Home Archive by category ಹಾನಿ (Page 16)

ವಿಟ್ಲ: ಹಾಳೆ ತಟ್ಟೆ ಕಾರ್ಖಾನೆಯಲ್ಲಿ ಬೆಂಕಿ: ಲಕ್ಷಾಂತರ ರೂ. ನಷ್ಟ

ವಿಟ್ಲ ಪಡ್ನೂರು ಗ್ರಾಮದ ಬಲಿಪಗುಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಳೆ ತಟ್ಟೆ ತಯಾರಿಕಾ ಘಟಕ ಇಕೋ ವಿಶನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಕಟ್ಟಡದ ಮೇಲ್ಭಾಗದಲ್ಲಿ ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಫ್ಯಾಕ್ಟರಿ ಯಿಂದ ದಟ್ಟ ಹೊಗೆ ಆವರಿಸುತ್ತಿದ್ದಂತೆ ಸ್ಥಳಕ್ಕೆ ವಿಟ್ಲ ಪೆÇಲೀಸರು, ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದರೂ

ಪಲ್ಗುಣಿ ತೀರದಲ್ಲಿ ತೇಲಿ ಬಂದ ಟನ್‍ಗಟ್ಟಳೆ ತ್ಯಾಜ್ಯ : ಸಂಘಸಂಸ್ಥೆ, ಸ್ವಯಂಸೇವಕರಿಂದ ಸ್ವಚ್ಛತಾ ಕಾರ್ಯ

ಕೂಳೂರಿನ ನದಿ ತೀರದಲ್ಲಿ ಶೇಖರಣೆಗೊಂಡಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಪಲ್ಗುಣಿ ನದಿ ತೀರದಲ್ಲಿ ರಾಶಿ ಬಿದ್ದಿದ್ದ ಪ್ಲಾಸ್ಟಿಕ್, ನದಿಯಲ್ಲಿ ತೇಲಿ ಬಂದ ಟನ್‍ಗಟ್ಟಲೆ ತ್ಯಾಜ್ಯವನ್ನು ಸಂಘ ಸಂಸ್ಥೆ ಸ್ವಯಂ ಸೇವಕರು ಸ್ವಚ್ಚತಾ ಕಾರ್ಯ ನಡೆಸಿದರು. ಎಲ್ಲಾ ತ್ಯಾಜ್ಯಗಳನ್ನು ಸ್ವಯಂ ಸೇವಕರು ಹೆಕ್ಕಿ ಸ್ವಚ್ಛಗೊಳಿಸಿದರು. ಮಂಗಳೂರಿನ ರೇಂಜ್ ಅರಣ್ಯ ಇಲಾಖೆ, ಸಿಒಡಿಪಿ, ಎನ್‍ಇಸಿಎಫ್ ಮೊದಲಾದ ಸಂಘಟನೆಗಳುವರು ಸಹಕಾರ ನೀಡಿದ್ದಾರೆ.

ಕುಂಪಲದಲ್ಲಿ ಉದ್ಯಮಶೀಲತೆ ಅಭಿವೃದ್ಧಿ ತರಬೇತಿ ಕಾರ್ಯಕ್ರಮ

ಯುಎನ್‍ಡಿಪಿ ಮತ್ತು ಎಎಲ್‍ಸಿ ಇಂಡಿಯಾ ಸಂಸ್ಥೆಯ ವತಿಯಿಂದ 5 ದಿನದ ಉದ್ಯಮಶಿಲತೆ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಕುಂಪಲದಲ್ಲಿ ಉದ್ಘಾಟನೆಗೊಂಡಿತು. ಮಹಿಳಾ ಉದ್ಯಮಿ ಗಳನ್ನು ಪ್ರೋತ್ಸಾಹಿಸಿ ಅವರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಈ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಭಾಗಿತ್ವದೊಂದಿಗೆ ಸ್ತ್ರೀ ಶಕ್ತಿ ಗುಂಪಿನ ಆಸಕ್ತ ಮಹಿಳೆಯರು ಈ ತರಬೇತಿಯಲ್ಲಿ ಭಾಗವಹಿಸಿದರು. ನಾರಾಯಣ ಕುಂಪಲ ಅವರು

ವಿಟ್ಲ: ಕೆಟ್ಟು ನಿಂತ ಅಡುಗೆ ಎಣ್ಣೆ ಸಾಗಾಟದ ಟ್ಯಾಂಕರ್ , ಕಿಲೋಮೀಟರ್ ಸಾಲು ನಿಂತ ವಾಹನಗಳು

ವಿಟ್ಲ: ಇಲ್ಲಿನ ಸೂರಿಕುಮೇರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುವಲ್ಲಿ ರಸ್ತೆಯ ಮಧ್ಯೆ ಅಡುಗೆ ಎಣ್ಣೆ ಸಾಗಾಟದ ಟ್ಯಾಂಕರ್ ಕೆಟ್ಟು ನಿಂತಿದ್ದರ ಪರಿಣಾಮ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲಾಗಿ ನಿಂತಿದೆ,ಸ್ಥಳದಲ್ಲಿ ಪೋಲಿಸರು ಮತ್ತು ಸೂರಿಕುಮೇರು ಪರಿಸರದ ಯುವಕರು ವಾಹನಗಳ ಸಂಚಾರಕ್ಕೆ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸುತ್ತಿದ್ಸಾರೆ

ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಸಚಿವ ಅಂಗಾರ ಭೇಟಿ : ಉಪ್ಪುಕಳ ಗ್ರಾಮಕ್ಕೆ ಶೀಘ್ರದಲ್ಲೇ ಸೇತುವೆ ನಿರ್ಮಾಣದ ಭರವಸೆ

ಮಳೆಯಿಂದ ಹಾನಿಗೊಳಗಾಗಿದ್ದ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಉಪ್ಪುಕಳ ಗ್ರಾಮಕ್ಕೆ ಬಂದರು ಹಾಗೂ ಮೀನುಗಾರಿಕೆ ಸಚಿವ ಅಂಗಾರ ಭೇಟಿ ನೀಡಿದ್ದು, ಶೀಘ್ರದಲ್ಲೇ ಸೇತುವೆ ನಿರ್ಮಾಣದ ಭರವಸೆ ನೀಡಿದರು. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 124 ಸೇತುವೆಗಳು ನಿರ್ಮಾಣವಾಗಿವೆ. ವಿಶೇಷ ಪ್ರಾಶಸ್ತ್ಯ ನೀಡಿ ಗ್ರಾಮಗಳನ್ನು ಬೆಸೆಯುವ ಸಂಪರ್ಕ ಸೇತುವೆ ನಿರ್ಮಿಸಲಾಗುತ್ತದೆ. ಉಪ್ಪುಕಳದಲ್ಲೂ ಅತೀ ಶೀಘ್ರದಲ್ಲೇ ಸೇತುವೆ ರಚನೆಯಾಗಲಿದ್ದು, ಈ ಭಾಗದ ಜನರಿಗೆ ಅನುಕೂಲ ಮಾಡಿಕೊಡಲಾಗುವುದು

ಮಳೆಗೆ ಸಂಪೂರ್ಣವಾಗಿ ಹದಗೆಟ್ಟ ಮುಖ್ಯರಸ್ತೆ : ಚರಂಡಿ ಮೋರಿಗಳಿಗೆ ಕೋಟ್ಯಾಂತರ ರೂಪಾಯಿ ಖರ್ಚು

ಕಾರ್ಕಳ : ಕಳೆದ ಮಾರ್ಚ್ ತಿಂಗಳಲ್ಲಿ ಕಾರ್ಕಳದಲ್ಲಿ ಬಹಳ ಅದ್ದೂರಿಯಾಗಿ ಕಾರ್ಕಳ ಉತ್ಸವ ಜರುಗಿದ್ದು. ಈ ಸಂದರ್ಭದಲ್ಲಿ ಕಾರ್ಕಳ ತಾಲೂಕಿನ ಮುಖ್ಯ ರಸ್ತೆಗಳು, ಚರಂಡಿ ಮೋರಿಗಳಿಗೆ ಕೋಟಿಗಟ್ಟಲೆ ರೂಪಾಯಿಗಳನ್ನು ಖರ್ಚು ಮಾಡಿ ಡಾಮರೀಕರ್ಣ ಮಾಡಲಾಗಿತ್ತು. ಇದೀಗ ಕಾರ್ಕಳದ ಮುಖ್ಯ ರಸ್ತೆಗಳಲ್ಲಿ ಒಳ ಚರಂಡಿಯ ತ್ಯಾಜ್ಯ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ಕಾರ್ಕಳ ಮುಖ್ಯ ರಸ್ತೆಯ ಡಾಮರು ಎದ್ದು ಹೊಂಡಗಳು ಬಿದ್ದು ಪಾದಾಚಾರಿಗಳಿಗೆ ಹಾಗೂ ವಾಹನ ಚಾಲಕರಿಗೆ ಹೋಗುವುದೇ ಒಂದು

ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಅಪಘಾತ : ಪುತ್ತೂರಿನ ಉರ್ಲಾಂಡಿಯಲ್ಲಿ ನಡೆದ ಘಟನೆ

ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ಇಲ್ಲಿನ ಬೈಪಾಸ್ ರಸ್ತೆಯ ಉರ್ಲಾಂಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.ಶುಂಠಿಕೊಪ್ಪದ ಚಂಗಪ್ಪ ಎಂಬವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಮೃತದೇಹವನ್ನು ಶ್ರೀ ಶರವು ಗಣೇಶ್ ಆಂಬ್ಯುಲೆನ್ಸ್ ನಲ್ಲಿ ಶುಂಠಿಕೊಪ್ಪಕ್ಕೆ ಕೊಂಡೊಯ್ಯುವಾಗ ಘಟನೆ ಸಂಭವಿಸಿದೆ. ಘಟನೆಯಲ್ಲಿ ಆಂಬ್ಯುಲೆನ್ಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಮೃತರ ಪತ್ನಿ ಲಲಿತಾ ಹಾಗೂ ಇನ್ನೋರ್ವ ಮಹಿಳೆ ಇನ್ನೊಂದು

ಬೈಕಂಪಾಡಿ, ಮೀನಕಳಿಯ ಭಾಗದಲ್ಲಿ ಕಡಲ್ಕೊರೆತ: ಅಪಾಯ ಸ್ಥಿತಿಯಲ್ಲಿದೆ ಹತ್ತಕ್ಕೂ ಅಧಿಕ ಮನೆಗಳು

• ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ ವಿಚಾರ • ಮಂಗಳೂರಿನಲ್ಲಿ ಮಳೆ ಅನಾಹುತದ ನಡುವೆ ಹೆಚ್ಚಾದ ಕಡಲ್ಕೊರೆತ • ಮಂಗಳೂರಿನ ಬೈಕಂಪಾಡಿ, ಮೀನಕಳಿಯ ಭಾಗದಲ್ಲಿ ಕಡಲ್ಕೊರೆತ • ಕಡಲ್ಕೊರೆತದ ತೀವ್ರತೆಗೆ ಮೀನುಗಾರರ ಹರಾಜು ಕೇಂದ್ರ ಸಮುದ್ರ ಪಾಲು • ಭಾರೀ ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಹರಾಜು ಕೇಂದ್ರ • ಕಾಂಕ್ರೀಟ್ ರಸ್ತೆಯ ಅಡಿಭಾಗವನ್ನೇ ಕೊಚ್ಚಿಕೊಂಡು ಹೋಗಿರೋ ಅಲೆಗಳು • ಮತ್ತಷ್ಟು ಅಲೆಯ ಅಬ್ಬರ ಹೆಚ್ಚಾದ್ರೆ ಇಡೀ ಕಾಂಕ್ರೀಟ್ ರಸ್ತೆ

ಮಂಜೇಶ್ವರದಲ್ಲಿ ಭಾರೀ ಮಳೆಯ ಅವಾಂತರ : ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿ ಜಲಾವೃತ

ಮಂಜೇಶ್ವರದದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಮಂಜೇಶ್ವರ ಗ್ರಾ.ಪಂ.ನ 13ನೇ ವಾರ್ಡ್ ವಾಮಂಜೂರು ಕಜೆಯ ಕೊಪ್ಪಳ ಪ್ರದೇಶದಲ್ಲಿ ಕಳೆ ಎರಡು-ಮೂರು ದಿನಗಳಿಂದ ಸುರಿದ ಮಳೆಯಿಂದಾಗಿ ಪರಿಸರದ ಪ್ರದೇಶ ಸಂಪೂರ್ಣ ಜಲಾವೃತವಾಗಿದೆ. ಈ ಪರಿಸರದಲ್ಲಿ ಉಪ್ಪಳ ಹೊಳೆ ತುಂಬಿ ಹರಿಯುತ್ತಿದ್ದು, ಹೊಳೆ ಸಂಗಮಿಸುವ ಪರಿಸರದ ಅನೇಕ ಹಳ್ಳ, ತೊರೆಗಳು ನೀರು ತುಂಬಿ ಮನೆಗಳನ್ನು ಆಕ್ರಮಿಸಿ, ಮನೆಗಳಿಗೆ ನೀರು ನುಗ್ಗಿದೆ. ಪರಿಸರದಲ್ಲಿ 20ರಷ್ಟು

ಪುತ್ತೂರು : ಓಮ್ನಿ ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ , ದ್ವಿಚಕ್ರ ವಾಹನ ಸವಾರನಿಗೆ ಗಾಯ

ಪುತ್ತೂರು ತಾಲ್ಲೂಕು ಬಪ್ಪಳಿಗೆಯ ಬಲ್ನಾಡ್ ರಸ್ತೆಯಲ್ಲಿ ಓಮ್ನಿ ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ- ಆಕ್ಟಿವಾ ಸವಾರನಿಗೆ ಗಾಯ.ಪುತ್ತೂರು ತಾಲೂಕಿನ ಬಪ್ಪಳಿಗೆಯ ಬಲ್ನಾಡ್ ಸಂಪರ್ಕ ರಸ್ತೆಯಲ್ಲಿ ಓಮ್ನಿ ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ. ಬಲ್ನಾಡ್ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಓಮ್ನಿ ಕಾರು, ಪುತ್ತೂರು ಕಡೆಯಿಂದ ಬರುತ್ತಿದ್ದ ರಿಕ್ಷಾ ಒಂದನ್ನು ಹಿಂದಿಕ್ಕುವ ಭರದಲ್ಲಿದ್ದ ಆಕ್ಟಿವಾಗೆ ದಿಕ್ಕಿಯಾಗಿದೆ. ಘಟನೆಯಿಂದ