ಕಾರ್ಕಳ: ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಕಳ ತಾಲೂಕು ಘಟಕ ಇದರ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಷರೀಫ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಬೈಲೂರು ಹರೀಶ್ ಅಚಾರ್ಯ ಆಯ್ಕೆಯಾಗಿದ್ದಾಾರೆ. , ಕೋಶಾಧಿಕಾರಿ ಸ್ಥಾನಕ್ಕೆ ಕೆ.ಎಂ ಖಲೀಲ್ ಆಯ್ಕೆ ನಡೆಯಿತು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸೂಚನೆಯಂತೆ ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ
ದೇರೆಬೈಲ್ ಪಶ್ಚಿಮ ವಾರ್ಡಿನ ಉರ್ವಸ್ಟೋರ್ ಸುಂಕದಕಟ್ಟೆಯ ದಲಿತ ಕುಟುಂಬದ ಮನೆ ನಿರ್ಮಾಣದ ಸಹಾಯಧನ ತೀರಾ ವಿಳಂಬವಾಗಿದ್ದು ,ಅದನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ದಲಿತ ಹಕ್ಕುಗಳ ಸಮಿತಿ( DHS ) ಯ ಮಂಗಳೂರು ನಗರ ಸಮಿತಿಯು ಮನಪಾದ ಆಯುಕ್ತರು ಹಾಗೂ ಮೇಯರ್ ರವರಿಗೆ ಮನವಿ ಅರ್ಪಿಸುವ ಮೂಲಕ ಒತ್ತಾಯಿಸಿದೆ. ಉರ್ವಸ್ಟೋರ್ ಸುಂಕದಕಟ್ಟೆ ಪ್ರದೇಶದ ನಿವಾಸಿ ಪದ್ಮ ಎಂಬ ದಲಿತ ಮಹಿಳೆಯ ಪಾಳುಬಿದ್ದ ಮನೆಯು ಕಳೆದ ವರ್ಷದ ಮಳೆಗಾಲದ ಸಮಯಕ್ಕೆ ಕುಸಿದು ಬಿದ್ದು,ಅದಾಗಲೇ ಮಾದ್ಯಮದ
ಸುರತ್ಕಲ್ ನಿಂದ ಬಿ.ಸಿ ರೋಡ್ ವರೆಗಿನ ಹೆದ್ದಾರಿಯಲ್ಲಿ ನಿರ್ಮಾಣಗೊಂಡಿರುವ ಗುಂಡಿಗಳನ್ನು ಮುಚ್ಚಲು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಇಂದು (19-7-2023) ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ನಿಯೋಗವು ಮನವಿಯನ್ನು ಸಲ್ಲಿಸಿದೆ. ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ,ಕಾರ್ಯದರ್ಶಿ ಸಂತೋಷ್ ಬಜಾಲ್, ಡಿವೈಎಫ್ಐ ಮುಖಂಡರಾದ ಉಸ್ಮಾನ್ ಕಣ್ಣೂರ್, ಆಸೀಫ್, ರಿಯಾಝ್ ಮುಂತಾದವರು ಉಪಸ್ಥಿತರಿದ್ದರು.
ಬೆಂಗಳೂರು: ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ಮಾತಿನ ಚಕಮಕಿ ನಡೆದು ಸದನದಲ್ಲಿ ಬಜೆಪಿ ಶಾಸಕರು ವಿಧಾನಸಭೆ ಉಪ ಸಭಾಧ್ಯಕ್ಷರ ಮೇಲೆ ಕಾಗದ ಚೂರುಗಳನ್ನು ತೂರಿದ ಘಟನೆಗೆ ಸಂಬಂಧಿಸಿ 10 ಮಂದಿ ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಲಾಗಿದೆ. ಅಶ್ವತ್ಥ ನಾರಾಯಣ, ಆರ್.ಅಶೋಕ್, ವೇದವ್ಯಾಸ ಕಾಮತ್, ಅರಗಜ್ಞಾನೇಂದ್ರ, ಸುನೀಲ್ ಕುಮಾರ್, ಅರವಿಂದ ಬೆಲ್ಲದ್, ಯಶ್ಪಾಲ್ ಸುವರ್ಣ, ಧೀರಜ್ ಮುನಿರಾಜ್, ಉಮಾನಾಥ್ ಕೋಟ್ಯಾನ್, ಭರತ್
ಬೆಳ್ಮಣ್: ಪಿಲಾರುಖಾನ ಕಾಡು ಪ್ರದೇಶದಲ್ಲಿ ಕಾಡುಕೋಣವೊಂದು ರಸ್ತೆಗೆ ಬಂದು ವಾಹನ ಸವಾರರು ಆತಂಕಗೊಳಿಸಿದ ಘಟನೆ ನಡೆದಿದೆ. ಪಿಲಾರುಖಾನ ಅರಣ್ಯ ಪ್ರದೇಶದ ಸುತ್ತ ತಂತಿ ಬೇಲಿಯನ್ನು ಅಳವಡಿಸಿದ್ದು ಇದರಿಂದ ಒಂದು ಬದಿಯ ತಂತಿ ಬೇಲಿಯನ್ನು ದಾಟಿಕೊಂಡ ಬಂದ ದೊಡ್ಡ ಕಾಡುಕೋಣವೊಂದು ಮತ್ತೊಂದು ಬದಿಯ ಕಾಡಿಗೆ ಹೋಗಲು ಪರದಾಡಿತು.
ಮಂಗಳೂರಿನ ವೆಸ್ಟ್ ಕೋಸ್ಟ್ ಶೋರೂಮ್ ನಲ್ಲಿ ಅಮೇರಿಕಾ ಮೂಲದ ಜನಪ್ರಿಯ ದ್ವಿಚಕ್ರ ವಾಹನ ತಯಾರಾಕರದ ಹಾರ್ಲೆ ಡೇವಿಡ್ಸನ್ ನ ಹೊಸ ಹಾರ್ಲೆ ಡೇವಿಡ್ಸನ್ *440, ಹಾರ್ಲೆ ಎವಿಡ್ ಮತ್ತು ಎಸ್ ಡೇವಿಡ್ಸನ್ ಬಿಡುಗಡೆಯಾಗಿದ್ದು ಭಾರತೀಯ ಮಾರುಕಟ್ಟೆಗೆ ಹೊಸ ಸಂಚಲನ ಸೃಷ್ಟಿಸಿದೆ. ಈಗಾಗಲೇ ಉತ್ತಮ ಸ್ಪಂದನೆ ಸಿಗುತ್ತಿದ್ದೂ,ಆಗಸ್ಟ್ 15 ರ ಬಳಿಕ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾರ್ಲೆ ಡೇವಿಡ್ಸನ್ ರಸ್ತೆಗಿಳಿಯಲಿದೆ. ಈಗಾಗಲೇ ಮುಂಗಡ ಬುಕಿಂಗ್ ತೆರೆದಿದ್ದು
ಪೊಲೀಸರಿಗೆ ಬಂದೂಕು ತೋರಿಸಿ ಆಕ್ರಮಣ ಗೈಯಲು ಯತ್ನಿಸಿದ ಹಾಗೂ ಲಾರಿಯೊಂದನ್ನು ಅಪಹರಣಗೈದ ಪ್ರಕರಣದ ಇಬ್ಬರು ಆರೋಪಿಗಳನ್ನು ಮಂಜೇಶ್ವರ ಹಾಗೂ ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಮೀಯಪದವು ನಿವಾಸಿಗಳಾದ ರಹಿಂ ಹಾಗೂ ಲತೀಫ್ ಬಂಧಿತ ಆರೋಪಿಗಳು. ರಹೀಂ ಎಂಬಾತನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಅದೇ ರೀತಿ ಲತೀಫ್ ಎಂಬಾತನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಇವರ ವಿರುದ್ಧ ಕೇರಳ ಹಾಗೂ ಕರ್ನಾಟಕದ ವಿವಿಧ ಪೊಲೀಸ್ ಠಾಣೆಗಳಲ್ಲಿ 14 ಪ್ರಕರಣಗಳು ಇರುವುದಾಗಿ
ನಗರದ ಸಭಾಂಗಣದಲ್ಲಿ ಯುವಕನೊಬ್ಬ ಹೊರಗೆ ಬಿಟ್ಟಿದ್ದ ಚಪ್ಪಲಿ ನಾಪತ್ತೆಯಾಗಿದ್ದು ಇದಕ್ಕಾಗಿ 112 ನಂಬರಿಗೆ ಕರೆ ಮಾಡಿ ಪೊಲೀಸರನ್ನು ಕರೆಸಿಯಿಸಿದ ಘಟನೆ ನಡೆದಿದೆ. ಶರವು ದೇವಸ್ಥಾನದ ಸಮೀಪದ ಸಭಾಂಗಣಕ್ಕೆ ಆಗಮಿಸಿದ್ದ ಯುವಕ ಚಪ್ಪಲಿಯನ್ನು ಹೊರಗೆ ಬಿಟ್ಟಿದ್ದು ವಾಪಾಸ್ ಬಂದಾಗ ಚಪ್ಪಲಿ ಇಲ್ಲದಿರುವುದನ್ನು ಕಂಡು 112 ನಂಬರಿಗೆ ಕರೆ ಮಾಡಿ ದೂರು ದಾಖಲಿಸಿದ್ದಾನೆ. ಈ ದೂರನ್ನು ಪರಿಶೀಲಿಸುವಂತೆ ಬಂದರು ಠಾಣೆಗೆ ಸಂದೇಶ ಬಂದಿತ್ತು. ಇದನ್ನು ನೋಡಿ ಪೊಲೀಸರೂ ಸುಸ್ತು
ಮಂಗಳೂರಿನ ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ವಳಚ್ಚಿಲ್ ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ, ಕೇರಳ ಮೂಲದ ಮಹಮ್ಮದ್ ನಶತ್ (21) ಮೃತ ವಿದ್ಯಾರ್ಥಿ.ಯುವಕ ಪಡೀಲ್ ಕಡೆಯಿಂದ ವಳಚ್ಚಿಲ್ ಕಾಲೇಜು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ, ಸ್ಕಿಡ್ ಆಗಿದ್ದು ಡಿವೈಡರ್ ಬಡಿದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತೀವ್ರ ಗಾಯಗೊಂಡು
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿಹಬ್ಬ ಆಚರಣೆಯ ಸಂಭ್ರಮಕ್ಕೆ ಸುಳ್ಯ ಕೇರ್ಪಳದ ಭಂಟರ ಭವನದಲ್ಲಿ ಅದ್ದೂರಿಯಾಗಿ ಚಾಲನೆ ಸಿಕ್ಕಿತ್ತು. ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ಬಳಿಕ ಮಾತನಾಡಿ ಅವರು, ಸುಳ್ಯದ ಕಾರ್ಯನಿರತ ಪತ್ರಕರ್ತರ ಸಂಘ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದೆ. ಈ ಕಾರ್ಯಕ್ರಮ ಯಶಸ್ವಿಯಾಗಲಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕ್ರಮಗಳು ಮೂಡಿ ಬರಲಿ ಎಂದರು. ಆನಂತರ ಜಿಲ್ಲಾ