Home Archive by category ಹಾನಿ

ಹೆಜಮಾಡಿ : ಹೆದ್ದಾರಿಯಂಚಿಗೆ ಮೀನಿನ ನೀರು ಚೆಲ್ಲಿದ ವಾಹನ -ಗ್ರಾ.ಪಂ.ನಿಂದ 5 ಸಾವಿರ ದಂಡ

ಹೆಜಮಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆದ್ದಾರಿ ಇಕ್ಕೆಲಲ್ಲಿ ಭಟ್ಕಳ ಮೂಲದ ಮೀನಿನ ವಾಹನವೊಂದರಿಂದ ದುರ್ನಾತ ಬೀರುವ ಮೀನಿನ ನೀರನ್ನು ಚೆಲ್ಲಿದ ತಪ್ಪಿಗೆ ಹೆಜಮಾಡಿ ಗ್ರಾಮ ಪಂಚಾಯಿತಿ ಐದು ಸಾವಿರ ರೂಪಾಯಿ ದಂಡ ವಿಧಿಸಿದೆ. ನೀರು ಚೆಲ್ಲುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಗ್ರಾ.ಪಂ. ಸದಸ್ಯರು ಸಹಿತ ಸ್ಥಳೀಯ ಟೋಲ್ ಸಿಬ್ಬಂದಿಗಳು ಸೇರಿ ಲಾರಿಯನ್ನು ತಡೆದು,

ಬಂಟ್ವಾಳ: ರಸ್ತೆ ಬದಿಯೇ ಡಂಪಿಂಗ್ ಯಾರ್ಡ್: ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದು ಅನಾಗರಿಕ ಪ್ರವೃತ್ತಿ

ಬಂಟ್ವಾಳ ತಾಲೂಕಿನ ಬಹುತೇಕ ಭಾಗಗಳಲ್ಲಿ ರಸ್ತೆ ಇಕ್ಕೆಲಗಳು, ಇಳಿಜಾರು ಗುಂಡಿಗಳು ಕಸ ಎಸೆಯುವ ತಾಣಗಳಾಗುತ್ತಿದೆ. ಕೊಳೆಯುವ ವಸ್ತುಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ವಾಹನಗಳಲ್ಲಿ ಬಂದು ಸಾರ್ವಜನಿಕ ಸ್ಥಳದಲ್ಲಿ ಎಸೆದು ಹೋಗುವ ಅನಾಗರಿಕ ಪ್ರವೃತ್ತಿ ಹೆಚ್ಚಾಗುತ್ತಿದೆ. ಮನೆ, ಅಂಗಡಿಗಳ ತ್ಯಾಜ್ಯಗಳು ರಸ್ತೆ ಬದಿಗಳಲ್ಲಿ ಎಸೆಯುತ್ತಿರುವ ಪರಿಣಾಮ ಸುತ್ತಮುತ್ತಲ ಪ್ರದೇಶ ದುರ್ವಾಸನೆ ಬೀರುತ್ತಿದೆ. ಜನರಲ್ಲಿ ಸ್ವಚ್ಚತೆಯ ಪರಿಕಲ್ಪನೆ ಕೇವಲ ಅಕ್ಟೋಬರ್ 2ರ ಸ್ವಚ್ಛತಾ

ಶಿಬಾಜೆ: ಅಜಿರಡ್ಕದಲ್ಲಿ ಕಾಡಾನೆ ದಾಳಿ; ಕೃಷಿ ನಾಶ

ಕೊಕ್ಕಡದ ಶಿಬಾಜೆ ಗ್ರಾಮದ ಅಜಿರಡ್ಕ ಶ್ರೀಧರ ರಾವ್ ರವರ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ ಮಾಡಿ ಪಸಲಿಗೆ ಬರುವ ತೆಂಗಿನ ಗಿಡ, ಕೊಕ್ಕೋ ಗಿಡ, ಬಾಳೆಗಿಡ ಅಪಾರ ಪ್ರಮಾಣದಲ್ಲಿ ನಾಶ ಮಾಡಿದೆ. ಈ ಹಿಂದೆಯೂ ಇವರ ತೋಟಕ್ಕೆ ಧಾಳಿ ಮಾಡಿದ್ದು ಕೃಷಿ ಹಾನಿ ಉಂಟು ಮಾಡಿತ್ತು, ಮೇ 6ರಂದು ಶಿಶಿಲ ಗ್ರಾಮದ ಕಳ್ಳಾಜೆ ದಿವಾಕರ ಗೌಡ ಇವರ ತೋಟಕ್ಕೂ ಧಾಳಿ ಮಾಡಿರುವ ಬಗ್ಗೆ ಮಾಹಿತಿ ಲಭಿಸಿದೆ. ವರದಿ: ಪ್ರಶಾಂತ್ ನೆಲ್ಯಾಡಿ

ಶಿಬಾಜೆ: ಅಜಿರಡ್ಕದಲ್ಲಿ ಕಾಡಾನೆ ದಾಳಿ- ಕೃಷಿ ನಾಶ

ಕೊಕ್ಕಡ : ಶಿಬಾಜೆ ಗ್ರಾಮದ ಅಜಿರಡ್ಕ ಶ್ರೀಧರ ರಾವ್ ರವರ ತೋಟಕ್ಕೆ ಮೇ 7ರಂದು ತಡರಾತ್ರಿ ಕಾಡಾನೆ ದಾಳಿ ಮಾಡಿ ಪಸಲಿಗೆ ಬರುವ ತೆಂಗಿನ ಗಿಡ, ಕೊಕ್ಕೋ ಗಿಡ, ಬಾಳೆಗಿಡ ಅಪಾರ ಪ್ರಮಾಣದಲ್ಲಿ ನಾಶ ಮಾಡಿದೆ. ಈ ಹಿಂದೆಯೂ ಇವರ ತೋಟಕ್ಕೆ ಧಾಳಿ ಮಾಡಿದ್ದು ಕೃಷಿ ಹಾನಿ ಉಂಟು ಮಾಡಿತ್ತು, ಮೇ 6ರಂದು ಶಿಶಿಲ ಗ್ರಾಮದ ಕಳ್ಳಾಜೆ ದಿವಾಕರ ಗೌಡ ಇವರ ತೋಟಕ್ಕೂ ಧಾಳಿ ಮಾಡಿರುವ ಬಗ್ಗೆ ಮಾಹಿತಿ ಲಭಿಸಿದೆ.

ಕಾರ್ಕಳ: ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ – ಇಬ್ಬರು ಮಹಿಳೆಯರಿಗೆ ಗಾಯ

ಸುಡುಮದ್ದು ತಯಾರಿಕಾ ಘಟಕ ಸಿಡಿದು ಇಬ್ಬರು ಮಹಿಳೆಯರಿಗೆ ಗಾಯಗಳಾದ ಘಟನೆ ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ನಡೆದಿದೆ. ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಕೆಲವಾರು ವರ್ಷಗಳಿಂದ ಸುಡುಮದ್ದು ತಯಾರಿಕಾ ಘಟಕ ಕಾರ್ಯಾಚರಿಸುತ್ತಿದ್ದು, ಎಂದಿನಂತೆ ಇಂದೂ ಬೆಳಗ್ಗೆ ಸುಡುಮದ್ದು ತಯಾರಿಕೆ ಸಂದರ್ಭ ಅನಿರೀಕ್ಷಿತವಾಗಿ ಸ್ಫೋಟಗೊಂಡು ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯರಿಬ್ಬರು ಗಾಯಗೊಂಡು ಆಸ್ಪತ್ರೆಗೆ ಸಾಗಿಸಲಾಗಿದೆ. ಸುಡುಮದ್ದು

ವಿಟ್ಲ: ವಿದ್ಯುತ್ ತಂತಿಗೆ ಸಿಲುಕಿ ನವಿಲು ಮೃತ್ಯು

ವಿಟ್ಲ: ವಿದ್ಯುತ್ ತಂತಿಗೆ ಸಿಲುಕಿ ನವಿಲು ಮೃತಪಟ್ಟ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ನವಿಲು ಮೃತಪಟ್ಟ ಬಗ್ಗೆ ಇಲ್ಲಿನ ರಿಕ್ಷಾ ಚಾಲಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯವರು ಮೃತ ನವಿಲನ್ನು ಸ್ಥಳದಿಂದ ಅನಂತಾಡಿ ಆರಣ್ಯ ಇಲಾಖೆಯ ಸಿಬ್ಬಂದಿಯವರಿಗೆ ಹಸ್ತಾಂತರ ಮಾಡಿದ್ದಾರೆ.

ವಿಟ್ಲ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ. ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ಕೋಟೆಕಾರು : ಕಾರು ಢಿಕ್ಕಿ – ಪಾದಚಾರಿ ಸಾವು

ಉಳ್ಳಾಲ: ಕಾರು ಢಿಕ್ಕಿ ಹೊಡೆದು ಪಾದಚಾರಿ ಬಿಜೆಪಿ ಕಾರ್ಯಕರ್ತ ಮೃತಪಟ್ಟ ಘಟನೆ ರಾ.ಹೆ.66 ರ ಕೋಟೆಕಾರು ಬಳಿಯ ಅಡ್ಕ ಎಂಬಲ್ಲಿ ನಡೆದಿದೆ. ಕೋಟೆಕಾರು ನೆಲ್ಲಿ ಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನಿವಾಸಿ ಶ್ರೀಕಾಂತ್ (46)ಮೃತರು.ಶ್ರೀಕಾಂತ್ ಆಟೋ ಇಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿದ್ದರು.ಇಂದು ಮದ್ಯಾಹ್ನ ಅಡ್ಕದಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ ಕೇರಳದಿಂದ ಧಾವಿಸುತ್ತಿದ್ದ ಕಾರು ಶ್ರೀಕಾಂತ್ಗೆ ಢಿಕ್ಕಿ ಹೊಡೆದಿದೆ.ಗಂಭೀರ ಗಾಯಗೊಂಡ ಶ್ರೀಕಾಂತ್ ರನ್ನು ಅಪಘಾತ

ದಕ್ಷಿಣ ಚೀನಾದ ಗೌಂಗ್‌ಝೋ ನಗರಕ್ಕೆ ಅಪ್ಪಳಿಸಿದ ಸುಂಟರಗಾಳಿ: ಐವರ ಸಾವು: 33ಮಂದಿಗೆ ಗಾಯ

ದಕ್ಷಿಣ ಚೀನಾದ ಗೌಂಗ್‌ಝೋ ನಗರಕ್ಕೆ ಸುಂಟರಗಾಳಿ ಅಪ್ಪಳಿಸಿದೆ. ಘಟನೆಯಲ್ಲಿ ಐವರು ಮೃತಪಟ್ಟು, 33 ಮಂದಿ ಗಾಯಗೊಂಡಿದ್ದಾರೆ. ಶನಿವಾರ ಮಧ್ಯಾಹ್ನ ನಗರದ ಬೈಯುನ್ ಜಿಲ್ಲೆಯಲ್ಲಿ ಪ್ರಬಲವಾದ ಸುಂಟರಗಾಳಿ ಬೀಸಿದೆ. ಪರಿಣಾಮ 141 ಕಾರ್ಖಾನೆ ಕಟ್ಟಡಗಳು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೈಯುನ್ ಜಿಲ್ಲೆಯ ಲಿಯಾಂಗ್ಟಿಯಾನ್ ಹಳ್ಳಿಯಲ್ಲಿರುವ ಹವಾಮಾನ ಕೇಂದ್ರದಲ್ಲಿ ಸೆಕೆಂಡಿಗೆ ಗರಿಷ್ಠ 20.6 ಮೀಟರ್ ಗಾಳಿ ದಾಖಲಾಗಿದೆ. ಸುಂಟರಗಾಳಿ ಬಳಿಕ ದಕ್ಷಿಣ

ದೇರಳಕಟ್ಟೆ : ಸ್ವೀಟ್ ಕಾರ್ನ್ ಸ್ಟಾಲ್‌ನಲ್ಲಿ ಗ್ಯಾಸ್ ಸಿಡಿದು ಬೆಂಕಿ

ದೇರಳಕಟ್ಟೆ : ರಸ್ತೆಬದಿಯಲ್ಲಿ ಇರಿಸಲಾದ ಸ್ವೀಟ್ ಕಾರ್ನ್ ಸ್ಟಾಲ್ ಒಂದರ ಗ್ಯಾಸ್ ಸಿಲಿಂಡರಿನಲ್ಲಿ ಗ್ಯಾಸ್ ಸೋರಿಕೆ ಉಂಟಾಗಿ ಬೆಂಕಿ ಅವಘಡ ಸಂಭವಿಸಿದ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ. ಬಶೀರ್ ಎಂಬವರು ವ್ಯವಹಾರದಲ್ಲಿ ತೊಡಗಿದ್ದ ಸಂದರ್ಭ ಗ್ಯಾಸ್ ಸೋರಿಕೆ ಉಂಟಾಗಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣ ಅಲ್ಲಿದ್ದ ಗ್ರಾಹಕರು ಹಾಗೂ ಸ್ಟಾಲ್ ಮಾಲೀಕರು ಓಡಿ ಪಾರಾಗಿದ್ದಾರೆ. ಬೆಂಕಿ ತೀವ್ರಗೊಂಡಿದ್ದು, ಸಾರ್ವಜನಿಕರು ಹೊಯ್ಗೆ, ನೀರು ಹಾಯಿಸಿ ಬೆಂಕಿ ನಂದಿಸಲು