Home Archive by category Fresh News (Page 2)

ಉಳ್ಳಾಲ: ರೋಹಿಣಿ ಸಾಲಿಯಾನ್ ರಚಿತ ದಿವ್ಯಾಂಗನೆ ಕವನ ಸಂಕಲನ ಬಿಡುಗಡೆ

ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರದ ಸಲಹಾ ಸಮಿತಿಯ ಹಿರಿಯ ಸದಸ್ಯೆ, ಮುಂಬಯಿಯ ಹೈಕೋರ್ಟ್ ನ್ಯಾಯವಾದಿ ರೋಹಿಣಿ ಜೆ.ಸಾಲಿಯಾನ್ ರಚಿತ ದಿವ್ಯಾಂಗನೆ ಕವನ ಸಂಕಲನವನ್ನು ಬಿಡುಗಡೆ ಹಾಗೂ ಕೃತಿಯ ಅರ್ಪಣೆ ಕಾರ್ಯಕ್ರಮ ಮಂಗಳೂರಿನ ಹೊಯಿಗೆಬೈಲ್ ರತ್ನಾ ನಿವಾಸದಲ್ಲಿ ನಡೆಯಿತು. ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಸಂಸ್ಥೆಯ ಸಲಹಾ ಸಮಿತಿ ಸದಸ್ಯ ನ್ಯಾಯವಾದಿ

ಉಳ್ಳಾಲ: ಡ್ರೈನೇಜ್ ನೀರಿನಲ್ಲಿ ತೊಕ್ಕೊಟ್ಟು ರಿಕ್ಷಾ ಚಾಲಕರ ಬದುಕು- ಪ್ರತಿಭಟನೆಗೆ ನಿರ್ಧಾರ

ಉಳ್ಳಾಲ: ಉಳ್ಳಾಲ ತಾಲೂಕಿನಲ್ಲೇ ಅತಿ ಹೆಚ್ಚು ರಿಕ್ಷಾ ಚಾಲಕರಿರುವ ತೊಕ್ಕೊಟ್ಟು ರಿಕ್ಷಾ ಚಾಲಕರು ಕಳೆದ ಎರಡೂವರೆ ತಿಂಗಳಿನಿಂದ ಸಂಡಾಸು ನೀರಿನ ಮೇಲೆಯೇ ನಿಂತು ದುಡಿಯುವ ಸ್ಥಿತಿ ನಿರ್ಮಾಣವಾಗಿದೆ. ಖಾಸಗಿ ಕಟ್ಟಡದ ಮಾಲೀಕರು ತ್ಯಾಜ್ಯ ನೀರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸದೆ ಸಮಸ್ಯೆ ನಿರ್ಮಾಣವಾಗಿದೆ. ದಿನದಲ್ಲಿ ಮಕ್ಕಳು, ಮಹಿಳೆಯರು, ವಿದ್ಯಾರ್ಥಿಗಳು, ವೃದ್ಧರು ಸೇರಿದಂತೆ ಲಕ್ಷದಷ್ಟು ಮಂದಿ ನಡೆದುಕೊಂಡು ಹೋಗುವ ರಸ್ತೆಯಲ್ಲೇ ತ್ಯಾಜ್ಯ ನೀರು ಹರಿದಾಡಿದರೂ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

ಮೂಡುಬಿದಿರೆ : 2022-23 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಮೂಡುಬಿದಿರೆ ತಾಲೂಕಿನ ಪುತ್ತಿಗೆ ಗ್ರಾಮ ಪಂಚಾಯತ್ ಮೊದಲ ಬಾರಿ ಆಯ್ಕೆಯಾಗಿದೆ. ತಾಲೂಕಿನ ಎರಡನೇ ಅತೀ ದೊಡ್ಡ ಗ್ರಾಮವಾಗಿರುವ ಪುತ್ತಿಗೆ ಗ್ರಾಮ ಪಂಚಾಯತ್ ಜನರ ಗುಣಮಟ್ಟವನ್ನು ಹೆಚ್ಚಿಸಲು ಕೈಗೊಂಡ ಕಾರ್ಯಕ್ರಮಗಳು, ಹಣಕಾಸಿನ ವಿಷಯದಲ್ಲಿ ಶಿಸ್ತುಬದ್ಧ ಕ್ರಮಗಳು, ಮೂಲ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ, ಉತ್ತಮ ಆಡಳಿತ, ಗ್ರಾ.ಪಂಚಾಯತ್ ಸೇವೆಗಳನ್ನು ಕ್ಲಪ್ತ ಸಮಯದಲ್ಲಿ ಗ್ರಾಮದ ನಾಗರಿಕರಿಗೆ

ಕಾಸರಗೋಡು: ಅ.1ರಂದು ಶೌರ್ಯ ಜಾಗರಣ ರಥಯಾತ್ರೆ ಮತ್ತು ಬೈಕ್ ರ್‍ಯಾಲಿ

ವಿಶ್ವಹಿಂದೂ ಪರಿಷತ್ ಬಜರಂಗದಳ, ಮಾತೃಶಕ್ತಿ ಮತ್ತು ದುರ್ಗಾವಾಹಿನಿ , ಪ್ರೇರಣಾ ಜಿಲ್ಲಾ ಕಾರ್ಯಾಲಯ ಹೊಸಂಗಡಿ ಇವರ ಸಹಯೋಗದಲ್ಲಿ ಶೌರ್ಯ ಜಾಗರಣ ರಥಯಾತ್ರೆ ಮತ್ತು ಬೈಕ್ ರ್‍ಯಾಲಿಯು ಅಕ್ಟೋಬರ್ 1ರಂದು ಬೆಳಿಗ್ಗೆ 10.30 ಕ್ಕೆ ಮಂಜೇಶ್ವರದ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ. ಬೆಳಿಗ್ಗೆ ೮.೩೦ ರಿಂದ ವಿವಿದ ಭಜನಾ ತಂಡಗಳಿಂದ ಕುಣಿತ ಭಜನೆ ಮತ್ತು ನಂತರ ೧೦.೩೦ರಿಂz ನಡೆಯಲಿರುವ ಸಭಾಕಾರ್ಯಕ್ರಮವನ್ನು ಧಾರ್ಮಿಕ ಮುಂದಾಳು ರವೀಶ್ ತಂತ್ರಿ

ಹಿಂದಿ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿಗೆ ದಡ್ಡಲಕಾಡು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ರಮಾನಂದ ಆಯ್ಕೆ

ಬಂಟ್ವಾಳ: ಹಿಂದಿ ಶಿಕ್ಷಕರಿಗೆ ಕೊಡುವ ರಾಜ್ಯ ಹಿಂದಿ ಶಿಕ್ಷಕ ರತ್ನ ಪ್ರಶಸ್ತಿಗೆ ಸರಕಾರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ದಡ್ಡಲ ಕಾಡು ಹಿಂದಿ ಭಾಷಾ ಶಿಕ್ಷಕ ರಮಾನಂದ ಇವರು ಆಯ್ಕೆಯಾಗಿರುತ್ತಾರೆ. ಹಿಂದಿ ವಿಷಯದ ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ, ತಾಲೂಕು ಹಾಗೂ ಜಿಲ್ಲಾ ಸಂಘದ ಪದಾಧಿಕಾರಿಗಳಾಗಿ, ಹಿಂದಿ ಸಂಪನ್ಮೂಲ ಕ್ರೋಡಿಕರಣ ಹಾಗೂ ಪುಸ್ತಕ ರಚನಾ ಕಾರ್ಯದಲ್ಲಿ ತೊಡಗಿಸಿಕೊಂಡು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಪ್ರಮಾಣಿಕ ಪ್ರಯತ್ನ ಹಾಗೂ ಕರ್ತವ್ಯ

ಸುರತ್ಕಲ್: ಸೆ.29 ರಂದು ಬಿಎಂಆರ್ ಗೋಲ್ಡ್ & ಡೈಮಂಡ್ಸ್‌ನ ನೂತನ ಮಳಿಗೆ ಶುಭಾರಂಭ

ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾಗಿರುವ ಬಿಎಂಆರ್ ಗೋಲ್ಡ್ ಆಂಡ್ ಡೈಮಂಡ್ಸ್ ನ ನೂತನ ಮಳಿಗೆಯು ಸೆ.29 ರಂದು ಸಂಜೆ 5 ಗಂಟೆಗೆ ಕೃಷ್ಣಾಪುರದ ಬಿಎಂಆರ್ ಹೆಡ್ ಆಫೀಸ್‌ನಲ್ಲಿ ಶುಭಾರಂಭಗೊಳ್ಳಲಿದೆ ಎಂದು ಬಿಎಂಆರ್ ಗ್ರೂಪ್‌ನ ಮ್ಯಾನೇಜಿಂಗ್ ಡೈರೆಕ್ಟರ್ ದಾವೂದ್ ಹಕೀಮ್ ತಿಳಿಸಿದ್ದಾರೆ. ನೂತನ ಮಳಿಗೆಯನ್ನು ಪನಕ್ಕಾಡ್‌ನ ಸಯ್ಯದ್ ಫೈನಜ್ ಆಲಿ ಶಿನಾಬ್ ತಂಗಳ್ ಹಾಗೂ ಕೃಷ್ಣಾಪುರದ ಖಾಝಿ ಆಲ್ ಹಾಜಿ ಇ.ಕೆ. ಇಬ್ರಾಹಿಂ ಮದನಿ ಅವರು ಉದ್ಘಾಟಿಸಲಿದ್ದಾರೆ. ವಿಧಾನಸಭಾ ಸ್ಪೀಕರ್

ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರ ಸಂಘ ನಿ.ಮಹಾಸಭೆ; 6.70 ಕೋಟಿ ವ್ಯವಹಾರ, 24.65 ಲಕ್ಷ ನಿವ್ವಳಲಾಭ

ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರ ಸಂಘ ನಿ. ಇದರ ಮಹಾಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ ಸೆ.24 ರಂದು ನೆಲ್ಯಾಡಿ ಸಿ ಎ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು.ಅಧ್ಯಕ್ಷತೆಯನ್ನು ಸಹಕಾರಿ ಸಂಘದ ಅಧ್ಯಕ್ಷರಾದ ಉಷಾ ಅಂಚನ್ ಅವರು ವಹಿಸಿ ಸಂಘವು ಒಂದು ವರ್ಷದಲ್ಲಿ 6.70 ಕೋಟಿ ವ್ಯವಹಾರ ನಡೆಸಿದೆ ಹಾಗೂ 24.65 ಲಕ್ಷ ನಿವ್ವಳ ಲಾಭವನ್ನು ಗಳಿಸಿದೆ ಎಂದು ತಿಳಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಚೈತನ್ಯ ಅವರು 2022-23ನೇ ಸಾಲಿನ ಆರು ತಿಂಗಳುಗಳ ಕಾಲ

ಸ್ಥಳದಲ್ಲಿ ನಿಲ್ಲಿಸಿದ್ದ ಪಿಕ್ ಆಪ್ ಟೆಂಪೊಕ್ಕೆ ಬಸ್ಸು ಡಿಕ್ಕಿ ಒಬ್ಬ ಮೃತ್ಯು

ಪೆರ್ಲ : ಅಡಿಕೆ ಸಸಿಗಳನ್ನು ಹೇರಿಕೊಂಡು ಬರುವ ನಡುವೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಪಿಕ್ ಆಪ್ ಟೆಂಪೊಕ್ಕೆ ಕರ್ನಾಟಕ ಸಾರಿಗೆ (ಕೆ ಎಸ್ ರ್ ಟಿ ಸಿ) ಬಸ್ಸು ಡಿಕ್ಕಿಯಾಗಿ ಪಿಕ್ ಆಪ್ ಚಾಲಕ ದಾರುಣವಾಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಇಂದು (ಮಂಗಳವಾರ) ಬೆಳಗ್ಗೆ 9.15 ಗಂಟೆಯ ಸುಮಾರಿಗೆ ಅಡ್ಕಸ್ಥಳ ಗಡಿ ಭಾಗದಲ್ಲಿ ಈ ಅಪಘಾತ ಸಂಭವಿಸಿದ್ದು ಮಣಿಯಂಪಾರೆ ನಿವಾಸಿ ಮುಸ್ತಾಫ ಪಿ.ಎ. ಪಜ್ಜಾನ (43) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಎದುರಿನಿಂದ ಬಂದ ಕಾರೊಂದನ್ನು

ಮಂಗಳೂರು: ಸೆ.29ರಂದು ಮುದ್ರ ಹೌಸ್‍ನ ಕಟ್ಟಡ ಲೋಕಾರ್ಪಣೆ

ಮುದ್ರಾ ಸಂಸ್ಥೆಯು ಪ್ರಿಂಟಿಂಗ್ ಕ್ಷೇತ್ರದಲ್ಲಿ ಕಳೆದ 28 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಇದೀಗ ಹೊಸತನದೊಂದಿಗೆ ಸಂಸ್ಥೆ ಆರಂಭಗೊಳ್ಳುತ್ತಿದೆ. ಮಂಗಳೂರಿನ ಅಳಕೆ ನಾಗಬ್ರಹ್ಮ ದೇವಸ್ಥಾನದ ಸಮೀಪದಲ್ಲಿ ಮುದ್ರ ಹೌಸ್‍ನ ಕಟ್ಟಡ ನಿರ್ಮಾಣಗೊಂಡಿದ್ದು, ಇದರ ಉದ್ಘಾಟನಾ ಸಮಾರಂಭವು ಸೆಪ್ಟಂಬರ್ 29ರಂದು ನಡೆಯಲಿದೆ. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಮುದ್ರಾ ಪ್ರಿಂಟಿಂಗ್ ಸಂಸ್ಥೆಯು ಕಳೆದ 28

ಮಂಗಳೂರು: ಸೆ.30ರಿಂದ ಅ.2ರ ವರೆಗೆ ಬಿಎನ್‌ಐ ಮಂಗಳೂರು ಬಿಗ್ ಬ್ರ್ಯಾಂಡ್ಸ್ ಎಕ್ಸ್‌ಪೋ- 2023

ಬಿಎನ್‌ಐ ಮಂಗಳೂರು ವತಿಯಿಂದ ಬಿಗ್ ಬ್ರ್ಯಾಂಡ್ ಎಕ್ಸ್‌ಪೋ-2023 ಸೆಪ್ಟಂಬರ್ 30ರಿಂದ ಅಕ್ಟೋಬರ್ 2ರ ವರೆಗೆ ನಗರದ ಟಿಎಮ್‌ಎಪೈ ಕನ್ವೆನ್ಷನಲ್ ಸೆಂಟರ್‌ನಲ್ಲಿ ಆಯೋಜಿಸಲಾಗಿದೆ ಎಂದು ಬಿಎನ್‌ಐ ಮಂಗಳೂರಿನ ಎಕ್ಸಿಕ್ಯೂಟಿವ್ ಡೆರೆಕ್ಟರ್ ಗಣೇಶ್ ಎನ್ ಶರ್ಮ ತಿಳಿಸಿದ್ದಾರೆ. ಅವರು ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೊಷ್ಠಿ ನಡೆಸಿ ಮಾಹಿತಿ ನೀಡಿದರು. ಬಿಗ್ ಬ್ರ್ಯಾಂಡ್ಸ್ ಎಕ್ಸ್‌ಪೋ ವನ್ನು ಕಳೆದ ಬಾರಿ 2 ದಿನಗಳ ಕಾಲ ಪ್ರದರ್ಶನ ಆಯೋಜಿಸಲಾಗಿತ್ತು. ಆದರೆ ಈ ಬಾರಿ 3