Home Archive by category Fresh News (Page 22)

ಸಿಎಎ ಜಾರಿ ಬಿಜೆಪಿಯ ಚುನಾವಣಾ ಗಿಮಿಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ

ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಸರಕಾರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ರಾಜ್ಯದಲ್ಲಿ ಪೌರತ್ವ ಕಾಯ್ದೆ ಜಾರಿ ಬಗ್ಗೆ

ತೆಂಕಮಿಜಾರು ಗ್ರಾ.ಪಂ: ವಿಶೇಷ ಚೇತನರಿಗೆ ಚೆಕ್ ವಿತರಣೆ

ಮೂಡುಬಿದಿರೆ: ತೆಂಕಮಿಜಾರು ಗ್ರಾ.ಪಂಚಾಯತ್ ನಲ್ಲಿ ಮಂಗಳವಾರ 2023-24ನೇ ಸಾಲಿನ ವಿಶೇಷ ಚೇತನರ ಸಮನ್ವಯ ಗ್ರಾಮಸಭೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.ಗ್ರಾ.ಪಂ.ಅಧ್ಯಕ್ಷೆ ಶಾಲಿನಿ ಸಾಲ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮಸಭೆಯಲ್ಲಿ 49 ಮಂದಿ ವಿಶೇಷಚೇತನರಿಗೆ ತಲಾ 2000ದಂತೆ ರೂ 98000 ಚೆಕ್ಕನ್ನು ವಿತರಿಸಲಾಯಿತು.ವೆನ್ ಲಾಕ್ ಆಸ್ಪತ್ರೆಯ ಎಂಆರ್ ಡಬ್ಲ್ಯೂ ಜಯಪ್ರಕಾಶ್ ವಿಶೇಷ ಚೇತನರಿಗೆ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.ಪಂಚಾಯತ್

ವಲಸೆ ಮೂಲ ಕಷ್ಟ ಕಷ್ಟ

2019ರ ಲೋಕ ಸಭಾ ಚುನಾವಣೆ ಬಳಿಕದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು 2024ರ ಲೋಕ ಸಭಾ ಚುನಾವಣೆಯ ಹೊತ್ತಿನಲ್ಲಿ ಜಾರಿ ಎಂದು ಪ್ರಕಟಿಸಿರುವ ಒಕ್ಕೂಟ ಸರಕಾರದ ಉದ್ದೇಶ ಸ್ಪಷ್ಟ. ನಾನು ಮಾತ್ರ ಹಿಂದೂಗಳ ಚಾಂಪಿಯನ್ ಮತ್ತು ಮುಸ್ಲಿಂ ವಿರೋಧಿ ಎಂದು ಬಿಂಬಿಸುವುದು. ಆಮೂಲಕ ಮತ ಒಗ್ಗೂಡಿಸುವ ಉದ್ದೇಶ ಇದರಲ್ಲಿದೆ. ಇದನ್ನು ಹೇಳಲು ಕಾರಣವಿದೆ. ಪಾಕಿಸ್ತಾನ, ಬಾಂಗ್ಲಾದೇಶ, ಅಫಘಾನಿಸ್ತಾನಗಳಿಂದ ಪೌರತ್ವ ಬಯಸಿ ಬರುವ ಹಿಂದೂ, ಜೈನ, ಬೌದ್ಧ, ಕ್ರಿಶ್ಚಿಯನರಿಗೆ ಪೌರತ್ವ

ಒಟಿಟಿಯಲ್ಲಿ ಮಂಕುಭಾಯ್ ಫಾಕ್ಸಿ ರಾಣಿ ಸಿನಿಮಾ

ಬಿಗ್‌ಬಾಸ್ ಸೀಸನ್ 9ರ ವಿಜೇತ ನಟ ರೂಪೇಶ್ ಶೆಟ್ಟಿ ಅಭಿನಯದ ಮಂಕು ಭಾಯ್ ಫಾಕ್ಸಿ ರಾಣಿ ಕನ್ನಡ ಸಿನಿಮಾ ಇದೀಗ ಒಟಿಟಿಯಲ್ಲಿ ಲಭ್ಯವಿದೆ. ಅಮೆಜಾನ್ ಪ್ರೈಮ್‌ನಲ್ಲಿ ಸಿನಿ ಪ್ರೇಕ್ಷಕರು ಸಿನಿಮಾ ವೀಕ್ಷಿಸಲು ಅವಕಾಶ ಕಲ್ಪಿಸಿದ್ದಾರೆ. ಕಳೆದ ವರ್ಷ ಸಿನಿಮಾ ಮಂದಿರದಲ್ಲಿ ಬಿಡುಗಡೆಗೊಂಡು ಪ್ರೇಕ್ಷಕರ ಮನಗೆದ್ದಿದ್ದ ಮಂಕು ಭಾಯ್ ಫಾಕ್ಸಿ ರಾಣಿ ಸಿನಿಮಾ ಓಟಿಟಿ ಪ್ಲಾಟ್ ಪಾಮ್‌ನಲ್ಲಿ ಲಭ್ಯವಿದೆ. ಇದೀಗ ಅಮೆಜಾನ್ ಪ್ರೈಮ್‌ನಲ್ಲಿ ವೀಕ್ಷಿಸಲು ಅವಕಾಶವಿದೆ.ನಟ ರೂಪೇಶ್ ಶೆಟ್ಟಿ

ಪಡುಬಿದ್ರಿ: ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಮಾರಿಗುಡಿ: ಡಾ.ರಾಜಶೇಖರ್ ಕೋಟ್ಯಾನ್ ಭೇಟಿ: ಶಿಲಾಸ್ತಂಭದ ವೆಚ್ಚ ಭರಿಸುವ ಭರವಸೆ

ಉಡುಪಿ: ಕಾಪು ಹೊಸ ಮಾರಿಗುಡಿಯ ಜೀರ್ಣೋದ್ಧಾರ ಕಾರ್ಯವು ಭರದಿಂದ ಸಾಗುತ್ತಿದ್ದು,ಹೊಸ ಮಾರಿಗುಡಿಗೆ ಮಂಗಳವಾರದಂದು ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಅಧ್ಯಕ್ಷರಾದ ಡಾ. ರಾಜ್ ಶೇಖರ್ ಕೋಟ್ಯಾನ್ ರವರು ಸಮಾಜದ ಮುಖಂಡರೊಂದಿಗೆ ಭೇಟಿ ನೀಡಿ ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ಕೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿ ತಮ್ಮ ಸಮಾಜಕ್ಕೆ ಮೀಸಲಿಟ್ಟ ಒಂದು ಕೋಟಿ ವೆಚ್ಚದ ಬೃಹತ್ ಶಿಲಾ ಸ್ತಂಭದ ವೆಚ್ಚವನ್ನು ತಮ್ಮ ಸಮಾಜ ಬಾಂಧವರಿಂದಲೇ ಭರಿಸಿ ಶೀಘ್ರದಲ್ಲೇ ನೀಡುವುದಾಗಿ

ಮೂಡುಬಿದಿರೆ: ರೈತರಿಂದ ಪ್ರತಿಭಟನಾ ಜಾಥಾ: ಅಡಿಕೆ ಆಮದು ನಿಷೇಧ, ರೂ. 450ಕನಿಷ್ಟ ಬೆಂಬಲ ಬೆಲೆಗೆ ಆಗ್ರಹ

ಮೂಡುಬಿದಿರೆ : ವಿದೇಶಿ ಅಡಿಕೆ ಆಮದನ್ನು ನಿಷೇಧಿಸಬೇಕು, ತೆಂಗು ಖರೀದಿ ಕೇಂದ್ರವನ್ನು ಪ್ರಾರಂಭಿಸಬೇಕು ಮತ್ತು ಹೊಸ ಅಡಿಕೆಗೆ ಪ್ರತೀ ಕೆ.ಜಿಗೆ 450 ರೂಪಾಯಿ ಬೆಂಬಲ ಬೆಲೆಯನ್ನು ಘೋಷಿಸಬೇಕೆಂದು ಒತ್ತಾಯಿಸಿ ಭಾರತೀಯ ಕಿಸಾನ್ ಸಂಘದ ಮೂಡುಬಿದಿರೆ ತಾಲೂಕು ಘಟಕದ ವತಿಯಿಂದ ಮೂಡುಬಿದಿರೆಯಲ್ಲಿ ಬೃಹತ್ ಪ್ರತಿಭಟನಾ ಜಾಥ ನಡೆಯಿತು. ಬಾರತೀಯ ಕಿಸಾನ್ ಸಂಘದ ರಾಜ್ಯ ಕಾರ್ಯದರ್ಶಿ ನಾರಾಯಣಸ್ವಾಮಿ ಮಾತನಾಡಿ, ರಾಜಕಾರಣಿಗಳು, ವ್ಯಾಪಾರಿಗಳು, ದಲ್ಲಾಳಿಗಳಿಂದ ರೈತರು

ಕುಂದಾಪುರ: ಕೊಲ್ಲೂರು ದೇವಳಕ್ಕೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಭೇಟಿ

ಕುಂದಾಪುರ: ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಕೊಲ್ಲೂರು ಶ್ರೀ ಮೂಕಾಂಬಿಕ ದೇವಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕುಟುಂಬ ಸಮೇತರಾಗಿ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಳಿಕ ವೀರಭದ್ರ ದೇವರಿಗೆ ಕಾಯಿ ಸಮರ್ಪಿಸಿದದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕೆ ಎಸ್ ಈಶ್ವರಪ್ಪ, ಯಾವಾಗಲೂ ಕೊಲ್ಲೂರಿಗೆ ಆಗಮಿಸಿತಾಯಿಯ ದರ್ಶನ ಪಡೆಯುತ್ತಿರುತ್ತೇನೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನನ್ನ ಮಗ ಕಾಂತೇಶ್ ಹಾವೇರಿಯಿಂದ

ಪುತ್ತೂರು : ನಿವೃತ್ತ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ ನಿಧನ

ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲರಾದ ಇಂಜಿನಿಯರ್ ಗೋಪಿನಾಥ್ ಶೆಟ್ಟಿ(60)ಯವರು ದಿಡೀರ್ ಅಸ್ವಸ್ಥಗೊಂಡು ಮಾ 13ರ ನಸುಕಿನ ಜಾವ 2 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ. ರಾತ್ರಿ ಊಟ ಮಾಡಿ ಮಲಗಿದ ಅವರ ಆರೋಗ್ಯದಲ್ಲಿ ನಸುಕಿನ ಜಾವ 2 ಗಂಟೆ ಸುಮಾರಿಗೆ ಏರು ಪೇರು ಉಂಟಾಗಿದ್ದು, ಬಳಿಕ ಕೆಲವೇ ಕ್ಷಣಗಳಲ್ಲಿ ನಿಧನ ಹೊಂದಿರುವುದಾಗಿ ಅವರ ಆಪ್ತ ವಲಯದವರು ತಿಳಿಸಿದ್ದಾರೆ.ನಿನ್ನೆ ರಾ ತ್ರಿಯವರೆಗೂ ಕ್ರಿಯಾಶೀಲರಾಗಿ ವಿವಿಧ ಚಟುವಟಿಕೆಗಳಲ್ಲಿ

ಮೂಡುಬಿದಿರೆ : ಶಿರ್ತಾಡಿ ಕಜೆ- ಹೊಸಂಗಡಿ ಸೇತುವೆ ಲೋಕಾರ್ಪಣೆ

ಮೂಡುಬಿದಿರೆ : ಗ್ರಾಮಸ್ಥರ ಬಹುಕಾಲದ ಬೇಡಿಕೆಯಾದ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಿರ್ತಾಡಿ ಕಜೆ ಗುಂಡಡಪ್ಪು – ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಹೊಸಂಗಡಿಗೆ ಸಂಪರ್ಕ ಕಲ್ಪಿಸುವ ಕೇಂದ್ರೀಯ ರಸ್ತೆ ನಿಧಿಯಿಂದ ರೂ.5 ಕೋಟಿ ವೆಚ್ಚದ ತಡೆಗೋಡೆ, ಕೂಡು ರಸ್ತೆ ಸಹಿತ ನಿರ್ಮಿಸಲಾದ ಸೇತುವೆಯನ್ನು ಸಂಸದ ನಳಿನ್ ಕುಮಾರ್ ಕಟೀಲು ಅವರು ಲೋಕಾರ್ಪಣೆಗೊಳಿಸಿದರು. ನಂತರ ಮಾತನಾಡಿದ ಸಂಸದ ಕಟೀಲ್ ದ.ಕ.ಜಿಲ್ಲೆಗೆ ಗ್ರಾಮ ಸಡಕ್ ಯೋಜನೆಯ ಮೂಲಕ 400 ಕೋಟಿ ರೂ.

ನೆಲ್ಯಾಡಿಯ ಶಿಕ್ಷಕಿ ಮೇರಿ ಜಾನ್ ಕಾರ್ಮಲ್ ಭವನ್ ಗೆ ಕರ್ನಾಟಕ ಜಾನಪದ ಪರಿಷತ್ ಪ್ರಶಸ್ತಿ

ಪ್ರತಿಷ್ಟಿತ ಕರ್ನಾಟಕ ಜಾನಪದ ಪರಿಷತ್ ಪ್ರಶಸ್ತಿಯನ್ನು ಹಿರಿಯ ಶಿಕ್ಷಕಿ ಹಾಗೂ ಜಾನಪದ ಕಲಾವಿದೆ ಮೇರಿ ಜಾನ್ ಗೆ ಮಂಗಳೂರಿನಲ್ಲಿ ನಡೆದ ಜಾನಪದ ಪರಿಷತ್ ನ ಕಾರ್ಯಕ್ರಮ ದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇವರು ನೆಲ್ಯಾಡಿ ಯ ಪಿ ಎಂ ಶ್ರೀ ಉನ್ನತ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಶಿಕ್ಷಕಿಯಾಗಿದ್ದಾರೆ. ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಶ್ರೀಮತಿ ಮೇರಿ ಜಾನ್ ಅವರನ್ನು ಅಭಿನಂದಿಸಿ ಚರ್ಚ್ ನ ಧರ್ಮಗುರುಗಳಾದ ಫಾ.ಶಾಜಿ ಮ್ಯಾಥ್ಯು ಶಿಕ್ಷಣ