ಮಂಗಳೂರಿನ ತೋಟ ಬೆಂಗ್ರೆ ಪರಿಸರದ ಜನರಲ್ ಸ್ಟೋರ್ ಗೆ ಬೆಂಕಿಸರಿಸುಮಾರು 2 ಘಂಟೆ ರಾತ್ರಿ ಜನರಲ್ ಸ್ಟೋರ್ಗೆ ಬೆಂಕಿ ಕಾಣಿಸಿದ್ದು ಇದ್ದನ್ನು ಗಮನಿಸಿದ್ದ ಸ್ಥಳೀಯರು ಕದ್ರಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ತಮ್ಮಿಂದ ಆಗುವಷ್ಟು ಸ್ಥಳಿಯರೇ ನಂದಿಸುವಲ್ಲಿ ಕಾರ್ಯದಲ್ಲಿ ತೊಡಗಿದ್ದರು. ಬಳಿಕ ಬಂದ ಕದ್ರಿ ಅಗ್ನಿಶಾಮಕ ದಳದ ಅಧಿಕಾರಿಗಳು ಸಿಬ್ಬಂದಿಗಳು ಜೊತೆ ಸೇರಿ
ಕೊಣಾಜೆ: ಬೋಳಿಯಾರ್ ನ ಕುಚುಗುಡ್ಡೆಯಲ್ಲಿ ಮಗಳ ಮದುವೆಯ ದಿನದಂದೇ ತಂದೆ ಹೃದಯಘಾತಗೊಂಡು ಮೃತಪಟ್ಟ ಘಟನೆ ಸೋಮವಾರ ಮುಂಜಾವು ಸಂಭವಿಸಿದೆ.ಮೃತಪಟ್ಟ ವ್ಯಕ್ತಿಯನ್ನು ಬೋಳಿಯಾರ್ ನ ಕುಕ್ಕೋಟ್ಟು ಕುಚುಗುಡ್ಡೆಯ ಹಸನಬ್ಬ (60) ಎಂದು ಗುರುತಿಸಲಾಗಿದೆ. ಹಸನಬ್ಬ ಅವರ ಮಗಳಿಗೆ ಕಾಸರಗೋಡುವಿನ ಯುವಕನೊಂದಿಗೆ ಸೋಮವಾರದಂದು ಹೊಸಂಗಡಿಯ ಸಭಾಂಗಣವೊಂದರಲ್ಲಿ ಮದುವೆ ನಿಗಧಿಯಾಗಿತ್ತು. ದುರದೃಷ್ಟವಶಾತ್ ಭಾನುವಾರಂದು ಹಸನಬ್ಬರಿಗೆ ಸೋಮವಾರ ಮುಂಜಾವಿನ 4 ಗಂಟೆಯ ವೇಳೆಗೆ ತೀವ್ರ
ಕ್ಯಾನ್ಸರ್ ರೋಗದ ಕುರಿತು ಜಾಗೃತಿ ಮೂಡಿಸಲು ನಾವೆಲ್ಲ ಒಂದಾಗಿ ಹೊರೋಡೋಣ ಎಂಬ ಘೋಷ ವಾಕ್ಯದೊಂದಿಗೆ ಮೇ 15, 2023 ರ ಸೋಮವಾರದಂದು, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಕ್ಯಾನ್ಸರ್ ಶಸ್ತ್ರ ಚಿಕಿತ್ಸಾ ವಿಭಾಗವು ಮಾಹೆ ಮಣಿಪಾಲ ಮತ್ತು ಟಾಟಾ ಮೆಮೋರಿಯಲ್ ಆಸ್ಪತ್ರೆ ಮುಂಬೈ ತಂಡಗಳ ಸೌಹಾರ್ದ ಕ್ರಿಕೆಟ್ ಪಂದ್ಯ 14ನೇ ಮೇ ಯಂದು ಏರ್ಪಡಿಸಲಾಗಿತ್ತು. ಮಾಹೆ ಮಣಿಪಾಲದ ವೈದ್ಯರುಗಳ ತಂಡದ ನೇತೃತ್ವವನ್ನು ಮಾಹೆ ಉಪ ಕುಲಪತಿಗಾಳದ ಲೆಫ್ಟಿನೆಂಟ್ ಜನರಲ್ (ಡಾ) ಎಂ ಡಿ ವೆಂಕಟೇಶ್
ಕುಲಶೇಖರ, : ಮಂಗಳೂರು ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಆಡಳಿತದಲ್ಲಿರುವ ಇತಿಹಾಸ ಪ್ರಸಿದ್ಧ ಕುಲಾಲ ಸಮುದಾಯದ ಕುಲದೇವರಾದ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನವು ಶಿಲಾಮಯವಾಗಿ ರೂ. ಹತ್ತು ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡು ಬ್ರಹ್ಮಕಲಶದ ಸಂಭ್ರಮದಲ್ಲಿದ್ದು, ಇದಕ್ಕೆ ಮಹಾದಾನಿಗಳ ಕೊಡುಗೆ ಅವಿಸ್ಮರಣೀಯವಾಗಿದೆ. ಸಾಕಷ್ಟು ದಾನಿಗಳು ದೇಗುಲದ ಪುನರ್ ನಿರ್ಮಾಣದಲ್ಲಿ ಕೈಜೋಡಿಸಿದ್ದು, ಅವರೆಲ್ಲರಿಗೂ ನಮ್ಮ ಆರಾಧ್ಯ ಕುಲದೇವರು ಆಶೀರ್ವದಿಸಲಿ
ದ.ಕ.ಜಿಲ್ಲೆಯ ಕೊನೆಯ ಜಾತ್ರೆ ಶಿಶಿಲ ಜಾತ್ರೆ. ಇಲ್ಲಿಯ ಕಪಿಲಾ ನದಿಯಲ್ಲಿರುವ ದೇವರ ಮೀನು ನೋಡಲು ಸಾವಿರಾರು ಪ್ರವಾಸಿಗರು ಆಗಮಿಸಿತ್ತಾರೆ. ಸರ್ವ ರೋಗ ಪರಿಹಾರಕ್ಕಾಗಿ ಇಲ್ಲಿಯ ದೇವರ ಮೀನಿಗೆ ಆಹಾರ ಸಮರ್ಪಿಸುತ್ತಾರೆ. ಸ್ವಯಂಭೂ ಶಿವ ಇಲ್ಲಿಯ ಆರಾದ್ಯ ದೇವರು. ಮತ್ಸ್ಯ ವಿಶ್ಣುವಿನ ಅವತಾರ . ಆದುದರಿಂದ ಇದು ಹರಿ ಹರ ಸಂಗಮ ಪುಣ್ಯಕ್ಷೇತ್ರ.ಮುಂದಿನ ಒಂಬತ್ತು ದಿನ ಜಾತ್ರಾ ಕಾರ್ಯಕ್ರಮ ಜರಗಲಿದೆ. ಮೆ.19 ರಂದು ಶ್ರೀ ದೇವರ ಮಹಾರಥೊಸ್ಯವ ಜರಗಲಿದೆ. ಧ್ವಜಾರೋಹಣ ದಿನ
ಪುತ್ತೂರು: ಪುತ್ತೂರು ಬಸ್ ನಿಲ್ದಾಣದ ಬಳಿ ಬಿಜೆಪಿ ಮುಖಂಡರಭಾವ ಚಿತ್ರ ಇರುವ ಬ್ಯಾನರನ್ನು ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಿರುವ ಘಟನೆ ನಡೆದಿದ್ದು ಇದು ಯಾರ ಕೃತ್ಯ ಎಂಬುದನ್ನು ಪೊಲೀಸ್ ಇಲಾಖೆ ತನಿಖೆ ಮಾಡಬೇಕು. ಸುತ್ತಮುತ್ತಲಿರುವ ಸಿ ಸಿ ಕೆಮರಾ ಪರಿಶೀಲಿಸಿ ಆರೋಪಿಗಳನ್ನು ಪೊಲೀಸರು ಪತ್ತೆ ಮಾಡಬೇಕು. ಘಟನೆಯ ಖಂಡಿಸಿ ಬಿಜೆಪಿಯವರು ನಡೆಸಿದ ಪ್ರತಿಭಟನೆಯಲ್ಲಿ ಮಾಜಿ ಶಾಸಕರು ಪರೋಕ್ಷವಾಗಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಗೂಬೆ ಕೂರಿಸುವ ಯತ್ನವನ್ನು ಮಾಡಿದ್ದು
ಪುತ್ತೂರು: ಬಿಜೆಪಿ ನಾಯಕರಿಬ್ಬರಾದ, ರಾಜ್ಯ ಬಿಜೆಪಿ ಅಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರದ ಮಾಜಿ ಸಚಿವ ಬೆಂಗಳೂರು ಉತ್ತರದ ಹಾಲಿ ಸಂಸದ ಡಿ ವಿ ಸದಾನಂದ ಗೌಡ ಅವರಿಗೆ ಶ್ರದ್ಧಾಂಜಲಿ ಕೋರಿ ಪುತ್ತೂರು ಬಸ್ ನಿಲ್ದಾಣದ ಬಳಿ ಬ್ಯಾನರ್ ಅಳವಡಿಸಿರುವುದನ್ನು ವಿರೋಧಿಸಿ, ಕೃತ್ಯ ಎಸಗಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಪುತ್ತೂರು ಬಿಜೆಪಿಯಿಂದ ಪುತ್ತೂರು ನಗರ ಪೆÇಲೀಸ್ ಠಾಣೆಗೆ ದೂರು ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ
ಯೋಧ ಮೋಷನ್ ಬ್ಯಾನರ್ ಅಡಿಯಲ್ಲಿ ಸಾಯಿ ಕೃಷ್ಣ ಕುಡ್ಲ ಅವರು ಬರೆದು ನಿರ್ದೇಶಿಸಿರುವ ತುಳು ಚಲನಚಿತ್ರ ‘ಗೋಸ್ಮರಿ ಫ್ಯಾಮಿಲಿ’ ತುಳು ಸಿನಿಮಾ ಮೇ 18ರಂದು ಕರಾವಳಿಯಾದ್ಯಂತ ಚಿತ್ರಮಂದಿರದಲ್ಲಿ ಬಿಡುಗಡೆಯಾಗಲಿದೆ. ತುಳುವಿನ ಬಹುನಿರೀಕ್ಷಿತ ಸಿನಿಮಾ ಗೋಸ್ಮರಿ ಫ್ಯಾಮಿಲಿ ಮೇ 18ರಂದು ತೆರೆ ಮೇಲೆ ಬರಲಿದೆ. ಇಷ್ಟು ದಿನ ಕಾತರದಿಂದ ಕಾಯುತ್ತಿದ್ದ ಸಿನಿ ಪ್ರೇಕ್ಷಕರು ಗೋಸ್ಮರಿ ಫ್ಯಾಮಿಲಿಯ ಸಿನಿಮಾವನು ಮೇ 18ರಿಂದ ವೀಕ್ಷಿಸಲಿದ್ದಾರೆ. ಶಕುಂತಲಾ ಆಂಚನ್
ಚುನಾವಣೆಯಲ್ಲಿ ಕಾರ್ಯಕರ್ತರು ಒಂದು ಪಕ್ಷದ ಪರ ಮತ್ತು ವಿರುದ್ದ ಕೆಲಸ ಮಾಡುವುದು ಸಾಮಾನ್ಯ ಚಟುವಟಿಕೆ ಆದರೆ ನನ್ನ ವಿರುದ್ಧ ಕೆಲಸ ಮಾಡಿದವರನ್ನು ನೋಡಿಕೊಳ್ಳುತ್ತೇನೆ ಎಂದು ವಿಜಯೋತ್ಸವದಲ್ಲಿ ಶಾಸಕ ಸುನೀಲ್ ಕುಮಾರ್ ಆಡಿದ ಮಾತನ್ನು ತೀವ್ರವಾಗಿ ಖಂಡಿಸುತ್ತೇನೆ, ಕಾರ್ಯಕರ್ತರಿಗೆ ಬೆದರಿಕೆ ಹಾಕಿದ ಶಾಸಕನ ವಿರುದ್ಧ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕ್ರಮ ಜರುಗಿಸಬೇಕೆಂದು ಒತ್ತಾಯಿಸುತ್ತೇನೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರರಾದ
ಸಕಲೇಶಪುರ ಕ್ಷೇತ್ರದ ನೂತನ ಶಾಸಕ ಸಿಮೆಂಟ್ ಮಂಜುನಾಥ್ ಅವರಿಗೆ ಸಕಲೇಶಪುರ ಕ್ಷೇತ್ರದ ಕಟ್ಟಾಯ ಹೋಬಳಿ ಕೇಂದ್ರದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡರು. ಸಿಮೆಂಟ್ ಮಂಜು ರವರ ಮನೆಗೆ ಬಿಜೆಪಿ ಕಾರ್ಯಕರ್ತರು ಭೇಟಿ ನೀಡುತ್ತಿದ್ದಾರೆ. ಬಿ.ಬಿ ಶಿವಪ್ಪನವರು ಬಳಸುತ್ತಿದ್ದ ಶಾಲು ಮತ್ತು ಪೆನ್ ಅನ್ನು ಉಡುಗೊರೆಯಾಗಿ ಸಿಮೆಂಟ್ ಮಂಜುನಾಥ್ ಪಡೆದರು.