Home Archive by category Fresh News

ಉಡುಪಿ : ಎಪ್ರಿಲ್ 5ರಂದು ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಾರೋಪ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಿತಿಯ ವಿಶೇಷ ಸಭೆ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್ ಕಾರ್ಕಳ ಅಧ್ಯಕ್ಷತೆಯಲ್ಲಿ ಫೆ.18ರಂದು ಉಡುಪಿ ಪತ್ರಿಕಾ ಭವನದಲ್ಲಿ ನಡೆಯಿತು. ರಜತ ಮಹೋತ್ಸವದ ಸಮಾರೋಪ ಸಮಾರಂಭವನ್ನು ಎಪ್ರಿಲ್ 5ರಂದು ಶನಿವಾರ ಸಂಜೆ ಉಡುಪಿಯ ಓಷಿಯನ್ ಪರ್ಲ್ ಹೊಟೇಲ್ ಸಭಾಂಗಣದಲ್ಲಿ ನಡೆಸಲು ತೀರ್ಮಾನಿಸಲಾಯಿತು. ಇದಕ್ಕೆ

ಉಡುಪಿ: ಎರಡು ಬೈಕುಗಳ ನಡುವೆ ಅಪಘಾತ – ಓರ್ವ ಬೈಕ್ ಸವಾರ ಸಾವು

ಉಡುಪಿ: ಎರಡು ಬೈಕುಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಮೃತಪಟ್ಟ ಘಟನೆ ಅಜ್ಜರಕಾಡಿ ಅಗ್ನಿ ಶಾಮಕ ದಳ ಠಾಣೆಯ ಸಮೀಪ ಸೋಮವಾರ ರಾತ್ರಿ ಸಂಭವಿಸಿದೆ. ಮೃತರನ್ನು ಸ್ಥಳೀಯರಾದ ಸ್ಯಾಮುಯೆಲ್ ಸದಾನಂದ ಕರ್ಕಡ(59) ಎಂದು ಗುರುತಿಸಲಾಗಿದೆ. ಅತಿ ವೇಗದಿಂದ ಬಂದ ಎರಡು ಬೈಕ್ ಗಳು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಸದಾನಂದ ರಸ್ತೆಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡು ಅವರು ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದು ಬಂದಿದೆ.ಅಪಘಾತದಿಂದ

ಶ್ರೀ ವೀರಭದ್ರಕಾಳಿ ಸ್ಮರಣ ಸಂಚಿಕೆ ಬಿಡುಗಡೆ, ಅನ್ನಪೂರ್ಣ ಭೋಜನಾಲಯ, ಅತಿಥಿಗೃಹ ಉದ್ಘಾಟನೆ

ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ಅಷ್ಟ ಬಂಧ ಬ್ರಹ್ಮಕಲಕೋತ್ಸವ, ವಾರ್ಷಿಕ ಜಾತ್ರಾ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಧಾರ್ಮಿಕ ಸಭಾ ಕಾರ್ಯಕ್ರಮ, ಶ್ರೀ ವೀರಭದ್ರಕಾಳಿ ಸ್ಮರಣ ಸಂಚಿಕೆ ಬಿಡುಗಡೆ, ಅನ್ನಪೂರ್ಣ ಭೋಜನಾಲಯ, ಅತಿಥಿಗೃಹ ಉದ್ಘಾಟಿಸಲಾಯಿತು. ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಅವರು ಅತಿಥಿ ಗ್ರಹ ಉದ್ಘಾಟಿಸಿ ಮಾತನಾಡಿ, ಪದ್ಮಶಾಲಿಯ ಉಪಜಾತಿ ಕರಾವಳಿ ಶೆಟ್ಟಿಗಾರ ಜಾತಿಯನ್ನು ಸೇರಿಸಲು ಒತ್ತಾಯದ ಹಿನ್ನೆಲೆಯಲ್ಲಿ

ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇಗುಲ ಧಾರ್ಮಿಕ ಸಭಾ ಕಾರ್ಯಕ್ರಮ

ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ಅಷ್ಟ- ಬಂಧ ಬ್ರಹ್ಮಕಲಕೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.ವಾಸ್ತು ತಜ್ಞ ಯಕ್ಷಗಾನ ಪ್ರಸಂಗ ಕರ್ತರಾದ ಡಾ. ಬಸವರಾಜ್ ಶೆಟ್ಟಿಗಾರ್ ಕಾರ್ಯಕ್ರಮ ಉದ್ಘಾಟಿಸಿದರು ಅವರು ಮಾತನಾಡಿ ದಕ್ಷ ಸಂಹಾರ ವಾದ ನಂತರ ವೀರಭದ್ರನು ಶೃಂಗ ಗಿರಿಯಲ್ಲಿ ನೆಲೆಸಿರುವಾಗ ಬ್ರಹ್ಮಶ್ರೀ ಅಡಕತ್ತಾಯರ ಭಕ್ತಿಗೆ ಒಲಿದು ಪರಮ ಪಾವನ ಪುಣ್ಯ ಪೃಥ್ವಿ ಪರುಶಾಮನ

ಸುಳ್ಯ. ಅರೆಭಾಷೆ ಕಾಮಿಡಿ ರಿಯಾಲಿಟಿ ಶೋದ ಮೊದಲ ಆಡಿಷನ್ ನ ಉದ್ಘಾಟನಾ ಕಾರ್ಯಕ್ರಮ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ,  v4 ನ್ಯೂಸ್  ಹಾಗೂ ಎಂ.ಬಿ. ಫೌಂಡೇಶನ್ ಸಹಯೋಗದಲ್ಲಿ‌ ಅರೆಭಾಷೆ ಕಾಮಿಡಿ ಇದರ ಮೊದಲ ಆಡಿಷನ್ ನ ಉದ್ಘಾಟನಾ ಕಾರ್ಯಕ್ರಮವು ಸುಳ್ಯದ ಲಯನ್ಸ್ ಕ್ಲಬ್ ನಲ್ಲಿ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ  ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಅರೆಭಾಷೆಯ ಸಂಸ್ಕೃತಿ ಆಚಾರ

ಪುತ್ತೂರು: ಎಸ್‌ಡಿಪಿಐ ಪುತ್ತೂರು ಕ್ಷೇತ್ರ ಸಮಿತಿ ಮಾಸಿಕ ಸಭೆ

ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯ ಸ್ಪರ್ಧೆ, ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು, ಜಿಲ್ಲಾ ಕೇಂದ್ರ ಘೋಷಣೆ ಸಹಿತ ಹಲವು ನಿರ್ಣಯಗಳ ಅಂಗೀಕಾರ ಪುತ್ತೂರು: ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆಯು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಬಾವು‌ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಪುತ್ತೂರು ತಾಲೂಕಿನಾದ್ಯಂತ ಜನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ , ಪರಿಹಾರ ಕಾರ್ಯಗಳ ಬಗ್ಗೆ ಯೋಜನೆ ರೂಪಿಸಲು

ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್

ಪುತ್ತೂರು: ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ಆಗಮಿಸಲಿದ್ದಾರೆ. ಹಿರಿಯ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರು ವರ್ಗಾವಣೆಗೊಂಡ ಬಳಿಕ ಶ್ರವಣ್ ಕುಮಾರ್ ಪ್ರೊಬೆಷನರಿ ಸಹಾಯಕ ಆಯುಕ್ತರಾಗಿದ್ದರು. ಇದೀಗ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿರುವ ಕೆಎಎಸ್ ಕಿರಿಯ ಶ್ರೇಣಿಯ ಅಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರನ್ನು ಪುತ್ತೂರು, ಸುಳ್ಯ, ಬೆಳ್ತಂಗಡಿ ಮತ್ತು ಕಡಬ ತಾಲೂಕುಗಳನ್ನು

ಫೆ.18ರಂದು ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಪದಗ್ರಹಣ, ಸಂವಿಧಾನ ಜಾಗೃತಿ ಸಮಾವೇಶ

ಮಂಗಳೂರು: ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ಘಟಕದ ಪದಗ್ರಹಣ ಕಾರ್ಯಕ್ರಮ ಹಾಗೂ ಸಂವಿಧಾನ ಜಾಗೃತಿ ಸಮಾವೇಶ ಫೆ.18ರಂದು ನಗರದ ಊರ್ವಸ್ಟೋರ್ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಮುಳೂರು ತಿಳಿಸಿದ್ದಾರೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 2ಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ನಾರಾಯಣ ಗುರು

ಮಹಾ ಕುಂಭ ಮೇಳದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಅನಾವರಣ

ದಕ್ಷಿಣ ಕನ್ನಡ ಜಿಲ್ಲೆಯ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಸಂಚಾಲಕರಾದ ಡಾ. ರವಿಕಕ್ಕೆಪದವು ನೇತೃತ್ವದಲ್ಲಿ ಮಹಾ ಕುಂಭ ಮೇಳಕ್ಕೆ ತೆರಳಿದ 42 ಮಂದಿ ಸೇರಿ ಅಲ್ಲಿನ ಸ್ವಾಮಿಗಳ ನೇತೃತ್ವದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಪವಿತ್ರ ಧಾರ್ಮಿಕ ಸ್ಥಳವಾದ ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ತ್ರಿವೇಣಿ ಸಂಗಮವಾದ ಮಹಾ ಕುಂಭ ಮೇಳದಲ್ಲಿ ಅನಾವರಣ ಗೊಳಿಸಲಾಯಿತು. ಈ ಸಂಧರ್ಭದಲ್ಲಿ ಜಾತ್ರಾ ಮಹೋತ್ಸವ ಯಶಸ್ವಿಯಾಗಬೇಕು ಸಮಾಜಕ್ಕೆ

ನಾಲ್ಕೂರು : ಆಸಕ್ತ ಮಹಿಳೆಯವರಾದ ಯಮುನಾ ಅಮೆರವರಿಗೆ ಮನೆ ರಚನೆಗಾಗಿ ಮಂಜೂರು ಆದ ರೂ. 30,000/- ಅನುದಾನದ ಮಂಜೂರಾತಿ ಪತ್ರ ವಿತರಣೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಾಲ್ಕೂರು ಗ್ರಾಮದ ಹಾಲೆಮಜಲಿನ ಆಸಕ್ತ ಮಹಿಳೆಯವರಾದ ಯಮುನಾ ಅಮೆರವರಿಗೆ ಮನೆ ರಚನೆಗಾಗಿ ರೂ. 30,000/- ಅನುದಾನ ಮಂಜೂರು ಆಗಿದ್ದು, ಇದರ ಮಂಜೂರಾತಿ ಪತ್ರವನ್ನು ಸುಳ್ಯ ತಾಲೂಕಿನ ಶ್ರೀ ಕ್ಷೇ ಧ ಗ್ರಾ ಯೋಜನೆಯ ಯೋಜನಾಧಿಕಾರಿಯವರಾದ ಮಾಧವ ಗೌಡರವರು ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ಹಾಲೆಮಜಲು ಒಕ್ಕೂಟದ ಅಧ್ಯಕ್ಷರಾದ ಲೋಹಿತ್ ಚೆಮ್ನೂರು, ವಲಯದ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ, ಸೇವಾಪ್ರತಿನಿಧಿ