ತಮ್ಮ ಸಮಸ್ಯೆಗಳನ್ನು ಬಗೆಹರಿಸದಿರುವ ಉಡುಪಿಯ ಸ್ವಿಗ್ಗಿ ಮೆನೇಜರ್ ವಿರುದ್ದ ಸ್ವಿಗ್ಗಿ ಬಾಯ್ಸ್ ಸಿಡಿದೆದ್ದಿದ್ದಾರೆ .ಉಡುಪಿ ಮಣಿಪಾಲದಲ್ಲಿ ಡೆಲಿವೆರಿ ಮಾಡುತ್ತಿದ್ದ ನೂರಾರು ಡೆಲಿವೆರಿ ಬಾಯ್ಸ್ ಡೆಲಿವೆರಿ ಸ್ಥಗಿತಗೊಳಿಸುವುದರ ಮೂಲಕ ಪ್ರತಿಭಟನೆ ನಡೆಸಿದ್ದಾರೆ.ಕಳೆದ ಮೂರು ವರುಷಗಳಿಂದ ಡೆಲಿವೆರಿ ಬಾಯ್ಸ್ ಗಳು ಹತ್ತಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.ತಮ್ಮ
ಮೀನುಗಾರಿಕೆ ತೆರಳಿದ್ದ ನಾಡದೋಣಿಯ ಇಂಜಿನ್ ನಲ್ಲಿ ತಾಂತ್ರಿಕ ದೋಷ ಉಂಟಾದ ಕಾರಣ ಬಂಡೆಗೆ ಬಡಿದು ದೋಣಿ ಮುಗುಚಿ ಬಿದ್ದು, ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಉಡುಪಿ ಜಿಲ್ಲೆಯ ಕಾಪು ಲೈಟ್ ಹೌಸ್ ಬಳಿ ನಡೆದಿದೆ. ಇಂದು ಬೆಳಗ್ಗೆ ಐದು ಮಂದಿ ಮೀನುಗಾರರು, ನಾಡದೋಣಿಯಲ್ಲಿ ಕಾಪುವಿನಿಂದ ಮೀನುಗಾರಿಕೆಗೆ ತೆರಳಿದ್ದರು. ಸಮುದ್ರದಲ್ಲಿ ದೋಣಿಯ ಇಂಜಿನ್ ತಾಂತ್ರಿಕ ದೋಷ ಉಂಟಾಗಿ, ಕಾಪು ಲೈಟ್ ಹೌಸ್ ತಲುಪುತ್ತಿದ್ದಂತೆ, ಬಂಡೆಗೆ ಬಡಿದಿದೆ. ಈ ವೇಳೆ ದೋಣಿ ಮಗುಚಿ
ಹಾಸನದ ಆಲೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಮಕ್ಕಳು ಕಲುಷಿತ ಆಹಾರ ಸೇವನೆಯಿಂದ ಅಸ್ವಸ್ಥಗೊಂಡಿದ್ದ ಶಾಲೆಗೆ ಶಾಸಕ ಎಚ್ ಕೆ ಕುಮಾರಸ್ವಾಮಿ ನೀಡಿ, ಪರಿಶೀಲನೆ ನಡೆಸಿದ್ರು. ಅಡುಗೆ ಕೊಠಡಿ, ಸಾಮಗ್ರಿಗಳ ಕೊಠಡಿ, ಆಹಾರ ಪದಾರ್ಥಗಳನ್ನು ಪರೀಶೀಲನೆ ಮಾಡಿ, ಶಾಲಾ ಕೊಠಡಿಗಳು, ಸ್ನಾನಗೃಹಗಳು, ಶೌಚಲಯಕ್ಕೆ ಭೇಟಿ ನೀಡಿದ್ರು. ನಂತರ ಮಾತನಾಡಿದ ಅವರು ಸದ್ಯ ಈ ವಸತಿ ಶಾಲೆ ಕಟ್ಟಡದಲ್ಲಿ 204 ಮಕ್ಕಳು ಇದ್ದು 25 ಮಕ್ಕಳಿಗೆ ವಾಂತಿ ಬೇಧಿ ಸುಸ್ತು ಕಾಣಿಸಿಕೊಂಡಿದ್ದು.
ಪುತ್ತೂರು ತಾಲೂಕು ಬೆಟ್ಟಂಪಾಡಿ ಗ್ರಾಮದ ಮಿತಡ್ಕ ವಡ್ಯಾ ಎಂಬಲ್ಲಿ ಸಾರ್ವಜನಿಕ ರಸ್ತೆಗೆ ಮರ ಬಿದ್ದು ಸಂಪೂರ್ಣ ಸಾರ್ವಜನಿಕರಿಗೆ ಸಂಪರ್ಕ ಕಡಿತಗೊಂಡಿದೆ ಇದಕ್ಕೆ ಸುಮಾರು 10 ದಿನದಿಂದ ಇಲ್ಲಿಯ ಶಾಲಾ ಮಕ್ಕಳಿ ಗೆ ಸಾರ್ವಜನಿಕರಿಗೆ ತೊಂದರೆ ಈಡಾಗಿದ್ದು ಯಾವುದೇ ಅಧಿಕಾರಿಗಳು ಹಾಗೂ ಪಂಚಾಯತ್ ಸಿಬ್ಬಂದಿಗಳೂ ಕೂಡ ಭೇಟಿ ನೀಡದೆ ಜನಪ್ರತಿನಿಧಿಯು ಕೂಡ ಭೇಟಿ ನೀಡದೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ ಸದ್ಯ ಸಂಬಂಧಪಟ್ಟ ಇಲಾಖೆ ಗಮನ ಹರಿಸಿ ಸಂಪರ್ಕ
ಕಟಪಾಡಿ : ಸುರತ್ಕಲ್ ನಲ್ಲಿ ಲಾರಿ ಮಟ್ಟು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಉಡುಪಿ ಕಟಪಾಡಿ ಬಳಿಯ ಮಟ್ಟು ನಿವಾಸಿ, ದೇಗುಲದ ಅರ್ಚಕ ಅಕ್ಷಯ್ ಕೆ. ಆರ್ (33) ದುರ್ಮರಣ ಹೊಂದಿದ್ದಾರೆ. ಕಟಪಾಡಿ ಮೂಡಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯ ನಡೆಸುತ್ತಿದ್ದ ಅಕ್ಷಯ್ ಸುರತ್ಕಲ್ ನಲ್ಲಿ ಪೂಜೆ ಮುಗಿಸಿ ಕಟಪಾಡಿ ಗೆ ಹಿಂತಿರುಗಿ ಬರುವ ವೇಳೆಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.ಮೃತರು ತಾಯಿಯನ್ನು ಅಗಲಿದ್ದಾರೆ
ಜಿಲ್ಲೆಯ ಸಾವಿರಾರು ಪ್ರಯಾಣಿಕ ವಾಹನಗಳಿಗೆ ನಿತ್ಯ ಆಸರೆಯಾಗುವ ಹೆದ್ದಾರಿಯು ಮರಣ ಗುಂಡಿಗಳಾಗಿ ಬದಲಾಗುತ್ತಿದೆ. ಹೆದ್ದಾರಿಯ ಬಹುತೇಕ ಭಾಗಗಳಲ್ಲಿ ಹೊಂಡಗಳೇ ತುಂಬಿಕೊಂಡಿದ್ದು, ಸಂಚಾರ ಕಷ್ಟಕರವಾಗಿದೆ.ಇಲ್ಲಿರುವ ಗುಂಡಿಗಳು ಸವಾರರ ಮತ್ತು ಪ್ರಯಾಣಿಕರ ಹೃದಯಬಡಿತ ಹೆಚ್ಚಿಸುವಂತಿದೆ.ಸ್ವಲ್ಪ ಎಚ್ಚರ ತಪ್ಪಿದ್ರೆ ಸಾಕು ವಾಹನ ಹೊಂಡಕ್ಕೆ ಬೀಳುವುದು ಖಚಿತ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೃಹತ್ತಾಕಾರದ ಹೊಂಡಗುಂಡಿಗಳಿಂದ ವಾಹನ ಸವಾರ ನರಕಯಾತನೆ ಅನುಭವಿಸುವಂತಾಗಿದೆ.
ಅತಿವೇಗದಿಂದ ಬಂದ ಅಂಬ್ಯುಲೆನ್ಸ್ ವೊಂದು ಟೋಲ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಶಿರೂರು ಟೋಲ್ ಗೇಟ್ ನಲ್ಲಿ ಬುಧವಾರ ನಡೆದಿದೆ. ಹೊನ್ನಾವರದಿಂದ ಕುಂದಾಪುರದ ಆಸ್ಪತ್ರೆಗೆ ರೋಗಿಯನ್ನು ಕರೆ ತರುವ ವೇಳೆ ಅತಿವೇಗದಿಂದ ಬಂದ ಅಂಬ್ಯುಲೆನ್ಸ್ ಶಿರೂರು ಟೋಲ್ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಂಬ್ಯುಲೆನ್ಸ್ ನಲ್ಲಿ ಹೊನ್ನಾವರದ ಆಸ್ಪತ್ರೆಯಿಂದ ಲೋಕೇಶ್ ಮಾದೇವ ನಾಯ್ಕ
ವಿಟ್ಲ ಪಡ್ನೂರು ಗ್ರಾಮದ ಬಲಿಪಗುಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಳೆ ತಟ್ಟೆ ತಯಾರಿಕಾ ಘಟಕ ಇಕೋ ವಿಶನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಕಟ್ಟಡದ ಮೇಲ್ಭಾಗದಲ್ಲಿ ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಫ್ಯಾಕ್ಟರಿ ಯಿಂದ ದಟ್ಟ ಹೊಗೆ ಆವರಿಸುತ್ತಿದ್ದಂತೆ ಸ್ಥಳಕ್ಕೆ ವಿಟ್ಲ ಪೆÇಲೀಸರು, ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದರೂ ಕಟ್ಟಡದಲ್ಲಿದ್ದ ಹಲವು ಮೆಷಿನ್, ಮತ್ತು ಹಾಳೆತಟ್ಟೆಗಳು ಸುಟ್ಟು ಕರಕಲಾಗಿದೆ. ಇದರಿಂದ ಲಕ್ಷಾಂತರ
ಕೂಳೂರಿನ ನದಿ ತೀರದಲ್ಲಿ ಶೇಖರಣೆಗೊಂಡಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಪಲ್ಗುಣಿ ನದಿ ತೀರದಲ್ಲಿ ರಾಶಿ ಬಿದ್ದಿದ್ದ ಪ್ಲಾಸ್ಟಿಕ್, ನದಿಯಲ್ಲಿ ತೇಲಿ ಬಂದ ಟನ್ಗಟ್ಟಲೆ ತ್ಯಾಜ್ಯವನ್ನು ಸಂಘ ಸಂಸ್ಥೆ ಸ್ವಯಂ ಸೇವಕರು ಸ್ವಚ್ಚತಾ ಕಾರ್ಯ ನಡೆಸಿದರು. ಎಲ್ಲಾ ತ್ಯಾಜ್ಯಗಳನ್ನು ಸ್ವಯಂ ಸೇವಕರು ಹೆಕ್ಕಿ ಸ್ವಚ್ಛಗೊಳಿಸಿದರು. ಮಂಗಳೂರಿನ ರೇಂಜ್ ಅರಣ್ಯ ಇಲಾಖೆ, ಸಿಒಡಿಪಿ, ಎನ್ಇಸಿಎಫ್ ಮೊದಲಾದ ಸಂಘಟನೆಗಳುವರು ಸಹಕಾರ ನೀಡಿದ್ದಾರೆ.
ಯುಎನ್ಡಿಪಿ ಮತ್ತು ಎಎಲ್ಸಿ ಇಂಡಿಯಾ ಸಂಸ್ಥೆಯ ವತಿಯಿಂದ 5 ದಿನದ ಉದ್ಯಮಶಿಲತೆ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಕುಂಪಲದಲ್ಲಿ ಉದ್ಘಾಟನೆಗೊಂಡಿತು. ಮಹಿಳಾ ಉದ್ಯಮಿ ಗಳನ್ನು ಪ್ರೋತ್ಸಾಹಿಸಿ ಅವರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಈ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಭಾಗಿತ್ವದೊಂದಿಗೆ ಸ್ತ್ರೀ ಶಕ್ತಿ ಗುಂಪಿನ ಆಸಕ್ತ ಮಹಿಳೆಯರು ಈ ತರಬೇತಿಯಲ್ಲಿ ಭಾಗವಹಿಸಿದರು. ನಾರಾಯಣ ಕುಂಪಲ ಅವರು