ಉಳ್ಳಾಲ: ಮಂಗಳೂರು ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾಗಿ (ಮೌಲ್ಯಮಾಪನ) ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ರಾಜು ಕೃಷ್ಣ ಚಲ್ಲಣ್ಣವರ್ ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಸರ್ಕಾರದ ಅಧಿಸೂಚನೆಯಂತೆ ಕುಲಸಚಿವ (ಮೌಲ್ಯಮಾಪನ) ರಾಗಿದ್ದ ಪ್ರೊ. ಪಿ ಎಲ್ ಧರ್ಮ ಅವರು ನೂತನ ಕುಲಸಚಿವರಿಗೆ ಅಧಿಕಾರ ಹಸ್ತಾಂತರಿಸಿದರು. ಪ್ರೊ. ಪಿ ಎಲ್ ಧರ್ಮ ಅವರು
ಕಡಬ ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಹಲವು ವರ್ಷಗಳ ಬೇಡಿಕೆಯಾಗಿರುವ ಸರಕಾರಿ ಪದವಿ ಕಾಲೇಜು ಆರಂಭಿಸದೇ ಹೋದರೆ ಸ್ಥಳೀಯ ವಿವಿಧ ಸಂಘ ಸಂಸ್ಥೆಗಗಳ ಸಹಕಾರದೊಂದಿಗೆ ಉಗ್ರ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕಡಬ ಪದವಿ ಕಾಲೇಜು ಹೋರಾಟ ಸಮಿತಿಯ ಅಧ್ಯಕ್ಷ ವಿಜಯಕುಮಾರ್ ರೈ ಕರ್ಮಾಯಿ ಅವರು ಎಚ್ಚರಿಸಿದ್ದಾರೆ. ಅವರು ಕಡಬದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕಡಬ ಪರಿಸರದ ಮಕ್ಕಳಿಗೆ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ಲಭಿಸಬೇಕೆಂಬ
ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಜೈನ್ ವಿವಿಯ ಪ್ರಕರಣವನ್ನು ಖಂಡಿಸಿ ನಡೆಸಿರುವ ಶಾಂತಿಯುತ ಪ್ರತಿಭಟನೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಬೋಧಕ ಹಾಗೂ ಬೋಧಕೇತರ ವರ್ಗದವರು ಬಾಗವಹಿಸಿದರು. ಈ ಶಾಂತಿಯುತ ಪ್ರತಿಭಟನೆಯಲ್ಲಿ ಅಂಬೇಡ್ಕರ್, ಫುಲೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೋಹನ್ ಕುಮಾರ್, ಪದಾಧಿಕಾರಿಗಳಾದ ಅವಿನಾಶ್ ಕಾಂಬ್ಳೆ, ವಿಜಯ್ ಕುಮಾರ್, ಗೋವಿಂದ್
ದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯು (NSD) “ಭಾರತ್ ರಂಗ್ ಮಹೋತ್ಸವ್” ಎಂಬ ಹೆಸರಿನಲ್ಲಿ ನಾಟಕೋತ್ಸವವನ್ನು ಪ್ರತೀವರ್ಷ ಆಯೋಜಿಸುತ್ತದೆ. ಈ ಉತ್ಸವದ 22 ನೇ ಆವೃತ್ತಿಯು, ಇದೇ ಫೆಬ್ರವರಿಯ 14 ರಿಂದ ಫೆಬ್ರವರಿ 26 ರವರೆಗೆ ನಡೆಯಲಿದೆ. ಭಾರತದಾದ್ಯಂತ 10 ಸ್ಥಳಗಳಲ್ಲಿ ಪ್ರದರ್ಶಿಸಲು 960 ನಾಟಕಗಳಿಂದ, ಕೇವಲ 77 ನಾಟಕಗಳನ್ನು ಪ್ರಸಕ್ತ ವರ್ಷದಲ್ಲಿ ಆಯ್ಕೆ ಮಾಡಲಾಗಿದೆ. ಇದರಲ್ಲಿ ಅಸ್ತಿತ್ವ ® ಮಂಗಳೂರು ತಂಡದ
ಇದೇ ಬರುವ ಆದಿತ್ಯವಾರ ಫೆಬ್ರವರಿ 5ರಂದು ಬೋಳೂರಿನಲ್ಲಿರುವ ಅಮೃತ ವಿದ್ಯಾಲಯಂನ ಆವರಣದಲ್ಲಿ ಸಾರ್ವಜನಿಕ ಮಕ್ಕಳಿಗೆ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರವು ಬೆಳಿಗ್ಗೆ 8.30ರಿಂದ ಅಪರಾಹ್ನ 1.30ರ ವರೆಗೆ ನಡೆಯಲಿದೆ. ಇದೇ ಸಂದರ್ಭದಲ್ಲಿ ಡಾ. ಚಾಂದಿನಿ ವಿಕ್ರಂ ಶೆಟ್ಟಿ ಎಚ್ ಒ ಡಿ, ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್,ಇವರಿಂದ ದಂತ ನೈರ್ಮಲ್ಯದ ಬಗ್ಗೆ ಉಪನ್ಯಾಸ ಮಾಡಲಿದ್ಧಾರೆ. ಸಾರ್ವಜನಿಕರು ಇದರ ಉಪಯೋಗವನ್ನು ಪಡೆಯ ಬೇಕಾಗಿ ವಿನಂತಿ.
ಔರಾ 2023 – ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಇಂಜಿನಿಯರಿಂಗ್ ಬ್ಯಾಚ್ 2022ರ ಫ್ರೆಶರ್ಸ್ ಡೇ ಅನ್ನು ಫೆಬ್ರವರಿ 7, 2023 ರಂದು ಆಚರಿಸಲಾಯಿತು. ಸಮಾರಂಭದ ಮುಖ್ಯ ಅತಿಥಿಗಳಾಗಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಮತ್ತು ಗ್ಲೋಬಲ್ ಆರ್ಎಂಜಿ ಮುಖ್ಯಸ್ಥರಾದ ಶ್ರೀ ಚಕ್ರವರ್ತಿ ಇ.ಎಸ್. ಹಾಗೂ ಗೌರವ ಅತಿಥಿಗಳಾಗಿ ಶ್ರೀ ಎನ್. ಶಶಿಕುಮಾರ್ IPS, DIGP ಮತ್ತು ಪೊಲೀಸ್ ಆಯುಕ್ತರು, ಮಂಗಳೂರು ಇವರುಗಳು ಭಾಗವಹಿಸಿದರು.
ಉಜಿರೆ, ಫೆ.7: ರಾಷ್ಟ್ರೀಯ ಮೌಲ್ಯಾಂಕನ ಹಾಗೂ ಮೌಲ್ಯಮಾಪನದ (ನ್ಯಾಕ್) ನಾಲ್ಕನೇ ಆವೃತ್ತಿಯಲ್ಲಿ ಉಜಿರೆ ಶ್ರೀ ಧ.ಮ ಕಾಲೇಜು ಅತ್ಯುನ್ನತ ಗ್ರೇಡ್ನೊಂದಿಗೆ ಎ ಪ್ಲಸ್ ಪ್ಲಸ್ (ಂ ++) ವಿಶೇಷ ಮನ್ನಣೆ ಗಳಿಸಿದೆ. ನ್ಯಾಕ್ ಪರಿಶೀಲನೆಯ ಪ್ರಕ್ರಿಯೆಯ ಭಾಗವಾಗಿ ಮೂವರು ತಜ್ಞ ಸದಸ್ಯರ ತಂಡವು ಕಳೆದ ತಿಂಗಳ 30 ಹಾಗೂ 31ರಂದು ಕಾಲೇಜಿಗೆ ಭೇಟಿ ನೀಡಿತ್ತು. ಓರಿಸ್ಸಾದ ಕಲಹಂಡಿ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಸಂಜಯ ಕುಮಾರ್ ಸತಪತಿ ಅಧ್ಯಕ್ಷತೆಯ ನ್ಯಾಕ್
ಉಜಿರೆ, ಫೆ.6: ದಕ್ಷಿಣ ಕನ್ನಡ ಜಿಲ್ಲಾ 25ನೆಯ ಸಾಹಿತ್ಯ ಸಮ್ಮೇಳನದ ಕೊನೆಯ ದಿನ ರವಿವಾರ ಮಧ್ಯಾಹ್ನ ನಡೆದ ಯಕ್ಷ ‘ಗಾನ’ ವೈಭವ ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ಲಲಿತ ಕಲಾ ಸಂಘದ ವಿದ್ಯಾರ್ಥಿಗಳು ಯಕ್ಷಗಾನ ಪ್ರಿಯರ ಚಪ್ಪಾಳೆಯ ಮೆಚ್ಚುಗೆ ಗಳಿಸಿದರು. ತಂಡದ ನಿರ್ದೇಶಕ (ಪುತ್ತೂರು ವಿವೇಕಾನಂದ ಕಾಲೇಜಿನ ಸಹ ಪ್ರಾಧ್ಯಾಪಕರು) ರಾದ ವರ್ಷಿತ್ ಕಿಜಕ್ಕಾರ್ ಅವರ ಚೆಂಡೆಯ ನಾದ ಹಾಗೂ ಕಿಶನ್ ರಾವ್ ಅವರ ಚಕ್ರತಾಳ ದನಿಯೊಂದಿಗೆ ವಿದ್ಯಾರ್ಥಿನಿಯರಾದ ಹೇಮಾ,
ಉಜಿರೆ, ಫೆ 6: ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ರವಿವಾರ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಂತಿಮ ಘಟ್ಟದಲ್ಲಿ ಕನ್ನಡ ತಾಯಿ ಭುವನೇಶ್ವರಿಗೆ ಸುಮಧುರ ಗೀತೆಗಳ ಗಾಯನದ ಮೂಲಕ ಸ್ವರಾಭಿಷೇಕವೇ ನಡೆಯಿತು. ಆ ಮೂಲಕ ಮೂರು ದಿನಗಳ ಅಕ್ಷರ ಜಾತ್ರೆ ಪೂರ್ಣ ಮುಕ್ತಾಯ ಕಂಡಿತು. “ಹುಟ್ಟಿದರೆ ಕನ್ನಡ ನಾಡಲ್ಲೇ ಹುಟ್ಟಬೇಕು..” “ಕರುನಾಡ ತಾಯಿ ಸದಾ ಚಿನ್ಮಯಿ..” ಮುಂತಾದ ಗೀತೆಗಳ ಮೂಲಕ ಸ
ಉಜಿರೆ, ಫೆ.6: ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ರವಿವಾರ ಸಂಪನ್ನಗೊಂಡ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ರಂಗು ಸಮ್ಮೇಳನಕ್ಕೆ ವಿಶೇಷ ಮೆರುಗು ನೀಡಿತು. ಸಂಜೆ ಸಮ್ಮೇಳನದ ಸಮಾರೋಪದ ಬಳಿಕ ಆರಂಭಗೊಂಡ ಸಾಂಸ್ಕೃತಿಕ ಕಾರ್ಯಕ್ರಮದ ಮುಂಚೂಣಿಯಲ್ಲಿ ಮಂಗಳೂರು ಮತ್ತು ಉಜಿರೆಯ ವಿಶೇಷಚೇತನ ಮಕ್ಕಳ ಶಾಲೆ ‘ಸಾನಿಧ್ಯ’ದ ಮಕ್ಕಳಿಂದ ನಾಲ್ಕು ಕಾರ್ಯಕ್ರಮಗಳು




























