Home Archive by category ಹಾನಿ (Page 17)

ಮಳೆಯಿಂದಾಗಿ ಪೆರುವಾಜೆಯ ನಾಗನಮಜಲಿನಲ್ಲಿ ರಸ್ತೆಯಲ್ಲಿ ಬಿರುಕು : ಪೆರುವಾಜೆ ಗ್ರಾಮದ ನೋಡೆಲ್ ಅಫೀಸರ್‍ಗಳು ಭೇಟಿ, ಪರಿಶೀಲನೆ

ಸುಳ್ಯ ತಾಲೂಕು ಪೆರುವಾಜೆ ಗ್ರಾಮದ ಮೂರನೆಯ ವಾರ್ಡಿನ ನಾಗನ ಮಜಲು ಎಂಬಲ್ಲಿ ರಸ್ತೆ ಬಿರುಕು ಬಿಟ್ಟ ವರದಿಗೆ ಸ್ಪಂದಿಸಿದ ತಾಲೂಕು ತಹಶೀಲ್ದಾರ್ ಶ್ರೀಮತಿ ಅನಿತಾ ಲಕ್ಷ್ಮಿ ಆದೇಶದ ಮೇರೆಗೆ ಪೆರುವಾಜೆ ಗ್ರಾಮದ ನೋಡಲ್ ಆಫೀಸರ್ ಗಳಾದ ಪೆರುವಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ ಮತ್ತು ಗ್ರಾಮ ಲೆಕ್ಕಾಧಿಕಾರಿ ಶಿವರಾಜ್ ಹಾಗೂ ಮೆಸ್ಕಾಂ

ಓಮಿನಿ ಕಾರಿನ ಮೇಲೆ ಸರಕು ಸಾಗಾಟದ ಲಾರಿ ಪಲ್ಟಿ ಸುರತ್ಕಲ್‍ನ ಕುಳಾಯಿಯಲ್ಲಿ ಘಟನೆ ಘಟನೆ

ಸುರತ್ಕಲ್‍ನ ಕುಳಾಯಿಯಲ್ಲಿ ಇಂದು ಮಧ್ಯಾಹ್ನ ಓಮಿನಿ ಮೇಲೆ ಸರಕು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಓಮಿನಿ ಚಾಲಕನನ್ನ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಓಮಿನಿ ಸಂಪೂರ್ಣ ಅಪ್ಪಚ್ಚಿಯಾಗಿದ್ದು, ಸುರತ್ಕಲ್ ಉತ್ತರ ಟ್ರಾಫಿಕ್ ಫೋಲಿಸರು ಆಗಮಿಸಿ ಸ್ಕ್ರೈನ್ ಸಹಾಯದಿಂದ ಲಾರಿಯನ್ನು ಎತ್ತಿ ಓಮಿನಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ನೇರವಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಗೋಕುಲ ನಗರ ನಿವಾಸಿ ಲೋಕೇಶ್

ಉಳ್ಳಾಲದಲ್ಲಿ ಹಾನಿಗೊಳಗಾದ ಪ್ರದೇಶ ವೀಕ್ಷಿಸಿದ ಕಂದಾಯ ಸಚಿವರು : ಮಳೆಯಿಂದ ಸಂಪೂರ್ಣ ಹಾನಿಯಾದ ಮನೆಗೆ 5 ಲಕ್ಷ ರೂ. ಪರಿಹಾರ

ಉಳ್ಳಾಲ: ರಾಜ್ಯದ ಏಳು ಜಿಲ್ಲೆಗಳಲ್ಲಿ ತೀವ್ರ ಮಳೆಯಾಗಿದ್ದು, ಇಲ್ಲಿ ಸಂಪೂರ್ಣ ಹಾನಿಗೀಡಾದ ಮನೆಯವರಿಗೆ ತಕ್ಷಣ ರೂ. 5 ಲಕ್ಷ ಪರಿಹಾರ ನೀಡುವಂತೆ ಏಳು ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಅವರು ಕಡಲ್ಕೊರೆತಕ್ಕೀಡಾದ ಉಳ್ಳಾಲ ತಾಲೂಕಿನ ಉಚ್ಚಿಲ, ಬಟ್ಟಂಪಾಡಿ, ಸೀಗ್ರೌಂಡ್ ಹಾಗೂ ಮೊಗವೀರಪಟ್ನ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬಂದರು ಹಾಗೂ ಮೀನುಗಾರಿಕಾ ಸಚಿವರುಗಳ ಜೊತೆಗೆ ಭೇಟಿ

ಧರೆಗುರುಳಿದ ಆಲದ ಮರ ಹಣ್ಣಿನ ಅಂಗಡಿ ಜಖಂ

ತೋಡಾರು ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಡಸಮೇತ ಆಲದ ಧರೆಗುರುಳಿದ್ದು ಅಡಿಯಲ್ಲಿದ್ದ ಹಣ್ಣಿನ ಅಂಗಡಿ ಜಖಂಗೊಂಡಿದೆ.ಆಲದ ಮರದ ಬುಡದಲ್ಲಿಯೇ ತೋಡಾರಿನ ಅಬೂಬಕ್ಕರ್ ಎಂಬವರು ಹಣ್ಣಿನ ವ್ಯಾಪಾರ ನಡೆಸುತ್ತಿದ್ದರು. ಇಂದು ಬೆಳಿಗ್ಗೆ ಬೀಸಿದ ಗಾಳಿಯ ರಭಸಕ್ಕೆ ಬುಡ ಸಮೇತ ಆಲದ ಮರದ ಬಿದ್ದಿದೆ .ಸ್ಥಳೀಯರಿಂದ ಮಿಂಚಿನ ಕಾರ್ಯಾಚರಣೆ ಮರದ ಗೆಲ್ಲುಗಳ ತೆರವಿಗೆ ಕಾರ್ಯಾರಂಭ,ಸಹಕಾರಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ತಾತ್ಕಾಲಿಕ ವ್ಯವಸ್ಥೆ ಸುಗಮ ವಾಹನ ಸಂಚಾರಕ್ಕಾಗಿ

ಭೂಕಂಪನದಿಂದ ಹಾನಿಗೀಡಾದ ಮನೆಗೆ ಸಚಿವರ ಭೇಟಿ

ಕೆಲದಿನಗಳ ಹಿಂದೆ ಭೂಕಂಪನದಿಂದ ಹಾನಿಗೊಳಪಟ್ಟ ಸುಳ್ಯ ತಾಲೂಕಿನ ವಸಂತ ಭಟ್ ಅವರ ಮನೆಗೆ ಕಂದಾಯ ಸಚಿವರಾದ ಆರ್. ಅಶೋಕ್, ಇಂಧನ,ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್, ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಸುಳ್ಯ ತಾಲೂಕು ತಹಶೀಲ್ದಾರ್ ಅನಿತಾ ಲಕ್ಷ್ಮೀ ಅವರು ಜು.7ರ ಗುರುವಾರ ಭೇಟಿ

ಬಜ್ಪೆಯ ಅದ್ಯಪಾಡಿಯಲ್ಲಿ ಗುಡ್ಡ ಕುಸಿತ , ರಸ್ತೆ ಕುಸಿತದಿಂದ ಆದ್ಯಪಾಡಿ-ಕೈಕಂಬ ಸಂಪರ್ಕ ಕಡಿತ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಬಳಿಯಿಂದಾಗಿ ಅದ್ಯಪಾಡಿಗೆ ತೆರಳುವ ರಸ್ತೆ ಭಾರೀ ಮಳೆಗೆ ಕೊಚ್ಚಿ ಹೋಗಿದೆ ಇದು ಅದ್ಯಪಾಡಿ-ಕೈಕಂಬ ಸಂಪರ್ಕಿಸುವ ರಸ್ತೆಯಾಗಿದ್ದು, ಕೆಲ ದಿನಗಳ ಹಿಂದೆಯೇ ಇಲ್ಲಿ ಮೋರಿ ಕುಸಿದಿತ್ತು. ಆ ಬಳಿಕ ರಸ್ತೆಯ ಎರಡೂ ಬದಿಗಳಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಈ ಕುರಿತು ಸ್ಪಷ್ಟನೆ ನೀಡಿರುವ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ, ವಿಮಾನ ನಿಲ್ದಾಣದ ಹೊರಭಾಗದಲ್ಲಿ

ಬಂಟ್ವಾಳ: ಕಾರ್ಮಿಕರು ಉಳಿದುಕೊಂಡಿದ್ದ ಶೆಡ್ ಮೇಲೆ ಗುಡ್ಡ ಕುಸಿತ: ಮೃತಪಟ್ಟವರ ಸಂಖ್ಯೆ 3ಕ್ಕೇರಿಕೆ

ಪಂಜಿಕಲ್ಲು ಗ್ರಾಮದಲ್ಲಿ ಕಾರ್ಮಿಕರು ಉಳಿದುಕೊಂಡಿದ್ದ ಶೆಡ್ ಮೇಲೆ ಬುಧವಾರ ಗುಡ್ಡ ಕುಸಿತದಿಂದ ಮಣ್ಣಿನಡಿಗೆ ಸಿಲುಕಿದ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಆಸ್ಪತ್ರೆಗೆ ದಾಖಲಾಗಿದ್ದವರ ಪೈಕಿ ಓರ್ವ ರಾತ್ರಿ ಮೃತಪಟ್ಟಿದ್ದರೆ, ಇನ್ನೋರ್ವ ಮುಂಜಾವ ಕೊನೆಯುಸಿರೆಳೆದಿದ್ದಾನೆ. ಓರ್ವ ಬಂಟ್ವಾಳದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮಣ್ಣಿನಡಿಯಿಂದ ರಕ್ಷಿಸಲ್ಪಟ್ಟು ಗಂಭೀರಾವಸ್ಥೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ

ಗುರುಪುರ ಸಮೀಪದ ಅಣೆ ಬಳಿಯಲ್ಲಿ ಗುಡ್ಡ ಕುಸಿತ : ಲಘು ವಾಹನಗಳ ಸಂಚಾರಕ್ಕೆ ನಿರ್ಬಂಧ

ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಸುರಿದ ಭಾರೀ ಮಳೆಗೆ ಅಲ್ಲಲ್ಲಿ ಗುಡ್ಡ ಕುಸಿತ ಸೇರಿದಂತೆ ಅಪಾರ ಹಾನಿ ಸಂಭವಿಸಿದೆ. ಇನ್ನು ಗುರುಪುರ ಸಮೀಪದ ಅಣೆ ಬಳಿಯಲ್ಲಿ ಗುಡ್ಡ ಕುಸಿತಗೊಂಡಿದ್ದು, ರಸ್ತೆ ಅಪಾಯದಂಚಿನಲ್ಲಿದೆ. ಸ್ಥಳಕ್ಕೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದೇರಳಕಟ್ಟೆಯ ಕಾನೆಕೆರೆ ಗುಡ್ಡ ಕುಸಿತ : ಹಾನಿಗೊಳಗಾದ ಪ್ರದೇಶಕ್ಕೆ ಶಾಸಕ ಯು.ಟಿ. ಖಾದರ್ ಭೇಟಿ

ಉಳ್ಳಾಲ: ಮಳೆಯಿಂದ ಹಾನಿಗೀಡಾದ ಬೆಳ್ಮ ಗ್ರಾ.ಪಂ ವ್ಯಾಪ್ತಿಯ ವಿವಿಧ ಪ್ರದೇಶಗಳಿಗೆ ಶಾಸಕ ಯು.ಟಿ ಖಾದರ್ ಭೇಟಿ ನೀಡಿ ತುರ್ತು ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿದರು.ಬೋರುಗುಡ್ಡೆ ಎರಡು ಮನೆಗಳ ಮೇಲೆ ಗುಡ್ಡೆ ಜರಿತವಾಗಿ ಹಾನಿ, ರೆಂಜಾಡಿಯ ಪಾಲೆದಡಿ ಮಸೀದಿ ಬಳಿ ಹಾನಿ, ಕೊಳಕೆಬೈಲ್ ಗುಡ್ಡ ಜರಿತ ಹಾಗೂ ಕಾನಕೆರೆ ಬಳಿ ಪೆಟ್ರೋಲ್ ಪಂಪ್ ಹಿಂಭಾಗದ ಒಂದು ಭಾಗ ಜರಿತ ಉಂಟಾಗಿದೆ. ಇವೆಲ್ಲವನ್ನು ಸ್ಥಳೀಯ ಜನಪ್ರತಿನಿಧಿಗಳ ಜೊತೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಈ

ಪಡುಬಿದ್ರಿ ಜಂಕ್ಷನ್‍ ಮೋಪೆಡ್ ಸವಾರನ ಮೇಲೆ ಮುಗುಚಿ ಬಿದ್ದ ಲಾರಿ : ಅಪಘಾತದಲ್ಲಿ ವ್ಯಕ್ತಿ ಸ್ಥಳದಲ್ಲೇ ಮೃತ್ಯು

ಲಾರಿಯೊಂದು ದ್ವಿಚಕ್ರ ವಾಹನದ ಮೇಲೆ ಮಗುಚಿ ಬಿದ್ದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರಿ ಜಂಕ್ಷನ್ ನಲ್ಲಿ ನಡೆದಿದೆ.ಮೃತರನ್ನು ಕಂಚಿನಡ್ಕ ನಿವಾಸಿ ಶಂಸುದ್ದೀನ್ ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಲಾರಿ ಪಡುಬಿದ್ರಿ ಜಂಕ್ಷನ್‍ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದ ಮೇಲೆ ಮಗುಚಿಬಿತ್ತು. ಸ್ಥಳದಲ್ಲೇ ಮೃತಪಟ್ಟ ಶಂಶುದ್ದೀನ್ ಅವರ ಮೃತದೇಹವನ್ನು ಪೋಲಿಸರು ಸ್ಥಳೀಯರ