Home Archive by category Fresh News (Page 13)

ಮಂಗಳೂರು: ಎಂಸಿಸಿ ಬ್ಯಾಂಕಿನಲ್ಲಿ ಮಹಿಳಾ ದಿನಾಚರಣೆ

ಎಂಸಿಸಿ ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ಬ್ಯಾಂಕಿನ ಮಹಿಳಾ ಸಿಬಂದಿಯ ನಿಸ್ವಾರ್ಥ ಸೇವೆಯನ್ನು ಸ್ಮರಿಸಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ವೈಟ್ ಡೌವ್ಸ್ ಸಂಸ್ಥೆಯ ಸಂಸ್ಥಾಪಕಿ ಶ್ರೀಮತಿ ಕೋರಿನ್ ರಸ್ಕಿನ್ಹಾ ಹಾಜರಿದ್ದರು. ಬ್ಯಾಂಕಿನ ನಿರ್ದೇಶಕಿಯರಾದ ಶ್ರೀಮತಿ ಐರಿನ್ ರೆಬೆಲ್ಲೊ, ಡಾ| ಫ್ರೀಡಾ ಪ್ಲಾವಿಯ ಡಿಸೋಜ, ಶ್ರೀಮತಿ

ಮಂಗಳೂರು : ಹಿರಿಯ ಪತ್ರಕರ್ತರಿಗೆ ಪ್ರೆಸ್‌ಕ್ಲಬ್ ಗೌರವ ಸನ್ಮಾನ ಪುರಸ್ಕಾರ

ಮಂಗಳೂರು ಪ್ರೆಸ್‌ಕ್ಲಬ್ ದಿನಾಚರಣೆಯ ಸಂಭ್ರಮದ ಕಾರ್ಯಕ್ರಮವು ಮರವೂರು ದಿ ಗ್ರ್ಯಾಂಡ್ ಬೇ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಿ4 ನ್ಯೂಸ್‌ನ ವರದಿಗಾರ ಶರತ್ ಸಾಲ್ಯಾನ್ ಸೇರಿದಂತೆ 9 ಮಂದಿ ಹಿರಿಯ ಪತ್ರಕರ್ತರಿಗೆ ಪ್ರೆಸ್‌ಕ್ಲಬ್ ಗೌರವ ಸನ್ಮಾನ ಪುರಸ್ಕಾರ ನೀಡಲಾಯಿತು. ಕಾರ್ಯಕ್ರಮವನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಮಾಜದಲ್ಲಿ ತರೆ ಮರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವವರ ಸಾಧನೆಯನ್ನು

ಮಂಡೆಕೋಲು: ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸುಳ್ಯ: ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿ ಅವರು ಸೋಮವಾರ ಬಿಡುಗಡೆಗೊಳಿಸಿದರು. ದೇವರ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ವಿಧಿ ವಿಧಾನಗಳು ಎಪ್ರಿಲ್ 26 ರಿಂದ ಮೊದಲ್ಗೊಂಡು ಮೇ 4 ರವರೆಗೆ ನಡೆಯಲಿದ್ದು, ಈ ಕುರಿತ ಸರ್ವ ಕಾರ್ಯಗಳಿಗೆ ತಂತ್ರಿಗಳು ಶುಭ ಹಾರೈಸಿದರು. ಅಲ್ಲದೆ ಕೋಟಿ ಲೇಖನ

ಮಂಗಳೂರು: ಕ್ಲೌಡ್ ಯೂನಿಸೆಕ್ಸ್ ಶುಭಾರಂಭ

ನಗರದ ಬಳ್ಳಾಲ್‌ಬಾಗ್‌ನಲ್ಲಿರುವ ಲಾಲ್‌ಬಾಗ್ ಟವರ್‍ಸ್‌ನಲ್ಲಿ ನೂತನ ಕ್ಲೌಡ್ ಯೂನಿಸೆಕ್ಸ್ ಶುಭಾರಂಭಗೊಂಡಿತು.ನೂತನ ಸೆಲೂನನ್ನು ಸುಜಾತ ಕಾಮತ್ ಅವರು ಉದ್ಘಾಟಿಸಿದರು.ಇಲ್ಲಿ ಎಲ್ಲಾ ರೀತಿಯ ಹೇರ್ ಟ್ರೀಟ್‌ಮೆಂಟ್, ಸ್ಮೂಥ್‌ನಿಂಗ್, ಸ್ಟ್ರೈಟನಿಂಗ್, ಫೇಶೀಯಲ್, ಪೆಡಿಕ್ಯೂರ್, ವಾಕ್ಸಿಂಗ್, ಬ್ರೈಡಲ್ ಸೇವೆಗಳು ಲಭ್ಯವಿದ್ದು, ಶುಭಾರಂಭದ ಅಂಗವಾಗಿ ಎಲ್ಲಾ ಸರ್ವಿಸ್‌ಗಳ ಮೇಲೆ 20% ರಿಯಾಯಿತಿ ಹಾಗೂ ಕೇವಲ ರೂ. 2999ಗೆ ಕೆರಟಿನ್ ಹಾಗೂ ಸ್ಮೂಥನಿಂಗ್ ಮಾಡಲಾಗುತ್ತದೆ.

ಪ. ಬಂಗಾಳದ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿಎಂಸಿ: ಯೂಸುಫ್ ಪಠಾಣ್ ಕಣಕ್ಕೆ

ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಸ್ಥಾನಗಳಿಗೆ ಟಿಎಂಸಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಕನಿಷ್ಠ ಎಂಟು ಹಾಲಿ ಸಂಸದರನ್ನು ಕೈಬಿಟ್ಟಿದೆ ಮತ್ತು ಮಾಜಿ ಕ್ರಿಕೆಟಿಗರಾದ ಯೂಸುಫ್ ಪಠಾಣ್ ಮತ್ತು ಕೀರ್ತಿ ಆಜಾದ್ ಅವರಂತಹ ಹಲವು ಹೊಸ ಮುಖಗಳನ್ನು ಕಣಕ್ಕಿಳಿಸಿದೆ. ಈ ಬಾರಿಯ ಲೋಕಸಭೆ ಚುನಾವಣೆಗೆ ಪಕ್ಷವು 16 ಹಾಲಿ ಸಂಸದರನ್ನು ಮತ್ತು 12 ಮಹಿಳೆಯರನ್ನು ಕಣಕ್ಕಿಳಿಸಿದೆ. ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಬಹರಂಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿ ದ್ದಾರೆ,

ಪುತ್ತೂರು: ಕರ್ನಾಟಕ ಪೊಲೀಸ್ ರನ್: ಮಾದಕ ದ್ರವ್ಯಗಳ ದುಷ್ಪರಿಣಾಮದ ಜಾಗೃತಿ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಸುವರ್ಣ ಮಹೋತ್ಸವದ ಅಂಗವಾಗಿ ಕರ್ನಾಟಕ ಪೊಲೀಸ್ ರನ್ – 2024 ಕಾರ್ಯಕ್ರಮಕ್ಕೆ ಪುತ್ತೂರಿನಲ್ಲಿ ದರ್ಬೆ ಬೈಪಾಸ್ ವೃತ್ತದಿಂದ ನಗರ ಪೊಲೀಸ್ ಠಾಣೆಯ ತನಕದ ಪೊಲೀಸ್ ರನ್ ಗೆ ದ.ಕ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ ಬಿ ರಿಷ್ಯಂತ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ

ಬಂಟ್ಸ್ ಕತಾರ್ ನಿಂದ ವರ್ಣರಂಜಿತ ಮೆಗಾ ಸಾಂಸ್ಕೃತಿಕ ಪ್ರದರ್ಶನ

ಬಂಟ್ಸ್ ಕತಾರ್ ನೂತನ ಆಡಳಿತ ಸಮಿತಿಯ ಅಡಿಯಲ್ಲಿ ಆಯೋಜಿಸಲಾದ ಮೆಗಾ ಕಲ್ಚರಲ್ ಶೋ-2024 ಕಾರ್ಯಕ್ರಮವು ಡಿಪಿಎಸ್ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ಪ್ರಸಿದ್ಧಗಾಯಕರಾದ ಇಂಡಿಯನ್ ಐಡಲ್ ಖ್ಯಾತಿಯ ನಿಹಾಲ್ ತೌರೊ ಮತ್ತು ಸರಿಗಮಪ ಖ್ಯಾತಿಯ ಸಾನ್ವಿ ಶೆಟ್ಟಿ ಅವರ ಲೈವ್ ಸಂಗೀತ ಕಾರ್ಯಕ್ರಮವು ಸುಂದರ ಸಂಜೆಯಲ್ಲಿ ಸಂಗೀತ ಲೋಕವನ್ನುಸೃಷ್ಟಿಸಿತು. ಬಂಟ್ಸ್ ಕತಾರ್ ಸದಸ್ಯರಿಂದ ಯಕ್ಷಗಾನ”ನಾಟ್ಯ ವೈಭವ”, ವಿಶೇಷವಾಗಿ ಬಂಟ್ಸ್ ಕತಾರ್‌ನ ಸಣ್ಣ ಪುಟ್ಟ ತಂಡಗಳು

ಮಂಗಳೂರು: ವಿವಿಧ ಫ್ಲೇವರ್‌ ಗಳ ಟೇಸ್ಟಿ ಐಸ್‌ ಕ್ರೀಂಗಳಿಗೆ ಪ್ರಸಿದ್ಧಿ ಪಡೆದ ಅಪ್ಸರಾ

ಅಪ್ಸರಾ ಐಸ್‌ಕ್ರೀಂ ವಿವಿಧ ಫ್ಲೇವರ್‌ಗಳ ಮೂಲಕ ಗ್ರಾಹಕರ ಮನಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಇದೀಗ ಮಂಗಳೂರಿನಲ್ಲಿ ಶಾಖೆಗಳನ್ನು ತೆರೆಯುವ ಮೂಲಕ ಜನಪ್ರಸಿದ್ಧಿಯನ್ನು ಪಡೆಯುತ್ತಿದೆ. ಅಪ್ಸಾರಾ ಐಸ್‌ಕ್ರೀಂ 1971 ರಲ್ಲಿ ದಕ್ಷಿಣ ಮುಂಬೈನ ವಾಲ್ಕೇಶ್ವರದಲ್ಲಿ ತನ್ನ ಮೊದಲ ಪಯಾಣವನ್ನು ಆರಂಭಿಸಿದ್ದು, ನಂತರ ದಿನಗಳಲ್ಲಿ ಅಂಗಡಿ, ಮದುವೆ ಕಾರ್ಯಕ್ರಮಗಳು ಮತ್ತು ಇತರ ಕಾರ್ಯಕ್ರಮಗಳಿಗೆ ಮಾರಾಟ ಮಾಡುವ ಮೂಲಕ ತನ್ನ ವ್ಯಾಪಾರ ವೃದ್ಧಿಯನ್ನು ಮುಂದುವರೆಸಿದರು. ಮುಂಬೈನ

ತೆಂಗಿನಕಾಯಿ ಸಂಗ್ರಹಿಸಲು ನದಿಗೆ ಹೋಗಿದ್ದ ವ್ಯಕ್ತಿ ಸಾವು

ಬಜಪೆ : ನಂದಿನಿ ನದಿಯಲ್ಲಿ ತೆಂಗಿನಕಾಯಿ ಸಂಗ್ರಹಿಸಲು ಹೋಗಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನದಿಗೆ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಕಟೀಲು ಸಮೀಪದ ಕಲ್ಲಕುಮೇರು ಎಂಬಲ್ಲಿ ನಡೆದಿದೆ‌. ಬಂಟ್ವಾಳ ತಾಲೂಕು ಸಜಿಪ ಮುನ್ನೂರು ಗ್ರಾಮದ ನಂದಾವರ ಕೊಪ್ಪಳ ನಿವಾಸಿ ಅಶೋಕ (54) ಎಂಬವರು ಕೆಲಸದ ನಿಮಿತ್ತ ಕಟೀಲು ಬಳಿಯ ಸಂಬಂಧಿಕರ ಮನೆಯಲ್ಲಿ ವಾಸವಿದ್ದವರು ಶುಕ್ರವಾರ ಸಂಜೆ ನಂದಿನಿ ನದಿಯಲ್ಲಿ ಬರುವ ತೆಂಗಿನಕಾಯಿಗಳನ್ನು ಸಂಗ್ರಹಿಸಲು ತೆರಳಿದ್ದ ವೇಳೆ ಆಯ ತಪ್ಪಿ

ಕುತ್ತಾರು ದೆಕ್ಕಾಡು ಕೊರಗಜ್ಜನ ಆದಿಸ್ಥಳಕ್ಕೆ ನಟ ದರ್ಶನ್ ಭೇಟಿ

ಉಳ್ಳಾಲ : ಕುತ್ತಾರು ದೆಕ್ಕಾಡುವಿನ ಕೊರಗಜ್ಜ  ಆದಿತಳಕ್ಕೆ ಡಿ ಬಾಸ್  ದರ್ಶನ್  ಸಹಿತ ಹಲವು ನಟರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.  ಈ ಸಂದರ್ಭ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮಂಗಳೂರಿಗೆ ಸುಮಾರು ಸಲ ಬಂದಿದ್ದೆ ಆದರೆ ಕುತ್ತಾರಿಗೆ ಬರೋದಕ್ಕೆ ಆಗ್ಲಿಲ್ಲ. ಕುತ್ತಾರು ಏನು ಡಿಫರೆನ್ಸ್ ಇಲ್ಲ ಎಲ್ಲಾ ದೇವಸ್ಥಾನ ಒಂದೇ. ಎಲ್ರು ಹೇಳ್ತಾಯಿದ್ರು ಈ ಕ್ಷೇತ್ರದ ಬಗ್ಗೆ ಹಾಗಾಗಿ ಭೇಟಿ ನೀಡಿ ಪ್ರಾರ್ಥಿಸಿದ್ದೆನೆ ಎಂದರು. ಈ ಸಂದರ್ಭ ಹಾಸ್ಯ ನಟ ಚಿಕ್ಕಣ್ಣ,