ಗಂಗೊಳ್ಳಿ ಮೀನುಗಾರಿಕಾ ಬಂದರಿನ ಜೆಟ್ಟಿ ಕುಸಿತ ಪ್ರಕರಣ ಇಡೀ ಸರಕಾರ ಮತ್ತು ನಮಗೆ ಮಾಡಿದ ಅವಮಾನವಾಗಿದ್ದು, ಪ್ರಕರಣವನ್ನು ಖಾಸಗಿ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ಯಾರೇ ತಪ್ಪಿತಸ್ಥರಾದರೂ ಅವರ ವಿರುದ್ಧ ಸರಕಾರ ನಿರ್ದಾಕ್ಷಿಣ್ಯವಾಗಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಿದೆ ಎಂದು ಬಂದರು ಮತ್ತು ಮೀನುಗಾರಿಕಾ ಇಲಾಖೆ, ಉಡುಪಿ ಜಿಲ್ಲಾ ಉಸ್ತುವರಿ ಸಚಿವ ಎಸ್.
ಆರಂಭದಿಂದಲೂ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಒಂದಿಲ್ಲೊಂದು ಕಾರಣಗಳಿಂದಾಗಿ ಸುದ್ದಿಯಾಗುತ್ತಲೇ ಇದ್ದ ಕುಂದಾಪುರದ ಗಂಗೊಳ್ಳಿ ಬಂದರು ಪ್ರದೇಶ ಇದೀಗ ಮತ್ತೆ ಸುದ್ದಿಯಲ್ಲಿದೆ. ಗಂಗೊಳ್ಳಿಯ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ನಡೆಯುತ್ತಿರುವ ಜೆಟ್ಟಿ ನಿರ್ಮಾಣ ಕಾರ್ಯದ ವೇಳೆ ಜೆಟ್ಟಿ ಭಾಗ ಕುಸಿತಕ್ಕೊಳಗಾಗಿದೆ. 150 ಮೀಟರಿಗೂ ಅಧಿಕ ಜೆಟ್ಟಿ ಕುಸಿದಿದ್ದು, ಸ್ಥಳೀಯ ಮೀನುಗಾರರು ಆತಂಕಕ್ಕೀಡಾಗಿದ್ದಾರೆ. ಸಂಜೆ 5.30 ರ ಹೊತ್ತಿಗೆ ಘಟನೆ ನಡೆದಿದ್ದು, ನಿರಂತರವಾಗಿ
ಕಣ್ಣೂರು: ಕೋಝಿಕ್ಕೋಡ್ನಿಂದ ದೆಹಲಿಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ ಹೊಡೆದ ಪರಿಣಾಮ, ವಿಮಾನವನ್ನು ಕಣ್ಣೂರು ವಿಮಾನ ನಿಲ್ದಾಣದಲ್ಲೇ ಲ್ಯಾಂಡಿಂಗ್ ಮಾಡಿದ ಘಟನೆ ಸೋಮವಾರ ನಡೆದಿದೆ. ವಿಮಾನ ಟೇಕಾಫ್ ಆದ ಸ್ವಲ್ಪ ಸಮಯದಲ್ಲೇ ಹಕ್ಕಿ ಢಿಕ್ಕಿ ಹೊಡೆಯಿತು. ಇದರ ಪರಿಣಾಮ ವಿಮಾನವನ್ನು ತಪಾಸಣೆ ಮತ್ತು ನಿರ್ವಹಣೆಗಾಗಿ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು ಎಂದು ಏರ್ ಇಂಡಿಯಾ ವಕ್ತಾರರು ಹೇಳಿದ್ದಾರೆ. 135 ಮಂದಿ ಪ್ರಯಾಣಿಕರೊಂದಿಗೆ ಕೋಝಿಕ್ಕೋಡ್
ಕಡಬ : ಕಾರುಗಳೆರಡರ ಓವರ್ ಟೇಕ್ ಭರದಲ್ಲಿ ಕೆಎಸ್ಸಾರ್ಟಿಸಿ ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರೀ ಅವಘಡವೊಂದು ತಪ್ಪಿದ ಘಟನೆ ಕಡಬ ಸಮೀಪದ ಮರ್ಧಾಳದ ಬ್ರಾಂತಿಕಟ್ಟೆ ಎಂಬಲ್ಲಿ ಭಾನುವಾರದಂದು ನಡೆದಿದೆ. ಸುಬ್ರಹ್ಮಣ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಎಕ್ಸ್ಪ್ರೆಸ್ ಬಸ್ ಗೆ ಬ್ರಾಂತಿಕಟ್ಟೆ ತಿರುವಿನಲ್ಲಿ ಕಾರೊಂದು ಓವರ್ಟೇಕ್ ಮಾಡುವಾಗ ಹೊಡೆದು ಮುಂದೆ ಸಾಗಿದ್ದು, ಅಪಾಯವನ್ನರಿತ ಬಸ್ ಚಾಲಕ ರಸ್ತೆಯಿಂದ ಬಸ್ಸನ್ನು ಕೆಳಗಿಳಿಸಿ ನಿಯಂತ್ರಿಸಿದ
ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆ ಇದಾಗಿದ್ದು ಸತತ ಹತ್ತು ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದೆ. ಸಂಪೂರ್ಣ ಕೆಸರು ಮಯವಾಗಿರುವ ಈ ರಸ್ತೆ ಶೇಣಿಯಿಂದ ಹೊಸಮಜಲು ಎಂಬಲ್ಲಿಗೆ ಸಂಪರ್ಕ ಕಲ್ಪಿಸುತ್ತದೆ. ಅಮರ ಪಡ್ನೂರು ಗ್ರಾಮದ ಅತೀ ಪುರಾತನ ರಸ್ತೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಲ್ಲದೆ 25 ಕ್ಕಿಂತ ಹೆಚ್ಚು ಮನೆಯವರು ಈ ರಸ್ತೆಯನ್ನೆ ಅವಲಂಬಸಿರುತ್ತಾರೆ. 1954 ನೇ ಇಸವಿಯಲ್ಲಿ ಪುನರ್ಜಿತ ರಸ್ತೆ ಇದೀಗ ಸಂಪೂರ್ಣ ಹದಗೆಟ್ಟು
ಕಾರ್ಕಳ: ಕಾರ್ಕಳದ ದುರ್ಗಾ ಗ್ರಾಮದ ಕುಕ್ಕಜ ಪಲ್ಕೆ ಎಂಬಲ್ಲಿ ಬೀಸಿದ ಸುಂಟರಗಾಳಿಗೆ ರಿಯಾಜ್ ಎಂಬವರ ಮನೆ ಹಂಚು ಹಾಗೂ ಚಾವಣಿ ಹಾರಿ ಹೋಗಿ ಸುಮಾರು ಐವತ್ತು ಸಾವಿರದಷ್ಟು ನಷ್ಟ ಉಂಟಾಗಿದೆ. ಅದಲ್ಲದೆ ಸಾಕಿದ ಕುರಿಯ ಮೇಲೆ ಚಾವಣಿ ತಗಡು ಬಿದ್ದು ಸುಮಾರು ಏಳು ಸಾವಿರ ರೂಪಾಯಿ ಮೌಲ್ಯದ ಕುರಿ ಸಾವನಪ್ಪಿದೆ. ಅದೇ ರೀತಿ ಜಹೀರ್ ಎಂಬವರ ಮನೆ ಚಾವಣಿ ಹಾರಿ ಹೋಗಿ ಸುಮಾರು 25,000 ನಷ್ಟ ಉಂಟಾಗಿದೆ. ಅಲ್ಲಿ ಸಮೀಪ ಮುನಾವರ್ ಸಾಹೇಬರ ಮನೆ ಚಾವಣಿ ಹಾರಿ […]
ಪುತ್ತೂರು : ಪುತ್ತೂರು ತಾಲ್ಲೂಕಿನ ಆರ್ಯಾಪು ಗ್ರಾಮದ ಸಂಪ್ಯ ಸಮೀಪದಲ್ಲಿರುವ ಪುರಾತನ ಕಾಲದ ಕೊಲ್ಯ ಕೆರೆ' ಯ ಬದಿಯಲ್ಲಿದ್ದ ಬೃಹತ್ ಗಾತ್ರದ ಮರಗಳೆರಡು ಬುಡಸಮೇತ ಉರುಳಿಬಿದ್ದು, ಸಂಪೂರ್ಣವಾಗಿ ಕೆರೆಯನ್ನು ಆವರಿಸಿಕೊಂಡಿದೆ, ಮಾತ್ರವಲ್ಲದೆ ಅಭಿವೃದ್ಧಿಗೊಂಡಿದ್ದ ಕೆರೆಗೆ ಹಾನಿಯಾಗಿದೆ. ಮರಗಳು ಬುಡಸಮೇತ ಉರುಳಿ ಬಿದ್ದಿರುವ ಪರಿಣಾಮವಾಗಿ ಕೆರೆಯ ಬದಿಯಲ್ಲಿರುವ ರಸ್ತೆ ಭಾಗ ಕುಸಿದು ಅಪಾಯದ ಸ್ಥಿತಿಯಲ್ಲಿದ್ದು, ರಸ್ತೆ ಸಂಪರ್ಕಕ್ಕೆ ತಡೆಯಾಗುವ ಆತಂಕ ಎದುರಾಗಿದೆ.
ಸಾರ್ವಜನಿಕರಿಗೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಜವಾಬ್ದಾರಿ ಸರಕಾರದ್ದು. ಆದರೆ ಈ ವಿಚಾರದಲ್ಲಿ ಆಡಳಿತದಲ್ಲಿರುವ ಮಂದಿ ತಮ್ಮ ಲಾಭವನ್ನೇ ನೋಡಿದಲ್ಲಿ ಅಂತಹ ಮೂಲಭೂತ ಸೌಲಭ್ಯಗಳು ಜನರಿಗೆ ಇದ್ದೂ ಇಲ್ಲದಂತಾಗುತ್ತದೆ. ಇಂತಹುದೇ ಒಂದು ವ್ಯವಸ್ಥೆ ಮಂಗಳೂರಲ್ಲಿ ಕಾಣಬಹುದು. ಹೌದು. ಮಂಗಳೂರು ನಗರದ ನಂತೂರು ಸಮೀಪದಲ್ಲಿರುವ ಬಸ್ ನಿಲ್ದಾಣ ಈಗಲೋ, ಆಗಲೋ ಬೀಳುವ ಸ್ಥಿತಿಯಲ್ಲಿದೆ. ಮಂಗಳೂರು ಮಹಾನಗರ ಪಾಲಿಕೆಯ ಬಸ್ ನಿಲ್ದಾಣ ಹಲವಾರು ವರ್ಷಗಳಿಂದ
ಕಂಕನಾಡಿ ಹೂವಿನ ಮಾರುಕಟ್ಟೆ ಬಳಿ ಕಾಂಕ್ರಿಟ್ ರಸ್ತೆಯಂಚಿನಲ್ಲಿ ಹೊಂಡವಾಗಿ ದ್ವಿಚಕ್ರ ವಾಹನ ಸವಾರರು ಬೀಳುತ್ತಿದ್ದರೆ, ಪಾದಚಾರಿಗಳ ಕಾಲು ಸಿಲುಕುತ್ತಿದೆ. ಇದನ್ನು ದಿನನಿತ್ಯ ಗಮನಿಸುತ್ತಿರುವ ವಿದ್ಯಾರ್ಥಿಯೊಬ್ಬ ಪಕ್ಕದಿಂದ ಸಣ್ಣ ಕಲ್ಲುಗಳನ್ನು ಹೆಕ್ಕಿ ತಂದು ಹೊಂಡ ಮುಚ್ಚುವ ಪ್ರಯತ್ನ ಮಾಡಿದ್ದಾನೆ.ಇನ್ನಾದರೂ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ದುರಸ್ತಿಯ ಬಗ್ಗೆ ಕ್ರಮ ಕೈಗೊಳ್ಳಬೇಕಾಗಿದೆ
ಕಾರು ಚಾಲಕನ ಅವಾಂತರದಿಂದಾಗಿ ರಸ್ತೆಯಂಚಿನಲ್ಲಿ ನಿಲ್ಲಿಸಿದ ಕಾರು ಸಹಿತ ಸ್ಕೂಟರ್ ತೀವ್ರ ಜಖಂ ಗೊಂಡು ಇಬ್ಬರು ಗಾಯಗೊಂಡ ಘಟನೆ ಕಟಪಾಡಿ ಪೇಟೆಯಲ್ಲಿ ರಾತ್ರಿ ಸಂಭವಿಸಿದೆ. ಉಡುಪಿ ಕಡೆಯಿಂದ ಕಟಪಾಡಿ ಕಡೆಗೆ ಸರ್ವಿಸ್ ರಸ್ತೆಯಲ್ಲಿ ಅತೀ ವೇಗವಾಗಿ ಮುನ್ನುಗ್ಗಿ ಬಂದ ಕಾರು ರಸ್ತೆಯಂಚಿನಲ್ಲಿ ನಿಲ್ಲಿಸಿದ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ನಿಲ್ಲದೆ ಸ್ಕೂಟರ್ ಗೆ ಡಿಕ್ಕಿಯಾಗಿ ಪಕ್ಕದ ಪಾಸ್ಟ್ ಫುಡ್ ಅಂಗಡಿಯೊಳಗೆ ನುಗ್ಗಿದೆ. ಅಂಗಡಿಯಾತನಿಗೆ ಹಾಗೂ ಆಹಾರ ಸೇವಿಸುತ್ತಿದ್ದ