ್ರಮುಖ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಜ್ಯ ಪೊಲೀಸ್ ನಿರ್ದೇಶನದಂತೆ ಬಂಟ್ವಾಳ ಹಾಗೂ ವಿಟ್ಲ ಪೊಲೀಸರ ತಂಡ ಮುಂಜಾನೆ ವೇಳೆ ಬೊಳಂತೂರು ವ್ಯಕ್ತಿಯೋರ್ವ ನ ಮನೆಗೆ ದಾಳಿ ನಡೆಸಿ ವಿಚಾರಣೆ ನಡೆಸಿ ಮಾಹಿತಿ ಕಲೆಹಾಕುತ್ತಿದೆ.ಬೊಳಂತೂರು ನಿವಾಸಿ ಮಹಮ್ಮದ್ ಕುಟ್ಟಿ ಎಂಬವರ ಪುತ್ರ ಮಹಮ್ಮದ್ ತಬ್ಸೀರ್ ಎಂಬವರ ಮನಗೆ ಮುಂಜಾನೆ ಮೂರು ಗಂಟೆ ವೇಳೆ ಪೊಲೀಸ್ ದಾಳಿ ನಡೆಸಿದೆ.ಯಾವ ಪ್ರಕರಣಕ್ಕೆ ಎಂಬ ವಿಚಾರವನ್ನು ಇಲ್ಲಿನ ಪೊಲೀಸರು ಮಾಹಿತಿ